Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಈ ಹೊತ್ತಿನ ಹೊತ್ತಿಗೆ
      • ಜನಚರಿತೆ
      • ವಿಡಂಬನೆ
      • ಜನ ಜನಿತ
      • ರಂಗ ಪ್ರಸಂಗ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಜನಮನ
      • ರಂಗದೊಳಗಿಂದ
      • ಶಂಬೂಕ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ರಾಜಧಾನಿ ಬೆಂಗಳೂರಿಗೆ ಕಾವೇರಿ ನೀರು...

ರಾಜಧಾನಿ ಬೆಂಗಳೂರಿಗೆ ಕಾವೇರಿ ನೀರು ಕಾಯ್ದಿರಿಸಲಾಗುವುದು: ಡಿಸಿಎಂ ಡಿ.ಕೆ.ಶಿವಕುಮಾರ್

ವಾರ್ತಾಭಾರತಿವಾರ್ತಾಭಾರತಿ13 Feb 2024 6:11 PM IST
share
ರಾಜಧಾನಿ ಬೆಂಗಳೂರಿಗೆ ಕಾವೇರಿ ನೀರು ಕಾಯ್ದಿರಿಸಲಾಗುವುದು: ಡಿಸಿಎಂ ಡಿ.ಕೆ.ಶಿವಕುಮಾರ್

ಬೆಂಗಳೂರು: ರಾಜಧಾನಿ ಬೆಂಗಳೂರಿಗೆ ಕಾವೇರಿಯಿಂದ ಬಳಕೆ ಮಾಡಿಕೊಳ್ಳಲು ಅಗತ್ಯ ನೀರು ಕಾಯ್ದಿರಿಸಲಾಗುವುದು ಎಂದು ಬೆಂಗಳೂರು ನಗರಾಭಿವೃದ್ಧಿ ಸಚಿವರೂ ಆಗಿರುವ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ.

ಮಂಗಳವಾರ ವಿಧಾನಸಭೆಯ ಪ್ರಶ್ನೋತ್ತರದ ಅವಧಿಯಲ್ಲಿ ಬಿಜೆಪಿ ಸದಸ್ಯ ಸಿ.ಕೆ.ರಾಮಮೂರ್ತಿ ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, 2017ರಿಂದ ಕೊಳಗೇರಿಗೆ ಉಚಿತವಾಗಿ ನೀರು ಪೂರೈಸಲಾಗುತ್ತಿದೆ. ಜಯನಗರದಲ್ಲಿ ನಿರ್ಮಾಣವಾಗಿರುವ ಫ್ಲಾಟ್‍ಗಳಿಗೆ ಕೊಳವೆ ಬಾವಿಗಳಿಂದ ನೀರು ಪೂರೈಸಲಾಗುತ್ತಿದೆ ಎಂದರು.

ಅದೇ ರೀತಿ, ಕಾವೇರಿಯಿಂದ ಆರು ಟಿಎಂಸಿ ನೀರನ್ನು ಹೆಚ್ಚುವರಿಯಾಗಿ ಕಾಯ್ದಿರಿಸಲಾಗಿದೆ. ಒಟ್ಟು ನೀರಿನ ಮೀಸಲು ಪ್ರಮಾಣದಿಂದ 1.5 ಟಿಎಂಸಿ ಹೆಚ್ಚುವರಿಯಾಗಿ ಉಳಿಯಲಿದೆ ಎಂದ ಅವರು, ಶಾಸಕರ ಪ್ರದೇಶಾಭಿವೃದ್ಧಿಗೆ ಐದು ಕೋಟಿ ರೂಪಾಯಿಗಳನ್ನು ನೀಡುತ್ತೇನೆ. ಅದನ್ನು ಖರ್ಚು ಮಾಡಿ ಜಯನಗರ ಕೊಳಗೇರಿ ಪ್ರದೇಶಕ್ಕೆ ಉಚಿತ ನೀರಿನ ಸಂಪರ್ಕ ಕಲ್ಪಿಸಿ ಎಂದು ಡಿ.ಕೆ.ಶಿವಕುಮಾರ್ ಸಲಹೆ ನೀಡಿದರು.

ಶಾಸಕರು ಆಗಬಹುದು ಎಂದು ಒಪ್ಪಿಕೊಂಡರು. ಮಧ್ಯಪ್ರವೇಶಿಸಿದ ವಿಪಕ್ಷ ನಾಯಕ ಆರ್.ಅಶೋಕ್, ಜಾಣತನದಿಂದ ಉತ್ತರ ಹೇಳಬೇಡಿ, ರಾಮಮೂರ್ತಿ ಹೊಸದಾಗಿ ಶಾಸಕರಾಗಿದ್ದಾರೆ. ಶಾಸಕರ ಪ್ರದೇಶಾಭಿವೃದ್ದಿಗೆ ನೀಡುವ ಅನುದಾನ ಬೇರೆ, ಅದನ್ನು ನೀರಿನ ಸಂಪರ್ಕಕ್ಕೆ ಬಳಕೆ ಮಾಡಿಕೊಳ್ಳುವುದು ಹೇಗೆ ಸಾಧ್ಯ. ಶಾಸಕರನ್ನು ದಾರಿ ತಪ್ಪಿಸಬೇಡಿ. ನೀರಿನ ಸಂಪರ್ಕಕ್ಕೆ ತಗುಲುವ ವೆಚ್ಚವನ್ನು ಬಿಬಿಎಂಪಿಯಿಂದ ಪ್ರತ್ಯೇಕವಾಗಿ ಭರಿಸಲಿ ಎಂದು ಆಗ್ರಹಿಸಿದರು. ಅಶೋಕ್ ಅವರ ಮಧ್ಯ ಪ್ರವೇಶಕ್ಕೆ ಡಿ.ಕೆ.ಶಿವಕುಮಾರ್ ನಕ್ಕು ಸುಮ್ಮನಾದರು.

ಆನಂತರ, ವಿಪಕ್ಷದ ಉಪನಾಯಕ ಅರವಿಂದ ಬೆಲ್ಲದ್, ಬೆಂಗಳೂರಿನಲ್ಲಿ ಟ್ಯಾಂಕರ್ ಗಳಲ್ಲಿ ಪೂರೈಸಲು ಸಾಕಷ್ಟು ನೀರು ಲಭ್ಯ ಇದೆ. ಆದರೆ ಜನರಿಗೆ ಪೂರೈಸಲು ನೀರು ಸಿಗುತ್ತಿಲ್ಲ. ಈ ವಿಚಾರವೇ ಅರ್ಥವಾಗುತ್ತಿಲ್ಲ. ಡಿ.ಕೆ.ಶಿವಕುಮಾರ್ ಪ್ರಭಾವಿಯಾಗಿದ್ದಾರೆ. ಟ್ಯಾಂಕರ್ ಲಾಬಿಯನ್ನು ಮಟ್ಟ ಹಾಕಲಿ ಎಂದು ಸಲಹೆ ನೀಡಿದರು.

ಇದಕ್ಕೆ ಪ್ರತಿಕ್ರಿಯಿಸಿದ ಡಿ.ಕೆ.ಶಿವಕುಮಾರ್, ಬೆಂಗಳೂರಿನ ನೀರಿನ ವಿಚಾರದಲ್ಲಿ ಏನೇಲ್ಲೇ ನಡೆಯುತ್ತದೆ ಎಂದು ಅಕ್ಕಪಕ್ಕ ಕುಳಿತ ಆರ್.ಅಶೋಕ್ ಮತ್ತು ಸುರೇಶ್ ಕುಮಾರ್ ರನ್ನು ಕೇಳಿ ತಿಳಿದುಕೊಳ್ಳಲಿ. ಅಲ್ಲದೆ, ಬೆಂಗಳೂರಿನ ನೀರಿನ ಬೇಡಿಕೆಯನ್ನೂ ಈಡೇರಿಸಲು ನಾವು ಮೇಕೆದಾಟು ಯೋಜನೆ ರೂಪಿಸಿದ್ದೇವೆ. ಅದರ ಅಂಗೀಕಾರಕ್ಕೆ ಬಿಜೆಪಿ ಸದಸ್ಯರು ಸಹಕಾರ ನೀಡಲಿ ಎಂದು ಮನವಿ ಮಾಡಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X