Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಈ ಹೊತ್ತಿನ ಹೊತ್ತಿಗೆ
      • ಜನಚರಿತೆ
      • ವಿಡಂಬನೆ
      • ಜನ ಜನಿತ
      • ರಂಗ ಪ್ರಸಂಗ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಜನಮನ
      • ರಂಗದೊಳಗಿಂದ
      • ಶಂಬೂಕ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಮಾಧ್ಯಮಗಳಿಗೆ ಹೆದರುವ ಪ್ರಧಾನಿ ನಾನಲ್ಲ...

ಮಾಧ್ಯಮಗಳಿಗೆ ಹೆದರುವ ಪ್ರಧಾನಿ ನಾನಲ್ಲ ಎಂದಿದ್ದ ಮನಮೋಹನ್‌ಸಿಂಗ್

ವಾರ್ತಾಭಾರತಿವಾರ್ತಾಭಾರತಿ27 Dec 2024 9:45 PM IST
share
ಮಾಧ್ಯಮಗಳಿಗೆ ಹೆದರುವ ಪ್ರಧಾನಿ ನಾನಲ್ಲ ಎಂದಿದ್ದ ಮನಮೋಹನ್‌ಸಿಂಗ್

ಹೊಸದಿಲ್ಲಿ : ನಿಖರವಾಗಿ ಒಂದು ದಶಕದ ಹಿಂದೆ, ಮನಮೋಹನ್‌ಸಿಂಗ್ ಅವರು ಪ್ರಧಾನಿ ಹುದ್ದೆಯಲ್ಲಿದ್ದು 2014ರ, ಜನವರಿ 3ರಂದು ನಡೆಸಿದ ಕಟ್ಟಕಡೆಯ ಪತ್ರಿಕಾಗೋಷ್ಠಿಯಲ್ಲಿ ನೂರಕ್ಕೂ ಅಧಿಕ ಪತ್ರಕರ್ತರಿಂದ ಪ್ರಶ್ನೆಗಳ ಸುರಿಮಳೆಯನ್ನೇ ಎದುರಿಸಬೇಕಾಯಿತು.

ಈ ಪತ್ರಿಕಾಗೋಷ್ಠಿಯು ಪ್ರಸಕ್ತ ರಾಜಕೀಯ ದೃಶ್ಯಾವಳಿಗಿಂತ ತೀರಾ ವ್ಯತಿರಿಕ್ತವಾದುದಾಗಿತ್ತು. ಕಳೆದ ಹತ್ತು ವರ್ಷಗಳಲ್ಲಿ ಹಾಲಿ ಪ್ರಧಾನಿ ನರೇಂದ್ರ ಮೋದಿಯವರು ಒಂದೇ ಒಂದು ಪತ್ರಿಕಾಗೋಷ್ಠಿಯನ್ನು ನಡೆಸಿರಲಿಲ್ಲವೆಂಬುದು ಇಲ್ಲಿ ಗಮನಾರ್ಹವಾಗಿದೆ.

ಆ ಪತ್ರಿಕಾಗೋಷ್ಠಿಯಲ್ಲಿ ಮನಮೋಹನ್‌ಸಿಂಗ್ ಅವರು, ಲೋಕಸಭಾ ಚುನಾವಣೆಗೆ ಬಿಜೆಪಿಯ ಪ್ರಧಾನಿ ಅಭ್ಯರ್ಥಿಯಾದ ನರೇಂದ್ರ ಮೋದಿ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದರು. ತನ್ನ ಆಡಳಿತಾವಧಿಯಲ್ಲಿ ಕೈಗೊಳ್ಳಲಾದ ಯೋಜನೆಗಳು, ಸುಧಾರಣೆಗಳನ್ನು ಅವರು ಬಲವಾದಗಿ ಸಮರ್ಥಿಸಿದರು. ತಾನೋರ್ವ ದುರ್ಬಲ ಪ್ರಧಾನಿ ಮತ್ತು ಮಾತನಾಡಲು ಹಿಂದೇಟು ಹಾಕುವವ ಎಂಬ ಟೀಕೆಗಳನ್ನು ಅವರು ತಳ್ಳಿಹಾಕಿದರು.

‘‘ಮಾಧ್ಯಮಗಳಿಗೆ ಬೆದರುವ ಪ್ರಧಾನಿ ನಾನಲ್ಲ. ಸಮಕಾಲೀನ ಮಾಧ್ಯಮಗಳು ಹಾಗೂ ಸಂಸತ್‌ನಲ್ಲಿರುವ ಪ್ರತಿಪಕ್ಷಗಳಿಗಿಂತ ಇತಿಹಾಸವು ನನ್ನ ಬಗ್ಗೆ ಹೆಚ್ಚು ದಯಾಳುವಾಗಿರುವುದು ಎಂದು ನಾನು ನಂಬುತ್ತೇನೆ’’ ಎಂದು ಸಿಂಗ್ ಹೇಳಿದ್ದರು.

ಪತ್ರಿಕಾಗೋಷ್ಠಿಯಲ್ಲಿ ಡಾ. ಸಿಂಗ್ ಅವರು 62 ಪೂರ್ವರಚಿತವಲ್ಲದ ಪ್ರಶ್ನೆಗಳಿಗೆ ಉತ್ತರಿಸಿದರು. ಆ ಮೂಲಕ ಭಾರತೀಯ ರಾಜಕಾರಣದಲ್ಲಿ ಅಪರೂಪವಾಗಿ ಕಾಣಸಿಗುವಂತಹ ಪಾರದರ್ಶಕತೆ ಹಾಗೂ ಉತ್ತರದಾಯಿತ್ವವನ್ನು ಪ್ರದರ್ಶಿಸಿದರು.ಭ್ರಷ್ಟಾಚಾರ ಕುರಿತಾಗಿ ನಿಷ್ಕ್ರಿಯತೆ ಪ್ರದರ್ಶಿಸಿದ್ದೇನೆಂಬ ಆರೋಪಗಳಿಗೆ ಉತ್ತರಿಸಿದ ಅವರು, ಹಲವಾರು ಸವಾಲುಗಳ ಹೊರತಾಗಿಯೂ ಲಂಚಕೋರತನದ ವಿರುದ್ಧ ಕಠಿಣ ಕ್ರಮಗಳನ್ನು ತನ್ನ ಸರಕಾರ ಕೈಗೊಂಡಿತ್ತು ಎಂದು ಉತ್ತರಿಸಿದ್ದರು.

ಸಾರ್ವಜನಿಕ ಸೇವೆಯಲ್ಲಿ ತನ್ನ ಬದ್ಧತೆಯನ್ನು ಪುನರುಚ್ಚರಿಸಿದ್ದ ಅವರು, ನಾನು 9 ವರ್ಷಗಳ ಹಿಂದೆ ಹೇಗಿದ್ದೇನೋ, ಈಗಲೂ ಹಾಗೆಯೇ ಇದ್ದೇನೆ. ನನ್ನ ಸಾಮರ್ಥ್ಯವನ್ನು ಮೀರಿ ದೇಶಕ್ಕೆ ಸೇವೆ ಸಲ್ಲಿಸಲು ಯತ್ನಿಸಿದ್ದೇನೆ ಎಂದವರು ಹೇಳಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X