Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಈ ಹೊತ್ತಿನ ಹೊತ್ತಿಗೆ
      • ಜನಚರಿತೆ
      • ವಿಡಂಬನೆ
      • ಜನ ಜನಿತ
      • ರಂಗ ಪ್ರಸಂಗ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಜನಮನ
      • ರಂಗದೊಳಗಿಂದ
      • ಶಂಬೂಕ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಚುನಾವಣೋತ್ತರ ಸಮೀಕ್ಷೆ ಪ್ರಕಟ |...

ಚುನಾವಣೋತ್ತರ ಸಮೀಕ್ಷೆ ಪ್ರಕಟ | ಮಹಾರಾಷ್ಟ್ರ – ಜಾರ್ಖಂಡ್ ನಲ್ಲಿ ಎನ್ ಡಿ ಎ ಗೆ ಬಹುಮತ ಎಂದ ಸಮೀಕ್ಷೆಗಳು

ವಾರ್ತಾಭಾರತಿವಾರ್ತಾಭಾರತಿ20 Nov 2024 8:15 PM IST
share
ಚುನಾವಣೋತ್ತರ ಸಮೀಕ್ಷೆ ಪ್ರಕಟ | ಮಹಾರಾಷ್ಟ್ರ – ಜಾರ್ಖಂಡ್ ನಲ್ಲಿ ಎನ್ ಡಿ ಎ ಗೆ ಬಹುಮತ ಎಂದ ಸಮೀಕ್ಷೆಗಳು

ಹೊಸದಿಲ್ಲಿ : ಮಹಾರಾಷ್ಟ್ರ ಮತ್ತು ಜಾರ್ಖಂಡ್ ವಿಧಾನಸಭೆ ಚುನಾವಣೆಗೆ ಮತದಾನ ಮುಗಿದಿದ್ದು, ಚುನಾವಣೋತ್ತರ ಸಮೀಕ್ಷೆಗಳು ಪ್ರಕಟವಾಗಿವೆ. ಹೆಚ್ಚಿನ ಸಮೀಕ್ಷೆಗಳು ಎರಡೂ ರಾಜ್ಯಗಳಲ್ಲಿ ಎನ್ ಡಿ ಎ ಗೆ ಬಹುಮತ ನೀಡಿವೆ.

ಮಹಾರಾಷ್ಟ್ರದಲ್ಲಿ ಮಹಾಯುತಿ ಮೈತ್ರಿಕೂಟವು ಅಧಿಕಾರಕ್ಕೇರುವ ಸಾಧ್ಯತೆ ಹೆಚ್ಚು ಎಂದು ಸಮೀಕ್ಷೆಗಳು ಹೇಳಿವೆ. ಜಾರ್ಖಂಡ್ ನಲ್ಲಿ ಪಿ ಮಾರ್ಕ್ ಸಮೀಕ್ಷೆಯು ಇಂಡಿಯಾ ಮೈತ್ರಿಕೂಟಕ್ಕೆ ಬಹುಮತ ನೀಡಿದೆ. ಉಳಿದ ಸಮೀಕ್ಷೆಗಳು ಬಿಜೆಪಿ ಮೈತ್ರಿಕೂಟ ಅಧಿಕಾರಕ್ಕೇರುವ ಸಾಧ್ಯತೆಯಿದೆ ಎಂದು ಹೇಳಿದೆ.

ಮಹಾರಾಷ್ಟ್ರದಲ್ಲಿ ಒಟ್ಟು ವಿಧಾನಸಭಾ ಕ್ಷೇತ್ರಗಳು 288. ಸರಳ ಬಹುಮತಕ್ಕೆ 145 ಸ್ಥಾನಗಳನ್ನು ಗೆಲ್ಲಬೇಕು. ಮ್ಯಾಟ್ರಿಜ್ ಸಮೀಕ್ಷೆಯ ಪ್ರಕಾರ, NDAಯು 150 ರಿಂದ 170 ಸ್ಥಾನ ಗಳಿಸಿದರೆ, MVAಯು 110 ರಿಂದ 130 ಸ್ಥಾನ ಗಳಿಸಲಿದೆ. ಇತರರು 8 ರಿಂದ 10 ಸ್ಥಾನ ಗಳಿಸಲಿದ್ದಾರೆ ಎಂದು ಮ್ಯಾಟ್ರಿಕ್ ಸಮೀಕ್ಷೆಯು ಹೇಳಿದೆ.

CNN ಸಮೀಕ್ಷೆ ಪ್ರಕಾರ, NDAಯು 154 ಸ್ಥಾನ ಗಳಿಸಿದರೆ, MVAಯು 128 ಸ್ಥಾನಕ್ಕೆ ಗಳಿಸಲಿದೆ. ಇತರರಿಗೆ 6 ಸ್ಥಾನಗಳು ಬರಲಿದೆ ಎಂದು ಭವಿಷ್ಯ ನುಡಿದಿದೆ.

P – Marq ಸಮೀಕ್ಷೆಯು NDAಗೆ 137 ರಿಂದ 157 ಸ್ಥಾನ ನೀಡಿದೆ. MVAಗೆ 126 ರಿಂದ 146 ಸ್ಥಾನಗಳು ಸಿಗಲಿದೆ ಎಂದು ಹೇಳಿದೆ. ಇತರರು 2 ರಿಂದ 8 ಸ್ಥಾನ ಗಳಿಸಬಹುದು ಎಂದು ಸಮೀಕ್ಷೆ ಹೇಳಿದೆ.

ಚಾಣಕ್ಯ ಎಸ್ ಸಮೀಕ್ಷೆ ಪ್ರಕಾರ, NDAಗೆ 157 ರಿಂದ 160, MVAಗೆ 130 ರಿಂದ 138, ಇತರರಿಗೆ 6 ರಿಂದ 8 ಸ್ಥಾನಗಳು ಬರುವ ನಿರೀಕ್ಷೆಯಿದೆ.

ಜಾರ್ಖಂಡ್ ನಲ್ಲಿ ಒಟ್ಟು 81 ವಿಧಾನಸಭಾ ಸ್ಥಾನಗಳಿವೆ. ಬಹುಮತ ಗಳಿಸಲು 41 ಸ್ಥಾನಗಳನ್ನು ಗೆಲ್ಲಬೇಕು. ಪಿ ಮಾರ್ಕ್ ಸಮೀಕ್ಷೆಯು ಇಂಡಿಯಾ ಒಕ್ಕೂಟಕ್ಕೆ 37 ರಿಂದ 47 ಸ್ಥಾನಗಳು ಬರಬಹುದು ಎಂದು ಅಂದಾಜಿಸಿದೆ. NDA ಮೈತ್ರಿಕೂಟಕ್ಕೆ 31 ರಿಂದ 40 ಸ್ಥಾನಗಳನ್ನು ನೀಡಿದೆ. ಇತರರಿಗೆ 1 ರಿಂದ 6 ಸ್ಥಾನಗಳ ಸಾಧ್ಯತೆಯನ್ನು ಸಮೀಕ್ಷೆಯು ಹೇಳಿದೆ.

ಮ್ಯಾಟ್ರಿಜ್ ಸಮೀಕ್ಷೆಯು BJP ಮೈತ್ರಿಕೂಟಕ್ಕೆ 42 ರಿಂದ 47 ಸ್ಥಾನಗಳು, ಕಾಂಗ್ರೆಸ್ ಮೈತ್ರಿಕೂಟಕ್ಕೆ 25 ರಿಂದ 30 ಸ್ಥಾನಗಳು, ಇತರರಿಗೆ 1 ರಿಂದ 4 ಸ್ಥಾನಗಳು ಬರಬಹುದು ಎಂದು ಅಂದಾಜಿಸಿದೆ.

JVC – S ಸಮೀಕ್ಷೆ ಪ್ರಕಾರ, BJP ಮೈತ್ರಿಕೂಟಕ್ಕೆ 40 ರಿಂದ 44, ಕಾಂಗ್ರೆಸ್ ಮೈತ್ರಿಕೂಟಕ್ಕೆ 30 ರಿಂದ 40, ಇತರರಿಗೆ 1 ಸ್ಥಾನ ಸಿಗುವ ಸಾಧ್ಯೆತೆಯಿದೆ ಎಂದು ಹೇಳಿದೆ.

ಪೋಲ್ ಆಫ್ ಪೋಲ್ಸ್ ಸಮೀಕ್ಷೆಯು BJP ಮೈತ್ರಿಕೂಟಕ್ಕೆ 47, ಕಾಂಗ್ರೆಸ್ ಮೈತ್ರಿಕೂಟಕ್ಕೆ 30, ಇತರರಿಗೆ 4 ಸ್ಥಾನಗಳನ್ನು ಅಂದಾಜಿಸಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X