Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಈ ಹೊತ್ತಿನ ಹೊತ್ತಿಗೆ
      • ಜನಚರಿತೆ
      • ವಿಡಂಬನೆ
      • ಜನ ಜನಿತ
      • ರಂಗ ಪ್ರಸಂಗ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಜನಮನ
      • ರಂಗದೊಳಗಿಂದ
      • ಶಂಬೂಕ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ರಾಜ್ಯದಲ್ಲಿ 2032ರ ಹೊತ್ತಿಗೆ ಒಂದು...

ರಾಜ್ಯದಲ್ಲಿ 2032ರ ಹೊತ್ತಿಗೆ ಒಂದು ಟ್ರಿಲಿಯನ್ ಡಾಲರ್ ಜಿಡಿಪಿ ಸಾಧನೆ : ಸಿಎಂ ಸಿದ್ದರಾಮಯ್ಯ

ವಾರ್ತಾಭಾರತಿವಾರ್ತಾಭಾರತಿ19 Jun 2024 10:00 PM IST
share
ರಾಜ್ಯದಲ್ಲಿ 2032ರ ಹೊತ್ತಿಗೆ ಒಂದು ಟ್ರಿಲಿಯನ್ ಡಾಲರ್ ಜಿಡಿಪಿ ಸಾಧನೆ : ಸಿಎಂ ಸಿದ್ದರಾಮಯ್ಯ

ಬೆಂಗಳೂರು : ರಾಜ್ಯದಲ್ಲಿ 2032ರ ಹೊತ್ತಿಗೆ ಒಂದು ಟ್ರಿಲಿಯನ್ ಡಾಲರ್ ಜಿಡಿಪಿ ಸಾಧಿಸಲು ವಾರ್ಷಿಕ ಶೇ.15-16ರಷ್ಟು ಕೈಗಾರಿಕಾ ಬೆಳವಣಿಗೆ ಸಾಧಿಸುವ ಗುರಿ ನಮ್ಮದಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.

ಬುಧವಾರ ನಗರದ ಖಾಸಗಿ ಹೊಟೇಲ್‍ನಲ್ಲಿ ಮುಂಬರುವ ಫೆಬ್ರವರಿ 12, 13 ಮತ್ತು 14ರಂದು ಬೆಂಗಳೂರಿನಲ್ಲಿ ನಡೆಯಲಿರುವ ಪ್ರತಿಷ್ಠಿತ ‘ಜಾಗತಿಕ ಹೂಡಿಕೆದಾರರ ಸಮಾವೇಶ'ದ ಭಾಗವಾಗಿ ನಡೆದ ಕರ್ಟನ್ ರೈಸರ್(ಅನಾವರಣ) ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ರಾಜ್ಯ ಸರಕಾರವು ಗ್ರಾಮೀಣಾಭಿವೃದ್ಧಿ ಮತ್ತು ವಿಶೇಷವಾಗಿ ಕಲ್ಯಾಣ ಕರ್ನಾಟಕ ಭಾಗ ಅಭಿವೃದ್ಧಿ ಸಾಧಿಸಲು ಪಣ ತೊಟ್ಟಿದೆ. ಇದಕ್ಕಾಗಿ ರಾಜ್ಯದ ಎಲ್ಲಾ ಭಾಗಗಳಲ್ಲೂ ಕೈಗಾರಿಕಾ ಕ್ಲಸ್ಟರ್ ಗಳನ್ನು ಬೆಳೆಸಲು ತೀರ್ಮಾನಿಸಲಾಗಿದೆ. ಮಹಾನಗರಗಳ ಆಚೆಗೂ ಆರ್ಥಿಕ ಪ್ರಗತಿಯನ್ನು ಕೊಂಡೊಯ್ಯಬೇಕು ಎನ್ನುವುದು ನಮ್ಮ ಸಂಕಲ್ಪವಾಗಿದೆ ಎಂದು ಅವರು ನುಡಿದರು.

ಸ್ಥಳೀಯ ಪ್ರತಿಭೆ ಮತ್ತು ಸಂಪನ್ಮೂಲಗಳನ್ನು ಬಳಸಿಕೊಂಡು, ವಿಶೇಷ ಪರಿಣತ ಉದ್ದಿಮೆಗಳನ್ನು ಬೆಳೆಸಲು ಸರಕಾರ ಬದ್ಧವಾಗಿದೆ. ಇದಕ್ಕಾಗಿ ಎಲೆಕ್ಟ್ರಾನಿಕ್ಸ್, ಆಟೋ ಮತ್ತು ಇ.ವಿ., ಫಾರ್ಮಸುಟಿಕಲ್ಸ್, ಜವಳಿ ಮುಂತಾದ ವಲಯಗಳಿಗೆ ಆದ್ಯತೆ ನೀಡಲಾಗುತ್ತಿದೆ. ಹೆಚ್ಚುಹೆಚ್ಚು ಹೂಡಿಕೆ ಆಕರ್ಷಣೆ ಮತ್ತು ಉದ್ಯೋಗಸೃಷ್ಟಿ ಎರಡಕ್ಕೂ ನಾವು ಒತ್ತು ಕೊಡುತ್ತಿದ್ದೇವೆ ಎಂದು ಮುಖ್ಯಮಂತ್ರಿ ವಿವರಿಸಿದರು.

ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ್ ಮಾತನಾಡಿ, ಜಾಗತಿಕ ಹೂಡಿಕೆದಾರರ ಸಮಾವೇಶದಲ್ಲಿ ಇದೇ ಮೊದಲ ಬಾರಿಗೆ ಸಣ್ಣ ಮತ್ತು ಸೂಕ್ಷ್ಮ ಕೈಗಾರಿಕೆಗಳಿಗೂ ಆದ್ಯ ಗಮನ ಹರಿಸಲಾಗುತ್ತಿದೆ. ಜೊತೆಗೆ ಕಳೆದ ಬಾರಿಯಂತೆ ಈ ಸಲವೂ ನವೋದ್ಯಮಗಳಿಗೆ ಬಂಡವಾಳ ಸೆಳೆಯಲು ವಿಶೇಷ ಉಪಕ್ರಮ ಅಳವಡಿಸಿಕೊಳ್ಳುತ್ತಿದ್ದೇವೆ ಎಂದು ಹೇಳಿದರು.

ಇದರ ಭಾಗವಾಗಿ ಎಸ್‍ಎಂಇ ಕನೆಕ್ಟ್- 25' ಮತ್ತು ‘ವೆಂಚರೈಸ್-24' ಪರಿಕಲ್ಪನೆಗಳನ್ನು ರೂಪಿಸಲಾಗಿದೆ. ಜಾಗತಿಕ ಹೂಡಿಕೆದಾರರ ಸಮಾವೇಶದ ಭಾಗವಾಗಿ ರಾಜ್ಯದ ತಯಾರಿಕಾ ವಲಯದ ಕಾರ್ಯ ಪರಿಸರವನ್ನು ಜಾಗತಿಕ ಮಟ್ಟದ ಉದ್ದಿಮೆಗಳಿಗೆ ತೋರಿಸಲು ನಾಲ್ಕು ರೋಡ್ ಶೋ ನಡೆಸಲಾಗುವುದು ಎಂದು ಅವರು ತಿಳಿಸಿದರು.

ಅಲ್ಲದೆ, ಗಣ್ಯ ಉದ್ಯಮಿಗಳನ್ನು ಖುದ್ದಾಗಿ ಆಹ್ವಾನಿಸಲು ಜೂ.24ರಿಂದ 28ರವರೆಗೆ ಜಪಾನಿನ ಟೋಕಿಯೋ, ನಗೋಯ ಮತ್ತು ಒಸಾಕ ನಗರಗಳಿಗೆ ಹಾಗೂ ಜುಲೈ ಮೊದಲ ವಾರದಲ್ಲಿ ದಕ್ಷಿಣ ಕೊರಿಯಾದ ಸಿಯೋಲ್, ಇಂಚೆಯಾನ್ ಮತ್ತು ಜಿಯಾಂಗಿ ನಗರಗಳಿಗೆ ಭೇಟಿ ಕೊಡಲಾಗುವುದು ಎಂದು ಎಂ.ಬಿ.ಪಾಟೀಲ್ ಮಾಹಿತಿ ನೀಡಿದರು.

‘ಬೆಳವಣಿಗೆಯ ಹೊಸಪರಿಕಲ್ಪನೆ’ ಧ್ಯೇಯದಡಿ ನಡೆಯಲಿರುವ ಸಮಾವೇಶದ ಮೂಲಕ ತಯಾರಿಕಾ ವಲಯ, ಮೂಲಸೌಕರ್ಯ ಅಭಿವೃದ್ಧಿ, ಐಟಿ, ಇಂಧನ, ಶಿಕ್ಷಣ ಮತ್ತು ಪ್ರವಾಸೋದ್ಯಮ ಕ್ಷೇತ್ರಗಳಿಗೆ ಹೆಚ್ಚಿನ ಬಂಡವಾಳ ಬರುವಂತೆ ನೋಡಿಕೊಳ್ಳಲಾಗುವುದು ಎಂದು ಅವರು ಹೇಳಿದರು.

ಸಣ್ಣ ಮತ್ತು ಮಧ್ಯಮ ಕೈಗಾರಿಕಾ ಸಚಿವ ಶರಣಬಸಪ್ಪ ದರ್ಶನಾಪುರ ಮಾತನಾಡಿದರು. ಕಾರ್ಯಕ್ರಮದಲ್ಲಿ ಉನ್ನತ ಶಿಕ್ಷಣ ಸಚಿವ ಡಾ.ಎಂ.ಸಿ.ಸುಧಾಕರ್, ಐಟಿ-ಬಿಟಿ ಸಚಿವ ಪ್ರಿಯಾಂಕ್ ಖರ್ಗೆ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿನೇಶ್ ಗುಂಡೂರಾವ್, ವೈದ್ಯಕೀಯ ಮತ್ತು ಕೌಶಲ ಅಭಿವೃದ್ಧಿ ಸಚಿವ ಡಾ.ಶರಣಪ್ರಕಾಶ್ ಪಾಟೀಲ, ಜವಳಿ ಮತ್ತು ಎಪಿಎಂಸಿ ಖಾತೆ ಸಚಿವ ಶಿವಾನಂದ ಪಾಟೀಲ್, ಮುಖ್ಯಮಂತ್ರಿಯ ರಾಜಕೀಯ ಕಾರ್ಯದರ್ಶಿ ಗೋವಿಂದರಾಜು ಹಾಜರಿದ್ದರು.

ಕೈಗಾರಿಕಾ ಇಲಾಖೆಯ ಪ್ರಧಾನ ಕಾರ್ಯದರ್ಶಿ ಸೆಲ್ವಕುಮಾರ್ ಸ್ವಾಗತಿಸಿದರು. ಕೈಗಾರಿಕಾ ಇಲಾಖೆ ಆಯುಕ್ತೆ ಗುಂಜನ್ ಕೃಷ್ಣ ಅವರು ಹೂಡಿಕೆದಾರರ ಸಮಾವೇಶ ಹಾಗೂ ಉದ್ಯಮ ಬೆಳವಣಿಗೆ ಬಗ್ಗೆ ಪ್ರಾತ್ಯಕ್ಷಿಕೆ ಮೂಲಕ ವಿವರಿಸಿದರು. ಹಲವು ಗಣ್ಯ ಉದ್ಯಮಿಗಳು ಉಪಸ್ಥಿತರಿದ್ದರು. ಸಣ್ಣ ಕೈಗಾರಿಕಾ ಇಲಾಖೆ ಕಾರ್ಯದರ್ಶಿ ಡಾ.ರಿಚರ್ಡ್ ವಿನ್ಸೆಂಟ್ ವಂದಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X