ಕೊಪ್ಪಳ | ಬೆಂಕಿ ಹಚ್ಚಿಕೊಂಡು 5 ವರ್ಷದ ಪುತ್ರಿಯೊಂದಿಗೆ ಆತ್ಮಹತ್ಯೆ : ತಾಯಿ ಮೃತ್ಯು, ಮಗಳು ಗಂಭೀರ

ಕೊಪ್ಪಳ : ಮಹಿಳೆಯೋರ್ವಳು ತನ್ನ ಪುತ್ರಿಯೊಂದಿಗೆ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕೊಪ್ಪಳ ಜಿಲ್ಲೆಯ ಗಂಗಾವತಿ ತಾಲೂಕಿನ ಜಯನಗರದಲ್ಲಿ ನಡೆದಿದೆ.
ಪತಿಯ ನಿರಂತರ ಕಿರುಕುಳದಿಂದಲೇ ಮನನೊಂದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗುತ್ತಿದ್ದು, ಮೃತರನ್ನು ಸುಮಂಗಲ ಎಂದು ಗುರುತಿಸಲಾಗಿದೆ.
ತನ್ನ ಐದು ವರ್ಷದ ಮಗಳೊಂದಿಗೆ ಬೆಂಕಿ ಹಂಚಿಕೊಂಡಿರುವ ಸುಮಂಗಲ ಗಂಭೀರವಾಗಿ ಗಾಯಗೊಂಡು ಮೃತಪಟ್ಟಿದ್ದು, ಮಗಳು ಪ್ರಾಣಾಪಾಯದಿಂದ ಪಾರಾಗಿದ್ದಾಳೆ. ಗಾಯಾಳು ಪುತ್ರಿಯನ್ನು ಬಳ್ಳಾರಿಯ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ತಿಳಿದು ಬಂದಿದೆ.
ಬೆಂಕಿ ಹಚ್ಚಿಕೊಂಡಿರುವ ಮಾಹಿತಿ ತಿಳಿಯುತ್ತಿದ್ದಂತೆ ನೆರವಿಗೆ ಸ್ಥಳೀಯರು ಧಾವಿಸಿದ್ದಾರೆ. ಬೆಂಕಿ ಹಚ್ಚಿಕೊಂಡಿದ್ದರಿಂದ ಮನೆಯ ವಸ್ತುಗಳು ಸುಟ್ಟುಕರಕಲಾಗಿವೆ ಎಂದು ಹೇಳಲಾಗುತ್ತಿದೆ.
ಆತ್ಮಹತ್ಯೆಯ ಯೋಚನೆ ಬಂದಾಗ ಅದನ್ನು ನಿಗ್ರಹಿಸಲು ರಾಜ್ಯ ಸರಕಾರದ ಅರೋಗ್ಯ ಇಲಾಖೆಯ ಹೆಲ್ಪ್ ಲೈನ್ 104 ಸಹಾಯ ಮಾಡುತ್ತದೆ. ಅದರ ಜೊತೆಗೆ Tele-MANAS ನ 14416 ಅನ್ನೂ ಸಂಪರ್ಕಿಸಬಹುದು.