Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಈ ಹೊತ್ತಿನ ಹೊತ್ತಿಗೆ
      • ಜನಚರಿತೆ
      • ವಿಡಂಬನೆ
      • ಜನ ಜನಿತ
      • ರಂಗ ಪ್ರಸಂಗ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಜನಮನ
      • ರಂಗದೊಳಗಿಂದ
      • ಶಂಬೂಕ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ಅಲ್ಪಸಂಖ್ಯಾತ ನಿರ್ದೇಶನಾಲಯದ ಕೋಚಿಂಗ್...

ಅಲ್ಪಸಂಖ್ಯಾತ ನಿರ್ದೇಶನಾಲಯದ ಕೋಚಿಂಗ್ ಸೆಂಟರ್ ತರಬೇತಿ ಪಡೆದ 16 ಮಂದಿಗೆ ಸರಕಾರಿ ಹುದ್ದೆ: ಝಮೀರ್ ಅಹ್ಮದ್ ಖಾನ್

ವಾರ್ತಾಭಾರತಿವಾರ್ತಾಭಾರತಿ10 Jun 2024 11:56 PM IST
share
ಅಲ್ಪಸಂಖ್ಯಾತ ನಿರ್ದೇಶನಾಲಯದ ಕೋಚಿಂಗ್ ಸೆಂಟರ್ ತರಬೇತಿ ಪಡೆದ 16 ಮಂದಿಗೆ ಸರಕಾರಿ ಹುದ್ದೆ: ಝಮೀರ್ ಅಹ್ಮದ್ ಖಾನ್

ಬೆಂಗಳೂರು: ಅಲ್ಪಸಂಖ್ಯಾತರ ನಿರ್ದೇಶನಾಲಯ ವತಿಯಿಂದ ಹಜ್ ಭವನದಲ್ಲಿ ಆರಂಭಿಸಿದ ಐಎಎಸ್, ಕೆಎಎಸ್ ತರಬೇತಿ ಕೇಂದ್ರದಲ್ಲಿ ತರಬೇತಿ ಪಡೆಯುತ್ತಿರುವ ಅಭ್ಯರ್ಥಿಗಳಲ್ಲಿ 16 ಮಂದಿ ಸರಕಾರಿ ಹುದ್ದೆ ಪಡೆದಿದ್ದಾರೆ ಎಂದು ಅಲ್ಪಸಂಖ್ಯಾತರ ಕಲ್ಯಾಣ ಹಾಗೂ ವಕ್ಫ್ ಸಚಿವ ಝಮೀರ್ ಅಹ್ಮದ್ ಖಾನ್ ಸಂತಸ ವ್ಯಕ್ತಪಡಿಸಿದ್ದಾರೆ.

ಸೋಮವಾರ ನಗರದಲ್ಲಿರುವ ಅಲ್ಪಸಂಖ್ಯಾತರ ನಿರ್ದೇಶನಾಲಯದ ಸಭಾಂಗಣದಲ್ಲಿ ಇಲಾಖೆಯ ಪ್ರಗತಿ ಪರಿಶೀಲನೆ ನಡೆಸಿದ ಅವರು, ಐಎಎಸ್, ಕೆಎಎಸ್ ನಾಗರಿಕ ಸೇವಾ ಪರೀಕ್ಷೆ ಕೈಗೊಳ್ಳಲು ತರಬೇತಿ ಪಡೆಯುತ್ತಿರುವ ಅಭ್ಯರ್ಥಿಗಳು, ಅದರ ನಡುವೆಯೆ ಬೇರೆ ಸ್ಪರ್ಧಾತ್ಮಕ ಪರೀಕ್ಷೆ ಬರೆದು ಪೊಲೀಸ್ ಸೇರಿದಂತೆ ವಿವಿಧ ಇಲಾಖೆಗಳ ಸರಕಾರಿ ಹುದ್ದೆ ಪಡೆದಿದ್ದಾರೆ ಎಂದರು.

ಉನ್ನತ ಶಿಕ್ಷಣ ಪಡೆದ ಸಮುದಾಯದ ಅಭ್ಯರ್ಥಿಗಳ ಉಜ್ವಲ ಭವಿಷ್ಯಕ್ಕೆ ಆರಂಭಿಸಿದ ತರಬೇತಿ ಕೇಂದ್ರದಲ್ಲಿ ಅತ್ಯಲ್ಪ ಅವಧಿಯಲ್ಲಿ 16 ಮಂದಿ ಸರಕಾರಿ ಉದ್ಯೋಗ ಪಡೆದಿದ್ದಾರೆ. ಇದೊಂದು ಒಳ್ಳೆಯ ಬೆಳವಣಿಗೆ. ಕನಿಷ್ಠ 50 ಮಂದಿ ಐಎಎಸ್ ಪರೀಕ್ಷೆ ಪಾಸ್ ಮಾಡುವ ಮಟ್ಟಕ್ಕೆ ಗುಣಮಟ್ಟದ ತರಬೇತಿ ನೀಡುವ ಗುರಿ ಹೊಂದಿದ್ದೇವೆ ಎಂದು ಅವರು ತಿಳಿಸಿದರು.

ಸಮುದಾಯದ ವಿದ್ಯಾರ್ಥಿಗಳು ಶಿಕ್ಷಣ ಪಡೆಯುವ ನಿಟ್ಟಿನಲ್ಲಿ 2023-24 ಸಾಲಿನಲ್ಲಿ ಐದು ಲಕ್ಷ ವಿದ್ಯಾರ್ಥಿಗಳಿಗೆ 161 ಕೋಟಿ ರೂ. ವಿದ್ಯಾರ್ಥಿ ವೇತನ ನೀಡಲಾಗಿದೆ. ಇಲಾಖೆಗೆ ನಿಗದಿಯಾಗಿದ್ದ 1535 ಕೋಟಿ ರೂ. ಅನುದಾನದ ಪೈಕಿ 1525 ಕೋಟಿ ರೂ. ಅಭಿವೃದ್ಧಿ ಯೋಜನೆಗಳಿಗೆ ವೆಚ್ಚವಾಗುವ ಮೂಲಕ ಶೇ. 99.75 ರಷ್ಟು ಪ್ರಗತಿ ಸಾಧಿಸಲಾಗಿದೆ ಎಂದು ಝಮೀರ್ ಅಹ್ಮದ್ ಖಾನ್ ಹೇಳಿದರು.

ಅಲ್ಪಸಂಖ್ಯಾತರ ನಿರ್ದೇನಾಲಯ ವ್ಯಾಪ್ತಿಯ ವಸತಿ ಕಾಲೇಜು, ಎಪಿಜೆ ಅಬ್ದುಲ್ ಕಲಾಂ ವಸತಿ ಶಾಲೆಗಳಲ್ಲಿ ಉತ್ತಮ ಫಲಿತಾಂಶ ಬಂದಿದೆ. ವಸತಿ ಕಾಲೇಜಿನ ಪಿಯುಸಿ ಪರೀಕ್ಷೆಯಲ್ಲಿ 1908 ವಿದ್ಯಾರ್ಥಿಗಳ ಪೈಕಿ 1869 ವಿದ್ಯಾರ್ಥಿಗಳು ತೇರ್ಗಡೆಯಾಗಿ 686 ವಿದ್ಯಾರ್ಥಿಗಳು ಅಗ್ರ ಶ್ರೇಣಿ, 1118 ವಿದ್ಯಾರ್ಥಿಗಳು ಪ್ರಥಮ ದರ್ಜೆ ಯಲ್ಲಿ ಉತ್ತೀರ್ಣ ಮೂಲಕ ಶೇ.98 ರಷ್ಟು ಫಲಿತಾಂಶ ಬಂದಿದೆ ಎಂದು ಅವರು ತಿಳಿಸಿದರು.

ಇದೇ ಮೊದಲ ಬಾರಿಗೆ ಎಪಿಜೆ ಅಬ್ದುಲ್ ಕಲಾಂ ವಸತಿ ಶಾಲೆಯಲ್ಲಿ ಆರಂಭಿಸಿದ ಸಿಬಿಎಸ್‍ಇ ಪಠ್ಯ ಕ್ರಮದಲ್ಲಿ 1228 ವಿದ್ಯಾರ್ಥಿಗಳ ಪೈಕಿ 1183 ವಿದ್ಯಾರ್ಥಿಗಳು ತೇರ್ಗಡೆ ಯಾಗಿ 20 ವಿದ್ಯಾರ್ಥಿಗಳು ಅಗ್ರ ಶ್ರೇಣಿ, 369 ವಿದ್ಯಾರ್ಥಿಗಳು ಪ್ರಥಮ ದರ್ಜೆ ಮೂಲಕ ಶೇ.97 ರಷ್ಟು, ರಾಜ್ಯ ಪಠ್ಯ ಕ್ರಮದ ವಸತಿ ಶಾಲೆಗಳಲ್ಲಿ ಶೇ. 91.20 ರಷ್ಟು ಫಲಿತಾಂಶ ಬಂದಿರುವ ಬಗ್ಗೆ ಅಧಿಕಾರಿಗಳು ವಿವರಿಸಿದರು. ಇದಕ್ಕೆ ಸಚಿವರು ಮೆಚ್ಚುಗೆ ವ್ಯಕ್ತಪಡಿಸಿದರು.

ಪ್ರಗತಿ ಪರಿಶೀಲನಾ ಸಭೆಯಲ್ಲಿ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಕಾರ್ಯದರ್ಶಿ ಮನೋಜ್ ಜೈನ್, ನಿರ್ದೇಶಕ ಜಿಲಾನಿ ಮೊಕಾಶಿ ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X