Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಈ ಹೊತ್ತಿನ ಹೊತ್ತಿಗೆ
      • ಜನಚರಿತೆ
      • ವಿಡಂಬನೆ
      • ಜನ ಜನಿತ
      • ರಂಗ ಪ್ರಸಂಗ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಜನಮನ
      • ರಂಗದೊಳಗಿಂದ
      • ಶಂಬೂಕ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ವಿಚಾರ
  3. ನಿಮ್ಮ ಅಂಕಣ
  4. ಕೊಡ್ಲಿಪೇಟೆಯ ನಂದಿಪುರ ಕೆರೆಗೆ ಆಧುನಿಕ...

ಕೊಡ್ಲಿಪೇಟೆಯ ನಂದಿಪುರ ಕೆರೆಗೆ ಆಧುನಿಕ ಸ್ಪರ್ಶ

ಕೆ.ಎಂ. ಇಸ್ಮಾಯಿಲ್ ಕಂಡಕರೆಕೆ.ಎಂ. ಇಸ್ಮಾಯಿಲ್ ಕಂಡಕರೆ18 Nov 2024 12:19 PM IST
share
ಕೊಡ್ಲಿಪೇಟೆಯ ನಂದಿಪುರ ಕೆರೆಗೆ ಆಧುನಿಕ ಸ್ಪರ್ಶ

ಮಡಿಕೇರಿ: ಕೊಡಗು ಜಿಲ್ಲೆಯ ಕೊಡ್ಲಿಪೇಟೆ ಗ್ರಾಪಂಗೆ ಸೇರಿದ ನೂರಾರು ವರ್ಷಗಳ ಹಿಂದಿನ ನಂದಿಪುರ ಕೆರೆಯನ್ನು ‘ಎ’ ಶ್ರೇಣಿಯ ವ್ಯವಸ್ಥೆಯಡಿಯಲ್ಲಿ ಅಭಿವೃದ್ಧಿ ಪಡಿಸಲಾಗುತ್ತಿದೆ.

ನಂದಿಪುರ ಕೆರೆ ಸುತ್ತಮುತ್ತಲಿನ ರೈತರ ನೂರಾರು ಎಕರೆ ಕೃಷಿ ಜಮೀನಿಗೆ ನೀರು ಒದಗಿಸುತ್ತಿದ್ದು, ೪.೫೦ ಎಕರೆ ವಿಸ್ತೀರ್ಣ ಹೊಂದಿದೆ. ಬಹಳಷ್ಟು ವರ್ಷಗಳಿಂದ ಈ ಕೆರೆಯಲ್ಲಿ ತುಂಬಿದ್ದ ಹೂಳನ್ನು ಹಿಂದಿನ ಸರಕಾರದ ಅವಧಿಯಲ್ಲಿ ತೆಗೆಯಲಾಗಿತ್ತು. ಇದೀಗ ೩.೮೦ ಕೋಟಿ ರೂ. ವೆಚ್ಚದಲ್ಲಿ ಸಣ್ಣ ನೀರಾವರಿ ಇಲಾಖೆಯಿಂದ ಕೆರೆಗೆ ಆಧುನಿಕ ಸ್ಪರ್ಶ ನೀಡಿ ಅಭಿವೃದ್ಧಿ ಪಡಿಸಲಾಗುತ್ತಿದ್ದು ಉದ್ಘಾಟನೆಗೆ ಸಜ್ಜಾಗಿದೆ. ಕೊಡ್ಲಿಪೇಟೆ ಮೂಲ ನಿವಾಸಿಯಾಗಿರುವ ಈಗ ಬೆಂಗಳೂರಿನ ಉಚ್ಚ ನ್ಯಾಯಾಲಯದ ಹಿರಿಯ ವಕೀಲ ಹಾಗೂ ಕೊಡ್ಲಿಪೇಟೆ ವಿದ್ಯಾ ಸಂಸ್ಥೆಯ ಅಧ್ಯಕ್ಷ ಮತ್ತು ರಾಜಕಾರಣಿ ಎಚ್.ಎಸ್.ಚಂದ್ರಮೌಳಿ ಅವರು ತನ್ನೂರಿನ ಕೆರೆಯನ್ನು ಪ್ರೇಕ್ಷಣೀಯ ಸ್ಥಳವನ್ನಾಗಿ ಅಭಿವೃದ್ಧಿ ಪಡಿಸುವ ಯೋಜನೆಯನ್ನು ಒಳಗೊಂಡ ಪ್ರಸ್ತಾವವನ್ನು ಸಿದ್ಧಪಡಿಸಿ ಮನವಿಯನ್ನು ಹಿಂದಿನ ಸರಕಾರದ ಅವಧಿಯಲ್ಲಿ ಅಂದಿನ ಸಣ್ಣ ನೀರಾವರಿ ಸಚಿವ ಮಾಧುಸ್ವಾಮಿಯವರಿಗೆ ಸಲ್ಲಿಸಿದ್ದರು. ಸಚಿವರು ಸ್ಪಂದಿಸಿ ಮಂಜೂರಾತಿ ನೀಡಿ ಸಹಕರಿಸಿದ್ದರು.

ನಂತರ ಈಗಿನ ಸರಕಾರದ ಸಣ್ಣ ನೀರಾವರಿ ಇಲಾಖೆಯ ಸಚಿವ ಬೋಸರಾಜ್ ಅವರ ಗಮನಕ್ಕೆ ತಂದು ಮಡಿಕೇರಿ ಶಾಸಕ ಡಾ.ಮಂತರ್ ಗೌಡರ ಸಹಕಾರದೊಂದಿಗೆ ಯೋಜನೆಗೆ ಹಣಕಾಸು ಮಂಜೂರಾತಿ ಮಾಡಿಸಿದ್ದರು. ಅದರಂತೆ ಸಣ್ಣ ನೀರಾವರಿ ಇಲಾಖೆ ಕೆರೆ ಅಭಿವೃದ್ಧಿಗೆ ೩.೮೦ ಕೋಟಿ ರೂ. ಬಿಡುಗಡೆ ಮಾಡಿತ್ತು. ಈಗ ಕೆರೆ ಅಭಿವೃದ್ಧಿ ಕಾಮಗಾರಿಯು ಮುಕ್ತಾಯ ಹಂತಕ್ಕೆ ಬಂದಿದೆ. ಸದ್ಯದಲ್ಲೇ ಕೆರೆಯನ್ನು ಲೋಕಾರ್ಪಣೆಗೊಳಿಸಲಾಗುತ್ತದೆ.

ನಾಗರಿಕರು ಬೆಳಗ್ಗೆ ಸಂಜೆ ವಾಕಿಂಗ್ ಹೋಗಲು ಮತ್ತು ವಿಶ್ರಾಂತಿಪಡೆಯಲು ವ್ಯವಸ್ಥೆ ಇರಲಿಲ್ಲ. ನಂದಿಪುರ ಕೆರೆಯನ್ನು ಅಭಿವೃದ್ಧಿ ಪಡಿಸಿ ಉದ್ಯಾನವನದಲ್ಲಿ ಜನರಿಗೆ ವ್ಯವಸ್ಥೆ ಮಾಡಿಕೊಡುವ ಉದ್ದೇಶದಿಂದ ಈ ಕುರಿತು ಯೋಜನೆಗಳನ್ನೊಳಗೊಂಡ ಪ್ರಸ್ತಾವವನ್ನು ಸಲ್ಲಿಸಲಾಗಿತ್ತು. ಹಿಂದಿನ ಸರಕಾರದ ಸಚಿವರು ಪ್ರಸ್ತಾವಕ್ಕೆ ಸ್ಪಂದಿಸಿ ಸಹಕಾರ ನೀಡಿದ್ದರು. ನಂತರ ಈಗಿನ ಸಚಿವ ಬೋಸರಾಜ್, ಶಾಸಕ ಡಾ.ಮಂತರ್ ಗೌಡ ಮತ್ತು ಸ್ಥಳೀಯರ ಸಹಕಾರದಿಂದ ಸಣ್ಣ ನೀರಾವರಿ ಇಲಾಖೆಯಿಂದ ನಾವು ನೀಡಿದ್ದ ಯೋಜನೆಯ ಪ್ರಕಾರದಂತೆ ಕೆರೆಯನ್ನು ಅಭಿವೃದ್ಧಿ ಪಡಿಸಲಾಗಿದೆ.

-ಎಚ್.ಎಸ್.ಚಂದ್ರಮೌಳಿ, ಹಿರಿಯ ವಕೀಲ, ಬೆಂಗಳೂರು

ಕೊಡ್ಲಿಪೇಟೆ ಭಾಗದಲ್ಲಿ ಉದ್ಯಾನವನ ನಿರ್ಮಿಸಲು ಸೂಕ್ತ ಸ್ಥಳಗಳ ಕೊರತೆ ಇತ್ತು. ಈಗ ನಮ್ಮೂರಿನ ನಂದಿಪುರ ಕೆರೆಯನ್ನು ಪ್ರೇಕ್ಷಣೀಯ ಸ್ಥಳಗಳಂತೆ ಅಭಿವೃದ್ಧಿ ಪಡಿಸಿರುವುದು ನಮ್ಮ ಭಾಗದ ಜನರಿಗೆ ಅತೀವ ಸಂತಸ ತಂದಿದೆ. ಸುಂದರ ಉದ್ಯಾನವನ ನಿರ್ಮಿಸಲು ಪ್ರಮುಖ ಕಾರಣಕರ್ತರಾದ ಚಂದ್ರಮೌಳಿ ಅವರಿಗೆ ಹಾಗೂ ಸಹಕರಿಸಿದ ಸಚಿವರು ಮತ್ತು ಶಾಸಕರಿಗೆ ಅಭಾರಿಯಾಗಿದ್ದೇವೆ.

-ಬಿ.ಕೆ.ಯತೀಶ್, ನಿರ್ದೇಶಕ ಪ್ರಾ.ಕ್ರ.ಪ.ಸ. ಸಂಘ ಕೊಡ್ಲಿಪೇಟೆ

ನಮ್ಮ ಗ್ರಾಪಂಗೆ ಸೇರಿದ ನಂದಿಪುರ ಕೆರೆಯನ್ನು ‘ಎ’ ಶ್ರೇಣಿಯ ಮಾದರಿಯಲ್ಲಿ ಅಭಿವೃದ್ಧಿ ಪಡಿಸಿರುವುದು ನಮ್ಮ ಭಾಗದ ಜನರಿಗೆ ಹೆಮ್ಮೆಯ ವಿಷಯ. ಈಗ ನಮ್ಮೂರಿನ ಪ್ರೇಕ್ಷಣೀಯ ಸ್ಥಳವಾಗುತ್ತಿರುವುದು ಸಂತಸ ತಂದಿದೆ. ಮುಂದೆ ಸಣ್ಣ ನೀರಾವರಿ ಇಲಾಖೆಯು ಗ್ರಾಪಂಗೆ ಹಸ್ತಾಂತರ ಮಾಡಿದ ನಂತರ ಎಲ್ಲ ಸದಸ್ಯರುಗಳ ಸಹಕಾರದೊಂದಿಗೆ ಸಾರ್ವಜನಿಕರ ಅನುಕೂಲಕ್ಕಾಗಿ ಸೂಸುತ್ರವಾಗಿ ನಿರ್ವಹಣೆ ಮಾಡುತ್ತೇವೆ.

-ಗೀತಾ ತ್ಯಾಗರಾಜ್, ಅಧ್ಯಕ್ಷೆ, ಕೊಡ್ಲಿಪೇಟೆ ಗ್ರಾಪಂ

3.80 ಕೋಟಿ ರೂ. ವೆಚ್ಚದಲ್ಲಿ ಅಭಿವೃದ್ಧಿ

ಸುತ್ತ ಉದ್ಯಾನವನ, ವಾಯುವಿಹಾರ ಟ್ರ್ಯಾಕ್, ವಿಶ್ರಾಂತಿ ಧಾಮ, ಉದ್ಯಾನವನದಲ್ಲಿ ಕಾರಂಜಿ ನಿರ್ಮಾಣ, ಮಕ್ಕಳಿಗೆ ಆಟ ಆಡಲು ವ್ಯವಸ್ಥೆ, ಬಣ್ಣಬಣ್ಣದ ವಿದ್ಯುತ್ ದೀಪದ ವ್ಯವಸ್ಥೆ, ಕೆರೆ ಸುತ್ತ ತಡೆ ಬೇಲಿ ನಿರ್ಮಾಣ ಇನ್ನೂ ಮುಂತಾದ ವ್ಯವಸ್ಥೆಯಡಿಯಲ್ಲಿ ನಂದಿಪುರ ಕೆರೆಯನ್ನು ಪ್ರೇಕ್ಷಣೀಯ ಸ್ಥಳವನ್ನಾಗಿ ಅಭಿವೃದ್ಧಿಪಡಿಸಲಾಗಿದೆ.

share
ಕೆ.ಎಂ. ಇಸ್ಮಾಯಿಲ್ ಕಂಡಕರೆ
ಕೆ.ಎಂ. ಇಸ್ಮಾಯಿಲ್ ಕಂಡಕರೆ
Next Story
X