Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಈ ಹೊತ್ತಿನ ಹೊತ್ತಿಗೆ
      • ಜನಚರಿತೆ
      • ವಿಡಂಬನೆ
      • ಜನ ಜನಿತ
      • ರಂಗ ಪ್ರಸಂಗ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಜನಮನ
      • ರಂಗದೊಳಗಿಂದ
      • ಶಂಬೂಕ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಭಟ್ಕಳ: ಭಾರೀ ಮಳೆಯಿಂದ ಮೂಲಸೌಕರ್ಯಗಳಿಗೆ...

ಭಟ್ಕಳ: ಭಾರೀ ಮಳೆಯಿಂದ ಮೂಲಸೌಕರ್ಯಗಳಿಗೆ ಹಾನಿ; ಜಲಾವೃತಗೊಂಡ ತಗ್ಗು ಪ್ರದೇಶಗಳು

ವಾರ್ತಾಭಾರತಿವಾರ್ತಾಭಾರತಿ5 July 2023 7:01 PM IST
share
ಭಟ್ಕಳ: ಭಾರೀ ಮಳೆಯಿಂದ ಮೂಲಸೌಕರ್ಯಗಳಿಗೆ ಹಾನಿ; ಜಲಾವೃತಗೊಂಡ ತಗ್ಗು ಪ್ರದೇಶಗಳು

ಭಟ್ಕಳ: ಭಟ್ಕಳ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಮಂಗಳವಾರ ಸುರಿದ ಭಾರೀ ಮಳೆಯು ಸಾರ್ವಜನಿಕರಿಗೆ ಗಮನಾರ್ಹ ತೊಂದರೆಗಳನ್ನು ಉಂಟು ಮಾಡಿದೆ. ಮಂಗಳವಾರ ಮತ್ತು ಬುಧವಾರದಂದು ಬಿದ್ದ ಮಳೆಯಿಂದ 26 ವಿದ್ಯುತ್ ಕಂಬಗಳು ಹಾಗೂ 4 ಟ್ರಾನ್ಸ್‌ಫಾರ್ಮರ್‌ಗಳು ಹಾನಿ ಗೊಂಡಿದ್ದು, ಅಂದಾಜು ರೂ. ೩.೬೦ಲಕ್ಷ ಹಾನಿ ಸಂಭವಿದೆ ಎಂದು ಹೆಸ್ಕಾಂ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಭಾರಿ ಗಾಳಿ ಮಳೆ ಶುರುವಾಗಿರುವುರಿಂದ ಸಾರ್ವಜನಿಕರು ವಿದ್ಯುತ್ ಕಂಬಗಳು ಲೈನ್ ಗಳು ಮರಗಳು ಇರುವಲ್ಲಿ ಕೆಳಗಡೆ ನಿಲ್ಲದಂತೆ ನೋಡಿಕೊಳ್ಳಿ. ವಿದ್ಯುತ್ ಕಂಬಗಳು ಮತ್ತು ವಾಯರ್ ಗಳು ತುಂಡಾಗಿರುವುನ್ನು ತಕ್ಷಣ ಸಂಬಂಧಪಟ್ಟ ಶಾಖಾಧಿಕಾರಿಗಳಿಗೆ ಮತ್ತು ಲೈನ್ ಮೆನ್ ಅಥವಾ 1912 ಕೂಡಲೇ ಸಂಪರ್ಕಿಸಬೇಕೆಂದು ಹೆಸ್ಕಾಂ ಅಧಿಕಾರಿಗಳು ಸೂಚನೆ ನೀಡಿದ್ದಾರೆ.

ಎರಡು ವರ್ಷಗಳಿಂದ ನಡೆಯುತ್ತಿರುವ ಒಳಚರಂಡಿ ಕಾಮಗಾರಿ ಇನ್ನೂ ಪೂರ್ಣಗೊಳ್ಳದೆ ಜನಜೀವನಕ್ಕೆ ಅಪಾಯ ತಂದೊಡ್ಡಿದೆ. ರಸ್ತೆಗಳು ಹದಗೆಟ್ಟಿದ್ದು, ಒಳಚರಂಡಿ ಪೈಪ್ ಮಣ್ಣಿನಲ್ಲಿ ಮುಚ್ಚಿಹೋಗಿದ್ದು ವಾಹನಗಳು ಸಿಲುಕಿಕೊಳ್ಳುವಂತೆ ಮಾಡಿದೆ. ಐಆರ್‌ಬಿ ಕಂಪನಿ ನಿರ್ವಹಿಸುತ್ತಿರುವ ರಾ.ಹೆ. 66ರ ಕಾಮಗಾರಿಯೂ ಮಳೆಯಿಂದಾಗಿ ಹೊಳೆಯಾಗಿ ಮಾರ್ಪಟ್ಟಿದ್ದು, ಇನ್ನೂ ಅಪೂರ್ಣವಾಗಿಯೇ ಉಳಿದಿದೆ.

ರಂಗಿನಕಟ್ಟೆಯಿಂದ ಶಂಶುದ್ದೀನ್ ವೃತ್ತದವರೆಗಿನ ಹೆದ್ದಾರಿ ಜಲಾವೃತಗೊಂಡಿದ್ದು, ಎಲ್ಲಾ ರೀತಿಯ ವಾಹನಗಳು ಸಂಚರಿಸಲು ಪರದಾಡುವಂತಾಗಿದೆ. ಮಂಗಳವಾರ ಸಂಚಾರ ಅಸ್ತವ್ಯಸ್ತಗೊಂಡಿದ್ದು, ವಾಹನ ಸಂಚಾರಕ್ಕೆ ಸಾರ್ವಜನಿಕರು ಸಹಕರಿಸಿದ್ದು ಕಂಡು ಬಂತು.

ಭಾರೀ ಮಳೆಯಿಂದಾಗಿ ತಗ್ಗು ಪ್ರದೇಶಗಳು ಜಲಾವೃತಗೊಂಡಿದ್ದು, ಜನರು ಮನೆಯಿಂದ ಹೊರಬರಲು ಭಯಪಡುತ್ತಿದ್ದಾರೆ. ಪದೇ ಪದೇ ಎದುರಾಗುವ ಸಮಸ್ಯೆಗಳ ನಿವಾರಣೆಗೆ ಅಧಿಕಾರಿಗಳು ಏಕೆ ಯೋಜನೆ ರೂಪಿಸಿಲ್ಲ ಎಂದು ಸಾರ್ವಜನಿಕರು ಪ್ರಶ್ನೆ ಮಾಡುತ್ತಿದ್ದಾರೆ. ಮುಂದೆ ಇಂತಹ ಸಮಸ್ಯೆಗಳು ಎದುರಾಗದಂತೆ ನಗರಸಭೆ ಸಮಗ್ರ ಯೋಜನೆ ರೂಪಿಸುವುದು ಅತ್ಯಗತ್ಯ ಎಂಬ ಮಾತುಗಳು ಕೇಳಿ ಬರುತ್ತಿವೆ.

ಸದ್ಯಕ್ಕೆ ಮಳೆ ಸ್ವಲ್ಪ ಬಿಡುವು ನೀಡಿದೆ. ಆದರೆ ಮತ್ತಷ್ಟು ಮಳೆಯಾಗುವ ಸಾಧ್ಯತೆ ಇದೆ ಎಂದು ಹವಮಾನ ಇಲಾಖೆ ಮುನ್ಸೂನೆ ನೀಡಿದೆ. ತಗ್ಗು ಪ್ರದೇಶಗಳು ಇನ್ನೂ ಜಲಾವೃತವಾಗಿದ್ದು, ನಿರಂತರ ಸವಾಲುಗಳನ್ನು ಸೃಷ್ಟಿಸುತ್ತಿವೆ. ಅಧಿಕಾರಿಗಳು ಶೀಘ್ರ ಕ್ರಮ ಕೈಗೊಂಡು ಪರಿಣಾಮಕಾರಿ ಪರಿಹಾರಗಳನ್ನು ಜಾರಿಗೊಳಿಸಬೇಕು ಎಂದು ಸಾರ್ವಜನಿಕರು ಒತ್ತಾಯಿಸುತ್ತಿದ್ದಾರೆ.

ಕಳೆದ ವರ್ಷ ಆಗಷ್ಟ್ ತಿಂಗಳಲ್ಲಿ ಬಿದ್ದ ಮಳೆಯು ಭಟ್ಕಳದ ನಾಲ್ವರನ್ನು ಬಲಿ ತೆಗೆದುಕೊಂಡಿತ್ತು. ನೂರಾರು ಮನೆ ಅಂಗಡಿಗಳಿಗೆ ನೀರು ನುಗ್ಗಿ ಕೋಟ್ಯಾಂತರ ರೂ. ನಷ್ಟವನ್ನುಂಟು ಮಾಡಿತ್ತು. ಇದರಿಂದ ಪಾಠ ಕಲಿಯದ ಅಧಿಕಾರಿಗಳು ನಿರ್ಲಕ್ಷತನ ತೋರಿಸಿದ ಪರಿಣಾಮ ಮತ್ತೇ ಅಂತಹದ್ದೆ ಅನಾಹುತಗಳಿಗೆ ಆಹ್ವಾನ ನೀಡುತ್ತಿರುವುದು ಮಳೆ ಹೆಸರು ಕೇಳಿದರೆ ಜನರನ್ನು ಜನರು ಹೆದರಿಕೊಳ್ಳುವಂತಹ ಸ್ಥಿತಿ ನಿರ್ಮಾಣಗೊಂಡಿದೆ. ಹೆದ್ದಾರಿ ಮತ್ತು ಒಳಚರಂಡಿ ಕಾಮಗಾರಿಯನ್ನು ಕೂಡಲೆ ಪೂರ್ಣಗೊಳಿಸಿ ಮಳೆಯ ನೀರು ರಸ್ತೆ ಮೇಲೆ ನಿಲ್ಲದೆ ಸುಲಭವಾಗಿ ಹರಿದುಹೋಗುವಂತಾಗಲು ರಸ್ತೆಯ ಎರಡು ಬದಿ ಚರಂಡಿಯನ್ನು ನಿರ್ಮಿಸಬೇಕು, ಮತ್ತು ಅಪೂರ್ಣಗೊಂಡ ಒಳಚರಂಡಿ(UGD) ಕಾಮಗಾರಿಯನ್ನು ಕೂಡಲೆ ಪೂರ್ಣಗೊಳಿಸಿ ಅಗೆದಿರುವ ರಸ್ತೆಯನ್ನು ಸಿಮೆಂಟ್ ಅಥವಾ ಟಾರ್ ಮೂಲಕ ಸರಿಪಡಿಸಬೇಕೆಂದು ಸಾರ್ವಜನಿಕರು ಆಗ್ರಹಿಸಿದ್ದಾರೆ.






share
ವಾರ್ತಾಭಾರತಿ
ವಾರ್ತಾಭಾರತಿ
Next Story
X