Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಈ ಹೊತ್ತಿನ ಹೊತ್ತಿಗೆ
      • ಜನಚರಿತೆ
      • ವಿಡಂಬನೆ
      • ಜನ ಜನಿತ
      • ರಂಗ ಪ್ರಸಂಗ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಜನಮನ
      • ರಂಗದೊಳಗಿಂದ
      • ಶಂಬೂಕ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ರಾಯಚೂರು
  4. ರಾಯಚೂರು | ವಾರ್ತಾ ಇಲಾಖೆಯಿಂದ...

ರಾಯಚೂರು | ವಾರ್ತಾ ಇಲಾಖೆಯಿಂದ ಡಾ.ರಾಜ್‌ಕುಮಾರ್‌ ಅವರ ಜನ್ಮದಿನಾಚರಣೆ

ವಾರ್ತಾಭಾರತಿವಾರ್ತಾಭಾರತಿ24 April 2025 7:12 PM IST
share
Photo of Program

ರಾಯಚೂರು : ರಾಯಚೂರ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್‌ನ ಕನ್ನಡ ಭವನದ ಆವರಣದಲ್ಲಿ ಡಾ.ರಾಜ್‌ಕುಮಾರ್‌ ಅಭಿಮಾನಿಗಳು ಮತ್ತು ಗಾಯಕರೆಲ್ಲರೂ ಒಗ್ಗೂಡಿ ಡಾ.ರಾಜ್‌ಕುಮಾರ್‌ ಅವರು ಹಾಡಿದ ಹಲವಾರು ಗೀತೆಗಳಿಗೆ ತಮ್ಮ ಧ್ವನಿಯನ್ನು ಸೇರಿಸಿ ಡಾ.ರಾಜ್‌ಕುಮಾರ್‌ ಅವರ ಸುಮಧುರ ಕಂಠದ ಹಾಡುಗಳ ಹೊಳೆಯನ್ನೇ ಹರಿಸಿದರು.

ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕನ್ನಡ ಸಾಹಿತ್ಯ ಪರಿಷತ್ ಮತ್ತು ಅಖಿಲ ಕರ್ನಾಟಕ ಡಾ.ರಾಜ್‌ಕುಮಾರ್‌ ಅಭಿಮಾನಿಗಳ ಸಂಘ ಇವರ ಸಂಯುಕ್ತಾಶ್ರಯದಲ್ಲಿ ಕನ್ನಡದ ಮೇರು ನಟ ಡಾ.ರಾಜ್‌ಕುಮಾರ್‌ ಅವರ ಜನ್ಮದಿನಾಚರಣೆ ಕಾರ್ಯಕ್ರಮವು ಎ.24ರಂದು ಅರ್ಥಪೂರ್ಣವಾಗಿ ನಡೆಯಿತು.

ಅತಿಥಿಗಳು, ಗಣ್ಯರು ಮತ್ತು ಅವರ ಅಭಿಮಾನಿಗಳು ಮೊದಲಿಗೆ ಡಾ.ರಾಜ್‌ಕುಮಾರ್‌ ಅವರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿದರು. ಬಳಿಕ ತಹಶೀಲ್ದಾರರಾದ ಸುರೇಶ ವರ್ಮಾ ಅವರು ಸಸಿಗೆ ನೀರೆರೆಯುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.

ಈ ವೇಳೆ ಮಾತನಾಡಿದ ತಹಶೀಲ್ದಾರ್‌ ವರ್ಮಾ ಅವರು, ಡಾ.ರಾಜ್‌ಕುಮಾರ್‌ ಬರೀ ನಟರಾಗಿರದೇ ಕನ್ನಡದ ಬಗ್ಗೆ ಅಪಾರ ಅಭಿಮಾನ ಹೊಂದಿದ್ದರು. ಕನ್ನಡವನ್ನು ಉಸಿರಾಗಿಸಿಕೊಂಡು ಕನ್ನಡದ ಉಳಿವಿನ ಹೋರಾಟದಲ್ಲಿ ಭಾಗಿಯಾದರು ಎಂದು ಹೇಳಿದರು.

ಅಖಿಲ ಕರ್ನಾಟಕ ಡಾ.ರಾಜ್‌ಕುಮಾರ್‌ ಅಭಿಮಾನಿಗಳ ಸಂಘದ ಗೌರವ ಕಾರ್ಯದರ್ಶಿಗಳಾದ ಜೆ.ಎಲ್.ಗೋಪಿ ಅವರು ಮಾತನಾಡಿ, ಡಾ.ರಾಜ್‌ಕುಮಾರ್‌ ಅವರು ಈ ನಾಡು ಕಂಡ ಶ್ರೇಷ್ಠ ನಟರಾಗಿದ್ದಾರೆ. ನಾಡು ನುಡಿಯ ಬಗ್ಗೆ ಡಾ.ರಾಜ್‌ಕುಮಾರ್‌ ಅವರಿಗಿದ್ದ ಬದ್ಧತೆ ಶ್ರದ್ಧೆ ನಮಗೆ ಸದಾಕಾಲ ಆದರ್ಶಪ್ರಾಯವಾಗಿದೆ ಎಂದರು.

ವಾರ್ತಾ ಇಲಾಖೆಯ ಗವಿಸಿದ್ದಪ್ಪ ಹೊಸಮನಿ ಅವರು ಪ್ರಾಸ್ತಾವಿಕ ಮಾತನಾಡಿದರು.

ಡಾ.ರಾಜ್‌ಕುಮಾರ್‌ ಗೀತೆಗಳ ಗಾಯನ :

ಉದ್ಘಾಟನಾ ಸಮಾರಂಭದ ಬಳಿಕ ಡಾ.ರಾಜ್‌ಕುಮಾರ್‌ ಅವರ ಹಾಡುಗಳ ಗೀತ ಗಾಯನ ಕಾರ್ಯಕ್ರಮ ನಡೆಯಿತು. ರಾಯಚೂರಿನ ಹಿರಿಯ ಕಲಾವಿದರಾದ ನರೇಂದ್ರಕುಮಾರ, ನಿವೃತ್ತ ಎಲ್‌ಐಸಿ ಅಧಿಕಾರಿಯಾದ ಗುರುರಾಜ್, ಆರೋಗ್ಯ ಇಲಾಖೆಯ ನಾಗರಾಜ ಜಗತಾಪ, ದೂರದರ್ಶನ ಕಲಾವಿದರಾದ ನಬಿಸಾಬ ಬೇಗ್, ಬಸನಗೌಡ ಹೊಕ್ರಾಣಿ, ನಿವೃತ್ತ ಎಲ್‌ಐಸಿ ನೌಕರರಾದ ಹುಲಿಗೆಪ್ಪ ಜಕ್ಕಲಿ, ಕವಿ ತಿಮ್ಮಯ್ಯ, ಯುವ ಗಾಯಕರಾದ ಕೃಷಿ ವಿಶ್ವ ವಿದ್ಯಾಲಯದ ನರಸಿಂಹಲು, ವಿರುಪಾಕ್ಷಿ, ಚಂದ್ರಶೇಖರ, ಸಂಗೀತಾ ವೀರಾಪುರ, ವಾರ್ತಾ ಇಲಾಖೆಯ ಗವಿಸಿದ್ದಪ್ಪ ಹೊಸಮನಿ ಅವರು ಡಾ.ರಾಜ್‌ಕುಮಾರ್‌ ಗೀತೆಗಳನ್ನು ಹೇಳಿ ರಂಜಿಸಿದರು. ಹೆಸರಾಂತ ಕಲಾವಿದರಾದ ಜ್ಯೂನಿಯರ್ ಡಾ.ರಾಜ್‌ಕುಮಾರ್‌ ಎಂದೇ ಹೆಸರಾದ ಗುರು ದೇವರಮನಿ ಅವರು ಡಾ.ರಾಜ್‌ಕುಮಾರ್‌ ಅವರ ಹಾಡುಗಳನ್ನು ಮತ್ತು ಡಾ.ರಾಜಕುಮಾರ ಅವರ ಸಂಭಾಷಣೆಗಳನ್ನು ಹೇಳಿ ಚಪ್ಪಾಳಿ ಗಿಟ್ಟಿಸಿದರು.

ಸಮಾರಂಭದಲ್ಲಿ ಅಖಿಲ ಕರ್ನಾಟಕ ಡಾ.ರಾಜ್‌ಕುಮಾರ್‌ ಅಭಿಮಾನಿಗಳ ಸಂಘದ ಅಧ್ಯಕ್ಷರಾದ ಬಸವರಾಜ, ಕನ್ನಡ ಸಾಹಿತ್ಯ ಪರಿಷತ್ತಿನ ತಾಲೂಕು ಘಟಕದ ಕಾರ್ಯದರ್ಶಿಗಳಾದ ರಾವುತ್‌ರಾವ್ ಬರೂರು, ಕನ್ನಡಾಭಿಮಾನಿಗಳಾದ ಹಿರಿಯರಾದ ಅನ್ವರ್, ಅನಿವೀರಯ್ಯ ಸ್ವಾಮಿ, ಕನ್ನಡ ಸಾಹಿತ್ಯ ಪರಿಷತ್, ಅಖಿಲ ಕರ್ನಾಟಕ ಡಾ.ರಾಜ್‌ಕುಮಾರ್‌ ಅಭಿಮಾನಿಗಳ ಸಂಘ ಸೇರಿದಂತೆ ಇನ್ನೀತರ ಸಂಘಟನೆಗಳ ಪದಾಧಿಕಾರಿಗಳು, ಗಣ್ಯರು, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಲಿಂಗರಾಜ್, ಎ.ಪ್ರಕಾಶ್, ಅಬ್ಬಾಸ್‌ಖಾನ್, ಅಪ್ರೆಂಟಿಸ್ ತರಬೇತುದಾರರಾದ ನವೀನ್, ಹೊರಗುತ್ತಿಗೆ ನೌಕರರಾದ ವೆಂಕಟೇಶ ಹಾಗೂ ಇನ್ನೀತರರು ಇದ್ದರು.

ಕಾರ್ಯಕ್ರಮದಲ್ಲಿ ಎಸ್.ಕೆ.ಪ್ಯಾರಾ ಮೆಡಿಕಲ್ ಕಾಲೇಜು ಸೇರಿದಂತೆ ಬೇರೆ ಬೇರೆ ಶಿಕ್ಷಣ ಸಂಸ್ಥೆಗಳ ವಿದ್ಯಾರ್ಥಿ ಯುವಜನರು ಭಾಗಿಯಾಗಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X