Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಈ ಹೊತ್ತಿನ ಹೊತ್ತಿಗೆ
      • ಜನಚರಿತೆ
      • ವಿಡಂಬನೆ
      • ಜನ ಜನಿತ
      • ರಂಗ ಪ್ರಸಂಗ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಜನಮನ
      • ರಂಗದೊಳಗಿಂದ
      • ಶಂಬೂಕ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ವಿಚಾರ
  3. ನಿಮ್ಮ ಅಂಕಣ
  4. ಮಂಡ್ಯದಲ್ಲಿ ಸೌತೆ ಬೆಳೆದು ಯಶಸ್ವಿಯಾದ...

ಮಂಡ್ಯದಲ್ಲಿ ಸೌತೆ ಬೆಳೆದು ಯಶಸ್ವಿಯಾದ ಆಂಧ್ರದ ರೈತ

ಕುಂಟನಹಳ್ಳಿ ಮಲ್ಲೇಶಕುಂಟನಹಳ್ಳಿ ಮಲ್ಲೇಶ8 July 2024 2:33 PM IST
share
ಮಂಡ್ಯದಲ್ಲಿ ಸೌತೆ ಬೆಳೆದು ಯಶಸ್ವಿಯಾದ ಆಂಧ್ರದ ರೈತ

ಮಂಡ್ಯ: ನೆರೆರಾಜ್ಯ ಆಂಧ್ರಪ್ರದೇಶದ ಹೈದರಾಬಾದ್ ಮೂಲದ ವ್ಯಕ್ತಿಯೊಬ್ಬರು ಮಂಡ್ಯದಲ್ಲಿ ಜಮೀನು ಗುತ್ತಿಗೆ ಪಡೆದು ಇಂಗ್ಲಿಷ್ ತಳಿ ಸೌತೆಕಾಯಿ ಬೆಳೆದು ಆರ್ಥಿಕ ಅಭಿವೃದ್ಧಿ ಕಂಡಿದ್ದಾರೆ. ಮೈಸೂರಿನಲ್ಲಿ ನೆಲೆಸಿರುವ ಹೈದರಾಬಾದ್ ಮೂಲದ ರಾಜಕುಮಾರ್ ಚವ್ಹಾಣ್, ಮೈಸೂರು ಸಮೀಪದ ಶ್ರೀರಂಗಪಟ್ಟಣ ತಾಲೂಕಿನ ಬೊಮ್ಮೂರು ಅಗ್ರಹಾರ ಬಳಿ ಕಾವೇರಿನದಿ ದಂಡೆಯಲ್ಲಿ ಎರಡು ಎಕರೆ ಜಮೀನು ಗುತ್ತಿಗೆ ಪಡೆದು ಹನಿ ನೀರಾವರಿ ಅಳವಡಿಸಿಕೊಂಡು ಬೆಳೆದಿರುವ ಇಂಗ್ಲಿಷ್ ಸೌತೆ ಕಟಾವು ಆಗುತ್ತಿದೆ.

ನಾಲ್ಕು ದಿನಗಳಿಗೆ ಒಮ್ಮೆ ಕಟಾವು ಮಾಡುತ್ತಿದ್ದು, ಈಗಾಗಲೇ ಆರು ಬಾರಿ ಕೊಯ್ಲು ಮಾಡಿದ್ದಾರೆ. ಸೌತೆಕಾಯಿಯನ್ನು ಮೈಸೂರಿನ ದೇವರಾಜ ಮಾರುಕಟ್ಟೆಗೆ ತೆಗೆದುಕೊಂಡು ಹೋಗಿ ಮಾರಾಟ ಮಾಡುತ್ತಿದ್ದಾರೆ. ಸದ್ಯ ಕಿಲೋ ಸೌತೆಗೆ 225 ರೂ. ಬೆಲೆ ಸಿಗುತ್ತಿದೆ ಎಂದು ರಾಜಕುಮಾರ್ ಚವ್ಹಾಣ್ ಹೇಳುತ್ತಾರೆ.

ಸುಮಾರು 100ರಿಂದ 120 ಗ್ರಾಂ ತೂಕ ಇರುವ ಸಣ್ಣದಾದ ಇಂಗ್ಲಿಷ್ ತಳಿಯ ಸೌತೆಕಾಯಿ ತುಂಬಾ ರುಚಿಯಾಗಿದೆ. ಜತೆಗೆ, ಔಷಧಿ ಗುಣ ಹೊಂದಿದೆ. ಹಾಗಾಗಿ ಈ ಸೌತೆಕಾಯಿಗೆ ತುಂಬಾ ಬೇಡಿಕೆ ಇದೆ. ಹಾಗಾಗಿ ಈ ತಳಿಯ ಸೌತೆಕಾಯಿಯನ್ನು ಇತ್ತೀಚೆಗೆ ಜಿಲ್ಲೆಯ ಹಲವು ರೈತರು ಈ ಬೆಳೆಯ ಕಡೆಗೆ ಒಲವು ತೋರುತ್ತಿರುವುದು ಕಂಡುಬಂದಿದೆ.

ಪರದ ಪದ್ಧತಿಯಲ್ಲಿ ಸೌತೆ ಬೆಳೆದಿರುವುದರಿಂದ ಕೀಟಗಳ ಹಾವಳಿ ತೀರಾ ಕಡಿಮೆ. ಬಿಸಿ ಗಾಳಿ ಮತ್ತು ರಭಸದ ಮಳೆಯಿಂದ ಬೆಳೆಗೆ ರಕ್ಷಣೆ ಸಿಗುತ್ತದೆ. ತೇವಾಂಶ ಬೇಗ ನಶಿಸುವುದಿಲ್ಲ. ಪಾಲಿಹೌಸ್ (ಗ್ರೀನ್ ಹೌಸ್) ಪದ್ಧತಿಗಿಂತ ನೆಟ್‌ಹೌಸ್(ಪರದೆ ಮನೆ) ಪದ್ಧತಿಯಲ್ಲಿ ಖರ್ಚೂ ಕಡಿಮೆ. ಪಾಲಿಹೌಸ್‌ಗೆ ವಾಡುವ ಖರ್ಚಿನ ಅರ್ಧ ಹಣದಲ್ಲಿ ನೆಟ್‌ಹೌಸ್ ಸಿದ್ಧಮಾಡಬಹುದು. ಪಾಲಿಹೌಸ್ ಒಳಗೆ ಹೆಚ್ಚು ಶಾಖವಿದ್ದು, ಅದು ಯೂರೋಪಿನ ಹವಾಗುಣಕ್ಕೆ ಸೂಕ್ತ. ಆದರೆ, ಇಲ್ಲಿನ ವಾತಾವರಣಕ್ಕೆ ಅದು ಅಷ್ಟಾಗಿ ಹೊಂದಿಕೊಳ್ಳುವುದಿಲ್ಲ. ಪರದೆ ಪದ್ಧತಿಯಲ್ಲಿ ಒಂದು ಬಾರಿ ಬಲೆ ಅಳವಡಿಸಿದರೆ 5 ವರ್ಷಗಳಿಗೂ ಹೆಚ್ಚು ಕಾಲ ಬಾಳಿಕೆ ಬರುತ್ತದೆ ಎನ್ನುವುದು ತಳಿ ವಿಜ್ಞಾನಿ ಡಾ.ಕೆ.ಕೆ.ಸುಬ್ರಮಣಿ ಮಾಹಿತಿ ನೀಡಿದರು.

ತಳಿ ವಿಜ್ಞಾನಿ ಡಾ.ಸುಬ್ರಮಣಿ ಶ್ರೀರಂಗಪಟ್ಟಣದಲ್ಲಿ ಕಾವೇರಿ ಕನ್ನಾ ಗುರುಕುಲ ನಡೆಸುತ್ತಿದ್ದಾರೆ. ಈ ಗುರುಕುಲದಲ್ಲಿ ವೇದಾಂತ ಕಲಿಯಲು ರಾಜಕುಮಾರ್ ಚವ್ಹಾಣ್ ಹೈದರಾಬಾದ್‌ನಿಂದ ಕುಟುಂಬ ಸಮೇತ ಬಂದಿದ್ದು, ಮೈಸೂರಿನಲ್ಲಿ ವಾಸ್ತವ್ಯವಿದ್ದಾರೆ. ಸುಬ್ರಮಣಿ ಅವರ ಸಲಹೆಯಂತೆ ಸೌತೆಕಾಯಿ ಬೇಸಾಯ ಮಾಡುತ್ತಿದ್ದಾರೆ.

ಮೊದಲನೇ ಕೊಯ್ಲಿನಲ್ಲಿ 200 ಕೆಜಿ ಸೌತೆ ಸಿಕ್ಕಿತ್ತು. 6ನೇ ಕೊಯ್ಲಿಗೆ 800 ಕೆಜಿ ಸಿಕ್ಕಿದೆ. ಈ ತಳಿಯ ಗಿಡ ಫಲಕ್ಕೆ ಬಂದ ನಂತರ ಮೂರು ತಿಂಗಳವರೆಗೂ ಬಾಳಿಕೆ ಬರುತ್ತದೆ. ಎರಡು ಎಕರೆಯಲ್ಲಿ ಸೌತೆ ಬೆಳೆಯಲು 12 ಲಕ್ಷ ರೂ.ವರೆಗೆ ಖರ್ಚಾಗಿದೆ. ಸದ್ಯ ಇರುವ ಬೆಲೆ ಸಿಕ್ಕಿದರೆ, ಖರ್ಚು ಕಳೆದು 5ರಿಂದ 28 ಲಕ್ಷ ರೂ.ವರೆಗೂ ಲಾಭ ಸಿಗುವ ನಿರೀಕ್ಷೇ ಇದೆ.

-ರಾಜಕುಮಾರ್ ಚವ್ಹಾಣ್, ಪ್ರಗತಿಪರ ಕೃಷಿಕ

share
ಕುಂಟನಹಳ್ಳಿ ಮಲ್ಲೇಶ
ಕುಂಟನಹಳ್ಳಿ ಮಲ್ಲೇಶ
Next Story
X