Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಈ ಹೊತ್ತಿನ ಹೊತ್ತಿಗೆ
      • ಜನಚರಿತೆ
      • ವಿಡಂಬನೆ
      • ಜನ ಜನಿತ
      • ರಂಗ ಪ್ರಸಂಗ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಜನಮನ
      • ರಂಗದೊಳಗಿಂದ
      • ಶಂಬೂಕ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ನಾಪತ್ತೆಯಾಗಿದ್ದ ಬೆಂಗಳೂರಿನ ಬಾಲಕ ಮೂರು...

ನಾಪತ್ತೆಯಾಗಿದ್ದ ಬೆಂಗಳೂರಿನ ಬಾಲಕ ಮೂರು ದಿನಗಳ ನಂತರ ಹೈದರಾಬಾದ್ ನಲ್ಲಿ ಪತ್ತೆ

ವಾರ್ತಾಭಾರತಿವಾರ್ತಾಭಾರತಿ24 Jan 2024 12:07 PM IST
share
ನಾಪತ್ತೆಯಾಗಿದ್ದ ಬೆಂಗಳೂರಿನ ಬಾಲಕ ಮೂರು ದಿನಗಳ ನಂತರ ಹೈದರಾಬಾದ್ ನಲ್ಲಿ ಪತ್ತೆ

ಬೆಂಗಳೂರು: ರವಿವಾರ ಬೆಂಗಳೂರಿನಿಂದ ನಾಪತ್ತೆಯಾಗಿದ್ದ 12 ವರ್ಷದ ಬಾಲಕ ಇಂದು ಬೆಳಗ್ಗೆ ಹೈದರಾಬಾದ್ ನ ಮೆಟ್ರೊ ನಿಲ್ದಾಣದ ಬಳಿ ಪತ್ತೆಯಾಗಿದ್ದಾನೆ. ಆತನ ನಾಪತ್ತೆ ಕುರಿತು ಸಾಮಾಜಿಕ ಮಾಧ್ಯಮಗಳಲ್ಲಿ ಮನವಿ ಮಾಡಿಕೊಂಡಿದ್ದರಿಂದ, ಆತನ ಪತ್ತೆಗಾಗಿ ವ್ಯಾಪಕ ಶೋಧ ನಡೆದಿತ್ತು.

ಕಳೆದ ಮೂರು ದಿನಗಳಿಂದ ಶೋಧ ನಡೆಸುತ್ತಿರುವ ಪೊಲೀಸರ ಹಿಡಿತದಿಂದ ತಪ್ಪಿಸಿಕೊಳ್ಳುವಲ್ಲಿ ಆರನೆ ತರಗತಿಯ ಪರಿಣವ್ ಯಶಸ್ವಿಯಾಗಿದ್ದ. ಆತನ ಸುಳಿವು ತಿಳಿದು ಪೊಲೀಸರು ಸ್ಥಳಕ್ಕೆ ಧಾವಿಸುತ್ತಿದ್ದಂತೆಯೆ ಆತ ಮತ್ತೊಂದು ಜಾಗಕ್ಕೆ ತನ್ನ ವಾಸ್ತವ್ಯ ಬದಲಿಸಿದ್ದ.

ಆತ ಮೊದಲು ವೈಟ್ ಫೀಲ್ಡ್ ನಲ್ಲಿರುವ ಕೋಚಿಂಗ್‌ ಸೆಂಟರ್‌ ಅನ್ನು 11 ಗಂಟೆಗೆ ತೊರೆದಿದ್ದ ಹಾಗೂ ನಂತರ ಮಧ್ಯಾಹ್ನ 3 ಗಂಟೆಗೆ ಯಮಲೂರು ಬಳಿಯ ಪೆಟ್ರೋಲ್ ಪಂಪ್ ಒಂದರ ಬಳಿ ಕಂಡು ಬಂದಿದ್ದ. ನಂತರ ಆತ ಸಂಜೆ ಬೆಂಗಳೂರಿನ ಮೆಜೆಸ್ಟಿಕ್ ಬಸ್ ನಿಲ್ದಾಣದಲ್ಲಿ ಬಸ್ ನಿಂದ ಇಳಿಯುತ್ತಿರುವುದು ಕಂಡು ಬಂದಿತ್ತು.

ತಮ್ಮ ಪುತ್ರನನ್ನು ಪತ್ತೆ ಹಚ್ಚಲು ಪೋಷಕರು ಸಾಮಾಜಿಕ ಮಾಧ್ಯಮದ ಮೊರೆ ಹೋಗಿದ್ದರು. ಪುತ್ರ ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿರುವ ಸಿಸಿಟಿವಿ ತುಣುಕನ್ನು ಸಾಮಾಜಿಕ ಮಾಧ‍್ಯಮ ಪೋಸ್ಟ್ ನಲ್ಲಿ ಲಗತ್ತಿಸಿ, ಪುತ್ರನ ಪತ್ತೆಗೆ ಬಾಲಕ ಪೋಷಕರು ನೆರವು ಯಾಚಿಸಿದ್ದರು.

ಈ ಪೋಸ್ಟ್ ನ ಕಾರಣಕ್ಕೆ ಹಲವಾರು ಸಾಮಾಜಿಕ ಮಾಧ್ಯಮ ಬಳಕೆದಾರರು ಬಾಲಕನಿಗಾಗಿ ತೀವ್ರ ಶೋಧ ನಡೆಸಿದ್ದರು. ಈ ಪೈಕಿ ಕೆಲವರು ಮೆಜೆಸ್ಟಿಕ್ ಬಸ್ ನಿಲ್ದಾಣಕ್ಕೆ ವೈಯಕ್ತಿಕವಾಗಿಯೂ ಭೇಟಿ ನೀಡಿದ್ದರು. ಇದರೊಂದಿಗೆ ಬಾಲಕನ ತಾಯಿಯು ತಮ್ಮ ಪುತ್ರನಿಗೆ ಮನೆಗೆ ಮರಳುವಂತೆ ಮನವಿ ಮಾಡಿರುವ ವಿಡಿಯೊವೊಂದನ್ನೂ ಪೋಸ್ಟ್ ಮಾಡಿದ್ದರು.

ಆತನ ಭಿತ್ತಿ ಚಿತ್ರವನ್ನು ಸಾಮಾಜಿಕ ಮಾಧ್ಯಮಗಳಲ್ಲಿ ವ್ಯಾಪಕವಾಗಿ ಹಂಚಿಕೊಳ್ಳಲಾಗಿತ್ತು. ಇದರಿಂದ ಪ್ರಯಾಣಿಕರು ಬಾಲಕನನ್ನು ಮೆಟ್ರೊದಲ್ಲಿ ಪತ್ತೆ ಹಚ್ಚಲು ಸಾಧ್ಯವಾಗಿತ್ತು. ಆತನನ್ನು ವಿಚಾರಣೆಗೊಳಪಡಿಸಿದಾಗ ಆತ ತನ್ನ ಗುರುತನ್ನು ದೃಢಪಡಿಸಿದ್ದಾನೆ. ಆತನನ್ನು ಹೈದರಾಬಾದಿನ ನಂಪಲ್ಲಿ ಮೆಟ್ರೊ ನಿಲ್ದಾಣದಲ್ಲಿ ನಾಪತ್ತೆಯಾದ ಮೂರು ದಿನಗಳ ನಂತರ ಬುಧವಾರ ಪತ್ತೆ ಹಚ್ಚಲಾಗಿದೆ.

ಈ ಕುರಿತು ಬಾಲಕನ ಪೋಷಕರಿಗೆ ಮಾಹಿತಿ ನೀಡಲಾಗಿದ್ದು, ಅವರು ಹೈದರಾಬಾದ್ ಗೆ ತೆರಳಿದ್ದಾರೆ ಎಂದು ತಿಳಿದು ಬಂದಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X