Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಈ ಹೊತ್ತಿನ ಹೊತ್ತಿಗೆ
      • ಜನಚರಿತೆ
      • ವಿಡಂಬನೆ
      • ಜನ ಜನಿತ
      • ರಂಗ ಪ್ರಸಂಗ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಜನಮನ
      • ರಂಗದೊಳಗಿಂದ
      • ಶಂಬೂಕ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಬಾಬರಿ ಮಸೀದಿ ಧ್ವಂಸ ವಿರೋಧಿಸಿದ್ದ ಅರ್ಚಕ...

ಬಾಬರಿ ಮಸೀದಿ ಧ್ವಂಸ ವಿರೋಧಿಸಿದ್ದ ಅರ್ಚಕ ಬಾಬಾ ಲಾಲ್ ದಾಸ್

ವಾರ್ತಾಭಾರತಿವಾರ್ತಾಭಾರತಿ22 Jan 2024 10:39 PM IST
share
ಬಾಬರಿ ಮಸೀದಿ ಧ್ವಂಸ ವಿರೋಧಿಸಿದ್ದ ಅರ್ಚಕ ಬಾಬಾ ಲಾಲ್ ದಾಸ್

ಹೊಸದಿಲ್ಲಿ: ಅಯೋಧ್ಯೆ ಮಾತ್ರವಲ್ಲ, ಭಾರತದಾದ್ಯಂತದ ಜನರು ಇದನ್ನು ವಿರೋಧಿಸಬೇಕು. ನಾವು ಎಂದಿಗೂ ಇತರರ ಧಾರ್ಮಿಕ ಭಾವನೆಗಳಿಗೆ ಧಕ್ಕೆ ಉಂಟು ಮಾಡಬಾರದು ಹಾಗೂ ಅವರ ಮನಸ್ಸನ್ನು ನೋಯಿಸಬಾರದು. ನಮ್ಮ ಧರ್ಮ ಇದಕ್ಕೆ ಅನುಮತಿ ನೀಡುವುದಿಲ್ಲ. ರಾಮನ ರಾಜಕೀಯ ಆದರ್ಶ ಎಲ್ಲರಿಗೂ ಪ್ರೇರಣೆಯಾಗಿದೆ. ನಾವು ತಿನ್ನುವಾಗ ನಮ್ಮ ದೇಹದ ಎಲ್ಲಾ ಭಾಗಗಳಿಗೆ ಆಹಾರ ಸಿಗುತ್ತದೆ. ಆದುದರಿಂದ ಎಲ್ಲಾ ಜನರು ನಮ್ಮವರೇ. ಯಾರೂ ದೊಡ್ಡವರಲ್ಲ, ಸಣ್ಣವರಲ್ಲ.

1990ರ ದಶಕದಲ್ಲಿ ವಿವಾದಾತ್ಮಕ ರಾಮಜನ್ಮಭೂಮಿ ಮಂದಿರದ ಮಹಾಂತರಾಗಿದ್ದ ಅರ್ಚಕ ಬಾಬಾ ಲಾಲ್ ದಾಸ್ ಅವರ ಮಾತುಗಳು ಇವು. 1991ರಲ್ಲಿ ಆನಂದ್ ಪಟವರ್ಧನ್ ಅವರು ನಿರ್ದೇಶಿಸಿದ ‘ರಾಮ್ ಕೆ ನಾಮ್’ ಸಾಕ್ಷ್ಯಚಿತ್ರದಲ್ಲಿ ಅವರು ಕಾಣಿಸಿಕೊಂಡಿದ್ದರು. ಈ ಸಾಕ್ಷ್ಯಚಿತ್ರ ನಿರ್ಮಾಣವಾದ ಬಳಿಕ 1993 ನವೆಂಬರ್ 26ರಂದು ಬಾಬಾ ಲಾಲ್ ದಾಸ್ ಅವರನ್ನು ಸಂದೇಹಾಸ್ಪದ ರೀತಿಯಲ್ಲಿ ಗುಂಡು ಹಾರಿಸಿ ಹತ್ಯೆಗೈಯಲಾಗಿತ್ತು.

ಲಕ್ನೋ ಉಚ್ಚ ನ್ಯಾಯಾಲಯ 1993ರಲ್ಲಿ ಬಾಬಾ ಲಾಲ್ ದಾಸ್ ಅವರನ್ನು ಅಯೋಧ್ಯೆಯ ಮುಖ್ಯ ಅರ್ಚರನ್ನಾಗಿ ನೇಮಕ ಮಾಡಿತ್ತು. ಬಾಬ್ರಿ ಮಸೀದಿಯನ್ನು ಸುತ್ತುವರಿದ ಸಂದರ್ಭ ವಿಶ್ವಹಿಂದೂ ಪರಿಷತ್ ನಡೆಸಿದ ಚಟುವಟಿಕೆಗಳನ್ನು ಅವರು ಕಟುವಾಗಿ ಟೀಕಿಸಿದ್ದರು. ರಥಯಾತ್ರೆಯನ್ನು ನಿಲ್ಲಿಸುವಂತೆ ಲಾಲ್ ಕೃಷ್ಣ ಅಡ್ವಾಣಿ ಅವರನ್ನು ಆಗ್ರಹಿಸಿದ್ದರು. ರಾಮ ಮಂದಿರ ಚಳವಳಿಯನ್ನು ಹಿಂದೂ ಮತಗಳನ್ನು ಸೆಳೆಯುವ ತಂತ್ರ ಎಂದು ಅವರು ಹೇಳಿದ್ದರು.

‘‘ಇದು (ಮಸೀದಿ ಧ್ವಂಸ) ವಿಎಚ್ಪಿಯ ರಾಜಕೀಯ ಆಟವಾಗಿದೆ. ಇದನ್ನು ಮಾಡಲು ಬಯಸಿದವರು ವಾಸ್ತವವಾಗಿ ಹಿಂದೂ ಮತಗಳನ್ನು ಸೆಳೆಯಲು ಭಾರತದಾದ್ಯಂತ ಉದ್ವಿಗ್ನತೆ ಸೃಷ್ಟಿಸುವಲ್ಲಿ ಹೆಚ್ಚು ಆಸಕ್ತಿ ಹೊಂದಿದ್ದಾರೆ’’ ಎಂದು ಅವರು ಸಾಕ್ಷ್ಯ ಚಿತ್ರದಲ್ಲಿ ಹೇಳಿದ್ದಾರೆ.

ಅವರು ಹಿಂದೂ ಹಾಗೂ ಮುಸ್ಲಿಂ ಸಮುದಾಯಗಳ ನಡುವಿನ ಶಾಂತಿ ಹಾಗೂ ಸಾಮರಸ್ಯದ ಹಲವು ನಿದರ್ಶನಗಳನ್ನು ತಿಳಿಸಿದ್ದಾರೆ. ಅಯೋಧ್ಯೆಯ ಹೆಚ್ಚಿನ ದೇವಾಲಯಗಳನ್ನು ಅವಧ್ ನ ಮುಸ್ಲಿಂ ಆಡಳಿತಾಗಾರರ ನೆರವಿನಿಂದ ಹೇಗೆ ನಿರ್ಮಿಸಲಾಯಿತು ಹಾಗೂ 1985ರ ಘರ್ಷಣೆಯ ಬಳಿಕ ಹಿಂದೂ ಪುರೋಹಿತರು ಹಾಗೂ ಮುಸ್ಲಿಂ ಪೀರ್ಗಳು ಸೌಹಾರ್ದಯುತವಾಗಿ ಬದುಕಲು ಹೇಗೆ ನಿರ್ದರಿಸಿದರು ಎಂಬುದನ್ನು ಅವರು ನಿರೂಪಿಸಿದ್ದಾರೆ.

ಬಾಬ್ರಿ ಮಸೀದಿಯನ್ನು ಧ್ವಂಸ ಮಾಡುವ ಪಿತೂರಿಗೆ ಸಂಬಂಧಿಸಿ ಅವರು ಉತ್ತಮ ಸಾಕ್ಷ್ಯವನ್ನು ಹೊಂದಿದ್ದರು. ಅಲ್ಲದೆ, 1993ರಲ್ಲಿ ಮಸೀದಿ ಧ್ವಂಸದ ತನಿಖೆಗೆ ರೂಪಿಸಲಾದ ದಿಲ್ಲಿಯ ನಾಗರಿಕ ನ್ಯಾಯ ಮಂಡಳಿಗೆ ಈ ಸಾಕ್ಷ್ಯಗಳನ್ನು ಸಲ್ಲಿಸಿದ್ದರು. ರಾಮಜನ್ಮಭೂಮಿ ನ್ಯಾಸದ ಹೆಸರಿನನಲ್ಲಿ ಸಂಗ್ರಹಿಸಲಾದ ದೊಡ್ಡ ಮೊತ್ತವನ್ನು ದುರ್ಬಳಕೆ ಮಾಡಿಕೊಳ್ಳಲಾಗಿದೆ ಎಂದು ಅವರು ಆರೋಪಿಸಿರುವುದಾಗಿ ವಕೀಲರಾದ ಫಲ್ವಿಯಾ ಆ್ಯಗ್ನೆಸ್ ಬರೆದ ಪತ್ರಿಕೆಯ ಲೇಖನವೊಂದು ಹೇಳಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X