Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಈ ಹೊತ್ತಿನ ಹೊತ್ತಿಗೆ
      • ಜನಚರಿತೆ
      • ವಿಡಂಬನೆ
      • ಜನ ಜನಿತ
      • ರಂಗ ಪ್ರಸಂಗ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಜನಮನ
      • ರಂಗದೊಳಗಿಂದ
      • ಶಂಬೂಕ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ವಿಚಾರ
  3. ನಿಮ್ಮ ಅಂಕಣ
  4. ಚಿಕ್ಕಮಗಳೂರು ನಗರದ ಸೌಂದರ್ಯ ಹೆಚ್ಚಿಸಿದ...

ಚಿಕ್ಕಮಗಳೂರು ನಗರದ ಸೌಂದರ್ಯ ಹೆಚ್ಚಿಸಿದ ಪುಷ್ಪರಾಶಿ

ಬಿರು ಬೇಸಿಗೆಯಲ್ಲೂ ಮರಗಿಡಗಳಲ್ಲಿ ಅರಳಿನಿಂತ ಹೂವುಗಳು

ಕೆ.ಎಲ್. ಶಿವುಕೆ.ಎಲ್. ಶಿವು24 March 2025 10:45 AM IST
share
ಚಿಕ್ಕಮಗಳೂರು ನಗರದ ಸೌಂದರ್ಯ ಹೆಚ್ಚಿಸಿದ ಪುಷ್ಪರಾಶಿ

ಚಿಕ್ಕಮಗಳೂರು: ಬಿರು ಬೇಸಿಗೆಯಲ್ಲಿ ಸಾರ್ವಜನಿಕರು ಬಿಸಿಲ ಝಳಕ್ಕೆ ರೋಸಿ ಹೋಗುತ್ತಿದ್ದರೆ, ಪ್ರಾಕೃತಿಕ ವಿಸ್ಮಯ ಎಂಬಂತೆ ನಗರದ ಕೆಲ ಮರಗಿಡಗಳಲ್ಲಿ ಪುಷ್ಪಗಳು ಅರಳಿ ನಿಂತಿದ್ದು, ಪುಷ್ಪ ಪ್ರಿಯರ ಕಣ್ಮನ ಸೆಳೆಯುತ್ತಿವೆ.

ಚಿಕ್ಕಮಗಳೂರು ನಗರದ ಕೆಲವು ಬಡಾವಣೆಗಳಲ್ಲಿನ ವಿವಿಧ ಜಾತಿಯ ಮರಗಳಲ್ಲಿ ವಿವಿಧ ಬಗೆಯ ಬಣ್ಣ ಬಣ್ಣದ ಹೂವುಗಳು ಅರಳಿ ನಿಂತಿದ್ದು, ನಗರದ ಸೊಬಗು ಹೆಚ್ಚಿಸಿವೆ. ಈ ಪುಷ್ಪಗಳ ಸೊಬಗು ನೋಡುಗರ ಗಮನ ಸೆಳೆಯುತ್ತಿವೆ. ಎಪ್ರಿಲ್ ತಿಂಗಳು ಆರಂಭವಾಗುತ್ತಿದ್ದು, ಅಲ್ಲಲ್ಲಿ ಮೇ ಪ್ಲವರ್ ಕಣ್ಮನ ಸೆಳೆಯುತ್ತಿವೆ. ಎಲ್ಲಿ ನೋಡಿದರಲ್ಲಿ ನೀಲಿ, ನೇರಳೆ, ಬೂದುಬಣ್ಣ, ಕೆಂಪು ಹೂವುಗಳು ಮರಗಳಲ್ಲಿ ಕಂಗೊಳಿಸುತ್ತಿವೆ. ಮರದ ಅಡಿಯಿಂದ ಮುಡಿಯವರೆಗೂ ಹೂವುಗಳು ಬಿಟ್ಟಿದ್ದು ನೋಡುಗರನ್ನು ತನ್ನತ್ತ ಸೆಳೆಯುತ್ತಿವೆ.

ಹವಾಮಾನ ವೈಪರೀತ್ಯದಿಂದ ಮಾರ್ಚ್ ತಿಂಗಳಲ್ಲಿ ಸುಡುಬಿಸಿಲು, ಬಿಸಿಗಾಳಿ ಬೀಸುತ್ತಿದ್ದರೆ ದಾರಿಯಲ್ಲಿ ಸಾಗುವವರಿಗೆ ಈ ಮರಗಳು ನೆರಳು ನೀಡುವುದರ ಜತೆಗೆ ಮರದಲ್ಲಿ ಅರಳಿರುವ ಹೂವುಗಳು ಮನಸ್ಸಿಗೆ ಮುದ ನೀಡುತ್ತವೆ. ನಗರದ ನಗರಸಭೆ ಆವರಣದಲ್ಲಿ ನಾಗರಹಾವಿನಂತೆ ತಲೆ ಎತ್ತಿರುವ ಹೂವೊಂದು ಮರದ ತುಂಬಾ ಹರಡಿಕೊಂಡಿದ್ದು, ಜನರನ್ನು ಆಕರ್ಷಿಸುತ್ತಿದೆ. ನೇತಾಜಿ ಸುಭಾಷ್‌ಚಂದ್ರ ಬೋಸ್ ಜಿಲ್ಲಾ ಆಟದ ಮೈದಾನದಲ್ಲಿ ಮೇ ಪ್ಲವರ್ ಕಂಗೊಳಿಸುತ್ತಿವೆ. ಅಲ್ಲಲ್ಲಿ ವಿವಿಧ ಬಣ್ಣದ ಹೂವುಗಳು ಅರಳಿ ನಿಂತಿದ್ದು ವಾಯುವಿಹಾರಕ್ಕೆ ಬರುವವರನ್ನು ಸೆಳೆಯುತ್ತಿವೆ.

ಪಶು ಸಂಗೋಪನಾ ಇಲಾಖೆ ಕಚೇರಿ ಎದುರು ಹಳದಿ ಬಣ್ಣದ ಹೂವುಗಳು ಅರಳಿವೆ. ಬೋಳರಾಮೇಶ್ವರ ದೇವಸ್ಥಾನ ಆವರಣದಲ್ಲಿ ನೇರಳೆ ಬಣ್ಣದ ಹೂವುಗಳು ಅರಳಿ ನಿಂತಿವೆ. ಪ್ರಧಾನ ಅಂಚೆ ಕಚೇರಿಗೆ ಹೋಗುವ ರಸ್ತೆ ಬದಿಯಲ್ಲಿ ಬೂದು ಬಣ್ಣದ ಹೂವುಗಳು ಮರದ ತುಂಬೆಲ್ಲ ಅರಳಿದ್ದು ವಾಹನದಲ್ಲಿ ಸಾಗುವವರು ಮತ್ತು ಪಾದಚಾರಿಗಳ ಗಮನಸೆಳೆಯುತ್ತಿವೆ.

ಕಣಗಲ ಮರದಲ್ಲಿ ಬಿಳಿಯ ಹೂವುಗಳು ಅರಳಿದ್ದರೆ, ರಂಗೀನ ಹೂವು ಅರಳ ತೊಡಗಿವೆ. ಹೀಗೆ ವಿವಿಧ ಬಗೆಯ ಹೂವುಗಳು ರಸ್ತೆಗಳ ಇಕ್ಕೆಲಗಳಲ್ಲಿ ಅರಳಿ ನಿಂತಿದ್ದು, ಕಾಫಿನಾಡಿಗೆ ಪ್ರವಾಸಿಗರನ್ನು ಸ್ವಾಗತಿಸುತ್ತಿವೆ. ಗಿರಿ ಪ್ರದೇಶದಲ್ಲಿ ವಿವಿಧ ಬಗೆಯ ಹೂವುಗಳು ಪುಷ್ಪ ಪ್ರಿಯರನ್ನು ಆಕರ್ಷಿಸುತ್ತಿವೆ.

ಯುಗಾದಿ ಹಬ್ಬ ಸಮೀಪಿಸುತ್ತಿದ್ದು ವಸಂತ ಸಂವತ್ಸರಕ್ಕೆ ಕಾಲಿಡುತ್ತಿರುವ ಈ ಹೊತ್ತಿನಲ್ಲಿ ಮರಗಳು ಎಲೆಗಳನ್ನು ಉದುರಿಸಿ ಹೊಸ ಚಿಗುರು ಮೂಡುತ್ತಿದ್ದರೆ ಕೆಲವು ಮರಗಿಡಗಳು ಹೂಬಿಟ್ಟು ನಗರದ ಕಾನನ ಮತ್ತು ನಗರದ ಅಂದವನ್ನು ಹೆಚ್ಚಿಸುತ್ತಿರುವುದಲ್ಲದೆ ನೋಡುಗರ ಗಮನ ಸೆಳೆಯುತ್ತಿವೆ. ಒಟ್ಟಾರೆ ಚಿಕ್ಕಮಗಳೂರು ನಗರದ ವಿವಿಧ ಬಡಾವಣೆಗಳ ರಸ್ತೆ ಇಕ್ಕೆಲಗಳಲ್ಲಿ ಅರಳಿರುವ ಹೂವುಗಳು ನಗರದ ಅಂದವನ್ನು ಹೆಚ್ಚಿಸಿವೆ.

share
ಕೆ.ಎಲ್. ಶಿವು
ಕೆ.ಎಲ್. ಶಿವು
Next Story
X