Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಈ ಹೊತ್ತಿನ ಹೊತ್ತಿಗೆ
      • ಜನಚರಿತೆ
      • ವಿಡಂಬನೆ
      • ಜನ ಜನಿತ
      • ರಂಗ ಪ್ರಸಂಗ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಜನಮನ
      • ರಂಗದೊಳಗಿಂದ
      • ಶಂಬೂಕ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಕಲಬುರಗಿ
  4. ಎ.11ರಂದು ದೇವಸ್ಥಾನದ ಪೂಜೆಯ ಹಕ್ಕು...

ಎ.11ರಂದು ದೇವಸ್ಥಾನದ ಪೂಜೆಯ ಹಕ್ಕು ನೀಡುವಂತೆ ಆಗ್ರಹಿಸಿ ʼಮೇಳಕುಂದಿ ಚಲೋʼ

ವಾರ್ತಾಭಾರತಿವಾರ್ತಾಭಾರತಿ8 April 2025 5:38 PM IST
share
ಎ.11ರಂದು ದೇವಸ್ಥಾನದ ಪೂಜೆಯ ಹಕ್ಕು ನೀಡುವಂತೆ ಆಗ್ರಹಿಸಿ ʼಮೇಳಕುಂದಿ ಚಲೋʼ

ಕಲಬುರಗಿ: ಕಲಬುರಗಿ ತಾಲೂಕಿನ ಮೇಳಕುಂದಾ (ಬಿ) ಗ್ರಾಮದಲ್ಲಿ ಪುರಾತನವಾದ ಮಾಳಿಂಗರಾಯ ದೇವಸ್ಥಾನದ ಪೂಜೆಯ ಕಾರ್ಯಗಳ ಹಕ್ಕನ್ನು ವಂಶಸ್ಥರನ್ನು ಕೊಡುವಂತೆ ಆಗ್ರಹಿಸಿ, ಇದೇ ಎ.11ರಂದು ಮೇಳಕುಂದಿ ಚಲೋ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ ಎಂದು ಕರ್ನಾಟಕ ಪ್ರದೇಶ ಕುರುಬರ ಸಂಘದ ಜಿಲ್ಲಾಧ್ಯಕ್ಷ ಗುರುನಾಥ್ ತಿಳಿಸಿದರು.

ನಗರದ ಪತ್ರಿಕಾಭವನದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮೇಳಕುಂದಾ (ಬಿ) ಗ್ರಾಮದಲ್ಲಿರುವ ಮಾಳಿಂಗರಾಯ ದೇವಸ್ಥಾನವು ಕಂದಾಯ ಇಲಾಖೆಯ ಜಮಾಬಂದಿ ಪತ್ರಿಕೆ 1320 ಫಸಲಿ ಪ್ರಕಾರ ಮಾಳದೇವ ದೇವಸ್ಥಾನ ಇದರ ವಾರಸುದಾರ ಮುತ್ತಪ್ಪ ಧನಗರ ಎಂದು ಇದೆ, ಕಂದಾಯ ಇಲಾಖೆಯ ಸರ್ವೇ 114 ಪಹಣಿ ಹಾಗೂ ಕಬ್ಜೆ ಕುರುಬರ ಹೆಸರಿನಲ್ಲಿದೆ. ಅಲ್ಲದೆ ಇನಾಮ ಪತ್ರಿಕೆಯಲ್ಲಿ 29 ಎಕರೆ 34 ಗುಂಟೆ ದೇವಸ್ಥಾನಕ್ಕೆ ಮಂಜೂರು ಆಗಿರುವುದು ಉಲ್ಲೇಖವಿದೆ. ಆದರೂ ನಮ್ಮ ಬಲಿಷ್ಠ ಲಿಂಗಾಯತ ಜನರು ನಮ್ಮ ದೇವಸ್ಥಾನದ ಪೂಜೆ ಮಾಡಲು ಬಿಡುತ್ತಿಲ್ಲ, ಧಮ್ಕಿ ಕೊಡುತ್ತಿದ್ದಾರೆ ಎಂದು ಆರೋಪಿಸಿದರು.

ದೇವಸ್ಥಾನದ ಗದ್ದುಗೆಯ ಪೂಜೆಯನ್ನು ಕುರುಬ ಪೂಜಾರಿಗಳಿಗೆ ವಹಿಸಬೇಕೆಂದು ಕಳೆದ ಜನವರಿಯಲ್ಲಿ ಪ್ರತಿಭಟಿಸಿದ್ದೆವು, 15 ದಿನಗಳಲ್ಲಿ ಸಮಸ್ಯೆ ಬಗೆಹರಿಸುವುದಾಗಿ ಅಪರ ಜಿಲ್ಲಾಧಿಕಾರಿಗಳು ಭರವಸೆ ನೀಡಿದ್ದರು. ಆದರೆ ಈವರೆಗೆ ಅವರು ಒಂದು ಸಭೆಯೂ ಮಾಡಿಲ್ಲ ಎಂದು ಆರೋಪಿಸಿದ ಅವರು, ಅಧಿಕಾರಿಗಳ ನಡೆಯನ್ನು ಖಂಡಿಸಿದರು.

2 ತಿಂಗಳು ಕಳೆದರೂ ನಮ್ಮ ಬೇಡಿಕೆ ಈಡೇರಿಸಿಲ್ಲ, ಹಾಗಾಗಿ ಇದನ್ನೆಲ್ಲ ಖಂಡಿಸಿ, ನಾವು ಮೇಳಕುಂದಿ ಚಲೋ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದೇವೆ, ಅದೇ ದಿನದಂದು ಕಲಬುರಗಿ ಹೈಕೋರ್ಟ್ ಕ್ರಾಸ್ ನಿಂದ ವಾಹನಗಳು ತೆರಳಲಿದ್ದು, ಮೇಳಕುಂದ ಗ್ರಾಮದ ಅಂಬೇಡ್ಕರ್ ಕ್ರಾಸ್ ನಿಂದ ಮಾಳಿಂಗರಾಯ ದೇವಸ್ಥಾನದ ವರೆಗೆ ಭವ್ಯ ಮೆರವಣಿಗೆ ಸಾಗಲಿದೆ. ಬಳಿಕ ದೇವಸ್ಥಾನದ ಗದ್ದುಗೆಗೆ ಮಹಾಭಿಷೇಕ, ವಿಶೇಷ ಪೂಜೆ ನೆರವೇರಲಿದೆ ಎಂದರು.

ಚಲೋ ಕಾರ್ಯಕ್ರಮದಲ್ಲಿ ಜಿಲ್ಲೆಯ ಕುರುಬ ಸಮುದಾಯದ 5 ಸಾವಿರಕ್ಕೂ ಹೆಚ್ಚಿನ ಮಂದಿ ಭಾಗಿಯಾಗಲಿದ್ದಾರೆ ಎಂದು ಮಾಹಿತಿ ನೀಡಿದರು.

ಸುದ್ದಿಗೋಷ್ಠಿಯಲ್ಲಿ ಲಕ್ಕವಳ್ಳಿ ಮಂಜುನಾಥ್, ನಿರ್ಮಲಾ ಬರಗಾಲಿ, ಕುಪೇಂದ್ರ ಬರಗಾಲಿ, ರಮೇಶ್ ಕನ್ನಗೊಂಡ, ಗಣಪತಿ ಮಿಣಜಗಿ, ಮಹದೇವಪ್ಪ ಮುತ್ಯಾ, ರವಿಗೊಂಡ ಕಟ್ಟಿಮನಿ, ನಾಗೇಂದ್ರಪ್ಪ ಪೂಜಾರಿ ಸೇರಿದಂತೆ ಮತ್ತಿತರರು ಇದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X