Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಈ ಹೊತ್ತಿನ ಹೊತ್ತಿಗೆ
      • ಜನಚರಿತೆ
      • ವಿಡಂಬನೆ
      • ಜನ ಜನಿತ
      • ರಂಗ ಪ್ರಸಂಗ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಜನಮನ
      • ರಂಗದೊಳಗಿಂದ
      • ಶಂಬೂಕ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ಪಠ್ಯದಲ್ಲಿ ರಾಮಾಯಣ, ಮಹಾಭಾರತ...

ಪಠ್ಯದಲ್ಲಿ ರಾಮಾಯಣ, ಮಹಾಭಾರತ ಸೇರಿಸುವುದಕ್ಕೆ ಎಐಡಿಎಸ್‍ಓ ಖಂಡನೆ

ವಾರ್ತಾಭಾರತಿವಾರ್ತಾಭಾರತಿ26 Nov 2023 8:19 PM IST
share
ಪಠ್ಯದಲ್ಲಿ ರಾಮಾಯಣ, ಮಹಾಭಾರತ ಸೇರಿಸುವುದಕ್ಕೆ ಎಐಡಿಎಸ್‍ಓ ಖಂಡನೆ

ಬೆಂಗಳೂರು: ರಾಮಾಯಣ ಮತ್ತು ಮಹಾಭಾರತವನ್ನು ಇತಿಹಾಸ ಪಠ್ಯಕ್ರಮದಲ್ಲಿ ಸೇರಿಸಲು ಎನ್‍ಸಿಇಆರ್ ಟಿ ಉನ್ನತ ಮಟ್ಟದ ಸಮಿತಿಯ ಶಿಫಾರಸು ದೇಶದಲ್ಲಿ ಇತಿಹಾಸದ ವೈಜ್ಞಾನಿಕ ಅಧ್ಯಯನವನ್ನು ವಿರೂಪಗೊಳಿಸುವ ನಿರಂತರ ಪ್ರಯತ್ನದ ಭಾಗವಾಗಿದೆ ಎಂದು ಆಲ್ ಇಂಡಿಯಾ ಡೆಮೋಕ್ರಾಟಿಕ್ ಸ್ಟೂಡೆಂಟ್ಸ್ ಆರ್ಗನೈಜೇಷನ್(ಎಐಡಿಎಸ್‍ಓ) ಖಂಡಿಸಿದೆ.

ರವಿವಾರ ರಾಜ್ಯ ಕಾರ್ಯದರ್ಶಿ ಅಜಯ್ ಕಾಮತ್ ಪ್ರಕಟನೆ ಹೊರಡಿಸಿದ್ದು, ರಾಮಾಯಣ ಮತ್ತು ಮಹಾಭಾರತಗಳು ಹಿಂದೂ ಧರ್ಮದ ಭಾಗವಾಗಿ ಪರಿಗಣಿಸಲ್ಪಟ್ಟ ಮಹಾಕಾವ್ಯಗಳಾಗಿವೆ. ಸಮಿತಿಯು ಈ ಪಠ್ಯಗಳನ್ನು 'ಭಾರತದ ಶಾಸ್ತ್ರೀಯ ಯುಗ' ಎಂಬ ಹೊಸ ವರ್ಗೀಕರಣದ ಅಡಿಯಲ್ಲಿ ಸೇರಿಸಲು ಶಿಫಾರಸು ಮಾಡಿದೆ ಮತ್ತು ಸಮಿತಿಯು ಇತಿಹಾಸದ ವರ್ಗೀಕರಣವನ್ನು ಶಾಸ್ತ್ರೀಯ ಯುಗ, ಮಧ್ಯಕಾಲೀನ ಯುಗ, ಬ್ರಿಟಿಷ್‌ ಯುಗ ಮತ್ತು ಆಧುನಿಕ ಭಾರತ ನಾಲ್ಕು ಯುಗಗಳಾಗಿ ವಿಂಗಡಿಸಿದೆ ಎಂದಿದ್ದಾರೆ.

ಇಲ್ಲಿ ಗಮನಾರ್ಹ ಅಂಶವೆಂದರೆ ಇತಿಹಾಸಕಾರರು ಭಾರತದ ಇತಿಹಾಸವನ್ನು ವೈಜ್ಞಾನಿಕ ಅಧ್ಯಯನ ಮತ್ತು ಪುರಾವೆಗಳ ಆಧಾರದ ಮೇಲೆ ಪ್ರಾಚೀನ ಭಾರತ, ಮಧ್ಯಕಾಲೀನ ಭಾರತ ಮತ್ತು ಆಧುನಿಕ ಭಾರತವನ್ನಾಗಿ ವಿಂಗಡಿಸಿದ್ದಾರೆ. ಇದನ್ನು ಶಾಲಾ ಶಿಕ್ಷಣದಿಂದ ಉನ್ನತ ಅಧ್ಯಯನದವರೆಗೆ ಕಲಿಸಲಾಗುತ್ತದೆ. ಆದರೆ ವಿಪರ್ಯಾಸವೆಂದರೆ, ಇಂತಹ ಬೃಹತ್ ವೈಜ್ಞಾನಿಕ ಪುರಾವೆಗಳ ಹೊರತಾಗಿಯೂ, ಕೇಂದ್ರ ಸರಕಾರವು ಎನ್‍ಸಿಇಆರ್ ಟಿ ಮೂಲಕ ಇತಿಹಾಸವನ್ನು ತಿಳಿದುಕೊಳ್ಳುವ ಮತ್ತು ಅಧ್ಯಯನ ಮಾಡುವ ವೈಜ್ಞಾನಿಕ ಪ್ರಕ್ರಿಯೆಯನ್ನು ನಾಶಪಡಿಸುತ್ತಿದೆ ಎಂದು ಹೇಳಿದ್ದಾರೆ.

ರಾಮಾಯಣ ಮತ್ತು ಮಹಾಭಾರತಗಳು ಆ ಕಾಲದ ಸಾಹಿತ್ಯಿಕ ಮೇರುಕೃತಿಗಳಾಗಿರುವ ಮಹಾಕಾವ್ಯಗಳು. ಅವು ಆ ಕಾಲದ ನೈತಿಕ ಮೌಲ್ಯಗಳು ಮತ್ತು ನೀತಿಗಳನ್ನು ಎತ್ತಿಹಿಡಿಯುವ ಕಾಲ್ಪನಿಕ ಕೃತಿಗಳಾಗಿವೆ. ಆದರೆ ಈ ಮೌಲ್ಯಗಳು ಮತ್ತು ನೀತಿಗಳು ಆಧುನಿಕ ಕಾಲದಲ್ಲಿ ಅನಗತ್ಯ. ಈ ಪಠ್ಯಗಳನ್ನು ಶಾಲಾ ಪಠ್ಯಕ್ರಮದ ಭಾಗವಾಗಿಸುವ ಮೂಲಕ, ಈ ಕಾಲ್ಪನಿಕ ಕೃತಿಗಳನ್ನು ಇನ್ನೂ ವಿವೇಚನಾ ಸಾಮಥ್ರ್ಯವನ್ನು ಬೆಳೆಸಿಕೊಳ್ಳದ ಹೊಸ ತಲೆಮಾರಿನ ವಿದ್ಯಾರ್ಥಿಗಳ ಮುಂದೆ ನಿಜವಾದ ಐತಿಹಾಸಿಕ ಘಟನೆಗಳಾಗಿ ಪ್ರಸ್ತುತಪಡಿಸುವ ಪ್ರಯತ್ನವಾಗಿದೆ ಎಂದು ಟೀಕಿಸಿದ್ದಾರೆ.

ಇದು 'ಪುಷ್ಪಕ ವಿಮಾನ'ದಂತಹ ಕಾಲ್ಪನಿಕ ವಸ್ತುಗಳು ಪ್ರಾಚೀನ ಭಾರತದ ನಿಜವಾದ ಆವಿಷ್ಕಾಗಳು ಎಂಬ ನಿರ್ಲಜ್ಜ ಅವೈಜ್ಞಾನಿಕ ನಿರೂಪಣೆಗೆ ಸಹಾಯ ಮಾಡುವುದಲ್ಲದೆ, ನಿಸ್ಸಂದೇಹವಾಗಿ ಆಡಳಿದಲ್ಲಿ ಹಿಂದುತ್ವದ ಕಾರ್ಯಸೂಚಿಗೆ ಸಹಾಯ ಮಾಡುತ್ತದೆ. ಸಮಿತಿಯು ಭಾರತೀಯ ಜ್ಞಾನ ವ್ಯವಸ್ಥೆ, ವೇದಗಳು ಮತ್ತು ಆಯುರ್ವೇದವನ್ನು ಪಠ್ಯಕ್ರಮದ ಭಾಗವಾಗಿ ಸೇರಿಸಲು ಶಿಫಾರಸು ಮಾಡಿದೆ ಎಂಬುದನ್ನು ಗಮನಿಸಬೇಕಾಗಿದೆ ಎಂದು ಎಚ್ಚರಿಕೆ ನೀಡಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X