Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಈ ಹೊತ್ತಿನ ಹೊತ್ತಿಗೆ
      • ಜನಚರಿತೆ
      • ವಿಡಂಬನೆ
      • ಜನ ಜನಿತ
      • ರಂಗ ಪ್ರಸಂಗ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಜನಮನ
      • ರಂಗದೊಳಗಿಂದ
      • ಶಂಬೂಕ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕ್ರೀಡೆ
  4. ಸತತ ಆರು ಜಯದ ಬಳಿಕವೂ ಭಾರತ ಸೆಮೀಸ್...

ಸತತ ಆರು ಜಯದ ಬಳಿಕವೂ ಭಾರತ ಸೆಮೀಸ್ ಪ್ರವೇಶಿಸಿಲ್ಲ ಏಕೆ?

ವಾರ್ತಾಭಾರತಿವಾರ್ತಾಭಾರತಿ1 Nov 2023 10:29 AM IST
share
ಸತತ ಆರು ಜಯದ ಬಳಿಕವೂ ಭಾರತ ಸೆಮೀಸ್ ಪ್ರವೇಶಿಸಿಲ್ಲ ಏಕೆ?

ಲಕ್ನೋ: ವಿಶ್ವಕಪ್ ಪಂದ್ಯಾವಳಿಯಲ್ಲಿ ತಮ್ಮ ಆರನೇ ಪಂದ್ಯವನ್ನೂ ಗೆದ್ದ ಭಾರತಕ್ಕೆ ಇನ್ನೂ ಸೆಮಿಫೈನಲ್ ಸ್ಥಾನ ಖಾತರಿಯಾಗಿಲ್ಲ. ಇಂಗ್ಲೆಂಡ್ ಸವಾಲನ್ನು 100 ರನ್ ಗಳ ಭರ್ಜರಿ ಅಂತರದಿಂದ ಬದಿಗೊತ್ತಿದರೂ, ಸೆಮಿಫೈನಲ್ ತಲುಪಿಲ್ಲ. ಇದಕ್ಕೂ ಮುನ್ನ ಭಾರತ ನ್ಯೂಝಿಲೆಂಡ್, ಬಾಂಗ್ಲಾದೇಶ, ಪಾಕಿಸ್ತಾನ, ಅಫ್ಘಾನಿಸ್ತಾನಮತ್ತು ಆಸ್ಟ್ರೇಲಿಯಾ ವಿರುದ್ಧ ಜಯ ಸಾಧಿಸಿತ್ತು.

ಅತಿಥೇಯ ಭಾರತ ತಂಡ ಇಡೀ ಟೂರ್ನಿಯಲ್ಲಿ ಇದುವರೆಗೆ ಅಜೇಯವಾಗಿ ಉಳಿದ ಏಕೈಕ ತಂಡ ಎನಿಸಿದೆ. ಅಂಕಪಟ್ಟಿಯಲ್ಲಿ 12 ಅಂಕಗಳೊಂದಿಗೆ ಅಗ್ರಸ್ಥಾನಿಯಾಗಿದ್ದು, +1.405 ರನ್ ರೇಟ್ ಹೊಂದಿದ್ದು, ಇದು ಟೂರ್ನಿಯಲ್ಲಿ ಯಾವುದೇ ತಂಡ ಹೊಂದಿರದ ಎರಡನೇ ಅತ್ಯುತ್ತಮ ರನ್ರ ಟ್ ಆಗಿದೆ.

ರೋಹಿತ್ ಪಡೆ ಸೆಮಿಫೈನಲ್ ಪ್ರವೇಶಿಸುವ ತಂಡದಲ್ಲಿ ಫೇವರೆಟ್ ಆಗಿದ್ದರೂ, ಲೆಕ್ಕಾಚಾರದ ಪ್ರಕಾರ ಭಾರತ ತಂಡ ಇನ್ನೂ ಮುಂದಿನ ಹಂತಕ್ಕೆ ತೇರ್ಗಡೆಯಾಗಲ್ಲ. ಗುಂಪು ಹಂತದ ಪಂದ್ಯಗಳಲ್ಲಿ ಭಾರತಕ್ಕೆ ತೀರಾ ವ್ಯತಿರಿಕ್ತ ಫಲಿತಾಂಶಗಳು ಬಂದರೆ ಇನ್ನೂ ಅಂತಿಮ ನಾಲ್ಕರ ಘಟ್ಟದಿಂದ ಹೊರಬೀಳುವ ಸಾಧ್ಯತೆಗಳು ಇವೆ.

ಭಾರತ ಸದ್ಯಕ್ಕೆ 12 ಅಂಕಗಳನ್ನು ಹೊಂದಿದ್ದು, ದಕ್ಷಿಣ ಆಫ್ರಿಕಾ, ಆಸ್ಟ್ರೇಲಿಯಾ ಮತ್ತು ನ್ಯೂಜಿಲೆಂಡ್ ಅಗ್ರ 4ರ ಪಟ್ಟಿಯಲ್ಲಿ ಕಾಣಿಸಿಕೊಳ್ಳುವ ಸಾಧ್ಯತೆ ಇದೆ. ಶ್ರೀಲಂಕಾ ಮತ್ತು ಅಫ್ಘಾನಿಸ್ತಾನ ಸೆಣೆಸಾಟದಲ್ಲಿ ಗೆಲ್ಲುವ ತಂಡ ಕೂಡಾ 12 ಅಂಕ ಪಡೆಯುವ ಅವಕಾಶ ಇದೆ.

ದಕ್ಷಿಣ ಆಫ್ರಿಕಾ ಮತ್ತು ಶ್ರೀಲಂಕಾ ಸೇರಿದಂತೆ ಭಾರತ ಆಡಲಿರುವ ಮುಂದಿನ ಮೂರು ಪಂದ್ಯಗಳನ್ನು ಸೋತಲ್ಲಿ 12 ಅಂಕಗಳಿಗೆ ತೃಪ್ತಿಪಟ್ಟುಕೊಳ್ಳಬೇಕಾಗುತ್ತದೆ. ಆಸ್ಟ್ರೇಲಿಯಾ ಹಾಗೂ ನ್ಯೂಜಿಲೆಂಡ್ ಮುಂದಿನ ಎರಡೂ ಪಂದ್ಯಗಳನ್ನು ಗೆಲ್ಲಬೇಕು. ಅಘ್ಫಾನಿಸ್ತಾನ ಮತ್ತು ಶ್ರೀಲಂಕಾ ನಡುವಿನ ವಿಜೇತರ ಜತೆ ಮಾತ್ರ ಸೋಲಬೇಕು.

ಮುಂದಿನ ಮೂರು ಪಂದ್ಯಗಳಲ್ಲಿ ಕನಿಷ್ಠ ಒಂದು ಪಂದ್ಯವನ್ನು ಗೆಲ್ಲಬೇಕಾದ ಅನಿವಾರ್ಯತೆ ದಕ್ಷಿಣ ಆಫ್ರಿಕಾಗೆ ಇದ್ದು, ಭಾರತ ವಿರುದ್ಧದ ಪಂದ್ಯ ಗೆಲ್ಲಬೇಕು. ಆಗ ಐದು ತಂಡಗಳು 12 ಅಂಕಗಳನ್ನು ಪಡೆದಂತಾಗುತ್ತದೆ. ಈ ಕಾರಣದಿಂದ ಭಾರತ ಮೂರು ಪಂದ್ಯಗಳನ್ನು ಅಗಾಧ ಅಂತರದಿಂದ ಸೋತಲ್ಲಿ, ರೋಹಿತ್ ಪಡೆ ಸೆಮಿಫೈನಲ್ ಅವಕಾಶದಿಂದ ವಂಚಿತವಾಗಲಿದೆ.

ಆದರೆ ರೋಹಿತ್ ಶರ್ಮಾ ನೇತೃತ್ವದ ತಂಡದ ಫಾರ್ಮ್ ಹಿನ್ನೆಲೆಯಲ್ಲಿ ಈ ಸಾಧ್ಯತೆ ವಿರಳಾತಿವಿರಳ. ಗುರುವಾರ ಭಾರತ ತಂಡ ಶ್ರೀಲಂಕಾ ವಿರುದ್ಧ ಸೆಣೆಸಲಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X