Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಈ ಹೊತ್ತಿನ ಹೊತ್ತಿಗೆ
      • ಜನಚರಿತೆ
      • ವಿಡಂಬನೆ
      • ಜನ ಜನಿತ
      • ರಂಗ ಪ್ರಸಂಗ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಜನಮನ
      • ರಂಗದೊಳಗಿಂದ
      • ಶಂಬೂಕ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಮೈಸೂರು
  4. ಮೈಸೂರು| ದಲಿತರಿಗೆ ಸೇರಿದ 10 ಎಕರೆ...

ಮೈಸೂರು| ದಲಿತರಿಗೆ ಸೇರಿದ 10 ಎಕರೆ ಜಮೀನನ್ನು ಲಪಟಾಯಿಸಲು ಪ್ರಭಾವಿ ವ್ಯಕ್ತಿಗಳಿಂದ ಕಿರುಕುಳ: ಅರೋಪ

ನ್ಯಾಯ ದೊರಕಿಸಿಕೊಡುವಂತೆ ದಲಿತ ಕುಟುಂಬ ಮನವಿ

ವಾರ್ತಾಭಾರತಿವಾರ್ತಾಭಾರತಿ22 Sept 2024 11:12 PM IST
share
ಮೈಸೂರು| ದಲಿತರಿಗೆ ಸೇರಿದ 10 ಎಕರೆ ಜಮೀನನ್ನು ಲಪಟಾಯಿಸಲು ಪ್ರಭಾವಿ ವ್ಯಕ್ತಿಗಳಿಂದ ಕಿರುಕುಳ: ಅರೋಪ

ಮೈಸೂರು: ನಗರದ ವಿಜಯನಗರ ಬಡಾವಣೆಯಲ್ಲಿರುವ ನಮಗೆ ಸೇರಿದ ಕೋಟ್ಯಾಂತರ ಬೆಲೆ ಬಾಳುವ 10 ಎಕರೆ ಜಮೀನನ್ನು ನಗರಪಾಲಿಕೆ ಅಧಿಕಾರಿಗಳು ಪೌತಿ ಖಾತೆ ಮಾಡಿಕೊಟ್ಟಿದ್ದರು. ಕೆಲವು ಪ್ರಭಾವಿ ವ್ಯಕ್ತಿಗಳು ಈ ಜಾಗವನ್ನು ಲಪಟಾಯಿಸಬೇಕೆಂಬ ಉದ್ದೇಶದಿಂದ ತಮ್ಮ‌ಪ್ರಭಾವ ಬಳಸಿ ಖಾತೆಯನ್ನು ತಾತ್ಕಾಲಿಕವಾಗಿ ತಡೆಹಿಡಿಸಿ ದಲಿತ ಸಮುದಾಯದವರಾದ ನಮಗೆ ಕಿರುಕುಳ ನೀಡುತ್ತಿದ್ದಾರೆ ತೊಳಸಮ್ಮ ಕುಟುಂಬ ಅಲವತ್ತುಕೊಂಡಿತು.

ನಗರದ ಜಿಲ್ಲಾ ಪತ್ರಕರ್ತರ ಭವನದಲ್ಲಿ ರವಿವಾರ ಸುದ್ದಿಗೋಷ್ಠಿ ನಡೆಸಿದ ತೊಳಸಮ್ಮ ಕುಟುಂಬ ತಮಗೆ ಆಗುತ್ತಿರುವ ಅನ್ಯಾಯದ ಕುರಿತು ನ್ಯಾಯ ದೊರಕಿಸಿಕೊಡುವಂತೆ ಮನವಿ ಮಾಡಿದರು.

ತೊಳಸಮ್ಮ ಪುತ್ರ ಸುರೇಶ್ ಮಾತನಾಡಿ, ಪರಿಶಿಷ್ಟ ಜಾತಿಗೆ ಸೇರಿದ ನಮ್ಮ‌ ತಂದೆ ದಿವಂಗತ ಜಿ.ರಾಮಯ್ಯ ಮತ್ತು ಅವರ ಸಹೋದರ ಸಂಬಂಧಿ ಪಿ.ತಿಮ್ಮಯ್ಯ ಅವರು ಕೃಷಿ ಉದ್ದೇಶಕ್ಕಾಗಿ ತಲಾ 10 ಎಕರೆ ಜಮೀನು ನೀಡುವಂತೆ ಅರ್ಜಿ ಸಲ್ಲಿಸಿದ್ದರು. ಅದರಂತೆ ಅಂದಿನ ತಹಶೀಲ್ದಾರ್ ಅವರು ನಮ್ಮ ತಂದೆ ಜಿ.ರಾಮಯ್ಯ ಮತ್ತು ಪಿ.ತಿಮ್ಮಯ್ಯ ಅವರ ಹೆಸರಿಗೆ 1963 ರಲ್ಲಿ ತಲಾ 10 ಎಕರೆ ಜಮೀನನ್ನು ಮೈಸೂರು ತಾಲ್ಲೂಕು ಕಸಬಾ ಹೋಬಳಿ ಹಿನಕಲ್ ಗ್ರಾಮದ ಸರ್ವೆ ನಂ. 155 ರಲ್ಲಿ ದರಕಾಸ್ತು ಮೂಲಕ ಗ್ರ್ಯಾಂಟ್ ಮಾಡಿಕೊಟ್ಟಿರುತ್ತಾರೆ. ನಂತರ ಇದನ್ನು ಭೂಪರಿವರ್ತನೆ ಮಾಡಲಾಯಿತು. ಕಸಬಾ ಹೋಬಳಿಗೆ ಸೇರಿದ ಈ ಜಾಗ ನಗರಪಾಲಿಕೆ ವ್ಯಾಪ್ತಿಗೆ ಒಳಪಟ್ಟಿತು. ಆಗ ನಮ್ಮ‌ತಂದೆ ಜಿ.ರಾಮಯ್ಯ ಅವರು ನಗರಪಾಲಿಕೆಯಲ್ಲಿ ಖಾತೆ ಮಾಡಿಸಿಕೊಂಡು ನಮ್ಮ ಜಮೀನನ್ನು ಹಾಗೆ ಖಾಲಿ ಬಿಟ್ಟಿದ್ದರು. ಅವರು 2000 ಇಸವಿಯಲ್ಲಿ ನಿಧನರಾದರು. ಕೂಲಿ ಕೆಲಸ ಮಾಡಿಕೊಂಡು ಜೀವನ ನಡೆಸುತ್ತಿದ್ದ ನಮಗೆ ಇದನ್ನು ಅಭಿವೃದ್ಧಿಪಡಿಸಲು ಸಾಧ್ಯವಾಗದೆ ಹಾಗೆ ಬಿಟ್ಟಿದ್ದೆವು. 2007 ರಿಂದ ಮಕ್ಕಳಾದ ನಮ್ಮ ಹೆಸರಿಗೆ ಪೌತಿ ಖಾತೆ ಮಾಡಿಕೊಡುವಂತೆ ನಗರಪಾಲಿಕೆಗೆ ಅಲೆದು ಸಾಕಾಗಿ ಈಗ ನಗರಪಾಲಿಕೆ ಅಧಿಕಾರಿಗಳು ಖಾತೆ ಮಾಡಿಕೊಟ್ಟಿರುತ್ತಾರೆ. ಈ ಜಾಗದ ಮೇಲೆ ಕಣ್ಣಿಟ್ಟಿರುವ ಕೆಲವು ರಾಜಕೀಯ ದುರುದ್ದೇಶ ಹೊಂದಿರುವ ವ್ಯಕ್ತಿಗಳು ಪರಿಶಿಷ್ಟ ಜಾತಿಗೆ ಸೇರಿದ ನಮ್ಮ ಜಮೀನನ್ನು ಲಪಟಾಯಿಸಲು ಹೊಂಚು ಹಾಕಿ ನಮಗೆ ಕಿರುಕುಳ ನೀಡುತ್ತಿದ್ದಾರೆ ಎಂದು ನೊಂದು ನುಡಿದರು.

ನಗರಪಾಲಿಕೆ ಅಧಿಕಾರಿಗಳು ಖಾತೆ ಮಾಡಿಕೊಟ್ಟರು. ಕೆಲವರು ದೂರವಾಣಿ ಮೂಲಕ ನಮಗೆ ಕರೆ ಮಾಡಿ ಈ ಜಾಗ ಖಾತೆ ಮಾಡಿಸಿಕೊಂಡರೆ ನಿಮ್ಮನ್ನು ಸುಮ್ಮನೆ ಬಿಡುವುದಿಲ್ಲ, ಇದರಿಂದ ನಿಮಗೆ ತೊಂದರೆ ಆಗಲಿದೆ. ಸುಮ್ಮನಿದ್ದು ಬಿಟ್ಟರೆ ನಿಮಗೆ ಒಳ್ಳಯದು ಎಂದು ಬೆದರಿಕೆ ಹಾಕುತ್ತಿದ್ದಾರೆ. ಬಡವರಾದ ನಮಗೆ ನ್ಯಾಯ ದೊರಕಿಸಿ ನಮ್ಮ ಜಮೀನು ನಮ್ಮ ಕೈ ಸೇರುವಂತೆ ಮಾಡಿ ಎಂದು ಬೇಡಿಕೊಂಡರು.

ಸುದ್ದಿಗೋಷ್ಠಿಯಲ್ಲಿ ಜಿ.ರಾಮಯ್ಯ ಪತ್ನಿ ತೊಳಸಮ್ಮ, ಅವರ ಕುಟುಂಬದ ಎಲ್ಲಾ ಸದಸ್ಯರು, ವಕೀಲರಾದ ಶ್ಯಾಮ್ ಭಟ್, ಯೋಗೇಶ್, ಪಿ.ತಿಮ್ಮಯ್ಯ, ರೈತ ಮುಖಂಡ ಸರಗೂರು ನಟರಾಜ್, ದಲಿತ ವಾಯ್ಸ್ ಸಂಘಟನೆಯ ಎಸ್.ರಾಜೇಶ್ ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X