Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಈ ಹೊತ್ತಿನ ಹೊತ್ತಿಗೆ
      • ಜನಚರಿತೆ
      • ವಿಡಂಬನೆ
      • ಜನ ಜನಿತ
      • ರಂಗ ಪ್ರಸಂಗ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಜನಮನ
      • ರಂಗದೊಳಗಿಂದ
      • ಶಂಬೂಕ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ವಿಚಾರ
  3. ನಿಮ್ಮ ಅಂಕಣ
  4. ಮೈ ಕೊರೆವ ಚಳಿಗೆ ತರಕಾರಿ ಇಳುವರಿ ಕುಸಿತ

ಮೈ ಕೊರೆವ ಚಳಿಗೆ ತರಕಾರಿ ಇಳುವರಿ ಕುಸಿತ

► ಬೆಳೆಗೆ ರೋಗ ಬಾಧೆ, ಸಂಕಷ್ಟದಲ್ಲಿ ರೈತರು

ನಾರಾಯಣಸ್ವಾಮಿ ಸಿ.ಎಸ್.ನಾರಾಯಣಸ್ವಾಮಿ ಸಿ.ಎಸ್.8 Jan 2024 2:24 PM IST
share
ಮೈ ಕೊರೆವ ಚಳಿಗೆ ತರಕಾರಿ ಇಳುವರಿ ಕುಸಿತ

ಹೊಸಕೋಟೆ: ಹಲವು ದಿನಗಳಿಂದ ಸುರಿಯುತ್ತಿರುವ ಮಳೆ ಹಾಗೂ ಮಂಜಿನಿಂದ ಮೈಕೊರೆವ ಚಳಿಗೆ ಜನ ತತ್ತರಿಸುತ್ತಿರುವುದೂ ಒಂದೆಡೆಯಾದರೆ, ಬೆವರು ಸುರಿಸಿ ಬೆಳೆದ ಬೆಳೆಗಳ ಇಳುವರಿ ಕುಸಿತದಿಂದ ಕೃಷಿಕರು ಸಂಕಷ್ಟಕ್ಕೀಡಾಗಿದ್ದಾರೆ. ತಾಲೂಕಿನಾದ್ಯಂತ ತುಂತುರು ಮಳೆ ಸುರಿಯುವಂತೆ ಭಾಸವಾಗುವ ಹಿಮದಿಂದಾಗಿ ಮೈ ನಡುಗಿಸುವ ಚಳಿ ಆವರಿಸಿದೆ. ಆಗಸದಿಂದ ಭೂಮಿಯವರಿಗೂ ದಟ್ಟ ಮೋಡಗಳಂತೆ ಗೋಚರಿಸುತ್ತದೆ. ಸೂರ್ಯನ ದರ್ಶನವಾದರೂ ಚಳಿ ಪ್ರಮಾಣ ಕಡಿಮೆಯಾಗುತ್ತಿಲ್ಲ. ಬೆಳಗ್ಗೆ ಮನೆಯಿಂದ ಹೊರ ಹೋಗಲು ಸಾಧ್ಯವಾಗದಂತಹ ಸ್ಥಿತಿ ನಿರ್ಮಾಣವಾಗಿದೆ.

ಕನಿಷ್ಟ ಉಷ್ಣಾಂಶವು ಇಲ್ಲದೇ ರೈತರು ಬೆಳೆದ ಬೆಳೆಗಳ ಇಳುವರಿ ಕಡಿಮೆಯಾಗುವ ಆತಂಕ ರೈತರಲ್ಲಿ ಮನೆ ಮಾಡಿದೆ. ಎಲೆ ಮಾತ್ರವಲ್ಲ, ಗಿಡ ಸಮೇತ ಚಳಿಗೆ ಮುದುರಿಹೋಗುತ್ತಿವೆ. ರೇಷ್ಮೆ ಬೆಳೆಗೆ ಉಷ್ಣಾಂಶ ಕೊರತೆಯಿಂದ ರೋಗಕ್ಕೆ ತುತ್ತಾಗಿ ಗುಣಮಟ್ಟದ

ಗೂಡು ಪಡೆಯಲಾಗದೇ ಬೆಳೆಗಾರರು ತಲೆ ಮೇಲೆ ಕೈ ಹೊತ್ತು ಕೂರುವಂತಾಗಿದೆ.

ಈ ಬಾರಿ ಜಿಲ್ಲೆಯ ಬಹುತೇಕ ಪ್ರದೇಶಗಳು ಮಳೆಯಿಲ್ಲದೆ ಬರಗಾಲಕ್ಕೆ ತುತ್ತಾಗಿ, ಮಳೆಯಾಶ್ರಿತ ಬೆಳೆಗಳು ಸುರಿಯುತ್ತಿರುವ ಮಂಜಿನಿಂದ ಫಸಲು ಬರುವ ಮುನ್ನವೇ ಸೋರಗುತ್ತಿವೆ. ತರಕಾರಿ ಬೆಳೆಗಳು ಹಿಮದ ಚಳಿಗೆ ತಾಳಲಾರದೇ ಮುದುಡಿ ಹೋಗಿ ರೋಗ ಸೇರಿದಂತೆ ಕೀಟ ಬಾಧೆ ಆವರಿಸಿದೆ. ಎಷ್ಟೇ ಔಷಧಿಗಳನ್ನು ಸಿಂಪಡಿಸಿದರೂ ರೋಗ ಹತೋಟಿಗೆ ಬಾರದಂತಾಗಿದೆ.

ಟೋಮೆಟೊ, ಆಲೂಗಡ್ಡೆ, ಬದನೆಕಾಯಿ, ಹುರುಳಿಕಾಯಿ, ಕ್ಯಾರೆಟ್ ಮುಂತಾದ ತರಕಾರಿ, ಸೊಪ್ಪುಗಳನ್ನು ಬೆಳೆದ ರೈತರು ಸಕಾಲಕ್ಕೆ ಬೆಳವಣಿಗೆಯಾಗದೆ ತಬ್ಬಿಬ್ಬಾಗಿದ್ದಾರೆ. ಮಾರುಕಟ್ಟೆಯಲ್ಲಿ ಗುಣಮಟ್ಟದ ತರಕಾರಿಗಳು ರವಾನೆಯಾಗದ ಕಾರಣ ಬೆಲೆ ಉತ್ತಮವಾಗಿದ್ದರೂ, ಇಲ್ಲಿನ ರೈತರಿಗೆ ಇಳುವರಿ ಇಲ್ಲದಂತಾಗಿದೆ. ಇದೇ ವಾತಾವರಣ ಮುಂದುವರಿದರೆ ರೇಷ್ಮೆ ಹುಳು ಸರಿಯಾಗಿ ಗೂಡು ಕಟ್ಟುವುದಿಲ್ಲ ಎಂಬ ಅಭಿಪ್ರಾಯ ರೈತರಿಂದ ವ್ಯಕ್ತವಾಗುತ್ತಿದೆ.

ರೈತರು ಯಾವುದೇ ತರಕಾರಿ ಬೆಳೆಗಳನ್ನು ಬೆಳೆದರೂ ಮಾರುಕಟ್ಟೆಯಲ್ಲಿ ಸರಿಯಾದ ಬೆಲೆ ಸಿಗುವುದಿಲ್ಲ. ಉತ್ತಮ ಬೆಲೆಯಿದ್ದಾಗ ಫಸಲು ಚೆನ್ನಾಗಿ ಬರುವುದಿಲ್ಲ. ಚಳಿ ಪ್ರಮಾಣ ಹೆಚ್ಚಿರುವುದರಿಂದ ಇಳುವರಿ ಕುಸಿದಿದ್ದು,

ರೈತರು ಶ್ರಮ ವಹಿಸಿ ದುಡಿದರೂ ತಕ್ಕ ಪ್ರತಿಫಲ ಸಿಗದೇ ಸಂಕಷ್ಟ ಎದುರಿಸುವಂತಾಗಿದೆ. <ರಾಜಣ್ಣ, ಪ್ರಗತಿಪರ ರೈತ, ನೆಲವಾಗಿಲು

ಚಳಿಗಾಲದಲ್ಲಿ ಉಷ್ಣಾಂಶದ ಕೊರತೆಯಿಂದ ಎಲೆ ಮುದುರುರೋಗ, ಕೀಟ ಬಾಧೆ ಹೆಚ್ಚಾಗಿ ಕಂಡು ಬಂದು ಬೆಳವಣಿಗೆ ಕುಂಠಿತವಾಗುತ್ತದೆ. ಕೋಳಿ ಗೊಬ್ಬರ ಹಾಕುವ ಮೂಲಕ ಉಷ್ಣಾಂಶವನ್ನು ಹೆಚ್ಚಿಸಬಹುದು. ಸಕಾಲಕ್ಕೆ ಔಷಧ ಸಿಂಪಡಿಸಿದರೆ ರೋಗವನ್ನು ನಿಯಂತ್ರಿಸಬಹುದು.

► ರೇಖಾ,

ಸಹಾಯಕ ನಿರ್ದೇಶಕಿ

ತೋಟಗಾರಿಕೆ ಇಲಾಖೆ

share
ನಾರಾಯಣಸ್ವಾಮಿ ಸಿ.ಎಸ್.
ನಾರಾಯಣಸ್ವಾಮಿ ಸಿ.ಎಸ್.
Next Story
X