Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಈ ಹೊತ್ತಿನ ಹೊತ್ತಿಗೆ
      • ಜನಚರಿತೆ
      • ವಿಡಂಬನೆ
      • ಜನ ಜನಿತ
      • ರಂಗ ಪ್ರಸಂಗ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಜನಮನ
      • ರಂಗದೊಳಗಿಂದ
      • ಶಂಬೂಕ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ವಿಚಾರ
  3. ನಿಮ್ಮ ಅಂಕಣ
  4. ಪ್ರವಾಸಿಗರನ್ನು ಆಕರ್ಷಿಸುತ್ತಿರುವ ಕಪ್ಪು...

ಪ್ರವಾಸಿಗರನ್ನು ಆಕರ್ಷಿಸುತ್ತಿರುವ ಕಪ್ಪು ಮರಳಿನ ʼತೀಳ್ಮಾತಿ' ಕಡಲತೀರ

ಶ್ರೀನಿವಾಸ್ ಬಾಡ್ಕರ್ಶ್ರೀನಿವಾಸ್ ಬಾಡ್ಕರ್11 March 2024 4:03 PM IST
share
  • ಪ್ರವಾಸಿಗರನ್ನು ಆಕರ್ಷಿಸುತ್ತಿರುವ ಕಪ್ಪು ಮರಳಿನ ʼತೀಳ್ಮಾತಿ ಕಡಲತೀರ
  • ಪ್ರವಾಸಿಗರನ್ನು ಆಕರ್ಷಿಸುತ್ತಿರುವ ಕಪ್ಪು ಮರಳಿನ ʼತೀಳ್ಮಾತಿ ಕಡಲತೀರ

ಕಾರವಾರ: ಕಡಲತೀರಗಳು ಸಾಮಾನ್ಯವಾಗಿ ಕಂದು ಮರಳಿನ ರಾಶಿಯಲ್ಲಿ ಗೋಚರಿಸುವುದನ್ನು ನಾವೆಲ್ಲರೂ ನೋಡಿದ್ದೇವೆ. ಆದರೆ ಇಲ್ಲೊಂದು ಕಡಲತೀರವು ಇದಕ್ಕೆ ತದ್ವಿರುದ್ಧವೆಂಬಂತೆ ಇಡೀ ಕಡಲತೀರವೇ ಕಪ್ಪು ಮರಳಿನಿಂದ ಆವರಿಸಿ ಪ್ರವಾಸಿಗರನ್ನು ಆಕರ್ಷಿಸುತ್ತಿದೆ.

ಕಾರವಾರದಿಂದ ಸುಮಾರು 10 ಕಿ.ಮೀ. ದೂರದಲ್ಲಿರುವ ತೀಳ್ಮಾತಿ ಕಡಲತೀರ ಇಂತಹ ವಿಚಿತ್ರಕ್ಕೆ ಕಾರಣವಾಗಿ ಪ್ರವಾಸಿಗರ ನೆಚ್ಚಿನ ತಾಣವಾಗಿ ಗುರುತಿಸಿಕೊಳ್ಳುತ್ತಿದೆ. ಅಪ್ಪಟ ಕರಿಎಳ್ಳಿನಂತೆ ಕಾಣುವ ಇಲ್ಲಿನ ಮರಳು ಕಡಲತೀರದುದ್ದಕ್ಕೂ ಹರಡಿಕೊಂಡಿದೆ. ಎರಡು ಗುಡ್ಡಗಳ ಮಧ್ಯೆ ಪ್ರಶಾಂತವಾಗಿರುವ ಕಡಲತೀರದ ಎಡಬದಿಯಲ್ಲಿ ಮಾಜಾಳಿ ಕಡಲತೀರ ಮತ್ತು ಬಲಬದಿಯಲ್ಲಿ ಗೋವಾದ ಪೋತಿಂ ಕಡಲತೀರವಿದೆ. ಈ ಎರಡೂ ಕಡಲತೀರಗಳ ಮರಳು ಬಿಳಿ ಬಣ್ಣದಲ್ಲಿಯೇ ಇದೆ. ಆದರೆ ಇವುಗಳ ಮಧ್ಯದ ತೀಳ್ಮಾತಿ ಕಡಲತೀರದಲ್ಲಿ ಮಾತ್ರ ಏಕೆ ಕಪ್ಪು ಮರಳು ಇದೆ ಎನ್ನುವುದಕ್ಕೆ ಯಾರಲ್ಲಿಯೂ ಸ್ಪಷ್ಟ ಉತ್ತರಗಳಿಲ್ಲ.

ಅಲ್ಲದೆ ಕಡಲತೀರದ ಅಕ್ಕ ಪಕ್ಕದಲ್ಲಿ ಕಡುಗಪ್ಪು ಬಣ್ಣದ ಬಂಡೆಗಲ್ಲುಗಳ ರಾಶಿ ಚಾಚಿಕೊಂಡಿವೆ. ಈ ಕಲ್ಲುಗಳೇ ಅಲೆಗಳ ರಭಸಕ್ಕೆ ಸಿಕ್ಕಿ ಮರಳಾಗುತ್ತವೆ. ಅದು ನೀರಿನ ಸುಳಿಗೆ ಸಿಲುಕಿ ಹೊರ ಹೋಗದೇ ಇರುವುದರಿಂದ ಕಪ್ಪು ಮರಳಿನ ಕಡಲತೀರ ನಿರ್ಮಾಣವಾಗಿದೆ. ಇಂತಹ ಕಡಲತೀರವನ್ನು ಮತ್ತೆಲ್ಲೂ ಕಾಣಲು ಸಾಧ್ಯವಿಲ್ಲ ಎನ್ನುವ ಮಾತುಗಳು ಕಡಲ ಶಾಸ್ತ್ರಜ್ಞರಿಂದ ಕೇಳಿಬಂದಿವೆ.

ಕಡಲತೀರದಲ್ಲಿ ಸೂರ್ಯಾಸ್ತ ದೃಶ್ಯ ಮನಮೋಹಕವಾಗಿ ಕಂಡುಬರುತ್ತಿದೆ. ಕಪ್ಪು ಮರಳಿನಲ್ಲಿ ಮೂಡುವ ಸೂರ್ಯನ ಕಿರಣಗಳ ಚಿತ್ತಾರ ಹೊಸ ಅನುಭವ ನೀಡುತ್ತಿದೆ. ಆದರೆ ಕಡಲತೀರವು ಎಷ್ಟು ಸೌಂದರ್ಯವನ್ನು ನೀಡುತ್ತಿದೆಯೋ ಅಷ್ಟೇ ಅಪಾಯಕಾರಿಯೂ ಹೌದು. ಕಡಲತೀರದಲ್ಲಿನ ಕಲ್ಲುಗಳು ವಿಪರೀತವಾಗಿ ಜಾರುವುದರಿಂದ ಮತ್ತು ಸಮುದ್ರ ಆಳವಾಗಿರುವುದರಿಂದ ಪ್ರವಾಸಿಗರು ಜಾಗ್ರತೆವಹಿಸುವುದು ಅವಶ್ಯವಾಗಿದೆ.

ಕೊಂಕಣಿ ಭಾಷೆಯಲ್ಲಿ ‘ತೀಳ್’ ಎಂದರೆ ‘ಎಳ್ಳು’, ‘ಮಾತಿ’ ಎಂದರೆ ‘ಮಣ್ಣು’. ಹೀಗಾಗಿ ಸ್ಥಳೀಯ ಭಾಷೆಯಲ್ಲಿ ತೀಳ್ಮಾತಿ ಬೀಚ್ ಎಂದೇ ಹೆಸರು ಪಡೆದುಕೊಂಡಿದೆ. ಸುಮಾರು 200 ಮೀಟರ್ ವ್ಯಾಪಿಸಿರುವ ಈ ಕಪ್ಪು ಕಡಲತೀರ ನೋಡಲು ಇತ್ತೀಚಿನ ದಿನಗಳಲ್ಲಿ ಜಿಲ್ಲೆ, ರಾಜ್ಯದಿಂದ ಮಾತ್ರವಲ್ಲದೆ ಹೊರ ರಾಜ್ಯಗಳಿಂದಲೂ ಪ್ರವಾಸಿಗರು ಆಗಮಿಸುತ್ತಿದ್ದಾರೆ. ಪ್ರವಾಸೋದ್ಯಮ ಇಲಾಖೆಯಿಂದ ಹೆದ್ದಾರಿಯಿಂದ ಸಮುದ್ರದ ದಡದವರೆಗೆ ಕಾಂಕ್ರಿಟ್ ರೋಡ್ ಮಾಡಿರುವುದನ್ನು ಬಿಟ್ಟರೆ ಮತ್ತಾವುದೇ ಸೌಲಭ್ಯಗಳು ಕಂಡುಬರುತ್ತಿಲ್ಲ.

ತೀಳ್ಮಾತಿ ಬೀಚ್‌ಗೆ ಹೋಗಲು ದಾರಿ

ತೀಳ್ಮಾತಿಗೆ ಹೋಗಬೇಕೆಂದರೆ, ಮಾಜಾಳಿ ಕಡಲತೀರದಲ್ಲಿರುವ ಗುಡ್ಡದ ಕಿರಿದಾದ ದಾರಿಯಲ್ಲಿ ಒಂದು ಕಿ.ಮೀ. ಚಾರಣ ಮಾಡಬೇಕು. ನಗರದಿಂದ ರಾಷ್ಟ್ರೀಯ ಹೆದ್ದಾರಿ ೧೭ರಲ್ಲಿ ಸಾಗಿದರೆ ಮಾಜಾಳಿ ಗ್ರಾಮ ಸೇರುತ್ತೇವೆ. ಅಲ್ಲಿಂದ ಎಡಕ್ಕೆ ತಿರುಗಿ ಕಿರಿದಾದ ಡಾಂಬರು ರಸ್ತೆಯಲ್ಲಿ ಸುಮಾರು ಮೂರ್ನಾಲ್ಕು ಕಿ.ಮೀ. ಕ್ರಮಿಸಿದ ಮೇಲೆ ಮಾಜಾಳಿ ಕಡಲತೀರ ಎದುರುಗೊಳ್ಳುತ್ತದೆ.

share
ಶ್ರೀನಿವಾಸ್ ಬಾಡ್ಕರ್
ಶ್ರೀನಿವಾಸ್ ಬಾಡ್ಕರ್
Next Story
X