Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಈ ಹೊತ್ತಿನ ಹೊತ್ತಿಗೆ
      • ಜನಚರಿತೆ
      • ವಿಡಂಬನೆ
      • ಜನ ಜನಿತ
      • ರಂಗ ಪ್ರಸಂಗ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಜನಮನ
      • ರಂಗದೊಳಗಿಂದ
      • ಶಂಬೂಕ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ನಕಲಿ ಆಧಾರ್, ಪಾನ್ ಕಾರ್ಡ್...

ನಕಲಿ ಆಧಾರ್, ಪಾನ್ ಕಾರ್ಡ್ ಸೃಷ್ಟಿಸುತ್ತಿದ್ದ ಇಬ್ಬರ ಬಂಧನ; ರಾಷ್ಟ್ರೀಯ ಭದ್ರತೆಗೆ ಬೆದರಿಕೆ ಎಂದ ಪೊಲೀಸರು

ವಾರ್ತಾಭಾರತಿವಾರ್ತಾಭಾರತಿ5 Sept 2023 5:34 PM IST
share
ನಕಲಿ ಆಧಾರ್, ಪಾನ್ ಕಾರ್ಡ್ ಸೃಷ್ಟಿಸುತ್ತಿದ್ದ ಇಬ್ಬರ ಬಂಧನ; ರಾಷ್ಟ್ರೀಯ ಭದ್ರತೆಗೆ ಬೆದರಿಕೆ ಎಂದ ಪೊಲೀಸರು

ಸೂರತ್ (ಗುಜರಾತ್): ಅಂತರ್ಜಾಲ ತಾಣವೊಂದನ್ನು ಬಳಸಿಕೊಂಡು ಆಧಾರ್, ಪಾನ್ ಕಾರ್ಡ್ ನಂತಹ ನಕಲಿ ದಾಖಲೆಗಳನ್ನು ಸೃಷ್ಟಿಸುವ ಮೂಲಕ ರಾಷ್ಟ್ರೀಯ ಭದ್ರತೆಗೆ ಗಂಭೀರ ಬೆದರಿಕೆ ಒಡ್ಡುತ್ತಿದ್ದ ಇಬ್ಬರು ದುಷ್ಕರ್ಮಿಗಳನ್ನು ಸೂರತ್ ನಗರದಿಂದ ಬಂಧಿಸಲಾಗಿದೆ ಎಂದು PTI ಸುದ್ದಿ ಸಂಸ್ಥೆ ವರದಿ ಮಾಡಿದೆ.

ಆರೋಪಿಗಳು ಸರ್ಕಾರಿ ದತ್ತಾಂಶಕ್ಕೆ ಪ್ರವೇಶ ಪಡೆಯುವ ಮೂಲಕ, ಕಾನೂನುಬಾಹಿರ ದೃಢೀಕರಣ ಮತ್ತು ಗಂಭೀರ ಬೆದರಿಕೆ ಒಡ್ಡುವಂಥ ಪ್ರಕರಣಗಳಲ್ಲಿ ಭಾಗಿಯಾಗಿದ್ದಾರೆ ಎಂದು ಸೋಮವಾರ ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.

ಆರೋಪಿಗಳು ಸುಮಾರು 2 ಲಕ್ಷದಷ್ಟು ಆಧಾರ್ ಮತ್ತು ಪಾನ್ ಕಾರ್ಡ್ ನಂಥ ದಾಖಲೆಗಳನ್ನು ನಕಲು ಮಾಡಿ, ಅವುಗಳನ್ನು ರೂ. 150ರಿಂದ ರೂ. 200ರವರೆಗೆ ಮಾರಾಟ ಮಾಡಿದ್ದಾರೆ ಎಂದು ಅವರು ಹೇಳಿದ್ದಾರೆ.

ಖಾಸಗಿ ಸಾಲ ನೀಡಿಕೆ ಸಂಸ್ಥೆಯೊಂದರ ಅಧಿಕಾರಿಗಳು ಕೆಲವು ವ್ಯಕ್ತಿಗಳು ನಕಲಿ ದಾಖಲೆಗಳನ್ನು ಒದಗಿಸುವ ಮೂಲಕ ಸಾಲ ಪಡೆದು, ನಂತರ ಮರುಪಾವತಿ ಮಾಡದೆ ವಂಚಿಸಿದ್ದಾರೆ ಎಂದು ನೀಡಿದ್ದ ದೂರನ್ನು ಆಧರಿಸಿ ಪೊಲೀಸರು ಈ ಕಾರ್ಯಾಚರಣೆ ನಡೆಸಿದ್ದು, ಫೋರ್ಜರಿ ಹಾಗೂ ವಂಚನೆ ಪ್ರಕರಣದಡಿ ಆರು ಮಂದಿಯನ್ನು ಬಂಧಿಸಲಾಗಿದೆ ಎಂದು ಸಹಾಯಕ ಪೊಲೀಸ್ ಆಯುಕ್ತ (ಆರ್ಥಿಕ ಅಪರಾಧಗಳು) ವಿ.ಕೆ.ಪಾರ್ಮರ್ ಹೇಳಿದ್ದಾರೆ.

ವಿಚಾರಣೆಯ ಸಂದರ್ಭದಲ್ಲಿ ಆರು ಮಂದಿ ಆರೋಪಿಗಳ ಪೈಕಿ, ಪ್ರಿನ್ಸ್ ಹೇಮಂತ್ ಪ್ರಸಾದ್ ಎಂದು ಗುರುತಿಸಲಾಗಿರುವ ಆರೋಪಿಯು, ನೋಂದಾಯಿತ ಬಳಕೆದಾರರ ಹೆಸರು ಹಾಗೂ ಪಾಸ್ ವರ್ಡ್ ಬಳಸಿಕೊಂಡು ಪ್ರಶ‍್ನೆಗೀಡಾಗಿರುವ ಅಂತರ್ಜಾಲ ತಾಣವನ್ನು ಪ್ರವೇಶಿಸುತ್ತಿದ್ದೆವು. ನಂತರ, ಪ್ರತಿ ದಾಖಲೆಗೆ ರೂ. 15-50 ಪಾವತಿ ಮಾಡಿ, ನಕಲಿ ಆಧಾರ್ ಮತ್ತು ಪಾನ್ ಕಾರ್ಡ್ ಗಳನ್ನು ಡೌನ್ ಲೋಡ್ ಮಾಡಿಕೊಳ್ಳುತ್ತಿದ್ದೆವು ಎಂದು ತಪ್ಪೊಪ್ಪಿಕೊಂಡಿದ್ದಾನೆ ಎಂದು ಅವರು ತಿಳಿಸಿದ್ದಾರೆ.

ಆ ಅಂತರ್ಜಾಲ ತಾಣದ ಮೂಲಕ ಡೌನ್ ಲೋಡ್ ಮಾಡಿಕೊಂಡ ನಕಲಿ ಗುರುತಿನ ಚೀಟಿಗಳನ್ನು ಬ್ಯಾಂಕ್ ಲೋನ್ ಮಂಜೂರು ಮಾಡಿಸಿಕೊಳ್ಳಲು ಹಾಗೂ ಸಿಮ್ ಕಾರ್ಡ್ ಗಳನ್ನು ಖರೀದಿಸಲು ಬಳಸಲಾಗುತ್ತಿತ್ತು ಎಂದು ಅವರು ಮಾಹಿತಿ ನೀಡಿದ್ದಾರೆ.

ಅಂತರ್ಜಾಲ ತಾಣದಲ್ಲಿ ಪ್ರದರ್ಶನಗೊಳ್ಳುತ್ತಿರುವ ಮೊಬೈಲ್ ಸಂಖ್ಯೆಗಳ ಪೈಕಿ ಒಂದು ಮೊಬೈಲ್ ಸಂಖ್ಯೆಯ ಮೂಲಕ ತನ್ನ ಹೆಸರನ್ನು ಸೇರ್ಪಡೆ ಮಾಡಿಕೊಂಡಿರುವ ರಾಜಸ್ಥಾನದ ಗಂಗಾನಗರ ನಿವಾಸಿಯಾದ ಸೋಮನಾಥ್ ಪ್ರಮೋದ್ ಕುಮಾರ್ ಎಂಬ ವ್ಯಕ್ತಿಯನ್ನು ಬಂಧಿಸಲಾಗಿದೆ ಎಂದು ಅವರು ಹೇಳಿದ್ದಾರೆ.

ಅಂತರ್ಜಾಲ ತಾಣವನ್ನು ತನ್ನ ಹೆಸರಿನಲ್ಲಿ ಸೃಷ್ಟಿಸಿರುವ ಉತ್ತರ ಪ್ರದೇಶದ ಉನ್ನಾವ್ ನಿವಾಸಿ ಪ್ರೇಮ್ ವೀರ್ ಸಿನ್ಹ ಠಾಕೂರ್ ಎಂಬ ಮತ್ತೊಬ್ಬ ವ್ಯಕ್ತಿಯನ್ನೂ ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

“ವಿಚಾರಣೆಗೊಳಪಡಿಸಿದಾಗ, ಆರೋಪಿಗಳು ಕಳೆದ ಎರಡು ವರ್ಷಗಳಲ್ಲಿ ಸುಮಾರು 2 ಲಕ್ಷ ನಕಲಿ ದಾಖಲೆಗಳನ್ನು ಸೃಷ್ಟಿಸಿದ್ದೇವೆ ಎಂದು ಬಹಿರಂಗ ಪಡಿಸಿದ್ದಾರೆ. ಆರೋಪಿಗಳ ಪೈಕಿ ಸೋಮನಾಥ್ ಕೇವಲ 5ನೇ ತರಗತಿವರೆಗೆ ಮಾತ್ರ ವ್ಯಾಸಂಗ ಮಾಡಿದ್ದು, ಈ ಕಾನೂನು ಬಾಹಿರ ಚಟುವಟಿಕೆಗಳನ್ನು ನಡೆಸಲು ಕೆಲವು ವ್ಯಕ್ತಿಗಳಿಂದ ತಾಂತ್ರಿಕ ನೆರವು ಪಡೆದಿದ್ದಾನೆ. ಈ ಅಂತರ್ಜಾಲ ತಾಣವು ಕಳೆದ ಮೂರು ವರ್ಷಗಳಿಂದ ಚಾಲ್ತಿಯಲ್ಲಿದೆ” ಎಂದೂ ಅವರು ಹೇಳಿದ್ದಾರೆ.

“ಇದು ಗಂಭೀರ ರಾಷ್ಟ್ರೀಯ ಭದ್ರತೆಯ ವಿಷಯವಾಗಿದೆ. ಅವರು ದಾಖಲೆಗಳನ್ನು ತಿದ್ದುಪಡಿ ಮಾಡದೆ ಇದ್ದರೂ, ಸರ್ಕಾರಿ ದತ್ತಾಂಶಗಳಿಗೆ ಪ್ರವೇಶ ಪಡೆದಿದ್ದು, ಇದು ಕಾನೂನು ಬಾಹಿರ ದೃಢೀಕರಣ ಪ್ರಕರಣವಾಗಿದೆ” ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಈ ಜಾಲದ ಹಿಂದೆ ಮತ್ತಷ್ಟು ವ್ಯಕ್ತಿಗಳು ಇರುವ ಸಾಧ್ಯತೆ ಇದ್ದು, ಪ್ರಮೋದ್ ಕುಮಾರ್ ಹಾಗೂ ಆತನ ತಾಯಿಯ ಬ್ಯಾಂಕ್ ಖಾತೆಗಳಲ್ಲಿದ್ದ ರೂ. 25 ಲಕ್ಷ ಮೊತ್ತವನ್ನು ಮುಟ್ಟುಗೋಲು ಹಾಕಿಕೊಳ್ಳಲಾಗಿದೆ ಎಂದು ಸಹಾಯಕ ಪೊಲೀಸ್ ಆಯುಕ್ತ ವಿ.ಕೆ.ಪಾರ್ಮರ್ ಹೇಳಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X