Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಈ ಹೊತ್ತಿನ ಹೊತ್ತಿಗೆ
      • ಜನಚರಿತೆ
      • ವಿಡಂಬನೆ
      • ಜನ ಜನಿತ
      • ರಂಗ ಪ್ರಸಂಗ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಜನಮನ
      • ರಂಗದೊಳಗಿಂದ
      • ಶಂಬೂಕ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕ್ರೀಡೆ
  4. ದ್ವಿತೀಯ ಟೆಸ್ಟ್: ಆಸ್ಟ್ರೇಲಿಯ ಗೆಲುವಿಗೆ...

ದ್ವಿತೀಯ ಟೆಸ್ಟ್: ಆಸ್ಟ್ರೇಲಿಯ ಗೆಲುವಿಗೆ 279 ರನ್ ಗುರಿ ನೀಡಿದ ನ್ಯೂಝಿಲ್ಯಾಂಡ್

ರಚಿನ್ ರವೀಂದ್ರ, ಲ್ಯಾಥಮ್, ಮಿಚೆಲ್, ವಿಲಿಯಮ್ಸನ್ ಅರ್ಧಶತಕ

ವಾರ್ತಾಭಾರತಿವಾರ್ತಾಭಾರತಿ10 March 2024 9:47 PM IST
share

ಕ್ರೈಸ್ಟ್‌ಚರ್ಚ್: ರಚಿನ್ ರವೀಂದ್ರ(82 ರನ್, 153 ಎಸೆತ), ಟಾಮ್ ಲ್ಯಾಥಮ್(73 ರನ್, 168 ಎಸೆತ), ಡ್ಯಾರಿಲ್ ಮಿಚೆಲ್(58 ರನ್, 98 ಎಸೆತ)ಹಾಗೂ ಕೇನ್ ವಿಲಿಯಮ್ಸನ್(51 ರನ್, 107 ಎಸೆತ) ಅರ್ಧಶತಕಗಳ ಕೊಡುಗೆಯ ನೆರವಿನಿಂದ ಆತಿಥೇಯ ನ್ಯೂಝಿಲ್ಯಾಂಡ್ ಕ್ರಿಕೆಟ್ ತಂಡ ಆಸ್ಟ್ರೇಲಿಯ ತಂಡಕ್ಕೆ 2ನೇ ಟೆಸ್ಟ್ ಪಂದ್ಯದ ಗೆಲುವಿಗೆ 279 ರನ್ ಗುರಿ ನೀಡಿದೆ.

ಗೆಲ್ಲಲು ಸವಾಲಿನ ಮೊತ್ತ ಬೆನ್ನಟ್ಟಿದ ಆಸ್ಟ್ರೇಲಿಯ 3ನೇ ದಿನದಾಟದಂತ್ಯಕ್ಕೆ 24 ಓವರ್‌ಗಳಲ್ಲಿ 4 ವಿಕೆಟ್‌ಗಳ ನಷ್ಟಕ್ಕೆ 77 ರನ್ ಗಳಿಸಿದೆ. ನಾಲ್ಕನೇ ದಿನದಾಟವಾದ ಸೋಮವಾರ 6 ವಿಕೆಟ್ ನೆರವಿನಿಂದ ಇನ್ನೂ 202 ರನ್ ಗಳಿಸಬೇಕಾಗಿದೆ. ಟ್ರಾವಿಸ್ ಹೆಡ್(17 ರನ್) ಹಾಗೂ ಮಿಚೆಲ್ ಮಾರ್ಷ್(27 ರನ್)ಕ್ರೀಸ್ ಕಾಯ್ದುಕೊಂಡಿದ್ದಾರೆ.

3ನೇ ದಿನದಾಟವಾದ ರವಿವಾರ ಕೊನೆಯ 90 ನಿಮಿಷಗಳ ಆಟದಲ್ಲಿ ನಾಟಕೀಯವಾಗಿ ಪ್ರತಿ ಹೋರಾಟ ನೀಡಿದ ನ್ಯೂಝಿಲ್ಯಾಂಡ್ ವೇಗಿಗಳಾದ ಮ್ಯಾಟ್ ಹೆನ್ರಿ (2-37)ಹಾಗೂ ಚೊಚ್ಚಲ ಪಂದ್ಯವನ್ನಾಡುತ್ತಿರುವ ಬೆನ್ ಸೀಯರ್ಸ್ (2-22)ತಲಾ ಎರಡು ವಿಕೆಟ್‌ಗಳನ್ನು ಪಡೆದರು. ಈ ಮೂಲಕ 4ನೇ ದಿನದಾಟವನ್ನು ಕುತೂಹಲ ಕೆರಳಿಸುವಂತೆ ಮಾಡಿದ್ದಾರೆ.

ಈ ಇಬ್ಬರು ಬೌಲರ್‌ಗಳು ಆಸ್ಟ್ರೇಲಿಯದ ಪ್ರಮುಖ ಬ್ಯಾಟರ್‌ಗಳಾದ ಸ್ಟೀವನ್ ಸ್ಮಿತ್(9 ರನ್), ಲಾಬುಶೇನ್(6 ರನ್), ಉಸ್ಮಾನ್ ಖ್ವಾಜಾ(11 ರನ್) ಹಾಗೂ ಕ್ಯಾಮರೂನ್ ಗ್ರೀನ್(5 ರನ್)ವಿಕೆಟ್‌ಗಳನ್ನು ಉರುಳಿಸಿದ್ದಾರೆ.

14.2 ಓವರ್‌ಗಳಲ್ಲಿ 34 ರನ್‌ಗೆ 4 ವಿಕೆಟ್‌ಗಳನ್ನು ಕಳೆದುಕೊಂಡ ಹೊರತಾಗಿಯೂ ಆಸ್ಟ್ರೇಲಿಯ ಮರು ಹೋರಾಟ ನೀಡುವಲ್ಲಿ ಯಶಸ್ವಿಯಾಗಿದೆ. ದಿನದಾಟದಂತ್ಯಕ್ಕೆ 4 ವಿಕೆಟ್‌ಗಳ ನಷ್ಟಕ್ಕೆ 77 ರನ್ ಗಳಿಸಿದೆ. ಮಾರ್ಷ್ ಹಾಗೂ ಟ್ರಾವಿಸ್ ಕ್ರೀಸ್‌ನಲ್ಲಿದ್ದು, ಆಸ್ಟ್ರೇಲಿಯ ಗೆಲುವಿಗೆ ಅಗತ್ಯವಿರುವ ರನ್ ಗಳಿಸುವ ಗುರಿ ಇಟ್ಟುಕೊಂಡಿದೆ.

*ನ್ಯೂಝಿಲ್ಯಾಂಡ್ 372 ರನ್‌ಗೆ ಆಲೌಟ್: ಇದಕ್ಕೂ ಮೊದಲು 2 ವಿಕೆಟ್‌ಗಳ ನಷ್ಟಕ್ಕೆ 134 ರನ್‌ನಿಂದ ಎರಡನೇ ಇನಿಂಗ್ಸ್ ಆರಂಭಿಸಿದ ನ್ಯೂಝಿಲ್ಯಾಂಡ್ 108.2 ಓವರ್‌ಗಳಲ್ಲಿ 372 ರನ್ ಗಳಿಸಿ ಆಲೌಟಾಯಿತು.

ಆಸ್ಟ್ರೇಲಿಯದ ನಾಯಕ ಪ್ಯಾಟ್ ಕಮಿನ್ಸ್ 62 ರನ್‌ಗೆ 4 ವಿಕೆಟ್‌ಗಳನ್ನು ಉರುಳಿಸಿ ಅತ್ಯುತ್ತಮ ಬೌಲಿಂಗ್ ಪ್ರದರ್ಶಿಸಿದರು. ಈಗಾಗಲೇ ಸರಣಿಯಲ್ಲಿ 1-0 ಮುನ್ನಡೆಯಲ್ಲಿರುವ ಆಸ್ಟ್ರೇಲಿಯವು ಟೀ ವಿರಾಮದ ನಂತರ ಕಿವೀಸ್ ತಂಡವನ್ನು 2ನೇ ಇನಿಂಗ್ಸ್‌ನಲ್ಲಿ 372 ರನ್‌ಗೆ ನಿಯಂತ್ರಿಸಿತು.

ನ್ಯೂಝಿಲ್ಯಾಂಡ್‌ನ ಹಲವು ಬ್ಯಾಟರ್‌ಗಳು 2ನೇ ಇನಿಂಗ್ಸ್‌ನಲ್ಲಿ ಉತ್ತಮ ಆರಂಭವನ್ನು ಪಡೆದಿದ್ದರೂ ಅದನ್ನು ದೊಡ್ಡ ಮೊತ್ತವನ್ನಾಗಿ ಪರಿವರ್ತಿಸುವಲ್ಲಿ ವಿಫಲರಾದರು.

ಬೆಳಗ್ಗಿನ ಅವಧಿಯಲ್ಲಿ ಕಮಿನ್ಸ್ ಅವರು ಲ್ಯಾಥಮ್ ವಿಕೆಟನ್ನು ಉರುಳಿಸಿದರು. ಔಟಾಗದೆ 65 ರನ್‌ನಿಂದ ಬ್ಯಾಟಿಂಗ್ ಮುಂದುವರಿಸಿದ್ದ ಲ್ಯಾಥಮ್ 73 ರನ್ ಗಳಿಸಿ ಔಟಾದರು. 153 ಎಸೆತಗಳಲ್ಲಿ 10 ಬೌಂಡರಿಗಳ ಸಹಾಯದಿಂದ 82 ರನ್ ಕೊಡುಗೆ ನೀಡಿದ ರಚಿನ್ ರವೀಂದ್ರ ಕೂಡ ಕಮಿನ್ಸ್‌ಗೆ ವಿಕೆಟ್ ಒಪ್ಪಿಸಿದರು.

ಕೆಳ ಕ್ರಮಾಂಕದ ಬ್ಯಾಟರ್‌ಗಳು ಒಂದಷ್ಟು ಪ್ರತಿರೋಧ ಒಡ್ಡಿದರು. ಸ್ಕಾಟ್ ಕುಗ್ಗೆಲಿನ್(44 ರನ್), ಡ್ಯಾರಿಲ್ ಮಿಚೆಲ್(58 ರನ್) ಹಾಗೂ ಗ್ಲೆನ್ ಫಿಲಿಪ್ಸ್ (26 ರನ್)ಉಪಯುಕ್ತ ಕೊಡುಗೆ ನೀಡಿದರು.

ಕಮಿನ್ಸ್ ನೇತೃತ್ವದ ಆಸ್ಟ್ರೇಲಿಯದ ಬೌಲಿಂಗ್ ದಾಳಿಗೆ ನಾಥನ್ ಲಿಯೊನ್(3-49) ಹಾಗೂ ಕ್ಯಾಮರೂನ್ ಗ್ರೀನ್(1-48) ಸಾಥ್ ನೀಡಿದರು.

ದ್ವಿತೀಯ ಟೆಸ್ಟ್ ಪಂದ್ಯವು ರೋಚಕವಾಗಿ ಕೊನೆಗೊಳ್ಳಲು ವೇದಿಕೆ ಸಿದ್ದವಾಗಿದ್ದು, ಎರಡೂ ತಂಡಗಳು ಗೆಲುವು ತನ್ನದಾಗಿಸಿಕೊಳ್ಳಲು ಸಜ್ಜಾಗಿವೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X