Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಈ ಹೊತ್ತಿನ ಹೊತ್ತಿಗೆ
      • ಜನಚರಿತೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಮೈಸೂರು
  4. ಈ.ಡಿಯ ದುರುದ್ದೇಶದ ನಡೆಯ ವಿರುದ್ಧ...

ಈ.ಡಿಯ ದುರುದ್ದೇಶದ ನಡೆಯ ವಿರುದ್ಧ ರಾಷ್ಟ್ರಪತಿಗೆ ದೂರು ಸಲ್ಲಿಸುತ್ತೇವೆ : ಎಂ.ಲಕ್ಷ್ಮಣ್

ವಾರ್ತಾಭಾರತಿವಾರ್ತಾಭಾರತಿ22 Jan 2025 11:26 PM IST
share
ಈ.ಡಿಯ ದುರುದ್ದೇಶದ ನಡೆಯ ವಿರುದ್ಧ ರಾಷ್ಟ್ರಪತಿಗೆ ದೂರು ಸಲ್ಲಿಸುತ್ತೇವೆ : ಎಂ.ಲಕ್ಷ್ಮಣ್

ಮೈಸೂರು : ಜಾರಿ ನಿರ್ದೇಶನಾಲಯದ (ಈಡಿ) ಪತ್ರಿಕಾ ಪ್ರಕಟಣೆಯು ಮುಖ್ಯಮಂತ್ರಿ ಸಿದ್ದರಾಮಯ್ಯನವರ ಹೆಸರು ನಾಶ ಮಾಡುವ, ರಾಜ್ಯ ಸರಕಾರಕ್ಕೆ ಕೆಟ್ಟ ಹೆಸರು ತರುವ ಹುನ್ನಾರವಾಗಿದೆ. ಈ.ಡಿ.ಯ ಈ ದುರುದ್ದೇಶದ ನಡೆಯ ವಿರುದ್ಧ ರಾಷ್ಟ್ರಪತಿಗೆ ದೂರು ದೂರು ಸಲ್ಲಿಸುತ್ತೇವೆ ಎಂದು ಕೆಪಿಸಿಸಿ ವಕ್ತಾರ ಎಂ.ಲಕ್ಷ್ಮಣ್ ಹೇಳಿದರು.

ನಗರ ಕಾಂಗ್ರೆಸ್ ಭವನದಲ್ಲಿ ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ತನಿಖೆ ಪೂರ್ಣಗೊಳ್ಳುವ ಮುನ್ನ ಎಪಿಸೋಡ್ ರೀತಿ ಮಾಹಿತಿ ಹಂಚಿಕೊಳ್ಳಬಹುದೇ? ತನಿಖಾ ಮಾಹಿತಿ ಬಹಿರಂಗಪಡಿಸಲು ನ್ಯಾಯಾಲಯದ ನಿರ್ದೇಶನ ಇತ್ತೇ? ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಉತ್ತರಿಸಬೇಕು ಎಂದು ಒತ್ತಾಯಿಸಿದರು.

ತನ್ನ ಪಾವಿತ್ರ‍್ಯತೆಯನ್ನು ಕಳೆದುಕೊಂಡಿರುವ ಈಡಿ ಬಿಜೆಪಿ, ಆರೆಸ್ಸೆಸ್‌ನ ಬಾಲಂಗೋಚಿಯಾಗಿ ಕೆಲಸ ಮಾಡುತ್ತಿದೆ. ಸಿದ್ದರಾಮಯ್ಯ ಹೆಸರಲ್ಲಿ ನಿವೇಶನ ಇತ್ತೇ? ಪ್ರಕಟಣೆಯಲ್ಲಿ ಉದ್ದೆಶಪೂರ್ವಕವಾಗಿ ಸಿದ್ದರಾಮಯ್ಯ ಹೆಸರು ಸೇರಿಸುವುದು ನಿಮ್ಮ ಉದ್ದೇಶ ಏನು? ಎಂದು ಪ್ರಶ್ನಿಸಿದರು.

142 ನಿವೇಶನಗಳ ಸಂಖ್ಯೆ ಬಿಡುಗಡೆ ಮಾಡಿರುವ ಈಡಿ ಅಧಿಕಾರಿಗಳು ಯಾರ ಹೆಸರಲ್ಲಿದೆ ಎಂಬ ಮಾಹಿತಿ ನೀಡಬೇಕು. ಬಿಡುಗಡೆ ಮಾಡಿದ ಪಟ್ಟಿಯಲ್ಲಿ ಸಿದ್ದರಾಮಯ್ಯ ಅವರಿಗೆ ನೀಡಲಾಗಿದ್ದ ನಿವೇಶನದ ಉಲ್ಲೇಖವಿಲ್ಲ. ಬೆಂಗಳೂರಿನ ಮಂಜುನಾಥ್, ಮೈಸೂರಿನ ಜಯರಾಮ್, ಕ್ಯಾಥಡ್ರೆಲ್ ಪ್ಯಾರಲ್ ಸೊಸೈಟಿ 63, ಬಿಜೆಪಿ, ಜೆಡಿಎಸ್ ಮುಖಂಡರು 97 ನಿವೇಶನಗಳನ್ನು ಬೇನಾಮಿ ಹೆಸರಲ್ಲಿ ಪಡೆದುಕೊಂಡಿರುವ ಮಾಹಿತಿ ನಮ್ಮ ಬಳಿ ಇದೆ ಎಂದರು.

ಸಿದ್ದರಾಮಯ್ಯ ಅವರ 14 ನಿವೇಶನ ಒಟ್ಟು 56 ಕೋಟಿ ರೂ. ಎಂದು ಈಡಿ ಅಂದಾಜು ಮಾಡಿದೆ. ಈಡಿ ಲೆಕ್ಕಚಾರದ ಪ್ರಕಾರ ಚದರಡಿ 17 ಸಾವಿರ ರೂ.ಗಳಾಯಿತು. ವಿಜಯನಗರದಲ್ಲಿ ಚದರಡಿಗೆ 17 ಸಾವಿರ ರೂ. ದರ ಇದೆಯೇ? ಇದ್ದರೆ ನನ್ನ ಸಂಬಂಧಿಕರದ್ದೊಂದು ನಿವೇಶನವನ್ನು ಈಡಿ ಅಧಿಕಾರಿಗಳು ಮಾರಿಸಿ ಕೊಡುತ್ತಾರೆಯೇ? ಎಂದು ಕೇಳಿದರು.

ಮುಡಾದಿಂದ ಪಡೆದಿದ್ದ ನಿವೇಶನವನ್ನು ವಾಪಸ್ ನೀಡಿದ್ದರೂ ಪ್ರಕರಣವನ್ನು ಸಿದ್ದರಾಮಯ್ಯ ಅವರ ತಲೆಗೆ ಕಟ್ಟಲಾಗುತ್ತಿದೆ. ರಾಷ್ಟ್ರೀಯ ವಾಹಿನಿಗಳಲ್ಲಿ ದಿನಪೂರ್ತಿ ತಪ್ಪು ಮಾಹಿತಿ ಪ್ರಕಟಿಸಿ ಕೆಟ್ಟ ಹೆಸರು ತರುವ ಪ್ರಯತ್ನ ನಡೆದಿದೆ. ಇದರ ವಿರುದ್ಧ ನಾವು ಹೋರಾಟ ಮಾಡುತ್ತೇವೆ ಎಂದರು.

ಸುದ್ದಿಗೋಷ್ಠಿಯಲ್ಲಿ ನಗರ ಕಾಂಗ್ರೆಸ್ ಅಧ್ಯಕ್ಷ ಆರ್.ಮೂರ್ತಿ, ಜಿಲ್ಲಾಧ್ಯಕ್ಷ ಡಾ.ಬಿ.ಜೆ. ವಿಜಯ್‌ಕುಮಾರ್, ಜಿಪಂ ಮಾಜಿ ಅಧ್ಯಕ್ಷ ಬಿ.ಎಂ. ರಾಮು, ಮಾಧ್ಯಮ ವಕ್ತಾರ ಕೆ. ಮಹೇಶ್ ಇದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X