Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಈ ಹೊತ್ತಿನ ಹೊತ್ತಿಗೆ
      • ಜನಚರಿತೆ
      • ವಿಡಂಬನೆ
      • ಜನ ಜನಿತ
      • ರಂಗ ಪ್ರಸಂಗ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಜನಮನ
      • ರಂಗದೊಳಗಿಂದ
      • ಶಂಬೂಕ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ಯುದ್ಧ, AI ಅಪಾಯದಿಂದಾಗಿ ವಿಶ್ವ...

ಯುದ್ಧ, AI ಅಪಾಯದಿಂದಾಗಿ ವಿಶ್ವ ವ್ಯವಸ್ಥೆ ಕುಸಿತದ ಅಂಚಿನಲ್ಲಿ: ಆಮ್ನೆಸ್ಟಿ ಕಳವಳ

ವಾರ್ತಾಭಾರತಿವಾರ್ತಾಭಾರತಿ24 April 2024 10:20 PM IST
share
ಯುದ್ಧ, AI ಅಪಾಯದಿಂದಾಗಿ ವಿಶ್ವ ವ್ಯವಸ್ಥೆ ಕುಸಿತದ ಅಂಚಿನಲ್ಲಿ: ಆಮ್ನೆಸ್ಟಿ ಕಳವಳ

ಲಂಡನ್: ಅನೇಕ ರಂಗಗಳಲ್ಲಿ ಉಲ್ಬಣಿಸಿರುವ ಸಂಘರ್ಷ ಮತ್ತು ಕೃತಕ ಬುದ್ಧಿಮತ್ತೆ(ಎಐ)ಯ ತ್ವರಿತ ಮತ್ತು ಅನಿಯಂತ್ರಿತ ಏರಿಕೆಯಿಂದ ಎರಡನೆಯ ವಿಶ್ವಯುದ್ಧದ ನಂತರದ ಜಾಗತಿಕ ವ್ಯವಸ್ಥೆ ಪತನದ ಅಂಚಿನಲ್ಲಿದೆ ಎಂದು ಆ್ಯಮ್ನೆಸ್ಟಿ ಇಂಟರ್ನ್ಯಾಷನಲ್ ಬುಧವಾರ ಕಳವಳ ವ್ಯಕ್ತಪಡಿಸಿದೆ.

ಕಳೆದ 12 ತಿಂಗಳಲ್ಲಿ ನಾವು ನೋಡುತ್ತಿರುವ ಘಟನೆಗಳು ಅಂತರಾಷ್ಟ್ರೀಯ ಜಾಗತಿಕ ವ್ಯವಸ್ಥೆಯು ಕುಸಿತದ ಅಂಚಿನಲ್ಲಿರುವುದನ್ನು ಸೂಚಿಸುತ್ತಿವೆ ಎಂದು ಆಮ್ನೆಸ್ಟಿಯ ಪ್ರಧಾನ ಕಾರ್ಯದರ್ಶಿ ಆ್ಯಗ್ನೆಸ್ ಕ್ಯಾಲಮರ್ಡ್‍ರನ್ನು ಉಲ್ಲೇಖಿಸಿ ಎಎಫ್‍ಪಿ ಸುದ್ದಿಸಂಸ್ಥೆ ವರದಿ ಮಾಡಿದೆ. ಆಮ್ನೆಸ್ಟಿ ಇಂಟರ್‍ನ್ಯಾಷನಲ್‍ನ `ಜಾಗತಿಕ ಮಾನವ ಹಕ್ಕುಗಳ ಪರಿಸ್ಥಿತಿ' ಎಂಬ ಶೀರ್ಷಿಕೆಯ ವರದಿಯನ್ನು ಬಿಡುಗಡೆಗೊಳಿಸಿ ಮಾತನಾಡಿದ ಅವರು ` ನಿರ್ದಿಷ್ಟವಾಗಿ ಕಳೆದ 6 ತಿಂಗಳಲ್ಲಿ ಗಾಝಾದಲ್ಲಿ ನಡೆಸಿದ ಹಲವು ಉಲ್ಲಂಘನೆಗಳ ವಿರುದ್ಧ ಇಸ್ರೇಲ್ ಅಧಿಕಾರಿಗಳನ್ನು ಅಮೆರಿಕ ರಕ್ಷಿಸುತ್ತಿದೆ. ಈಗಿನ ತುರ್ತು ಅಗತ್ಯವಾಗಿರುವ ಕದನ ವಿರಾಮದ ವಿರುದ್ಧ ತನ್ನ ವೀಟೊ ಅಧಿಕಾರ ಬಳಸುವ ಮೂಲಕ ಅಮೆರಿಕವು ವಿಶ್ವಸಂಸ್ಥೆ ಭದ್ರತಾ ಮಂಡಳಿಯ ಒಮ್ಮತದ ನಿಲುವನ್ನು ತಡೆಹಿಡಿಯುತ್ತಿದೆ' ಎಂದರು.

ಗಾಝಾದ ಗಡಿಗೆ ಹೊಂದಿಕೊಂಡಿರುವ ಇಸ್ರೇಲ್ ಸಮುದಾಯದವರ ಮೇಲೆ ಹಮಾಸ್ ಭಯಾನಕ ಅಪರಾಧಗಳನ್ನು ಎಸಗಿದೆ. ಆದರೆ ಇದಕ್ಕೆ ಇಸ್ರೇಲ್ `ಸಾಮೂಹಿಕ ಶಿಕ್ಷೆಯ' ಕಾರ್ಯಾಚರಣೆಯೊಂದಿಗೆ ಪ್ರತಿಕ್ರಿಯಿಸಿದೆ. ನಾಗರಿಕರು ಮತ್ತು ನಾಗರಿಕ ಮೂಲಸೌಕರ್ಯಗಳನ್ನು ಗುರಿಯಾಗಿಸಿದ ಉದ್ದೇಶಪೂರ್ವಕ, ವಿವೇಚನೆಯಿಲ್ಲದ ಬಾಂಬ್ ದಾಳಿಯ, ಮಾನವೀಯ ನೆರವಿನ ನಿರಾಕರಣೆಯ ಕಾರ್ಯಾಚರಣೆ ಇದಾಗಿದೆ ಎಂದು ವರದಿ ಹೇಳಿದೆ.

ಪ್ರಪಂಚದಾದ್ಯಂತ ಲಕ್ಷಾಂತರ ಜನರಿಗೆ ಗಾಝಾವು ಈಗ ಎರಡನೇ ಮಹಾಯುದ್ಧದ ಬಳಿಕದ ಜಾಗತಿಕ ವ್ಯವಸ್ಥೆಯನ್ನು ರೂಪಿಸಿದ ಹಲವರ ನೈತಿಕ ವೈಫಲ್ಯದ ಸಂಕೇತವಾಗಿದೆ. ಈ ಅಪರಾಧದಲ್ಲಿ ಇಸ್ರೇಲ್‍ನ ಮಿತ್ರರು, ಅವರಿಗೆ ಶಸ್ತ್ರಾಸ್ತ್ರ ಒದಗಿಸುವವರು ಸಹಭಾಗಿಗಳಾಗಿದ್ದಾರೆ. ಅಂತರಾಷ್ಟ್ರೀಯ ಸಮುದಾಯವೂ ಸೂಕ್ತ ನಿರ್ಧಾರ ಕೈಗೊಳ್ಳದೆ ನಿಷ್ಕ್ರಿಯವಾಗಿದೆ. ರಶ್ಯ ಮತ್ತು ಚೀನಾ ಸೇರಿದಂತೆ ಇತರ ಪ್ರಬಲ ಶಕ್ತಿಗಳು ಕೂಡಾ 1948ರ ನಿಯಮಾಧಾರಿತ ಜಾಗತಿಕ ವ್ಯವಸ್ಥೆಯನ್ನು ಅಪಾಯಕ್ಕೆ ಒಡ್ಡುವ ಇಚ್ಛೆಯನ್ನು ಪ್ರದರ್ಶಿಸುತ್ತಿವೆ ಎಂದು ಆ್ಯಗ್ನೆಸ್ ಕ್ಯಾಲಮರ್ಡ್ ಹೇಳಿದ್ದಾರೆ.

ಉಕ್ರೇನ್‍ನಲ್ಲಿ ರಶ್ಯ ಮುಂದುವರಿಸಿರುವ ಪೂರ್ಣ ಪ್ರಮಾಣದ ಆಕ್ರಮಣ, ಯುದ್ಧಕೈದಿಗಳ ವಿರುದ್ಧ ಚಿತ್ರಹಿಂಸೆ, ದೌರ್ಜನ್ಯದ ಪ್ರಕರಣಗಳನ್ನು ವರದಿ ಉಲ್ಲೇಖಿಸಿದ್ದು ಮ್ಯಾನ್ಮಾರ್‍ನ ಮಿಲಿಟರಿಯನ್ನು ರಕ್ಷಿಸುವ ಮೂಲಕ ಚೀನಾವು ಅಂತರಾಷ್ಟ್ರೀಯ ಕಾನೂನಿಗೆ ವಿರುದ್ಧವಾಗಿ ವರ್ತಿಸುತ್ತಿದೆ ಎಂದು ಹೇಳಿದೆ. ವಿಶ್ವಸಂಸ್ಥೆ ಭದ್ರತಾ ಮಂಡಳಿಯಲ್ಲಿ ಸುಧಾರಣೆಯಾಗಬೇಕು. ಭಾರೀ ಪ್ರಮಾಣದಲ್ಲಿ ಮಾನವ ಹಕ್ಕುಗಳ ಉಲ್ಲಂಘನೆಯಾಗುವ ಪ್ರಕರಣಗಳಲ್ಲಿ ವೀಟೊ ಅಧಿಕಾರ ನಿರಾಕರಿಸಬೇಕು ಎಂದು ಆಮ್ನೆಸ್ಟಿ ಆಗ್ರಹಿಸಿದೆ.

AI ತಂತ್ರಜ್ಞಾನ ನಿಯಂತ್ರಣ ಅಗತ್ಯ

AI(ಕೃತಕ ಬುದ್ಧಿಮತ್ತೆ) ತಂತ್ರಜ್ಞಾನದ ಬೆಳವಣಿಗೆಯೂ ಕಳವಳಕ್ಕೆ ಕಾರಣವಾಗಿದೆ. ಮಾನವ ಹಕ್ಕುಗಳ ಉಲ್ಲಂಘನೆಯನ್ನು ಸಕ್ರಿಯಗೊಳಿಸಲು, ತಪ್ಪು ಮಾಹಿತಿಯನ್ನು ಹರಡಲು ಎಐ ದುರ್ಬಳಕೆಯಾಗುತ್ತಿದೆ. ಸಶಸ್ತ್ರ ಸಂಘರ್ಷದ ಸಮಯದಲ್ಲೂ ಈ ಬೆದರಿಕೆಯನ್ನು ಕನಿಷ್ಟಗೊಳಿಸುವಲ್ಲಿ ಬೃಹತ್ ತಂತ್ರಜ್ಞಾನ ಸಂಸ್ಥೆಗಳು ನಿರ್ಲಕ್ಷ್ಯ ವಹಿಸಿವೆ ಎಂದು ಆಮ್ನೆಸ್ಟಿ ಆರೋಪಿಸಿದೆ.

2024ರಲ್ಲಿ ಅಮೆರಿಕದ ಅಧ್ಯಕ್ಷೀಯ ಚುನಾವಣೆ ಸೇರಿದಂತೆ ಹಲವು ಪ್ರಮುಖ ಚುನಾವಣೆಗಳು ಇರುವುದರಿಂದ ಮಾನವ ಹಕ್ಕುಗಳ ಉಲ್ಲಂಘನೆ ಹೆಚ್ಚಬಹುದು ಎಂದು ವರದಿ ಎಚ್ಚರಿಸಿದ್ದು, ಎಐ ತಂತ್ರಜ್ಞಾನದಿಂದ ಉಂಟಾಗುವ ಅಪಾಯಗಳು ಮತ್ತು ಹಾನಿಗಳನ್ನು ಪರಿಹರಿಸಲು ಮತ್ತು ನಿಯಂತ್ರಿಸಲು ದೃಢವಾದ ಶಾಸಕಾಂಗ ಮತ್ತು ನಿಯಂತ್ರಕ ಕ್ರಮಗಳನ್ನು ಕೈಗೊಳ್ಳುವಂತೆ ಸರಕಾರಕ್ಕೆ ಕರೆ ನೀಡಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X