Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಈ ಹೊತ್ತಿನ ಹೊತ್ತಿಗೆ
      • ಜನಚರಿತೆ
      • ವಿಡಂಬನೆ
      • ಜನ ಜನಿತ
      • ರಂಗ ಪ್ರಸಂಗ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಜನಮನ
      • ರಂಗದೊಳಗಿಂದ
      • ಶಂಬೂಕ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ವಿಚಾರ
  3. ನಿಮ್ಮ ಅಂಕಣ
  4. ಕಾರವಾರದಲ್ಲಿ ನಿರ್ಮಾಣಗೊಳ್ಳಲಿದೆ ಆಲಿವ್...

ಕಾರವಾರದಲ್ಲಿ ನಿರ್ಮಾಣಗೊಳ್ಳಲಿದೆ ಆಲಿವ್ ರಿಡ್ಲೆ ಕಡಲಾಮೆಗಳ ಅಧ್ಯಯನ ಕೇಂದ್ರ

ಶ್ರೀನಿವಾಸ ಬಾಡ್ಕರ್ಶ್ರೀನಿವಾಸ ಬಾಡ್ಕರ್14 Oct 2024 12:59 PM IST
share
ಕಾರವಾರದಲ್ಲಿ ನಿರ್ಮಾಣಗೊಳ್ಳಲಿದೆ ಆಲಿವ್ ರಿಡ್ಲೆ ಕಡಲಾಮೆಗಳ ಅಧ್ಯಯನ ಕೇಂದ್ರ

ಕಾರವಾರ: ಉತ್ತರ ಕನ್ನಡ ಜಿಲ್ಲೆಯ ವಿವಿಧ ಕಡಲತೀರದಲ್ಲಿ ವಿವಿಧ ಪ್ರಜಾತಿಯ ಆಮೆಗಳ ಸಂತತಿಗಳು ಪತ್ತೆಯಾಗುತ್ತಿದ್ದು ಜನರನ್ನು ಆಕರ್ಷಿಸುತ್ತಿದೆ. ಜಿಲ್ಲೆಯ ಕರಾವಳಿಯಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಆಮೆಗಳ ಸಂರಕ್ಷಣೆ ಮಾಡುತ್ತಿರುವುದು ಹೆಚ್ಚು ಸದ್ದು ಮಾಡುತ್ತಿದೆ.

ಕಡಲಾಮೆಗಳಲ್ಲಿ ವಿಶೇಷ ಪ್ರಜಾತಿಯಾಗಿರುವ ಆಲಿವ್ ರಿಡ್ಲೆ ಆಮೆಗಳು ಹೆಚ್ಚಿನ ಪ್ರಮಾಣದಲ್ಲಿ ಕಂಡು ಬರುವ ಕಾರಣದಿಂದ ಆಲಿವ್ ರಿಡ್ಲೆ ಕಡಲ ಆಮೆಗಳ ರಕ್ಷಣೆಯ ಹಾಗೂ ಅವುಗಳ ಅಧ್ಯಯನದ ತಾಣ ಕಾರವಾರದಲ್ಲಿ ನಿರ್ಮಾಣಗೊಳ್ಳಲಿದೆ. ಇದಕ್ಕೆ ವಿಶ್ವ ಬ್ಯಾಂಕ್ ನೆರವಿನ ಕೆ-ಶೋರ್ ಯೋಜನೆಯಡಿ ಮರೈ ಮೆಗಾ ಫೌನಾ ರೆಸ್ಕ್ಯೂ ಆ್ಯಂಡ್ ರಿ ಹ್ಯಾಬಿಲಿಟೇಶನ್ ಸೆಂಟರ್ ಸ್ಥಾಪನೆಗೆ ಕಾರವಾರ ಅರಣ್ಯ ವಿಭಾಗವು ಯೋಜಿಸಿದೆ.

ಆಲಿವ್ ರಿಡ್ಲೆ ಎಂಬ ಅಳಿವಿನಂಚಿನಲ್ಲಿರುವ ಆಮೆಗಳು ಕಾರವಾರದಿಂದ ಹೊನ್ನಾವರದವರೆಗೆ ಕಡಲ ತೀರದಲ್ಲಿ ಬಂದು ಮೊಟ್ಟೆ ಇಡುತ್ತಿವೆ. ಸ್ಥಳೀಯ ಮೀನುಗಾರರ ಸಹಯೋಗದೊಂದಿಗೆ ಅರಣ್ಯ ಇಲಾಖೆ ವಿಭಾಗದಲ್ಲಿ ಮರೈನ್ ಆ್ಯಂಡ್ ಇಕೋ ಸಿಸ್ಟಂ ಸೆಲ್ ತೆರೆಯಲಾಗಿತ್ತು. ಈ ಆಮೆ ಮೊಟ್ಟೆಗಳನ್ನು ಸಂರಕ್ಷಣೆ ಮಾಡಿ ಮರಿಯಾದ ಬಳಿಕ ಕಡಲಿಗೆ ಬಿಡುವ ಕಾರ್ಯವನ್ನು ಅರಣ್ಯ ಇಲಾಖೆ ಈಗ ಮಾಡುತ್ತಿದೆ. ಈಗ ಕಡಲ ಆಮೆಗಳ ಅಧ್ಯಯನಕ್ಕೆ ಕಾರವಾರ ವಿಭಾಗದಿಂದ ಕ್ರಮ ವಹಿಸಲಾಗುತ್ತಿದೆ. ಸುಮಾರು ೪ ಕೋಟಿ ರೂ. ವೆಚ್ಚದ ಯೋಜನೆ ರೂಪಿಸಲಾಗಿದೆ. ಯೋಜನೆಯಂತೆ ಡಿಪಿಆರ್‌ಗೆ ಅನುಮತಿ ದೊರೆತರೆ ಬರುವ ಡಿಸೆಂಬರ್ ಅವಧಿಯಲ್ಲಿ ಕೆಲಸ ಪ್ರಾರಂಭವಾಗುವ ಸಾಧ್ಯತೆ ಇದೆ ಎಂದು ಕಾರವಾರ ವಿಭಾಗದ ಡಿಎಫ್‌ಒ ಸಿ.ರವಿಶಂಕರ್ ಮಾಹಿತಿ ನೀಡಿದ್ದಾರೆ. ವಿಸ್ತ್ರತ ಯೋಜನಾ ವರದಿ ತಯಾರಿಸುವ ಕಾರ್ಯ ಶೀಘ್ರದಲ್ಲೇ ಪ್ರಾರಂಭವಾಗಲಿದೆ. ಈ ಯೋಜನೆ ಕಾರ್ಯ ರೂಪಕ್ಕೆ ಬಂದ ಬಳಿಕ ಜಿಲ್ಲೆಯಲ್ಲಿ ಪ್ರವಾಸೋದ್ಯಮ ಕ್ಷೇತ್ರದ ಬೆಳವಣಿಗೆಗೂ ಹೆಚ್ಚಿನ ಪ್ರಾಶಸ್ತ್ಯ ಲಭ್ಯವಾಗಲಿದೆ.

ಮಾಹಿತಿ ಕೇಂದ್ರ, ಮ್ಯೂಸಿಯಂ ನಿರ್ಮಾಣ

ನಗರದ ಕೋಡಿಬಾಗದ ಟ್ರೀ ಪಾರ್ಕ್‌ನಲ್ಲಿ ಸಿಆರ್‌ಝಡ್ ವ್ಯಾಪ್ತಿಯ ಹೊರಗೆ ಅಧ್ಯಯನ ಕೇಂದ್ರವನ್ನು ಪ್ರಾರಂಭಿಸಲು ಯೋಜನೆ ರೂಪಿಸಲಾಗಿದೆ. ಇದೇ ಸ್ಥಳದಲ್ಲಿ ಆಲಿವ್ ರಿಡ್ಲೆ ಆಮೆಗಳ ಬಗ್ಗೆ ಮಾಹಿತಿ ಕೇಂದ್ರ, ಮ್ಯೂಸಿಯಂ ಕೂಡ ನಿರ್ಮಾಣವಾಗಲಿದೆ. ಆಮೆಗಳ ಅಧ್ಯಯನ ಕೇಂದ್ರದಲ್ಲಿ ಮರಿ ಮಾಡಿ ಬಿಟ್ಟ ಆಮೆಗಳು ಅರಬ್ಬಿ ಸಮುದ್ರದಲ್ಲಿ ಎಷ್ಟು ದೂರ ಕ್ರಮಿಸುತ್ತವೆ?, ಅವು ಹೇಗೆ ವಾಪಸ್ ಇದೇ ಸ್ಥಳಕ್ಕೆ ಮೊಟ್ಟೆ ಇಡಲು ಬರುತ್ತವೆ? ಎನ್ನುವುದರ ಬಗ್ಗೆ ಮಾಹಿತಿ ಕಲೆ ಹಾಕಿ ಅಧ್ಯಯನ ಮಾಡಲಾಗುವುದು. ರಕ್ಷಣೆ ಮಾಡಿ ಚಿಕಿತ್ಸೆ ನೀಡುವ ಪುನರ್ವಸತಿ ಕೇಂದ್ರಗಳನ್ನೂ ತೆರೆಯಲಾಗುತ್ತಿದೆ. ಸಮುದ್ರ ಜೀವಿಗಳಿಗೆ ಚಿಕಿತ್ಸೆ ನೀಡಲು ವೈದ್ಯರನ್ನೂ ನೇಮಕ ಮಾಡಲಾಗುತ್ತದೆ ಎಂದು ಅರಣ್ಯಾಧಿಕಾರಿಗಳು ತಿಳಿಸಿದ್ದಾರೆ.

ಆಲಿವ್ ರಿಡ್ಲೆ ಆಮೆಗಳು ಪರಿಸರ ಸಂರಕ್ಷಣಾ ಕಾಯ್ದೆಯಡಿ ಸಂರಕ್ಷಿತ ಆಮೆ. ಅವುಗಳ ರಕ್ಷಣೆಗೆ ಕ್ರಮ ಕೈಗೊಳ್ಳಲಾಗಿದೆ. ಈ ಆಮೆಗಳು ಸಮುದ್ರದ ಜೀವನ ಚಕ್ರದ ಪ್ರಮುಖ ಭಾಗವಾಗಿವೆ. ಈ ವಿಶಿಷ್ಟ ಆಮೆಗಳ ಬಗ್ಗೆ ಇನ್ನಷ್ಟು ಅಧ್ಯಯನ ನಡೆಯಬೇಕಾಗಿದೆ. ಶೀಘ್ರವೇ ಕಾರವಾರದಲ್ಲಿ ರಿಡ್ಲೆ ಕಡಲ ಆಮೆಗಳ ರಕ್ಷಣೆಯ ಹಾಗೂ ಅವುಗಳ ಅಧ್ಯಯನದ ತಾಣ ನಿರ್ಮಾಣಗೊಳ್ಳಲಿದೆ.

-ಸಿ.ರವಿಶಂಕರ್, ಡಿಎಫ್‌ಒ, ಕಾರವಾರ

share
ಶ್ರೀನಿವಾಸ ಬಾಡ್ಕರ್
ಶ್ರೀನಿವಾಸ ಬಾಡ್ಕರ್
Next Story
X