Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಈ ಹೊತ್ತಿನ ಹೊತ್ತಿಗೆ
      • ಜನಚರಿತೆ
      • ವಿಡಂಬನೆ
      • ಜನ ಜನಿತ
      • ರಂಗ ಪ್ರಸಂಗ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಜನಮನ
      • ರಂಗದೊಳಗಿಂದ
      • ಶಂಬೂಕ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ವಾರ್ತಾಭಾರತಿ ವಿಶೇಷ
  3. ಭತ್ತ ನಾಟಿ ಮಾಡುತ್ತಿರುವ ಸಚಿವರ ಪುತ್ರಿಯ...

ಭತ್ತ ನಾಟಿ ಮಾಡುತ್ತಿರುವ ಸಚಿವರ ಪುತ್ರಿಯ ವಿಡಿಯೋ ವೈರಲ್

ಸಾಮಾಜಿಕ ಜಾಲತಾಣಗಳಲ್ಲಿ ಮಿಶ್ರ ಪ್ರತಿಕ್ರಿಯೆ

ವಾರ್ತಾಭಾರತಿವಾರ್ತಾಭಾರತಿ13 July 2023 6:36 PM IST
share
ಭತ್ತ ನಾಟಿ ಮಾಡುತ್ತಿರುವ ಸಚಿವರ ಪುತ್ರಿಯ ವಿಡಿಯೋ ವೈರಲ್

ಎಂ.ಆರ್. ಮಾನ್ವಿ

ಭಟ್ಕಳ: ಉತ್ತರ ಕನ್ನಡ ಜಿಲ್ಲೆಯ ಸಾಮಾಜಿಕ ಜಾಲಾತಾಣಗಳಲ್ಲಿ ಬೀನಾ ವೈದ್ಯ ಎಂಬ ಬಿ.ಕಾಂ. ವಿದ್ಯಾರ್ಥಿಯೊಬ್ಬಳ ಗದ್ದೆಯಲ್ಲಿ ಭತ್ತ ನಾಟಿ ಮಾಡುತ್ತಿರುವ ವಿಡಿಯೋ ವೈರಲ್ ಆಗುತ್ತಿದ್ದು ಅದು ನೆಟ್ಟಿಗರಿಂದ ಪ್ರಶಂಸೆ, ಟೀಕೆ ಮತ್ತು ವಿಮರ್ಶೆಗೆ ಕಾರಣವಾಗಿದೆ.

ರಾಜ್ಯದ ಮೀನುಗಾರಿಕೆ, ಬಂದರು ಮತ್ತು ಒಳನಾಡು ಸಾರಿಗೆ ಹಾಗೂ ಉತ್ತರಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ಮಾಂಕಾಳ್ ಎಸ್.ವೈದ್ಯರ ಪುತ್ರಿ ಗದ್ದೆಯಲ್ಲಿ ಭತ್ತ ನಾಟಿ ಮಾಡುತ್ತಿರುವ ವಿಡಿಯೋ ಸಾಮಾಜಿಕ ಜಾಲಾತಾಣಗಳಲ್ಲಿ ಮಿಶ್ರ ಪ್ರತಿಕ್ರಿಯೆಗೆ ಕಾರಣವಾಗಿದೆ.

ಸಚಿವ ಮಾಂಕಾಳ್ ರ ಏಕೈಕ ಪುತ್ರಿ ಬೀನಾ ವೈದ್ಯ ಗದ್ದೆಗಳಲ್ಲಿ ಸಾಮಾನ್ಯ ಮಹಿಳೆಯರೊಂದಿಗೆ ಸೇರಿ ಭತ್ತ ಕೃಷಿ ಮಾಡುತ್ತಿರುವ ವಿಡಿಯೋ ಸಾಮಾಜಿಕ ಜಾಲಾತಾಣಗಳಲ್ಲಿ ವೈರಲ್ ಆಗುತ್ತಿದ್ದಂತೆ, ಕೆಲವರು ಇದನ್ನು ಪ್ರಶಂಸಿದ್ದು ಮತ್ತೇ ಕೆಲವರು ಇದೊಂದು ಪ್ರಚಾರದ ಹುಚ್ಚು ಎಂದು ಬರೆದುಕೊಂಡಿದ್ದಾರೆ.

ಇತ್ತಿಚೆಗೆ ರಾಹುಲ್ ಗಾಂಧಿಯವರು ಭತ್ತನಾಟಿ ಮಾಡುವುದರ ಮೂಲಕ ದೇಶದ ಗಮನ ಸೆಳೆದಿದ್ದು ಅಂತಹದ್ದೇ ಮಾದರಿಯನ್ನು ಅನುಸರಿಸಿರುವ ಸಚಿವರ ಪುತ್ರಿ ಬೀನಾ ವೈದ್ಯ ಸಾಮಾನ್ಯ ಮಹಿಳೆರೊಂದಿಗೆ ಸೇರಿಕೊಂಡು ಗದ್ದೆ ನಾಟಿ ಮಾಡಿದ್ದಾರೆ.

ಸಚಿವರ ಮಕ್ಕಳೆಂದರೆ ಎ.ಸಿ. ಕಾರು, ಐಷಾರಾಮಿ ಜೀವನ ನಡೆಸೋ ಈಗಿನ ಕಾಲದಲ್ಲಿ ಮಹಿಳೆಯರೊಂದಿಗೆ ಗದ್ದೆಗಿಳಿದು ನಾಟಿ ಮಾಡುವುದರ ಮೂಲಕ ತಂದೆಯಂತೆ ತಾನು ಕೂಡ ಸರಳತೆಗೆ ಸಾಕ್ಷಿಯಾಗಿದ್ದಾಳೆ ಎಂದು ಸಚಿವರ ಪುತ್ರಿ ಬೀನಾ ವೈದ್ಯರನ್ನು ಕುರಿತು ನೆಟ್ಟಿಗರೊಬ್ಬರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಮತ್ತೊಬ್ಬರು ಇವತ್ತಿನ ದಿನದಲ್ಲಿ ಎಷ್ಟೋ ಜನ ಗದ್ದೆ ಕೆಲಸಕ್ಕೆ ನಾಟಿ ಮಾಡಲು ಮತ್ತು ಕೊಯ್ಲು ಮಾಡಲು ಜನ ಸಿಗದೇ ಪರದಾಟ ಮಾಡೋದು ನೋಡಿದರೆ ಈಕೆ ಎಲ್ಲರಿಗೂ ಮಾದರಿಯಾಗಿದ್ದಾಳೆ ಎಂದು ಬರೆದುಕೊಂಡಿದ್ದಾರೆ.

ಇನ್ನು ಕೆಲವರು ಪ್ರತಿಕ್ರಿಯಿಸಿ, ಗದ್ದೆ ನಾಟಿ ಮಾಡಿದ್ರೆ ಮಾದರಿ ಹೇಗಾಗುತ್ತಾಳೆ ಎಂದು ಟೀಕಿಸಿದ್ದಾರೆ.

ಅವರು ರಾಜಕೀಯ ಮಕ್ಕಳಾಗಲಿ, ಉದ್ಯಮಿಯ ಮಕ್ಕಳಾಗಲಿ. ಆದರೆ ರೈತರು ಮಾಡುವ ಕೆಲಸದಲ್ಲಿ ಭಾಗವಹಿಸಿದರಲ್ಲ ಅದು ಮುಖ್ಯ ಎಂದು ಮತ್ತೊಬ್ಬರು ಹೇಳಿದ್ದಾರೆ.

ಸಚಿವರ ಮಗಳು ಎನ್ನುವ ಅಹಂಕಾರವಿಲ್ಲದೆ ಸ್ಥಳೀಯ ಬಡ ಮಹಿಳೆಯರೊಂದಿಗೆ ಗದ್ದೆ ನಾಟಿಗಿಳಿದ ಮೀನುಗಾರಿಕಾ ಸಚಿವ ಸನ್ಮಾನ್ಯ ಮಂಕಾಳ್ ವೈದ್ಯರವರ ಮಗಳು ಕು.ಬೀನಾ ವೈದ್ಯರವರ ಕಾರ್ಯ ಶ್ಲಾಘನೀಯ ಎಂದು ಪ್ರಶಂಸೆಯ ಮಾತುಗಳು ಕೇಳಿ ಬಂದಿವೆ.

ಯಾರು ಈ ಬೀನಾ ವೈದ್ಯ?: ಮೀನುಗಾರಿಕೆ ಹಾಗೂ ಉತ್ತರ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ಮಂಕಾಳ ವೈದ್ಯರ ಪುತ್ರಿ ಬೀನಾ ವೈದ್ಯ ಸದ್ಯ ಬಿ.ಕಾಂ ವಿದ್ಯಾಭ್ಯಾಸ ಮಾಡುತ್ತಿದ್ದು ತನ್ನ ಬಿಡುವಿನ ವೇಳೆಯಲ್ಲಿ ಮನೆಯ ಪಕ್ಕದಲ್ಲಿರುವ ಗದ್ದೆಗೆ ಹೋಗಿ ನಾಟಿ ಮಾಡುವುದರ ಮೂಲಕ ತಂದೆಯಂತೆ ಪುತ್ರಿಯೂ ಕೂಡ ಸರಳತೆಗೆ ಸಾಕ್ಷಿಯಾಗಿದ್ದಾಳೆ. ಈಕೆ ವಿಧಾನಸಭಾ ಚುನಾವಣೆ ವೇಳೆಯಲ್ಲಿ ತನ್ನ ತಂದೆಗೆ ಬೆನ್ನೆಲುಬಾಗಿ ನಿಂತು ಮನೆ ಮನೆಗೆ ತೆರಳಿ ಚುನಾವಣಾ ಪ್ರಚಾರ ಮಾಡುವುದರ ಮೂಲಕ ತಂದೆಯ ಗೆಲುವಿಗೆ ಅಪಾರ ಶ್ರಮಪಟ್ಟಿದ್ದರು.















share
ವಾರ್ತಾಭಾರತಿ
ವಾರ್ತಾಭಾರತಿ
Next Story
X