Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಈ ಹೊತ್ತಿನ ಹೊತ್ತಿಗೆ
      • ಜನಚರಿತೆ
      • ವಿಡಂಬನೆ
      • ಜನ ಜನಿತ
      • ರಂಗ ಪ್ರಸಂಗ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಜನಮನ
      • ರಂಗದೊಳಗಿಂದ
      • ಶಂಬೂಕ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ವಿಚಾರ
  3. ನಿಮ್ಮ ಅಂಕಣ
  4. ಪ್ರಮುಖ ನಗರಿಗಳಿಗೆ ತಾಜ್ ಮಹಲ್ ಗುಲಾಬಿ:...

ಪ್ರಮುಖ ನಗರಿಗಳಿಗೆ ತಾಜ್ ಮಹಲ್ ಗುಲಾಬಿ: ಯೂರೋಪಿಯನ್ ರಾಷ್ಟ್ರಗಳಿಗೆ ಹೂವುಗಳು ರಫ್ತು

ನಾರಾಯಣಸ್ವಾಮಿ ಸಿ.ಎಸ್.ನಾರಾಯಣಸ್ವಾಮಿ ಸಿ.ಎಸ್.13 Feb 2024 3:27 PM IST
share
ಪ್ರಮುಖ ನಗರಿಗಳಿಗೆ ತಾಜ್ ಮಹಲ್ ಗುಲಾಬಿ: ಯೂರೋಪಿಯನ್ ರಾಷ್ಟ್ರಗಳಿಗೆ ಹೂವುಗಳು ರಫ್ತು

ಹೊಸಕೋಟೆ, ಫೆ.12: ಪ್ರೇಮಿಗಳ ದಿನ ಹತ್ತಿರ ಬರುತ್ತಿರುವಂತೆ ಎಲ್ಲೆಡೆ ಕೆಂಪು ಗುಲಾಬಿಯದ್ದೇ ಮಾತು. ಬೆಂಗಳೂರು ಸೇರಿದಂತೆ ದೇಶದ ವಿವಿಧ ಪ್ರಮುಖ ನಗರಗಳಿಗೆ ರಫ್ತಾಗುವ ಮೂಲಕ ಹೊಸಕೋಟೆ ತಾಲೂಕಿನ ಕೆಂಪುಗುಲಾಬಿ ರಂಗು ಹೆಚ್ಚಿಸಿದೆ.

ತಾಲೂಕಿನ ಲಾಲ್ ಬಾಗ್ ದಾಸರಹಳ್ಳಿ, ಕುಂಬಳಹಳ್ಳಿ, ಚೊಕ್ಕಹಳ್ಳಿ, ಕುರುಬರಹಳ್ಳಿ, ಚಿಕ್ಕ ಕೋಲಿಗೆ ಸೇರಿದಂತೆ ನಾನಾ ಭಾಗಗಳಲ್ಲಿ ಡಚ್ ಮಾದರಿಯ 10 ವಿವಿಧ ಗುಲಾಬಿಗಳನ್ನು ಬೆಳೆಯಲಾಗುತ್ತಿದ್ದು, ಹೊಸ ವರ್ಷ ಹಾಗೂ ವ್ಯಾಲೆಂಟೇನ್ಸ್‌ಡೇಗಳಿಗೆ ಭರ್ಜರಿ ಲಾಭದೊಂದಿಗೆ ತಾಲೂಕಿನ ಹೆಸರನ್ನು ಗಡಿಯಾಚೆಗೆ ದಾಟಿಸುವ ಸಾಧನೆಯನ್ನು ಇಲ್ಲಿನ ರೈತರು ಮಾಡುತ್ತಿದ್ದಾರೆ.

10 ವರ್ಷಗಳ ಹಿಂದೆ ಕೆಲವೇ ಕಂಪೆನಿಗಳಿಗೆ ಸಿಮೀತವಾಗಿದ್ದ ಗುಲಾಬಿ ಬೆಳೆ ಇಂದು ಸಾಮಾನ್ಯ ರೈತರ ಜೀವನವನ್ನು ಹಸನಾಗಿಸಿ, ಇಲ್ಲಿನ ಗುಲಾಬಿ ಹೂವುಗಳ ಚೆಲುವು ರಾಷ್ಟ್ರ ರಾಜಧಾನಿ ದಿಲ್ಲಿ, ಚೆನೈ, ಹೈದರಾಬಾದ್, ಮುಂಬೈ ಸೇರಿದಂತೆ ಉದ್ಯಾನ ನಗರಿ ಬೆಂಗಳೂರಿನಲ್ಲಿ ಹೆಚ್ಚು ಬೇಡಿಕೆಯಿದ್ದು, ಹೊಸಕೋಟೆಯ ಕೆಂಪು ಗುಲಾಬಿ ಹೂವುಗಳು ದೇಶದ ಗಡಿ ದಾಟಿ ಜಪಾನ್, ಸಿಂಗಪೂರ್, ಮಲೇಶಿಯಾಗಳಿಗೂ ರಫ್ತಾಗುತ್ತಿವೆ ಎನ್ನುತ್ತಾರೆ ಕುರುಬರಹಳ್ಳಿ ಬೆಳೆಗಾರ ಸುಬ್ಬಣ್ಣ.

ಡಚ್ ಮಾದರಿಯಲ್ಲಿ ಬೆಳೆ: ಗುಲಾಬಿ ಹೂವುಗಳನ್ನು ಬೆಳೆಯುವುದರಲ್ಲಿ ಎರಡು ವಿಧಗಳಿದ್ದು, ಒಂದು ಲೋಕಲ್ ಗುಲಾಬಿ (ತೆರೆದ ಹೂವುಗಳು) ಮತ್ತೊಂದು ಡಚ್ ಮಾದರಿಯ ಗುಲಾಬಿಗಳ ಬೆಳೆ. ಲೋಕಲ್ ಗುಲಾಬಿಗಳನ್ನು ತೆರೆದ ತೋಟಗಳಲ್ಲಿ ಬೆಳೆಯಲಾಗುವುದಲ್ಲದೆ, ಸ್ಥಳೀಯ ಮಾರುಕಟ್ಟೆಗಳಲ್ಲಿ ಕಡಿಮೆ ಬೆಲೆಗೆ ಮಾರಾಟವಾಗುತ್ತದೆ. ಡಚ್ ಮಾದರಿಯ ಗುಲಾಬಿಗಳನ್ನು ಪಾಲಿಹೌಸ್‌ಗಳಲ್ಲಿ ಎಚ್ಚರಿಕೆಯಿಂದ ನಿರ್ದಿಷ್ಟ ತಾಪಮಾನದಲ್ಲಿ ಬೆಳೆಯಲಾಗುತ್ತಿದ್ದು, ಹೂವುಗಳನ್ನು ಸ್ಪಂಜಿನ ಕವಚದೊಂದಿಗೆ ಮುಚ್ಚುವುದರಿಂದ ಹೂವು ನಿರ್ದಿಷ್ಟ ಆಕಾರ ಪಡೆದುಕೊಳ್ಳುತ್ತದೆ.

1 ಲಕ್ಷಕ್ಕೂ ಹೆಚ್ಚು ಗುಲಾಬಿ ರಫ್ತು: ಫೆ.14 ಪ್ರೇಮಿಗಳ ದಿನದಂದು. ಗುಲಾಬಿ ಹೂವುಗಳ ಖರೀದಿಗೆ ಮುಗಿ ಬೀಳುತ್ತಾರೆ. ತಾಲೂಕಿನ ತಾಜ್‌ಮಹಲ್ ಕೆಂಗುಲಾಬಿಗೆ ವಿಶೇಷವಾಗಿ ಬೇಡಿಕೆ ಹೆಚ್ಚಾಗಿದ್ದು, ಈಗಾಗಲೇ ಹೂವಿನ ಸಂಗ್ರಹಣೆಗೆಂದು ಸೂಕ್ತ ವ್ಯವಸ್ಥೆ ಆರಂಭಿಸಲಾಗಿದೆ. ಕಳೆದ ವರ್ಷ ತಾಲೂಕಿನಿಂದ 80 ಸಾವಿರದಿಂದ 1 ಲಕ್ಷಕ್ಕೂ ಹೆಚ್ಚು ಹೂಗಳು ರಫ್ತಾಗಿದ್ದು, ಈ ವರ್ಷವು ಹೆಚ್ಚಾಗಿ ಸರಬರಾಜಾಗುವ ನಿರೀಕ್ಷೆಯಿದೆ ಎನ್ನುತ್ತಾರೆ ಗುಲಾಬಿ ಬೆಳೆಗಾರರು.

10 ವರ್ಷ ಹಿಂದೆ ಸಾಮಾನ್ಯವಾಗಿ ಆರಂಭಿಸಿದ ಗುಲಾಬಿ ಬೆಳೆ ಇಂದು 6 ಎಕರೆಯಾಗಿ ಬೆಂಗಳೂರು ಸೇರಿದಂತೆ ಯೂರೋಪಿಯನ್ ರಾಷ್ಟ್ರಗಳಿಗೂ ನಮ್ಮಲ್ಲಿನ ಹೂವು ರಫ್ತಾಗುತ್ತಿದೆ. ರೈತರು ಒಂದೇ ಬೆಳೆಗೆ ಸೀಮಿತವಾಗದೆ ಲಾಭದಾಯಕ ಬೆಳೆಗಳನ್ನು ಅನುಸರಿಸಬೇಕು.

ಲಕ್ಷ್ಮಣ್, ಹೂ ಬೆಳೆಗಾರ ಚಿಕ್ಕಕೋಲಿಗ

share
ನಾರಾಯಣಸ್ವಾಮಿ ಸಿ.ಎಸ್.
ನಾರಾಯಣಸ್ವಾಮಿ ಸಿ.ಎಸ್.
Next Story
X