Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಈ ಹೊತ್ತಿನ ಹೊತ್ತಿಗೆ
      • ಜನಚರಿತೆ
      • ವಿಡಂಬನೆ
      • ಜನ ಜನಿತ
      • ರಂಗ ಪ್ರಸಂಗ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಜನಮನ
      • ರಂಗದೊಳಗಿಂದ
      • ಶಂಬೂಕ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ಪಹಲ್ಗಾಮ್‌ ದಾಳಿ | ರಕ್ತ ಸೋರುತ್ತಿದ್ದರೂ...

ಪಹಲ್ಗಾಮ್‌ ದಾಳಿ | ರಕ್ತ ಸೋರುತ್ತಿದ್ದರೂ ಸಂತ್ರಸ್ತರನ್ನು ಹೊತ್ತುಕೊಂಡು ಬಂದು ರಕ್ಷಿಸಿದ್ದು ಮುಸ್ಲಿಮರೇ : ಸಂತೋಷ್‌ ಲಾಡ್

"ಎರಡು ಸಾವಿರದಷ್ಟು ಜನರನ್ನು ಸ್ಥಳಾಂತರಿಸಿದ ಮುಸ್ಲಿಮರ ಬಗ್ಗೆ ಚರ್ಚೆ ಯಾಕಿಲ್ಲ?"

ವಾರ್ತಾಭಾರತಿವಾರ್ತಾಭಾರತಿ26 April 2025 11:15 AM IST
share
ಪಹಲ್ಗಾಮ್‌ ದಾಳಿ | ರಕ್ತ ಸೋರುತ್ತಿದ್ದರೂ ಸಂತ್ರಸ್ತರನ್ನು ಹೊತ್ತುಕೊಂಡು ಬಂದು ರಕ್ಷಿಸಿದ್ದು ಮುಸ್ಲಿಮರೇ : ಸಂತೋಷ್‌ ಲಾಡ್

ಬೆಂಗಳೂರು: ಕಳೆದ 11 ವರ್ಷಗಳಿಂದಲೂ ಕೇಂದ್ರ ಸರ್ಕಾರ ದಿನದ 24 ಗಂಟೆಯೂ ಮುಸ್ಲಿಮರನ್ನು ಅಂತ ಬೈಯೋದು ಬಿಟ್ಟರೆ ಬೇರೇನು ಮಾಡಿಲ್ಲ ಎಂದು ಸಚಿವ ಸಂತೋಷ್ ಲಾಡ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಸರ್ಜಿಕಲ್ ಸ್ಟ್ರೈಕ್ ಏನಾಯ್ತು? ಪುಲ್ವಾಮಾ ದಾಳಿ ಏನಾಯ್ತು? ಯಾರೂ ಚರ್ಚೆ ಮಾಡ್ತಿಲ್ಲ ಯಾಕೆ..? ಹಿಂದೂ ಪರವಾಗಿ ಬಹಳ ಮಮತೆ ಹೊಂದಿರುವ ಬಿಜೆಪಿ ಕೇಂದ್ರ ಸರ್ಕಾರವೇ ಹಿಂದೂಗಳನ್ನು ಕೊಳ್ಳೆ ಹೊಡೆದು, ಲೂಟಿ ಮಾಡಿ, ಕೊಂದಿರೋದು. 2014ರಿಂದ ಆಗಿರುವ ಹಿಂದೂಗಳ ಹತ್ಯೆಯ ಹೊಣೆಯನ್ನು ಕೇಂದ್ರ ಸರ್ಕಾರವೇ ಹೊರಬೇಕು ಎಂದರು.

20 ರಾಜ್ಯಗಳಲ್ಲಿ ನಿಮ್ಮ ಪಕ್ಷದವರೇ ಸಿಎಂ, ನೀವೆ ಪಿಎಂ, ಬರೀ ಹಿಂದೂ ಮುಸ್ಲಿಂ ಬಿಟ್ಟರೆ ಬೇರೆ ಏನೂ ಇಲ್ಲ. ಸರ್ಕಾರವೇ ತಮ್ಮ ವೈಫಲ್ಯ ಅಂತ ಹೇಳಿದೆ. ಆರ್ಟಿಕಲ್ 370 ರದ್ದು ಮಾಡಿದ್ದು ಇವರೇ. ಎಲ್ಲಾ ನಮ್ಮ ಕಂಟ್ರೋಲ್ ನಲ್ಲೇ ಇದೆ ಅಂದ್ರು. ನಾನು ನೋಡಿದಂತೆ ಅಲ್ಲಿನ ಲೋಕಲ್ ಜನ ನಮಗಿಂತ ಹೆಚ್ಚಾಗಿ ಅಲ್ಲಿನ ಜನ ರಕ್ತ ಕಣ್ಣೀರು ಹಾಕ್ತಿದ್ದಾರೆ. ಅಲ್ಲಿ ಹೇಗೆ ಬಂದೂಕು ಬಂತು, ಅವರು ಹೇಗೆ ಬಂದ್ರು ಅದರ ಬಗ್ಗೆ ಚರ್ಚೆ ಮಾಡ್ತಿಲ್ಲ ಎಂದು ವಾಗ್ದಾಳಿ ನಡೆಸಿದರು.

ನಾನು ಅಲ್ಲೇ ಇದ್ದೆ. ರಕ್ತಸಿಕ್ತಗೊಂಡ ಪ್ರತಿಯೊಬ್ಬರನ್ನು ಹೆಗಲಮೇಲೆ ಹೊತ್ತುಕೊಂಡು ಆರೇಳು ಕಿಲೋ ಮೀಟರ್ ಕೆಳಗೆ ಬಂದಿದ್ದಾರೆ. ಅದರ ಬಗ್ಗೆ ಒಂದಾದರೂ ಒಳ್ಳೆಯದು ಮಾತಾಡಬಾರದಾ? ಎರಡು ಸಾವಿರದಷ್ಟು ಜನರನ್ನು ಸ್ಥಳಾಂತರಿಸಿದ್ದು ಹೆಚ್ಚಿನವರೂ ಅಲ್ಲಿನ ಮುಸ್ಲಿಮರೇ. ಅದರ ಬಗ್ಗೆ ಯಾವುದೇ ಚರ್ಚೆ ಬೇಡ್ವಾ? ಈ ದೇಶದಲ್ಲಿ ಬಹುತೇಕ ಭಯೋತ್ಪಾದಕ ಚಟುವಟಿಕೆಗಳು ನಡೆದಿರುವಂಥದ್ದು ಪಾಕಿಸ್ತಾನದ ಭಾಗದಿಂದಲೇ. ಆದರೆ ಈಗ ಯಾಕೆ ಜಾತಿ ಎತ್ತಿ ಮಾತನಾಡುತ್ತೀರಿ. ಪುಲ್ವಾಮಾದಲ್ಲಿ ದಾಳಿ ಮಾಡಿದವರು ಯಾವ ಜನಾಂಗದವರು? ಬಲಿಯಾದವರು ಯಾವ ಜನಾಂಗದವರು? ಎಂದು ಪ್ರಶ್ನಿಸಿದರು.

ಆಗಿರುವ ಘಟನೆ ಸಮರ್ಥಿಸಿಕೊಳ್ಳುವಂತಹ ವಿಚಾರವೇ ಅಲ್ಲ. ರಾಜಕೀಯ, ಧಾರ್ಮಿಕವಾಗಿ ಎಲ್ಲರೂ ಈ ಘಟನೆಯನ್ನು ಖಂಡಿಸಿದ್ದಾರೆ. ಬಿಜೆಪಿಯವರಿಗೆ ತಮ್ಮ ಬೇಳೆ ಬೇಯಬೇಕು. ಚುನಾವಣೆ ಗೆಲ್ಲಬೇಕು. ಬಿಹಾರ ಚುನಾವಣೆ ಪ್ರಚಾರದಲ್ಲಿ ಕೇವಲ ಪಾಕಿಸ್ತಾನವನ್ನು ಮುಗಿಸಿ ಬಿಡುತ್ತೇನೆ ಎಂದು ಹೇಳಿದ್ದೇ ವಿನಃ ಬಿಹಾರದಲ್ಲಿ ಏನು ಮಾಡಿದ್ದಾರೆ ಎಂಬುವುದನ್ನು ಹೇಳುತ್ತಿಲ್ಲ. ಅಲ್ಲಿನ ತೀರಾ ಹಿಂದುಳಿದ ಜಿಲ್ಲೆಯ ವಾರ್ಷಿಕ ತಲಾ ಆದಾಯ ಅಂದಾಜು 42000 ರೂ. ಇರಬಹುದು. ಆದರೆ ಚುನಾವಣೆ ಮುಗಿಯುವ ವರೆಗೂ ಇದ್ಯಾವುದರ ಬಗ್ಗೆಯೂ ಮಾತನಾಡದೇ ಕೇವಲ ಪಾಕಿಸ್ತಾನ, ಮುಸಲ್ಮಾನ, ಅಫಘಾನಿಸ್ತಾನ, ತಾಳಿ, ಮಂಗಳ ಸೂತ್ರದ ಬಗ್ಗೆ ಮಾತ್ರ ಮಾತನಾಡುತ್ತಾರೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಶ್ರೀನಗರದಲ್ಲಿ ಹೆಜ್ಜೆ ಹೆಜ್ಜೆಗೂ ಚೆಕ್ಪೋಸ್ಟ್ ಇದೆ. ಒಂದು ಹುಳನೂ ತಪ್ಪಿಸಿಕೊಂಡು ಹೋಗೋಕೆ ಆಗಲ್ಲ. ಗೃಹ ಸಚಿವರನ್ನ ಕೇಳುತ್ತಿದ್ದೇನೆ, ದಾಳಿ ನಡೆದಾಗ ಯಾಕೆ ಒಬ್ಬ ಸೆಕ್ಯೂರಿಟಿ ಕೂಡಾ ಇಲ್ಲ.? ಇದರ ಬಗ್ಗೆ ಚರ್ಚೆ ಆಗಬೇಕೇ ವಿನಃ ಬೇರೆಯದ್ದಕ್ಕಲ್ಲ. ಮಾತಿಗೆ ಮುನ್ನ ತಮ್ಮ ವೈಫಲ್ಯ ಮುಚ್ಚಿಕೊಳ್ಳಲು ಹಿಂದೂ-ಮುಸ್ಲಿಂ ಅಂತಾರೆ. ಹಾಗಾದ್ರೆ ನಿಮ್ಮ ಅವಧಿಯಲ್ಲಿ ಹಿಂದೂಗಳಿಗೆ ಅನ್ಯಾಯ ಆಯ್ತು ಅಂತ ಒಪ್ಪಿಕೊಳ್ಳಿ. ಇಂತಹ ದೊಡ್ಡ ಘಟನೆ ನಡೆದರೂ ಪ್ರಧಾನಿ ಮೋದಿ ಬಿಹಾರ ಚುನಾವಣೆ ಪ್ರಚಾರದಲ್ಲಿ ಭಾಗವಹಿಸ್ತಾರೆ ಅಂತ ಕೇಂದ್ರದ ವಿರುದ್ಧ ಹರಿಹಾಯ್ದರು.

ಕಳೆದ 11 ವರ್ಷಗಳಲ್ಲಿ ಎಷ್ಟು ಭಯೋತ್ಪಾದಕ ಕೃತ್ಯಗಳು ನಡೆದಿವೆಯೋ, ಎಷ್ಟು ಜನ ಜೀವ ಕಳೆದುಕೊಂಡಿದ್ದಾರೋ ಅದರೆ ಬಗ್ಗೆ ಕೇಂದ್ರ ಸರ್ಕಾರ ಬಹಿರಂಗ ಚರ್ಚೆ ನಡೆಸಬೇಕು. ತಮ್ಮ ಆಡಳಿತ ಅವಧಿಯಲ್ಲಿ ಮೋದಿಯವರು ದೇಶಕ್ಕೆ ನೀಡಿದ ಕೊಡುಗೆ ಏನೂ ಇಲ್ಲ. ಆದ್ದರಿಂದ ಮೋದಿ ಅವರು ರಾಜಿನಾಮೆ ಕೊಟ್ಟು, ಬೇರೆಯವರಿಗೆ ಅವಕಾಶ ಮಾಡಿಕೊಡಲಿ̤ ಎಂದು ಒತ್ತಾಯಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X