ಕಲಬುರಗಿ ಜಿಲ್ಲಾ ಪಂಚಾಯತ್ ಕಚೇರಿಯಲ್ಲಿ ಅಂಬೇಡ್ಕರ್ ಜಯಂತಿ ಆಚರಣೆ

ಕಲಬುರಗಿ: ಇಲ್ಲಿನ ಜಿಲ್ಲಾ ಪಂಚಾಯತ್ ಕಚೇರಿಯಲ್ಲಿ ಸೋಮವಾರ ಬೆಳಗ್ಗೆ ಸಂವಿಧಾನ ಶಿಲ್ಪಿ, ಭಾರತ ರತ್ನ, ಡಾ. ಬಿ.ಆರ್. ಅಂಬೇಡ್ಕರ್ ರವರ 134ನೇ ಜಯಂತೋತ್ಸವ ಆಚರಿಸಲಾಯಿತು.
ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಭಂವರ್ ಸಿಂಗ್ ಮೀನಾ ಅವರು ಡಾ. ಅಂಬೇಡ್ಕರ್ ಅವರ ಫೋಟೋಗೆ ಪುಷ್ಪಾರ್ಚನೆ ಮಾಡಿದರು.
ಈ ಸಂದರ್ಭದಲ್ಲಿ ಲಕ್ಷ್ಮಣ ಶೃಂಗೇರಿ ಡಿ.ಎಸ್, ಜಗದೇವಪ್ಪ ಬಿ, ಸಿಪಿಒ ಶರಣಯ್ಯ ಮಠಪತಿ, ಉಪ ನಿರ್ದೇಶಕರು (ಯೋಜನೆ), ಮಧುಮತಿ, ಸಹಾಯಕ ಕಾರ್ಯದರ್ಶಿ ವೀರೇಂದ್ರ, ಲೆಕ್ಕಾಧಿಕಾರಿ ಪವನಕುಮಾರ, ಎಪಿಒ ವಿಜಯಲಕ್ಷ್ಮಿ, ಜಿಲ್ಲಾ ಪಂಚಾಯತ ಅಧಿಕಾರಿಗಳು ಹಾಗೂ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.
Next Story