Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಈ ಹೊತ್ತಿನ ಹೊತ್ತಿಗೆ
      • ಜನಚರಿತೆ
      • ವಿಡಂಬನೆ
      • ಜನ ಜನಿತ
      • ರಂಗ ಪ್ರಸಂಗ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಜನಮನ
      • ರಂಗದೊಳಗಿಂದ
      • ಶಂಬೂಕ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ಸಿಎಂ ಸಿದ್ದರಾಮಯ್ಯ ಭಾಷಣ ವೇಳೆ ಗದ್ದಲ...

ಸಿಎಂ ಸಿದ್ದರಾಮಯ್ಯ ಭಾಷಣ ವೇಳೆ ಗದ್ದಲ ಎಬ್ಬಿಸಿದ ಬಿಜೆಪಿ ಕಾರ್ಯಕರ್ತೆಯರು

ವೇದಿಕೆಯಲ್ಲೇ ಎಎಸ್ಪಿಗೆ ಸಿಎಂ ತರಾಟೆ; ಬಿಜೆಪಿ ಕಾರ್ಯಕರ್ತೆಯರು ಪೊಲೀಸ್‌ ವಶಕ್ಕೆ

ವಾರ್ತಾಭಾರತಿವಾರ್ತಾಭಾರತಿ28 April 2025 3:24 PM IST
share
ಸಿಎಂ ಸಿದ್ದರಾಮಯ್ಯ ಭಾಷಣ ವೇಳೆ ಗದ್ದಲ ಎಬ್ಬಿಸಿದ ಬಿಜೆಪಿ ಕಾರ್ಯಕರ್ತೆಯರು

ಬೆಳಗಾವಿ: ಬೆಳಗಾವಿಯಲ್ಲಿ ಕೇಂದ್ರ ಸರ್ಕಾರದ ವಿರುದ್ಧ ಕಾಂಗ್ರೆಸ್ ನಡೆಸುತ್ತಿರುವ ಪ್ರತಿಭಟನಾ ಸಮಾವೇಶದಲ್ಲಿ‌ ಸಿಎಂ ಸಿದ್ದರಾಮಯ್ಯ ಅವರ ಭಾಷಣ ವೇಳೆ ಕೆಲ ಬಿಜೆಪಿ ಕಾರ್ಯಕರ್ತೆಯರು ಕಪ್ಪುಬಟ್ಟೆ ಪ್ರದರ್ಶಿಸಿ ಗದ್ದಲ ನಡೆಸಿದ ಘಟನೆ ನಡೆದಿದೆ. ಈ ವೇಳೆ ಆಕ್ರೋಶಗೊಂಡ ಸಿಎಂ ಸಿದ್ದರಾಮಯ್ಯ, ಘಟನೆ ಸಂಬಂಧ ಪೊಲೀಸ್‌ ಅಧಿಕಾರಿಯನ್ನು ವೇದಿಕೆಯಲ್ಲೇ ತರಾಟೆಗೆ ತೆಗೆದುಕೊಂಡರು.

ಮುಖ್ಯಮಂತ್ರಿಯ ಭಾಷಣದ ಮೇಲೆ ಕಪ್ಪು ಬಟ್ಟೆ ಪ್ರದರ್ಶನ ಮಾಡಿ, ವೇದಿಕೆಯತ್ತ ನುಗ್ಗಲು ಯತ್ನಿಸಿದ ಬಿಜೆಪಿ ಮಹಿಳಾ ಕಾರ್ಯಕರ್ತೆಯರನ್ನು ವಶಕ್ಕೆ ಪಡೆದು ಪೊಲೀಸರು ಅಲ್ಲಿಂದ ವಾಹನದಲ್ಲಿ ಕರೆದುಕೊಂಡು ತೆರಳಿದರು. ಈ ಸಂದರ್ಭದಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಪೊಲೀಸ್ ವಾಹನಕ್ಕೆ ಮುತ್ತಿಗೆ ಹಾಕಿ ಆಕ್ರೋಶ ವ್ಯಕ್ತಪಡಿಸಿದರು. ಪರಿಸ್ಥಿತಿಯನ್ನು ಅವಲೋಕಿಸಲು ವೇದಿಕೆಯಿಂದ ಇಳಿದು ಬಂದ ಲಕ್ಷ್ಮೀ ಹೆಬ್ಬಾಳ್ಕರ್, ಬಿಜೆಪಿ ಕಾರ್ಯಕರ್ತರನ್ನು ಕಾರ್ಯಕ್ರಮ ನಡೆಯುವ ಸ್ಥಳಕ್ಕೆ ಬರಲು ಬಿಟ್ಟಿದ್ದು ಹೇಗೆ? ಎಂದು ಹಿರಿಯ ಪೊಲೀಸ್ ಅಧಿಕಾರಿಗಳ ಬಳಿ ಅಸಮಾಧಾನ ವ್ಯಕ್ತಪಡಿಸಿದರು.

ಪೊಲೀಸ್ ಅಧಿಕಾರಿ ವಿರುದ್ಧ ಸಿಎಂ ಗರಂ

ಮುಖ್ಯಮಂತ್ರಿ ಸಿದ್ದರಾಮಯ್ಯ ಭಾಷಣ ಮಾಡುತ್ತಿದ್ದ ವೇಳೆ ಬಿಜೆಪಿ ಮಹಿಳಾ ಕಾರ್ಯಕರ್ತೆಯರು ಕಪ್ಪು ಬಟ್ಟೆ ಹಿಡಿದು ವೇದಿಕೆಯತ್ತ ನುಗ್ಗಲು ಯತ್ನಿಸಿ ಸಿಎಂ ಹಾಗೂ ರಾಜ್ಯ ಸರಕಾರದ ವಿರುದ್ಧ ಘೋಷಣೆಗಳನ್ನು ಕೂಗಿದರು. ಈ ಸಂದರ್ಭ ಸಿಡಿಮಿಡಿಗೊಂಡ ಮುಖ್ಯಮಂತ್ರಿ, ಯಾರ್ರೀ ಬೆಳಗಾವಿ ಎಸ್ಪಿ? ಪ್ರಶ್ನಿಸಿದರು. ಆಗ ವೇದಿಕೆಗೆ ಬಂದ ಎಎಸ್ಪಿಯನ್ನು ಏಯ್ ಬಾರಯ್ಯ ಇಲ್ಲಿ ಏನ್ ಮಾಡುತ್ತಿದ್ದೀರಾ ನೀವು? ಅವರನ್ನೆಲ್ಲ ಇಲ್ಲಿಗೆ ಬರಲು ಹೇಗೆ ಬಿಟ್ರಿ? ಎಂದು ಏರು ಧ್ವನಿಯಲ್ಲೆ ತರಾಟೆಗೆ ತೆಗೆದುಕೊಂಡರು. ಆಗ ವೇದಿಕೆ ಮೇಲಿದ್ದ ಸಚಿವರಾದ ಎಂ.ಬಿ.ಪಾಟೀಲ್, ಎಚ್.ಕೆ.ಪಾಟೀಲ್ ಸೇರಿದಂತೆ ಇನ್ನಿತರರು ಮುಖ್ಯಮಂತ್ರಿಯನ್ನು ಸಮಾಧಾನಪಡಿಸಲು ಯತ್ನಿಸಿದರು.

ಭಾಷಣಕ್ಕೆ ಅಡ್ಡಿಪಡಿಸಿದಕ್ಕೆ ಬಿಜೆಪಿ-ಆರೆಸ್ಸೆಸ್ ‌ಗೆ ಧಿಕ್ಕಾರ ಕೂಗಿ ಸವಾಲೆಸೆದ ಸಿಎಂ, ಕಳೆದ ಹತ್ತು ವರ್ಷಗಳಿಂದ ನಿರಂತರವಾಗಿ ಬೆಲೆ ಏರಿಕೆ ಮಾಡುತ್ತಾ, ಭಾರತೀಯರ ಬದುಕನ್ನು ಬೆಲೆ ಏರಿಕೆಯಲ್ಲಿ ಬೇಯಿಸುತ್ತಾ, ಭಾರತೀಯ ಸಮಾಜವನ್ನು ಛಿದ್ರಗೊಳಿಸುತ್ತಾ, ಬಿರುಕು ಮೂಡಿಸುತ್ತಾ ಜನದ್ರೋಹಿಯಾಗಿ ವರ್ತಿಸುತ್ತಿರುವುದು ಬಿಟ್ಟರೆ ಬೇರೆ ಏನು ಮಾಡಿದ್ದೀರಿ ತೋರಿಸಿ ಜನರಿಗೆ ಎಂದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X