Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಈ ಹೊತ್ತಿನ ಹೊತ್ತಿಗೆ
      • ಜನಚರಿತೆ
      • ವಿಡಂಬನೆ
      • ಜನ ಜನಿತ
      • ರಂಗ ಪ್ರಸಂಗ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಜನಮನ
      • ರಂಗದೊಳಗಿಂದ
      • ಶಂಬೂಕ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ವಿಚಾರ
  3. ನಿಮ್ಮ ಅಂಕಣ
  4. ಕೊಡಗಿನಲ್ಲಿ ಗಮನ ಸೆಳೆಯುತ್ತಿದೆ...

ಕೊಡಗಿನಲ್ಲಿ ಗಮನ ಸೆಳೆಯುತ್ತಿದೆ ʼಸ್ಕೈವಾಕ್ ಬ್ರಿಡ್ಜ್ʼ

ದಕ್ಷಿಣ ಭಾರತದಲ್ಲೇ ಅತ್ಯಂತ ದೊಡ್ಡ ಗಾಜಿನ ಸೇತುವೆ

ಕೆ.ಎಂ. ಇಸ್ಮಾಯಿಲ್ ಕಂಡಕರೆಕೆ.ಎಂ. ಇಸ್ಮಾಯಿಲ್ ಕಂಡಕರೆ20 May 2024 12:40 PM IST
share
  • ಕೊಡಗಿನಲ್ಲಿ ಗಮನ ಸೆಳೆಯುತ್ತಿದೆ ʼಸ್ಕೈವಾಕ್ ಬ್ರಿಡ್ಜ್ʼ
  • ಕೊಡಗಿನಲ್ಲಿ ಗಮನ ಸೆಳೆಯುತ್ತಿದೆ ʼಸ್ಕೈವಾಕ್ ಬ್ರಿಡ್ಜ್ʼ

ಮಡಿಕೇರಿ: ಪ್ರಾಕೃತಿಕ ಸೌಂದರ್ಯದ ಮೂಲಕ ಗಮನ ಸೆಳೆದಿರುವ ಕೊಡಗು ಜಿಲ್ಲೆಯಲ್ಲಿ ದಕ್ಷಿಣ ಭಾರತದ ಅತ್ಯಂತ ದೊಡ್ಡ ಗಾಜಿನ ಸೇತುವೆ ಖ್ಯಾತಿಯ ಸ್ಕೈ ವಾಕ್ ಬ್ರಿಡ್ಜ್ ಉದ್ಘಾಟನೆಗೊಂಡಿದೆ.

ಕಳೆದ ವರ್ಷವಷ್ಟೆ ಮಡಿಕೇರಿ-ಭಾಗಮಂಡಲ ರಸ್ತೆಯಲ್ಲಿ ಗ್ಲಾಸ್ ಬ್ರಿಡ್ಜ್ ನಿರ್ಮಾಣಗೊಂಡಿತ್ತು. ಪ್ರವಾಸಿಗರನ್ನು ಸೆಳೆಯುವಲ್ಲಿ ಯಶಸ್ವಿಯಾಗಿದ್ದ ಈ ಬ್ರಿಡ್ಜ್‌ನಿಂದ ಪ್ರವಾಸೋದ್ಯಮ ಅವಲಂಬಿತರಿಗೂ ಅನುಕೂಲವಾಗಿತ್ತು. ಇದೀಗ ಮತ್ತೊಂದು ಗ್ಲಾಸ್ ಬ್ರಿಡ್ಜ್ ಕೊಡಗಿನಲ್ಲಿ ಗಮನ ಸೆಳೆಯುತ್ತಿದೆ.

ಈ ನೂತನ ಗ್ಲಾಸ್ ಸ್ಕೈವಾಕ್ ಬ್ರಿಡ್ಜ್, ಮಡಿಕೇರಿ ಹೊರವಲಯದ ಅಬ್ಬಿಫಾಲ್ಸ್, ಮಾಂದಲ್‌ಪಟ್ಟಿಗೆ ತೆರಳುವ ರಸ್ತೆಯ ಬದಿಯಲ್ಲಿರುವ ಜಾಗದಲ್ಲೇ ನಿರ್ಮಿಸಲಾಗಿದೆ. ಮಡಿಕೇರಿ ನಗರದಿಂದ ಸುಮಾರು 5 ಕಿಮೀ ಸಂಚಾರ ಮಾಡಿದರೆ ಅಬ್ಬಿಫಾಲ್ಸ್ ಜಂಕ್ಷನ್ ಬಳಿ ಇರುವ ನಂದಿಮೊಟ್ಟೆ ಎಂಬ ಸ್ಥಳದಲ್ಲಿ ಈ ಅತೀ ದೊಡ್ಡ ಗ್ಲಾಸ್ ಬ್ರಿಡ್ಜ್ ಸಿಗುತ್ತದೆ. 180 ಮೀಟರ್ ಉದ್ದ, 8 ಅಡಿ ಅಗಲ, 270 ಅಡಿ ಎತ್ತರದಲ್ಲಿರುವ ಈ ಗ್ಲಾಸ್ ಸ್ಕೈ ವಾಕ್ ಬ್ರಿಡ್ಜ್ ಎಲ್ಲರ ಗಮನ ಸೆಳೆಯುತ್ತಿವೆ.

ಕೊಡಗಿನ ಈ ಸ್ವಾಭಾವಿಕ ಪ್ರಕೃತಿಯ ಸೌಂದರ್ಯ ಇಡೀ ವಿಶ್ವದ ಗಮನ ಸೆಳೆದಿದೆ. ಅದರಲ್ಲೂ ಇಲ್ಲಿನ ವೀವ್ ಪಾಯಿಂಟ್‌ಗಳಂತೂ ಮನಮೋಹಕವಾಗಿದೆ. ಅದರ ಸಾಲಿಗೆ ಸದ್ಯ ಬೆಟ್ಟದ ಇಕ್ಕೆಲಗಳ ನಡುವೆ ಇದೀಗ ಖಾಸಗಿಯವರಿಂದ ನಿರ್ಮಾಣವಾಗಿರುವ ಗ್ಲಾಸ್ ಸ್ಕೈ ವಾಕ್ ಬ್ರಿಡ್ಜ್ ಸೇರಿದೆ. ಹಸಿರ ಪ್ರಕೃತಿಯ ನಡುವೆ ಪಾರದರ್ಶಕ ಗಾಜಿನ ಮೇಲೆ ನಡೆಯುವ ರೋಮಾಂಚಕ ಅನುಭವವನ್ನು ಪ್ರವಾಸಿಗರು ಪಡೆದುಕೊಳ್ಳಬಹುದಾಗಿದೆ.

ಸುಮಾರು 15 ಟನ್ ಭಾರ ಹೊರುವ ಸಾಮರ್ಥ್ಯದ ಈ ಬ್ರಿಡ್ಜ್‌ನಲ್ಲಿ ಒಮ್ಮೆಗೆ 30 ರಿಂದ 35 ಮಂದಿ ನಿಂತು ಪ್ರಕೃತಿಯ ಸೌಂದರ್ಯ ಸವಿಯಬಹುದಾಗಿದೆ. ಮಳೆಗಾಲ, ಚಳಿಗಾಲದ ಸಮಯದಲ್ಲಿ ಮೋಡಗಳ ಮರೆಯಲ್ಲಿ ಪ್ರವಾಸಿಗರಿಗೆ ರೋಮಾಂಚಕ ಅನುಭವ ಸಿಗಲಿದೆ.

ದಕ್ಷಿಣ ಭಾರತದಲ್ಲಿಯೇ ಅತ್ಯಂತ ಎತ್ತರದ ಹಾಗೂ ಉದ್ದದ ಗಾಜಿನ ಸೇತುವೆ ಎಂಬ ಖ್ಯಾತಿಯನ್ನು ಈ ಸೇತುವೆ ಪಡೆದುಕೊಂಡಿದೆ. ಗಾಜಿನ ಸೇತುವೆಯಲ್ಲಿ ಸಂಭ್ರಮಾಚರಣೆಗೂ ವಿಶೇಷ ಸ್ಥಳ ನಿರ್ಮಿಸಲಾಗಿದೆ. ಇಲ್ಲಿ ಕೇಕ್ ಕತ್ತರಿಸಬಹುದಾಗಿದೆ. ಗಾಜಿನ ಮೇಲೆ ನಡೆದಾಡುವವರ ಸುರಕ್ಷತೆಗೂ ಅಗತ್ಯ ಮುತುವರ್ಜಿ ವಹಿಸಲಾಗಿದೆ. ಪ್ರವಾಸಿಗರ ವಾಹನ ನಿಲುಗಡೆಗೂ ಅಗತ್ಯ ಕ್ರಮ ಕೈಗೊಳ್ಳಲಾಗಿದ್ದು, 4 ಎಕರೆ ಜಾಗದಲ್ಲಿ ಪಾರ್ಕಿಂಗ್ ವ್ಯವಸ್ಥೆ ಕಲ್ಪಿಸಲಾಗಿದೆ. ಸೇತುವೆ ಬಳಿಯಲ್ಲಿ ಯಾವುದೇ ಅಹಿತಕರ ಘಟನೆ ನಡೆಯದಂತೆ ಮುನ್ನೆಚ್ಚರಿಕೆ ವಹಿಸಲಾಗಿದೆ.

ವಾರ್ಷಿಕವಾಗಿ ಅತೀ ಹೆಚ್ಚು ಪ್ರವಾಸಿಗರು ಕೊಡಗಿಗೆ ಭೇಟಿ ನೀಡುತ್ತಾರೆ. ಪ್ರವಾಸೋದ್ಯಮ ಇಲಾಖೆಯ ಅಂಕಿ ಅಂಶಗಳ ಪ್ರಕಾರ ಕಳೆದ ವರ್ಷ ಜನವರಿಯಿಂದ ಡಿಸೆಂಬರ್ ಅಂತ್ಯದವರೆಗೆ 43,69,507 ಪ್ರವಾಸಿಗರು ಜಿಲ್ಲೆಗೆ ಭೇಟಿ ನೀಡಿದ್ದಾರೆ. ಇದೀಗ ಗ್ಲಾಸ್ ಬ್ರಿಡ್ಜ್‌ಗಳ ನಿರ್ಮಾಣದಿಂದ ಇನ್ನೂ ಹೆಚ್ಚಿನ ಪ್ರವಾಸಿಗರು ಜಿಲ್ಲೆಯತ್ತ ಮುಖ ಮಾಡುವ ಸಾಧ್ಯತೆ ಇದೆ. ಪ್ರವಾಸಿಗರನ್ನು ಸೆಳೆಯುವ ನಿಟ್ಟಿನಲ್ಲಿ ನಂದಿಮೊಟ್ಟೆ ಬಳಿ ಗ್ಲಾಸ್ ಬ್ರಿಡ್ಜ್ ನಿರ್ಮಿಸಲಾಗಿದೆ.

ಸುಮಾರು 30-35 ಜನ ಪ್ರವಾಸಿಗರು ಒಮ್ಮೆಲೆ ನಿಲ್ಲಬಹುದಾದ ಸೇತುವೆ ಇದಾಗಿದ್ದು, ಸುರಕ್ಷತೆಗೂ ಆದ್ಯತೆ ನೀಡಲಾಗಿದೆ. ಅಬ್ಬಿ ಫಾಲ್ಸ್ ಹಾಗೂ ಮಾಂದಲ್‌ಪಟ್ಟಿಗೆ ಇದೇ ರಸ್ತೆಯಲ್ಲಿ ಸಂಚರಿಸಬೇಕಾಗಿರುವುದರಿಂದ ಹೆಚ್ಚಿನ ಪ್ರವಾಸಿಗರು ಇಲ್ಲಿಗೆ ಭೇಟಿ ನೀಡುವ ನಿರೀಕ್ಷೆ ಇದೆ.

- ರಾಜೇಶ್ ಯಲ್ಲಪ್ಪ, ಉದ್ಯಮಿ, ಮಡಿಕೇರಿ

ನಮ್ಮ ಗ್ರಾಮದಲ್ಲಿ ಇಂತಹದೊಂದು ಸುಂದರ ಗಾಜಿನ ಸೇತುವೆ ನಿರ್ಮಾಣಗೊಂಡಿರುವುದು ಉತ್ತಮ ಬೆಳವಣಿಗೆ. ಗಾಜಿನ ಸೇತುವೆ ಮೇಲೆ ನಿಂತು ಸುತ್ತಲೂ ಸುಂದರ ಪರಿಸರವನ್ನು ಪ್ರವಾಸಿಗರು ಕಣ್ತುಂಬಿಕೊಳ್ಳಬಹುದಾಗಿದೆ. ಪಾರ್ಕಿಂಗ್‌ಗೂ ಪ್ರತ್ಯೇಕ ವ್ಯವಸ್ಥೆ ಕಲ್ಪಿಸಿರುವುದರಿಂದ ಯಾವುದೇ ಸಮಸ್ಯೆ ಇಲ್ಲ. ಇಂತಹ ಯೋಜನೆಗಳಿಂದ ಸ್ಥಳೀಯರಿಗೂ ಒಂದಷ್ಟು ಉದ್ಯೋಗ ದೊರೆಯಲಿದೆ.

-ವಿವೇಕ್, ಸ್ಥಳೀಯರು

share
ಕೆ.ಎಂ. ಇಸ್ಮಾಯಿಲ್ ಕಂಡಕರೆ
ಕೆ.ಎಂ. ಇಸ್ಮಾಯಿಲ್ ಕಂಡಕರೆ
Next Story
X