Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಈ ಹೊತ್ತಿನ ಹೊತ್ತಿಗೆ
      • ಜನಚರಿತೆ
      • ವಿಡಂಬನೆ
      • ಜನ ಜನಿತ
      • ರಂಗ ಪ್ರಸಂಗ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಜನಮನ
      • ರಂಗದೊಳಗಿಂದ
      • ಶಂಬೂಕ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ರಾಯಚೂರು
  4. ಫಾರಂ ನಂಬರ್ 9,11 ಪಡೆಯಲು ಮಹಾನಗರ...

ಫಾರಂ ನಂಬರ್ 9,11 ಪಡೆಯಲು ಮಹಾನಗರ ಪಾಲಿಕೆಯಿಂದ ಸಮಸ್ಯೆ: ಉದ್ದಿಮೆದಾರರಿಂದ ಆರೋಪ

ವಾರ್ತಾಭಾರತಿವಾರ್ತಾಭಾರತಿ22 Jan 2025 12:20 PM IST
share
ಫಾರಂ ನಂಬರ್ 9,11 ಪಡೆಯಲು ಮಹಾನಗರ ಪಾಲಿಕೆಯಿಂದ ಸಮಸ್ಯೆ: ಉದ್ದಿಮೆದಾರರಿಂದ ಆರೋಪ

ರಾಯಚೂರು: ರಾಯಚೂರು ಮಹಾನಗರ ಪಾಲಿಕೆ ಹಾಗೂ ಜಿಲ್ಲೆಯ ಸ್ಥಳೀಯ ಸಂಸ್ಥೆಗಳು ಫಾರಂ ನಂಬರ್ 9 ಹಾಗೂ 11 ಪಡೆಯಲು ಪಂಚಾಯತ್ ಗಳಲ್ಲಿ ಅವೈಜ್ಞಾನಿಕವಾಗಿ ತೆರಿಗೆ‌ ವಿಧಿಸಲಾಗುತ್ತಿದ್ದು, ಕೈಗಾರಿಕಾ ಸಚಿವ ಎಂ.ಬಿ ಪಾಟೀಲ್ ಆದೇಶದಂತೆ ಕೂಡಲೇ ಸಮಸ್ಯೆ ಬಗೆಹರಿಸಿ‌ ಉದ್ದಿಮೆದಾರರಿಗೆ ಅನುಕೂಲ ಮಾಡಿಕೊಡಬೇಕು ಎಂದು ರಾಯಚೂರು ಕಾಟನ್ ಮಿಲ್ಲರ್ಸ್ ಅಸೋಸಿಯೇಷನ್ ಅಧ್ಯಕ್ಷ ವಿ.ಲಕ್ಷ್ಮೀ ರೆಡ್ಡಿ ಒತ್ತಾಯಿಸಿದರು.

ಅವರಿಂದು ನಗರದ ದಿ.ಗಂಜ್ ಮಾರ್ಚೆಂಟ್ ಅಸೋಸಿಯೇಷನ್ ಕಚೇರಿಯಲ್ಲಿ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿ, ಈ ಹಿಂದೆ ಸೇಲ್ ಡೀಡ್ ಮಾಡುವಾಗ ಫಾರಂ ನಂಬರ್ 9 ಹಾಗೂ 1 ಪಡೆಯಲಾಗುತ್ತಿತ್ತು, ಈಗ ಲೀಸ್ ಕಂ ಸೇಲ್ ಹಾಗೂ ಬ್ಯಾಂಕಿನಲ್ಲಿ ಅಡವಿಡುವ ಸಂದರ್ಭದಲ್ಲಿಯೂ ಕೇಳಲಾಗುತ್ತಿದೆ ಇದರಿಂದ ಉದ್ದಿಮೆದಾರರಿಗೆ ಸಮಸ್ಯೆಯಾಗಿದೆ. ಸರ್ಕಾರ ಖಾಲಿ ನಿವೇಶನಗಳಿಗೆ ಪ್ರತಿ ಸಾವಿರ ಚದರ ಅಡಿಗೆ ಅವೈಜ್ಞಾನಿಕ ತೆರಗೆ ವಿಧಿಸಲಾಗುತ್ತಿದೆ. ಸಚಿವ ಎನ್ ಎಸ್ ಬೋಸರಾಜು ಅವರ ಒತ್ತಾಯದ ಮೇರೆಗೆ ಕೈಗಾರಿಕಾ ಸಚಿವ ಎಂ.ಬಿ ಪಾಟಿಲ್ ಹಾಗೂ ಕಂದಾಯ ಸಚಿವ ಕೃಷ್ಣೆ ಭೈರೇಗೌಡ ಅವರ ಅಧ್ಯಕ್ಷತೆಯಲ್ಲಿ ಸಭೆ ನಡೆಸಿ ಜಿಲ್ಲೆಯ ಕೈಗಾರಿಕೋದ್ಯಮಿಗಳ ಸಮಸ್ಯೆ ಬಗ್ಗೆ ಚರ್ಚಿಸಿದ್ದು‌ ಜಿಲ್ಲಾಧಿಕಾರಿ ಯವರಿಗೆ ನಿರ್ದೇಶನ ನೀಡಿದ ಹಿನ್ನೆಲೆಯಲ್ಲಿ ಈಗಾಗಲೇ ಜಿಲ್ಲಾಧಿಕಾರಿ ನಿತಿಶ್ ಕೆ ಉದ್ದಿಮೆಗಳ ಮಾಲೀಕರ ಜೊತೆ ಏಕಗವಾಕ್ಷಿ ಸಭೆ ನಡೆಸಿದ್ದಾರೆ. ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ ಎಂದು ಹೇಳಿದರು.

ಸಬ್‌ ರಿಜಿಸ್ಟರ್ ಕಚೇರಿ ಇ-ಖಾತಾ ಇಲ್ಲದೆ ರಿಜಿಸ್ಟ್ರೇಷನ್ ಮಾಡಯವಲ್ಲಿ ವಿಳಂಬ ಮಾಡಲಾಗುತ್ತಿದೆ. ಸರ್ಕಾರ ಏಕಾಏಕಿ ನೋಂದಣಿ ಮಾಡದಂತೆ ಆದೇಶ ಹೊರಡಿಸಿದ್ದು, ಉದ್ದಿಮೆದಾರರಿಗೆ ಸಮಸ್ಯೆಯಾಗಿದೆ ಎಂದರು.

ಜಿಲ್ಲೆಯ ಅಭಿವೃದ್ಧಿಗೆ ಜಿಲ್ಲೆಯರಿಗೇ ಉಸ್ತುವಾರಿ ನೀಡಲಿ; ಜಿಲ್ಲೆಯ ಜನರ ಬಹು ದಿನದ ಬೇಡಿಕೆಯಾದ ಮೆಗಾ ಟೆಕ್ಸ್ ಟೈಲ್ ಪಾರ್ಕ್ ಕೇಂದ್ರ ಸರ್ಕಾರ ಕಲಬುರಗಿ ಜಿಲ್ಲೆಗೆ ನೀಡಿ ನಮಗೆ ಅನ್ಯಾಯ ಮಾಡಿದೆ. ಜಿಲ್ಲೆಯಲ್ಲಿ ಹೆಚ್ಚು ಕಾಟನ್ ಫ್ಯಾಕ್ಟರಿ ಇರುವುದರಿಂದ ವೈಜ್ಞಾನಿಕ ವಾಗಿ ನಮಗೆ ಸಿಗಬೇಕಿತ್ತು.‌ರಾಜಕೀಯ ನಾಯಕರ ಒಗ್ವಟ್ಟಿನ ಕೊರತೆ ಹಾಗೂ ಹೊರಗಿನ ಜಿಲ್ಲೆಯವರಾದ ಶರಣಪ್ರಕಾಶ ಪಾಟೀಲರುಗೆ ಉಸ್ತುವಾರಿ ನೀಡಿದ್ದರಿಂದ ಜಿಲ್ಲೆಗೆ ಕೈತಪ್ಪಿದೆ. ಅನೇಕ ದೊಡ್ಡ ಯೋಜನೆಗಳಿಂದ ಜಿಲ್ಲೆ ವಂಚಿತವಾಗುತ್ತಿದೆ ಎಂದು ಅಳಲು ತೋಡಿಕೊಂಡರು. ಜಿಲ್ಲೆಯ ಸಮಗ್ರ ಅಭಿವೃದ್ಧಿಗೆ ಜಿಲ್ಲೆಯವರಾದ ಎನ್ ಎಸ್ ಬೋಸರಾಜು ಅವರಿಗೆ ಉಸ್ತುವಾರಿ ನೀಡಬೇಕು ಎಂದು ಕಾಂಗ್ರೆಸ್ ಪಕ್ಷದ ನಾಯಕರಿಗೆ ಒತ್ತಾಯಿಸಿದರೂ ಪ್ರಯೋಜನವಾಗಿಲ್ಲ. ಕಲಬುರಗಿಯಲ್ಲಿ ಈಗಾಲೇ ಟೆಕ್ಸ್ಟ್ ಟೈಲ್ ಪಾರ್ಕ್ ನಿರ್ಮಾಣಕ್ಕೆ ಸಿದ್ಧತೆ ಮಾಡಲಾಗುತ್ತಿದೆ. ಅಲ್ಲಿನ‌ಅನೇಕ ತಾಂತ್ರಿಕ ಸಮಸ್ಯೆ ತಲೆದೂರಿದ್ದು ಈಗಾಗಲೇ ಕೆಲ ಉದ್ದಿಮೆದಾರರು ಅಪಸ್ವರ ಎತ್ತಿದ್ದಾರೆ. ಕರ್ನಾಟಕದಿಂದ ಎರಡನೇ ಜಿಲ್ಲೆಯ ಆದ್ಯತೆಯ ಮೆರೆಗೆ ರಾಯಚೂರಿಗೆ ಮೆಗಾ ಟೆಕ್ಸ್ ಟೈಲ್ ಪಾರ್ಕ್ ನೀಡಬೇಕಿದೆ ಎಂದರು.

ರಾಯಚೂರು ಕೈಗಾರಿಕಾ ಅಭಿವೃದ್ಧಿಗೆ ತಾಲೂಕಿನ ಸಿಂಗನೋಡಿ, ಚಂದ್ರಬಂಡಾ, ಕುರುಬದೊಡ್ಡಿ ಗ್ರಾಮಗಳಲ್ಲಿ 693 ಎಕರೆ ಭೂ ಸ್ವಾಧೀನಕ್ಕೆ ಹಿಂದಿನ ಹಾಗೂ ಇಂದಿನ ಸರ್ಕಾರಕ್ಕೆ ಮನವಿ ಮಾಡಿದರೂ ಅಧಿಕಾರಗಳು ಭೂಸ್ವಾಧೀನಕ್ಕೆ ಹಿಂದೇಟು ಹಾಕುತ್ತಿದ್ದಾರೆ ಎಂದು ಆರೋಪಿಸಿದರು.

ಅಸೋಸಿಯೇಷನ್ ಉಪಾಧ್ಯಕ್ಷ ಶ್ರೇಣಿಕ್ ರಾಜ್ ಮೂಥಾ, ಗೌರವಾಧ್ಯಕ್ಷ ಶೈಲೇಶ್ ಕುಮಾರ ಧೋಕ ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X