Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಈ ಹೊತ್ತಿನ ಹೊತ್ತಿಗೆ
      • ಜನಚರಿತೆ
      • ವಿಡಂಬನೆ
      • ಜನ ಜನಿತ
      • ರಂಗ ಪ್ರಸಂಗ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಜನಮನ
      • ರಂಗದೊಳಗಿಂದ
      • ಶಂಬೂಕ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ತೆಲಂಗಾಣ | ಹೈದರಾಬಾದ್ ಟ್ರಾವೆಲ್...

ತೆಲಂಗಾಣ | ಹೈದರಾಬಾದ್ ಟ್ರಾವೆಲ್ ಸಂಸ್ಥೆಯ ವ್ಯವಸ್ಥಾಪಕರ ಮೇಲೆ ಗುಂಡಿನ ದಾಳಿ : ದುಷ್ಕರ್ಮಿಗಳನ್ನು ಪತ್ತೆ ಹಚ್ಚಲು ಹಲವು ಪೊಲೀಸ್ ತಂಡಗಳ ಕಾರ್ಯಾಚರಣೆ

ಆರೋಪಿಗಳು ಬಿಹಾರ ಮೂಲದವರೆಂಬ ಶಂಕೆ

ವಾರ್ತಾಭಾರತಿವಾರ್ತಾಭಾರತಿ17 Jan 2025 7:00 PM IST
share
ತೆಲಂಗಾಣ | ಹೈದರಾಬಾದ್ ಟ್ರಾವೆಲ್ ಸಂಸ್ಥೆಯ ವ್ಯವಸ್ಥಾಪಕರ ಮೇಲೆ ಗುಂಡಿನ ದಾಳಿ : ದುಷ್ಕರ್ಮಿಗಳನ್ನು ಪತ್ತೆ ಹಚ್ಚಲು ಹಲವು ಪೊಲೀಸ್ ತಂಡಗಳ ಕಾರ್ಯಾಚರಣೆ

ಹೈದರಾಬಾದ್ : ಹೈದರಾಬಾದ್ ನ ಟ್ರಾವೆಲ್ ಸಂಸ್ಥೆಯೊಂದರ ವ್ಯವಸ್ಥಾಪಕರ ಮೇಲೆ ಗುಂಡಿನ ದಾಳಿ ನಡೆಸಿ ಪರಾರಿಯಾಗಿರುವ ದುಷ್ಕರ್ಮಿಗಳನ್ನು ಪತ್ತೆ ಹಚ್ಚಲು ಹೈದರಾಬಾದ್ ಪೊಲೀಸ್ ತಂಡ ಸೇರಿದಂತೆ ತೆಲಂಗಾಣದ ಹಲವು ಪೊಲೀಸ್ ತಂಡಗಳು ಸಕ್ರಿಯ ಕಾರ್ಯಾಚರಣೆ ನಡೆಸುತ್ತಿವೆ. ಇಬ್ಬರು ಶಂಕಿತ ಆರೋಪಿಗಳ ಭಾವಚಿತ್ರಗಳನ್ನು ಹಂಚಿಕೊಂಡು ಛತ್ತೀಸ್ ಗಢ ಪೊಲೀಸರಿಗೂ ಮಾಹಿತಿ ನೀಡಲಾಗಿದೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ಹೇಳಿದ್ದಾರೆ.

ಗುರುವಾರ ರಾತ್ರಿ ಬೀದರ್ ಎಟಿಎಂ ಒಂದರ ಒರ್ವ ಭದ್ರತಾ ಸಿಬ್ಬಂದಿಯನ್ನು ಹತ್ಯೆಗೈದು, ಒರ್ವ ಸಿಬ್ಬಂದಿಯನ್ನು ಗಾಯಗೊಳಿಸಿ, 93 ಲಕ್ಷ ರೂ. ನಗದು ದೋಚಿ ಪರಾರಿಯಾಗಿದ್ದ ಹಂತಕರೇ ಹೈದರಾಬಾದ್ ನ ಟ್ರಾವೆಲ್ ಸಂಸ್ಥೆಯೊಂದರ ವ್ಯವಸ್ಥಾಪಕರ ಮೇಲೆ ಗುಂಡಿನ ದಾಳಿ ನಡೆಸಿರುವ ಬಲವಾದ ಶಂಕೆ ವ್ಯಕ್ತವಾಗಿದೆ.

ಪ್ರಾಥಮಿಕ ತನಿಖೆಯ ಪ್ರಕಾರ, ಆರೋಪಿಗಳು ಬಿಹಾರ ಮೂಲದವರೆಂದು ಶಂಕಿಸಲಾಗಿದೆ. ಗುರುವಾರ ಸಂಜೆ ಅಫ್ಝಲ್ ಗಂಜ್ ಪ್ರದೇಶದಲ್ಲಿ ಗುಂಡಿನ ದಾಳಿಯ ಘಟನೆ ನಡೆದಿದೆ. ಇಬ್ಬರು ಅಪರಿಚಿತರು ಹೈದರಾಬಾದ್ ನಿಂದ ರಾಯ್ಪುರಕ್ಕೆ ಟ್ರಾವೆಲ್ ಏಜೆನ್ಸಿಯೊಂದರಲ್ಲಿ ಬಸ್ ಟಿಕೆಟ್ ಮುಂಗಡ ಕಾಯ್ದಿರಿಸಲು ಮುಂದಾಗಿದ್ದಾರೆ. ಅವರನ್ನು ರಾಯ್ಪುರಕ್ಕೆ ಮುಖ್ಯ ಬಸ್ ನಲ್ಲಿ ಕಳಿಸಿಕೊಡಲು ಮಿನಿ ಶಟಲ್ ಬಸ್ ನಲ್ಲಿ ಸ್ಥಳಾವಕಾಶ ಕಲ್ಪಿಸಲಾಗಿತ್ತು. ಆದರೆ, ಟ್ರಾವೆಲ್ ಏಜೆನ್ಸಿಯ ವ್ಯವಸ್ಥಾಪಕರು ಅವರ ಬ್ಯಾಗ್ ಗಳನ್ನು ಪರೀಕ್ಷಿಸಬೇಕು ಎಂದು ಪಟ್ಟು ಹಿಡಿದಾಗ, ಆರೋಪಿಗಳ ಪೈಕಿ ಓರ್ವ ವ್ಯಕ್ತಿ ಅವರತ್ತ ಗುಂಡಿನ ದಾಳಿ ನಡೆಸಿದ್ದಾನೆ. ಕೂಡಲೇ ಗಾಯಗೊಂಡ ವ್ಯವಸ್ಥಾಪಕರನ್ನು ಆಸ್ಪತ್ರೆಗೆ ಸಾಗಿಸಲಾಗಿದೆ.

ನಂತರ, ಇಬ್ಬರು ಶಂಕಿತ ಆರೋಪಿಗಳು ಆಟೋರಿಕ್ಷಾದಲ್ಲಿ ಪರಾರಿಯಾಗಿದ್ದು, ಅವರು ಕೊನೆಯ ಬಾರಿ ಟ್ಯಾಂಕ್ ಬಂಡ್ ಪ್ರದೇಶದಲ್ಲಿ ಕಾಣಿಸಿದ್ದಾರೆ. ಪೊಲೀಸರು ಸ್ಥಳದಲ್ಲಿನ ಸಿಸಿಟಿವಿ ದೃಶ್ಯಾವಳಿಗಳ ಪರಿಶೀಲನೆ ನಡೆಸುತ್ತಿದ್ದಾರೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಟ್ರಾವೆಲ್ ಏಜೆನ್ಸಿ ಮಾಲಕರ ಸಂಬಂಧಿಯೊಬ್ಬರ ತಿಳಿಸಿರುವ ಪ್ರಕಾರ, ಟ್ರಾವೆಲ್ ಏಜೆನ್ಸಿಯ ವ್ಯವಸ್ಥಾಪಕರು ಇಬ್ಬರ ಪೈಕಿ ಓರ್ವ ಪ್ರಯಾಣಿಕನಿಗೆ ಆತನ ಬ್ಯಾಗ್ ತೋರಿಸುವಂತೆ ಪಟ್ಟು ಹಿಡಿದಿದ್ದಾರೆ. ಆಗ ಬ್ಯಾಗ್ ನಿಂದ ನಗದಿನ ಕಂತೆಯೊಂದನ್ನು ಹೊರ ತೆಗೆದು ಅದನ್ನು ವ್ಯವಸ್ಥಾಪಕರಿಗೆ ನೀಡಲು ಮುಂದಾಗಿದ್ದಾನೆ. ಆದರೆ, ಅದನ್ನು ಸ್ವೀಕರಿಸಲು ನಿರಾಕರಿಸಿರುವ ವ್ಯವಸ್ಥಾಪಕರು, ಮಿನಿ ಬಸ್ ನಿಂದ ಕೆಳಗಿಳಿಯುವಂತೆ ಇಬ್ಬರೂ ಪ್ರಯಾಣಿಕರ ಮೇಲೆ ಒತ್ತಡ ಹೇರಿದ್ದಾರೆ. ಆಗ ಓರ್ವ ಶಂಕಿತ ಆರೋಪಿಯು ದಿಢೀರನೆ ಅವರತ್ತ ಗುಂಡಿನ ದಾಳಿ ನಡೆಸಿದ್ದಾನೆ ಎಂದು ತಿಳಿಸಿದ್ದಾರೆ.

ಇಬ್ಬರು ಆರೋಪಿಗಳು ಬಿಹಾರದವರೆಂದು ಶಂಕಿಸಲಾಗಿದೆ ಎಂದು ಶುಕ್ರವಾರ ಪೊಲೀಸರು ಹೇಳಿದ್ದಾರೆ.

ಬೀದರ್ ಎಸ್.ಬಿ.ಐ ಎಟಿಎಂನ ಒರ್ವ ಭದ್ರತಾ ಸಿಬ್ಬಂದಿಯನ್ನು ಹತ್ಯೆಗೈದು, ಒರ್ವ ಸಿಬ್ಬಂದಿಯನ್ನು ಗಾಯಗೊಳಿಸಿ, 93 ಲಕ್ಷ ರೂ. ದೋಚಿ ಪರಾರಿಯಾಗಿರುವ ದರೋಡೆಕೋರರ ಗುರುತನ್ನು ಪತ್ತೆ ಹಚ್ಚಲಾಗಿದೆ ಎಂದು ಶುಕ್ರವಾರ ಕರ್ನಾಟಕದ ಗೃಹ ಸಚಿವ ಡಾ.ಜಿ.ಪರಮೇಶ್ವರ್ ತಿಳಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X