Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಈ ಹೊತ್ತಿನ ಹೊತ್ತಿಗೆ
      • ಜನಚರಿತೆ
      • ವಿಡಂಬನೆ
      • ಜನ ಜನಿತ
      • ರಂಗ ಪ್ರಸಂಗ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಜನಮನ
      • ರಂಗದೊಳಗಿಂದ
      • ಶಂಬೂಕ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ಸಿ.ಟಿ.ರವಿಗೆ ರಕ್ಷಣೆ ನೀಡಲು...

ಸಿ.ಟಿ.ರವಿಗೆ ರಕ್ಷಣೆ ನೀಡಲು ರಾಜ್ಯಪಾಲರಿಗೆ ಮನವಿ, ನ್ಯಾಯಾಂಗ ತನಿಖೆಗೆ ಆಗ್ರಹ : ಆರ್‌.ಅಶೋಕ್‌

ವಾರ್ತಾಭಾರತಿವಾರ್ತಾಭಾರತಿ24 Dec 2024 7:47 PM IST
share
ಸಿ.ಟಿ.ರವಿಗೆ ರಕ್ಷಣೆ ನೀಡಲು ರಾಜ್ಯಪಾಲರಿಗೆ ಮನವಿ, ನ್ಯಾಯಾಂಗ ತನಿಖೆಗೆ ಆಗ್ರಹ : ಆರ್‌.ಅಶೋಕ್‌

ಬೆಂಗಳೂರು : ವಿಧಾನಪರಿಷತ್‌ ಸದಸ್ಯ ಸಿ.ಟಿ.ರವಿ ಅವರಿಗೆ ರಕ್ಷಣೆ ನೀಡುವಂತೆ ಕೋರಿ ರಾಜ್ಯಪಾಲ ಥಾವರ್‌ ಚಂದ್‌ ಗೆಹ್ಲೋಟ್‌ ಅವರಿಗೆ ಮನವಿ ಸಲ್ಲಿಸಲಾಗಿದೆ. ಈ ಪ್ರಕರಣವನ್ನು ನ್ಯಾಯಾಂಗ ತನಿಖೆಗೆ ನೀಡಬೇಕೆಂಬುದು ನಮ್ಮ ಆಗ್ರಹ ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ್‌ ಹೇಳಿದರು.

ರಾಜ್ಯಪಾಲರ ಭೇಟಿಯ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯಪಾಲ ಥಾವರ್‌ಚಂದ್‌ ಗೆಹ್ಲೋಟ್‌ ಅವರನ್ನು ಭೇಟಿ ಮಾಡಿ ಶಾಸಕ ಸಿ.ಟಿ.ರವಿ ಅವರಿಗೆ ಮಾಡಿದ ಅಪಮಾನದ ಬಗ್ಗೆ ತಿಳಿಸಲಾಗಿದೆ. ಸಿ.ಟಿ.ರವಿ ಅವರಿಗೆ ಮುಸ್ಲಿಂ ಉಗ್ರವಾದಿ ಹಾಗೂ ನಕ್ಸಲರಿಂದ ಬೆದರಿಕೆ ಇದೆ. ಹೀಗಿದ್ದರೂ ಅವರನ್ನು ಕಬ್ಬಿನ ಗದ್ದೆಗೆ ಕರೆದುಕೊಂಡು ಹೋಗಿರುವುದು ಅನುಮಾನ ತಂದಿದೆ. ಒಬ್ಬ ಪೊಲೀಸ್‌ ಅಧಿಕಾರಿ ಸುರಕ್ಷತೆ ದೃಷ್ಟಿಯಿಂದ ಅವರನ್ನು ಗದ್ದೆಗೆ ಕರೆದೊಯ್ಯಲಾಗಿದೆ ಎಂದು ಹೇಳಿದ್ದಾರೆ. ಅಂದರೆ ಪೊಲೀಸ್‌ ಠಾಣೆ ಸುರಕ್ಷಿತವಲ್ಲ ಎಂದರ್ಥ. ಪೊಲೀಸ್‌ ಠಾಣೆ ಸುರಕ್ಷಿತವಲ್ಲ ಎಂದು ಈ ಸರಕಾರ ಜನರಿಗೆ ತಿಳಿಸಿದೆ ಎಂದರು.

ಸಿ.ಟಿ.ರವಿ ಅವರಿಗೆ ಹೀಗಾದರೆ ಇನ್ನು ಸಾರ್ವಜನಿಕರ ಪಾಡೇನು ಎಂಬ ಪ್ರಶ್ನೆ ಮೂಡುತ್ತದೆ. ಇದು ರಾಜ್ಯ ಸರಕಾರಕ್ಕೆ ಒಂದು ಕಪ್ಪು ಚುಕ್ಕೆಯಾಗಿದೆ. ಅದಕ್ಕಾಗಿ ರಾಜ್ಯಪಾಲರು ಸಂವಿಧಾನವನ್ನು ರಕ್ಷಣೆ ಮಾಡಿ ಕ್ರಮ ಕೈಗೊಳ್ಳಬೇಕೆಂದು ಮನವಿ ಮಾಡಲಾಗಿದೆ ಎಂದು ತಿಳಿಸಿದರು.

ಸಿ.ಟಿ.ರವಿ ಎಲ್ಲಿದ್ದಾರೆ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್‌ ಪ್ರಶ್ನಿಸುತ್ತಾರೆ. ಸಿಎಂ ಸಿದ್ದರಾಮಯ್ಯ ಸುರಕ್ಷತೆಯ ಕಾರಣ ನೀಡುತ್ತಾರೆ. ಇಷ್ಟು ಕೆಟ್ಟದಾಗಿ ಯಾರೂ ಸರಕಾರ ನಡೆಸಿಲ್ಲ. ಪೊಲೀಸ್‌ ಆಯುಕ್ತರಿಗೆ ನಿರಂತರವಾಗಿ ಫೋನ್‌ ಕರೆ ಬರುತ್ತಿತ್ತು. ಇವರಿಗೆ ಮುಖ್ಯಮಂತ್ರಿ ಅಥವಾ ಉಪಮುಖ್ಯಮಂತ್ರಿ ಕರೆ ಮಾಡುತ್ತಿದ್ದರೇ ಎಂಬುದು ಗೊತ್ತಾಗಬೇಕು. ಇದರ ತನಿಖೆಯನ್ನು ನಿಷ್ಪಕ್ಷಪಾತವಾಗಿ ಮಾಡಬೇಕು ಎಂದು ಆಗ್ರಹಿಸಿದರು.

ಪೊಲೀಸ್‌ ಠಾಣೆಗಳು ಕಾಂಗ್ರೆಸ್‌ ಕಚೇರಿಯಾಗಿ ಬದಲಾಗಿದೆ. ಎಲ್ಲ ತನಿಖೆಯನ್ನು ಪೊಲೀಸರೇ ಮಾಡುತ್ತಾರೆ ಎಂದರೆ ಸಿಒಡಿಗೆ ಕೊಟ್ಟರೂ ಮತ್ತೊಬ್ಬರಿಗೆ ಕೊಟ್ಟರೂ ಒಂದೇ. ಪೊಲೀಸರು ಜವಾಬ್ದಾರಿಯಿಂದ ನಡೆದುಕೊಂಡಿಲ್ಲ. ಅದಕ್ಕಾಗಿ ನ್ಯಾಯಾಂಗ ತನಿಖೆಗೆ ಆಗ್ರಹಿಸಲಾಗುತ್ತಿದೆ. ನ್ಯಾಯಾಂಗ ತನಿಖೆಯಲ್ಲಿ ಯಾವುದೇ ತೀರ್ಪು ಬಂದರೂ ಒಪ್ಪಿಕೊಳ್ಳುತ್ತೇವೆ ಎಂದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X