Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಈ ಹೊತ್ತಿನ ಹೊತ್ತಿಗೆ
      • ಜನಚರಿತೆ
      • ವಿಡಂಬನೆ
      • ಜನ ಜನಿತ
      • ರಂಗ ಪ್ರಸಂಗ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಜನಮನ
      • ರಂಗದೊಳಗಿಂದ
      • ಶಂಬೂಕ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಕಲಬುರಗಿ
  4. ಕಲಬುರಗಿ-ಬೆಂಗಳೂರು ವಿಮಾನ ಸೇವೆಯಲ್ಲಿ...

ಕಲಬುರಗಿ-ಬೆಂಗಳೂರು ವಿಮಾನ ಸೇವೆಯಲ್ಲಿ ವ್ಯತ್ಯಯ

ದಸ್ತಗೀರ ನದಾಫ್ ಯಳಸಂಗಿದಸ್ತಗೀರ ನದಾಫ್ ಯಳಸಂಗಿ13 Nov 2024 12:44 PM IST
share
ಕಲಬುರಗಿ-ಬೆಂಗಳೂರು ವಿಮಾನ ಸೇವೆಯಲ್ಲಿ ವ್ಯತ್ಯಯ

ಕಲಬುರಗಿ, ನ.12: ಕಲ್ಯಾಣ ಕರ್ನಾಟಕ ಭಾಗದ ಜನರಿಗೆ ಪ್ರಯಾಣದಲ್ಲಿ ಒಂದಿಲ್ಲೊಂದು ಬರ ಕಾಡುತ್ತಿರುವ ಬೆನ್ನಲ್ಲೇ ಇದೀಗ ವಿಮಾನ ಪ್ರಯಾಣಿಕರಿಗೂ ಸಂಕಷ್ಟ ಎದುರಾಗಿದೆ. ಕಲಬುರಗಿ-ಬೆಂಗಳೂರು ಮಧ್ಯೆ ದಿನನಿತ್ಯ ಹಾರಾಟ ನಡೆಸುತ್ತಿರುವ ವಿಮಾನ ಸೇವೆಯಲ್ಲಿ ವ್ಯತ್ಯಯವಾಗಲಿದೆ.

ಹೌದು, ಪ್ರತೀದಿನ ಕಲಬುರಗಿಯಿಂದ ಬೆಂಗಳೂರಿಗೆ ಸೇವೆ ನೀಡುತ್ತಿದ್ದ ಸ್ಟಾರ್ ಏರ್ಲೈನ್ಸ್ ವಾರದಲ್ಲಿ 4 ದಿನಗಳ ಸೇವೆಯನ್ನು ಕಡಿತಗೊಳಿಸಿದೆ. ಹಾಗಾಗಿ ರವಿವಾರ, ಸೋಮವಾರ ಮತ್ತು ಮಂಗಳವಾರ ವಿಮಾನ ಹಾರಾಟ ನಡೆಸಲಿದೆ. ಆದ್ದರಿಂದ ಉಳಿದ ದಿನಗಳಲ್ಲಿ ಪ್ರಯಾಣಿಸುವ ಪ್ರಯಾಣಿಕರಿಗೆ ಟಿಕೆಟ್ ಸಿಗುವುದಿಲ್ಲ. ಬುಧವಾರ, ಗುರುವಾರ, ಗುರುವಾರ ಮತ್ತು ಶುಕ್ರವಾರದಂದು ಪ್ರಯಾಣಿಸುವವರಿಗೆ ಟಿಕೆಟ್ ಲಭ್ಯವಿರುವುದಿಲ್ಲ.

ಕಲಬುರಗಿ-ಬೆಂಗಳೂರು ಮಾರ್ಗದ ದಿನನಿತ್ಯದ ವಿಮಾನ ಸೇವೆಯನ್ನು ದಿಢೀರ್ ರದ್ದುಪಡಿಸಿ, ಮಹಾರಾಷ್ಟ್ರದ ಕೊಲ್ಹಾಪುರ- ಅಹ್ಮದಾಬಾದ್ ಮತ್ತು ನಾಂದೇಡ್ನಿಂದ ಅಹ್ಮದಾಬಾದ್ ಮಾರ್ಗವಾಗಿ 2 ಕಡೆ ಹೊಸ ಏರ್ಲೈನ್ಸ್ ಪ್ರಾರಂಭಿಸಲಾಗುತ್ತಿದೆ. ಇದೇ ಕಾರಣಕ್ಕೆ ಕಲಬುರಗಿಯಿಂದ ಬೆಂಗಳೂರಿಗೆ ಹೊರಡುವ ವಿಮಾನ ಸೇವೆಯಲ್ಲಿ ಕಡಿತಗೊಳಿಸಲಾಗಿದೆ ಎಂದು ಪ್ರಯಾಣಿಕರು ಆರೋಪಿಸಿದ್ದಾರೆ.

52 ಆಸನಗಳ ಸಾಮರ್ಥ್ಯದ ಸ್ಟಾರ್ ವಿಮಾನವು ದಿನನಿತ್ಯ 3,900 ರಿಂದ 4,000 ರೂ.ವರೆಗಿನ ದರದಲ್ಲಿ ಸೇವೆ ನೀಡುತ್ತದೆ. ಮತ್ತು ವಾರಾಂತ್ಯದಲ್ಲಿ (ಶುಕ್ರವಾರದಿಂದ ರವಿವಾರ) 5,000ರಿಂದ 6,000 ದರದಲ್ಲಿ ಟಿಕೆಟ್ ಸಿಗುತ್ತದೆ. ಹಾಗಾಗಿ ಈ ಮಾರ್ಗವು ವಿಮಾನ ಸಂಸ್ಥೆಗೆ ಉತ್ತಮ ಲಾಭದಾಯಕ. ಸಿಮೆಂಟ್ ಕಾರ್ಖಾನೆ, ಮೆಡಿಕಲ್-ಇಂಜಿನಿಯರಿಂಗ್ ವಿದ್ಯಾಭ್ಯಾಸ, ಸೆಂಟ್ರಲ್ ಯುನಿವರ್ಸಿಟಿ, ಪ್ರವಾಸೋದ್ಯಮ, ವ್ಯಾಪಾರ-ವಹಿವಾಟಿಗೆ, ಇತರ ಖಾಸಗಿ ಕಂಪೆನಿಗಳ ಸಿಬ್ಬಂದಿ ಈ ಮಾರ್ಗದಲ್ಲಿ ದಿನನಿತ್ಯ ಪ್ರಯಾಣಿಸುತ್ತಾರೆ.

ಕಲಬುರಗಿ-ಬೆಂಗಳೂರು ಮಾರ್ಗದ ವಿಮಾನ ಸೇವೆ ಕಳೆದ ಬಾರಿ ಇದೇ ರೀತಿ ವ್ಯತ್ಯಯ ಮಾಡಲಾಗಿತ್ತು. ಸಚಿವ, ಸಂಸದರ ಒತ್ತಾಯದಿಂದ ವಿಮಾನ ಸೇವೆ ಮತ್ತೆ ಪ್ರಾರಂಭವಾಯಿತು. ಈಗ ಅದೇ ರೀತಿ ಈ ತಿಂಗಳಲ್ಲಿ ವಾರದ ಸೇವೆ ಕಡಿತಗೊಳಿಸಿ, ಕ್ರಮೇಣ ಈ ಭಾಗಕ್ಕೆ ಸೇವೆಯನ್ನು ಸ್ಥಗಿತಗೊಳಿಸುವ ಹುನ್ನಾರ ನಡೆಯುತ್ತಿದೆ. ಹಾಗಾಗಿ ಈ ಭಾಗದ ಸಚಿವರು, ಸಂಸದರು ಉಳಿದ ಅಧಿಕಾರಿಗಳು ಸೇವೆಯನ್ನು ಸ್ಥಗಿತಗೊಳಿಸದಂತೆ ಒತ್ತಾಯಿಸಬೇಕೆಂದು ಪ್ರಯಾಣಿಕರು ಆಗ್ರಹಿಸಿದ್ದಾರೆ. ಕಳೆದ ನಾಲ್ಕು ತಿಂಗಳ ಹಿಂದಷ್ಟೇ ಕಲಬುರಗಿ-ತಿರುಪತಿ ವಿಮಾನ ಸೇವೆ ಸ್ಥಗಿತವಾಗಿದೆ. ಇದೀಗ ಈ ಸೇವೆಯೂ ಸ್ಥಗಿತಕ್ಕೆ ಷಡ್ಯಂತ್ರ ನಡೆಯುತ್ತಿದೆ ಎನ್ನುವ ಆರೋಪಗಳು ಸಾರ್ವಜನಿಕ ವಲಯದಲ್ಲಿ ಕೇಳಿ ಬರುತ್ತಿವೆ.

ಕಲ್ಯಾಣ ಕರ್ನಾಟಕ ಪ್ರಯಾಣಿಕರಿಗೆ ಅನುಕೂಲ

ದಿನನಿತ್ಯ ಕಲಬುರಗಿಯಿಂದ ಬೆಂಗಳೂರಿಗೆ ಪ್ರಯಾಣಿಸುವ ಈ ಭಾಗದ ಉದ್ಯಮಿ, ನೌಕರರಿಗೆ ಸೇರಿದಂತೆ ಇತರ ಪ್ರಯಾಣಿಕರಿಗೆ ಭಾರೀ ಅನುಕೂಲವಾಗಿದೆ. ಹಾಗಾಗಿ ಬೀದರ್, ಯಾದಗಿರಿ, ರಾಯಚೂರು, ಗುರುಮಿಟ್ಕಲ್ ಭಾಗದವರು ಕಲಬುರಗಿ ವಿಮಾನ ನಿಲ್ದಾಣವನ್ನೇ ಅವಲಂಬಿಸಿದ್ದಾರೆ.

ತಾಂತ್ರಿಕ ಸಮಸ್ಯೆಯಿಂದ ವಿಮಾನ ಸೇವೆ ರದ್ದಾಗಿದೆ ಎಂದು ತಿಳಿದಿದೆ. ಇದು ಖಾಸಗಿ ವಿಮಾನ ಸಂಸ್ಥೆಯಾಗಿದ್ದರಿಂದ ಇದಕ್ಕೆ ಕೇಂದ್ರ ಸರಕಾರ ಒತ್ತಡ ಹಾಕಬೇಕು. ಬೇರೆಡೆಯಂತೆ ನಮ್ಮಲ್ಲಿ ಸೇವೆ ಬಂದ್ ಮಾಡದೆ, ಹೊಸ ವಿಮಾನ ಸೇವೆಗೆ ಕ್ರಮ ಕೈಗೊಳ್ಳಲಿ.

- ಪ್ರಿಯಾಂಕ್ ಖರ್ಗೆ, ಸಚಿವ

ಪ್ರತೀ ಶುಕ್ರವಾರ ನಾನು ಕಲಬುರಗಿಯಿಂದ ಬೆಂಗಳೂರಿಗೆ ಪ್ರಯಾಣಿಸುತ್ತೇನೆ. ಇದೀಗ ಶುಕ್ರವಾರ ವಿಮಾನ ಸೇವೆ ಬಂದ್ ಆಗಿರುವುದರಿಂದ ಆತಂಕ ಎದುರಾಗಿದೆ.

- ಝಹೀರ್ ಅಹ್ಮದ್, ವಿಮಾನ ಪ್ರಯಾಣಿಕ

share
ದಸ್ತಗೀರ ನದಾಫ್ ಯಳಸಂಗಿ
ದಸ್ತಗೀರ ನದಾಫ್ ಯಳಸಂಗಿ
Next Story
X