Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಈ ಹೊತ್ತಿನ ಹೊತ್ತಿಗೆ
      • ಜನಚರಿತೆ
      • ವಿಡಂಬನೆ
      • ಜನ ಜನಿತ
      • ರಂಗ ಪ್ರಸಂಗ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಜನಮನ
      • ರಂಗದೊಳಗಿಂದ
      • ಶಂಬೂಕ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ವಿಚಾರ
  3. ನಿಮ್ಮ ಅಂಕಣ
  4. ಕೃಷಿ, ತೋಟಗಾರಿಕಾ ಬೆಳೆಗಳ ಮೇಲೆ...

ಕೃಷಿ, ತೋಟಗಾರಿಕಾ ಬೆಳೆಗಳ ಮೇಲೆ ಕಾಡುಪ್ರಾಣಿ ದಾಳಿ

ನಝೀರ್ ಪೊಲ್ಯನಝೀರ್ ಪೊಲ್ಯ8 April 2024 11:01 AM IST
share
ಕೃಷಿ, ತೋಟಗಾರಿಕಾ ಬೆಳೆಗಳ ಮೇಲೆ ಕಾಡುಪ್ರಾಣಿ ದಾಳಿ

ಉಡುಪಿ: ಕೃಷಿ ಬೆಳೆಗಳ ಮೇಲೆ ಕಾಡುಪ್ರಾಣಿಗಳ ದಾಳಿ ಇಂದು ನಿನ್ನೆಯದ್ದಲ್ಲ. ಹಲವು ವರ್ಷಗಳಿಂದ ಮಾನವ ಮತ್ತು ಪ್ರಾಣಿಗಳ ಮಧ್ಯೆ ಸಂಘರ್ಷಗಳು ನಡೆಯುತ್ತಲೇ ಇದೆ. ಇದಕ್ಕೆ ಪಶ್ಛಿಮಘಟ್ಟಗಳ ತಪ್ಪಲಿನಲ್ಲಿರುವ ಉಡುಪಿ ಜಿಲ್ಲೆ ಕೂಡ ಹೊರತಾಗಿಲ್ಲ. ಇಲ್ಲಿ ರೈತರು ತಮ್ಮ ಬೆಳೆಯನ್ನು ಉಳಿಸಿಕೊಳ್ಳಲು ಹರಸಾಹಸ ಪಡುತ್ತಿದ್ದಾರೆ. ಇದಕ್ಕೆ ಇನ್ನೂ ಕೂಡ ಯಾವುದೇ ಪರಿಹಾರ ದೊರೆತಿಲ್ಲ.

‘ಮಲೆನಾಡು ಹಾಗೂ ಕರಾವಳಿ ಜಿಲ್ಲೆಗಳಲ್ಲಿ ಕಾಡುಪ್ರಾಣಿಗಳ ಹಾವಳಿಯನ್ನು ರೈತರು ಎದುರಿಸುತ್ತಿದ್ದಾರೆ. ಮಂಗ, ಜಿಂಕೆ, ಕಾಡುಹಂದಿ, ನವಿಲು ಮತ್ತು ಕಾಡೆಮ್ಮೆಗಳು ಸಾಮಾನ್ಯವಾಗಿ ಕೃಷಿ ಭೂಮಿಗಳಿಗೆ ದಾಳಿ ನಡೆಸಿ ಕೃಷಿ ಮತ್ತು ತೋಟಗಾರಿಕಾ ಬೆಳೆಗಳನ್ನು ನಾಶ ಮಾಡುತ್ತಿದೆ. ಇದೇ ಕಾರಣಕ್ಕೆ ನಷ್ಟಕ್ಕೆ ಒಳಗಾದ ರೈತರು ಇದೀಗ ಕೃಷಿ ಮಾಡುವುದನ್ನೇ ಬಿಟ್ಟು ದೂರು ಉಳಿಯುತ್ತಿದ್ದಾರೆ ಎನ್ನುತ್ತಾರೆ ಭಾರತೀಯ ಕಿಸಾನ್ ಸಂಘದ ಉಡುಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸತ್ಯನಾರಾಯಣ ಉಡುಪ.

‘ಕೆಲವು ಪ್ರದೇಶದಲ್ಲಿ ಮಂಗಗಳು ಬಾಳೆ ತೋಟಗಳನ್ನು ಹಾನಿಗೊಳಿಸಿದ ಹಿನ್ನೆಲೆಯಲ್ಲಿ ರೈತರು ಬದಲಾಗಿ ಕುಬ್ಜ ಬಾಳೆಗಳನ್ನು ಬೆಳೆಯಲು ಆರಂಭಿಸಿದರು. ಇದೀಗ ಈ ಬಾಳೆಗಳನ್ನು ನವಿಲುಗಳು ನಾಶ ಮಾಡುತ್ತಿವೆ. ಪ್ರಾಣಿ ಪಕ್ಷಿಗಳು ಸಾಕಷ್ಟು ಬುದ್ಧಿವಂತರಾಗಿವೆ. ಕೃಷಿಕರು ಮಂಗಗಳನ್ನು ಭಯಭೀತ ಗೊಳಿಸಲು ಪರವಾನಿಗೆ ಪಡೆದ ಬಂದೂಕುಗಳನ್ನು ಬಳಸುತ್ತಿದ್ದಾರೆ. ಅದೇ ರೀತಿ ಪ್ರಾಣಿಗಳನ್ನು ಓಡಿಸಲು ಪಟಾಕಿಗಳನ್ನು ಕೂಡ ಬಳಸುತ್ತೇವೆ. ಆದರೆ ಇವೆಲ್ಲವೂ ತಾತ್ಕಾಲಿಕ ಪರಿಹಾರಗಳಾಗಿವೆ. ಸದ್ಯ ಪ್ರಾಣಿಗಳು ಸೇವಿಸದ ಕಾಳುಮೆಣಸನ್ನು ಮಾತ್ರ ನಮಗೆ ಉಳಿಸಿಕೊಳ್ಳಲು ಸಾಧ್ಯವಾಗುತ್ತಿದೆ ಎಂದು ಅವರು ತಮ್ಮ ಸಮಸ್ಯೆ ಗಳನ್ನು ತೋಡಿಕೊಂಡರು.

ಪ್ರಾಣಿ ಓಡಿಸಲು ಹಳೆಯ ತಂತ್ರ: ‘ಒಂದೆಡೆ ಬೆಳೆ ಬೆಲೆ ತೀರಾ ಕಡಿಮೆಯಾಗಿದ್ದು, ಇನ್ನೊಂದೆಡೆ ರೈತರು ತಮ್ಮ ಬೆಳೆಗಳನ್ನು ಕಾಡುಪ್ರಾಣಿಗಳಿಂದ ರಕ್ಷಿಸಿಕೊಳ್ಳಲು ಪರ್ಯಾಯ ಸಿದ್ಧತೆ ಮಾಡಿ ಕೊಳ್ಳಲು ಸಾಧ್ಯವಾಗುತ್ತಿಲ್ಲ. ಯಾವುದೇ ತೊಂದರೆ ಇಲ್ಲದೆ ಪ್ರಾಣಿಗಳನ್ನು ಓಡಿಸಲು ಬಳಸುವ ವಿವಿಧ ತಂತ್ರಗಳು ಹಾಗೂ ಮಾರ್ಗಗಳು ಇದೀಗ ಹಳೆಯದಾಗುತ್ತಿವೆ ಎಂದು ಉಡುಪಿ ಜಿಲ್ಲಾ ಕೃಷಿಕ ಸಂಘದ ಅಧ್ಯಕ್ಷ ರಾಮಕೃಷ್ಣ ಶರ್ಮ ಬಂಟಕಲ್ಲು ತಿಳಿಸಿದ್ದಾರೆ.

ಪ್ರಗತಿಪರ ಕೃಷಿಕ ಕುದಿ ಶ್ರೀನಿವಾಸ ಶೆಟ್ಟಿ ಪ್ರಕಾರ, ಈ ಪ್ರದೇಶದ ಕೆಲವು ರೈತರು ಮಂಗಗಳು ಸಸ್ಯಾಹಾರಿ ಎಂದು ನಂಬಿದ್ದರಿಂದ ಮಂಗಗಳನ್ನು ಓಡಿಸಲು ಮೀನು ಮತ್ತು ಮೀನಿನ ಎಣ್ಣೆಯನ್ನು ಸಿಂಪಡಿಸುತ್ತಿದ್ದರು. ಈ ಪ್ರಯೋಗ ಪರಿಣಾಮಕಾರಿ ಎಂದು ಕಂಡುಬಂತು. ಆದರೆ ಆರು ತಿಂಗಳ ನಂತರ ಮಂಗಗಳು ಈಗ ಮೀನಿನ ವಾಸನೆಗೂ ಒಗ್ಗಿಕೊಂಡು ಮತ್ತೆ ನಾಡಿಗೆ ಬರುತ್ತಿದೆ. ‘ನಮ್ಮ ಪ್ರದೇಶದಲ್ಲಿ ಯಾವುದೇ ಕಾಡು ಆನೆಗಳಿಲ್ಲ. ಮಂಗಗಳು ಮತ್ತು ಇತರ ಜೀವಿಗಳು ಅರಣ್ಯದಿಂದ ಹೊರ ಬರುತ್ತಿರುವುದರಿಂದ ಆಹಾರ ಸರಪಳಿಯ ಕಾರಣಕ್ಕೆ ಚಿರತೆಗಳು ಕೂಡ ಮಾನವ ವಾಸಸ್ಥಾನಗಳಿಗೆ ನುಗ್ಗಲು ಪ್ರಾರಂಭಿಸಿವೆ. ಚಿರತೆಗಳು ನಮ್ಮ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಬೇಟೆ ಯಾಡುತ್ತಿವೆ ಎಂದು ಸತ್ಯನಾರಾಯಣ ಉಡುಪ ಮಾಹಿತಿ ನೀಡಿದರು.

<ಕಾಡುಪ್ರಾಣಿ ದಾಳಿ ಪ್ರಕರಣಗಳು: ಉಡುಪಿ ಜಿಲ್ಲೆಯಲ್ಲಿ ಕಾಡು ಪ್ರಾಣಿಗಳು ಕೃಷಿ ಮತ್ತು ಜನರ ಮೇಲೆ ದಾಳಿ ನಡೆಸಿದ ಪರಿಣಾಮ ಅಪಾರ ನಷ್ಟಗಳು ಸಂಭವಿಸಿವೆ.

2023-24ರಲ್ಲಿ ಕಾಡುಪ್ರಾಣಿಗಳ ದಾಳಿಯಿಂದ ಒಟ್ಟು 383 ಪ್ರಕರಣಗಳಲ್ಲಿ 63.03 ಲಕ್ಷ ರೂ. ನಷ್ಟವಾಗಿದೆ. 300 ಬೆಳೆ ಹಾನಿ ಪ್ರಕರಣಗಳಿಂದ ಒಟ್ಟು 32.2 ಲಕ್ಷ ರೂ. ಮತ್ತು ಬಲಿಯಾದ ಎರಡು ಜೀವಗಳಿಗೆ ಒಟ್ಟು 12.5 ಲಕ್ಷ ರೂ. ಪರಿಹಾರ ನೀಡಲಾಗಿದೆ. ಕಾಡುಪ್ರಾಣಿಗಳ ದಾಳಿಯಿಂದ ನಾಲ್ವರು ಗಾಯಗೊಂಡಿದ್ದು, 73 ಸಾವಿರ ರೂ. ಪರಿಹಾರ ನೀಡಲಾಗಿದೆ. ಶಾಶ್ವತ ಅಂಗವೈಕಲ್ಯಕ್ಕೆ ಒಳಗಾದವರಿಗೆ 2.5 ಲಕ್ಷ ರೂ. ಪರಿಹಾರ ನೀಡಲಾಗಿದೆ. 21 ಜಾನುವಾರುಗಳು ಸಾವಿಗೀಡಾಗಿದ್ದು, ಒಟ್ಟು 9.63 ಲಕ್ಷ ರೂ. ಪರಿಹಾರ ವಿತರಿಸಲಾಗಿದೆ ಎಂದು ಅರಣ್ಯ ಇಲಾಖೆ ಮೂಲಗಳು ತಿಳಿಸಿವೆ.

2022-23ರಲ್ಲಿ ಒಟ್ಟು 308 ಕಾಡುಪ್ರಾಣಿ ದಾಳಿ ಪ್ರಕರಣಗಳು ವರದಿ ಯಾಗಿದ್ದು, 37.99 ಲಕ್ಷ ಪರಿಹಾರ ನೀಡಲಾಗಿದೆ. 239 ಬೆಳೆ ನಷ್ಟ ಪ್ರಕರಣಗಳಲ್ಲಿ ಒಟ್ಟು 13.53 ಲಕ್ಷ ರೂ., 66 ಜಾನುವಾರು ಸಾವು ಪ್ರಕರಣಗಳಲ್ಲಿ 8.29 ಲಕ್ಷ ರೂ., ಎರಡು ಮಾನವ ಸಾವುಗಳಲ್ಲಿ 15 ಲಕ್ಷ ರೂ., ಒಂದು ಗಾಯ ಪ್ರಕರಣದಲ್ಲಿ 1.17 ಲಕ್ಷ ರೂ. ಪರಿಹಾರ ವಿತರಿಸಲಾಗಿದೆ ಎದು ಇಲಾಖೆ ಮೂಲಗಳು ತಿಳಿಸಿವೆ.

ಇನ್ನೂ ಕೈಗೂಡದ ಮಂಕಿ ಪಾರ್ಕ್ ಯೋಜನೆ

ಕಾಡು ಪ್ರಾಣಿಗಳಿಂದ ಕೃಷಿ ಮತ್ತು ತೋಟಗಾರಿಕೆ ಬೆಳೆಗಳನ್ನು ಉಳಿಸಲು ಹಿಮಾಚಲ ಪ್ರದೇಶ ಸರಕಾರದ ಕಾರ್ಯತಂತ್ರಗಳನ್ನು ಅಧ್ಯಯನ ಮಾಡಲು ಕೃಷಿಕರು ಮತ್ತು ಅರಣ್ಯ ಇಲಾಖೆಯ ಕೆಲವು ಅಧಿಕಾರಿಗಳು 2010ರಲ್ಲಿ ಹಿಮಾಚಲ ಪ್ರದೇಶಕ್ಕೆ ಭೇಟಿ ನೀಡಿದ್ದರು. ಮಂಕಿ ಪಾರ್ಕ್ ಸೇರಿದಂತೆ ಇತರ ಪರಿಹಾರ ಯೋಜನೆಯನ್ನು ಒಳಗೊಂಡ 27 ಕೋಟಿ ರೂ. ಮೊತ್ತದ ಪ್ರಸ್ತಾವನೆ ಯನ್ನು ಸರಕಾರಕ್ಕೆ ಮಾಡಲಾಗಿತ್ತು. ಆದರೆ ಈವರೆಗೆ ಯಾವುದೇ ಸರಕಾರ ಇದಕ್ಕೆ ಸ್ಪಂದಿಸಿಲ್ಲ ಎಂದು ಕೃಷಿಕರು ಆರೋಪಿಸಿದ್ದಾರೆ. ಅರಣ್ಯಾಧಿಕಾರಿಗಳ ಪ್ರಕಾರ ‘ಮಂಕಿ ಪಾರ್ಕ್‌ಗೆ ಅಂತಹ ಯಾವುದೇ ಪ್ರಸ್ತಾಪವಿಲ್ಲ. ಈ ಯೋಜನೆ ಬಹಳ ದೀರ್ಘಕಾಲದ್ದಾಗಿದೆ ಮತ್ತು ಅಷ್ಟು ಸುಲಭ ಅಲ್ಲ. ಇದಕ್ಕೆ ಹಣ್ಣಿನ ಮರಗಳನ್ನು ನೆಡಬಹುದಾದ ದ್ವೀಪದಂತಹ ಪ್ರದೇಶಗಳನ್ನು ಗುರುತಿಸುವ ಅಗತ್ಯ ಇದೆ. ಇದು ಬೆಳೆಯಲು ಸುಮಾರು 20 ವರ್ಷಗಳಿಗಿಂತ ಹೆಚ್ಚು ಸಮಯ ಬೇಕಾ ಗುತ್ತದೆ. ಮುಂದೆ ಮಂಗಗಳು ಅದಕ್ಕೆ ಹೊಂದಿಕೊಳ್ಳಬೇಕು. ಅವು ಅಷ್ಟು ಸರಳವಾಗಿ ಇಲ್ಲ. ಇದಕ್ಕೆ ಪರ್ಯಾಯವಾಗಿ ಕೋತಿಗಳಿಗೆ ಪ್ರತಿದಿನವೂ ಆಹಾರ ಸಿಗುವಂತೆ ಮಾಡಬೇಕೆಂದು ಅಭಿಪ್ರಾಯಪಟ್ಟಿದ್ದಾರೆ.


ನವಿಲುಗಳು ತರಕಾರಿ ಗಿಡಗಳ ಹೂವುಗಳನ್ನು ಅರಳಲು ಬಿಡುತ್ತಿಲ್ಲ. ಮಂಗಗಳು ತೆಂಗಿನ ನೀರನ್ನು ಕುಡಿಯುತ್ತವೆ ಮತ್ತು ಹೆಚ್ಚಿನ ಮೊಳಕೆಗಳನ್ನು ಹಾಳು ಮಾಡುತ್ತವೆ. ಇದರಿಂದ ಶೇ.50ರಷ್ಟು ಬೆಳೆ ನಾಶವಾಗಿದೆ. ಇದಕ್ಕೆ ಸರಕಾರ ನೀಡುವ ಬೆಳೆ ನಷ್ಟ ಪರಿಹಾರವು ಸಾಕಾಗುವುದಿಲ್ಲ ಮತ್ತು ಅದನ್ನು ಪಡೆಯಲು ಹರಸಾಹಸವೇ ಪಡಬೇಕು. ಮೀಸಲು ಅರಣ್ಯ ಪ್ರದೇಶದ ಸುತ್ತಲೂ ಅಧಿಕಾರಿಗಳು ಸೂಕ್ತ ಬೇಲಿ ಅಳವಡಿಸಬೇಕು. ಇದರಿಂದ ಕಾಡುಪ್ರಾಣಿಗಳ ಹಾವಳಿ ತಡೆಯಲು ಸಾಧ್ಯವಾಗುತ್ತದೆ.

ಕುದಿ ಶ್ರೀನಿವಾಸ ಶೆಟ್ಟಿ, ಪ್ರಗತಿಪರ ಕೃಷಿಕರು

share
ನಝೀರ್ ಪೊಲ್ಯ
ನಝೀರ್ ಪೊಲ್ಯ
Next Story
X