Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಈ ಹೊತ್ತಿನ ಹೊತ್ತಿಗೆ
      • ಜನಚರಿತೆ
      • ವಿಡಂಬನೆ
      • ಜನ ಜನಿತ
      • ರಂಗ ಪ್ರಸಂಗ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಜನಮನ
      • ರಂಗದೊಳಗಿಂದ
      • ಶಂಬೂಕ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ಚಂದ್ರಯಾನ ಹೋಗಿ ಚಂದ್ರನಿಗೆ ಮುಟ್ಟಿದೆ,...

ಚಂದ್ರಯಾನ ಹೋಗಿ ಚಂದ್ರನಿಗೆ ಮುಟ್ಟಿದೆ, ಬಿಜೆಪಿಗರಿಗೆ ಮಾತ್ರ ಇನ್ನೂ ವಿರೋಧ ಪಕ್ಷದ ನಾಯಕ ಯಾರು ಎಂದು ಗೊತ್ತಾಗಿಲ್ಲ: ಸಚಿವ ಪ್ರಿಯಾಂಕ್ ಖರ್ಗೆ ಲೇವಡಿ

ವಾರ್ತಾಭಾರತಿವಾರ್ತಾಭಾರತಿ29 Aug 2023 8:27 PM IST
share
ಚಂದ್ರಯಾನ ಹೋಗಿ ಚಂದ್ರನಿಗೆ ಮುಟ್ಟಿದೆ, ಬಿಜೆಪಿಗರಿಗೆ ಮಾತ್ರ ಇನ್ನೂ ವಿರೋಧ ಪಕ್ಷದ ನಾಯಕ ಯಾರು ಎಂದು ಗೊತ್ತಾಗಿಲ್ಲ: ಸಚಿವ ಪ್ರಿಯಾಂಕ್ ಖರ್ಗೆ ಲೇವಡಿ

ಕಲಬುರಗಿ, ಆ.29: ಬಿಜೆಪಿಯವರಿಗೆ ಬಹುಶಃ ಏನು ಮಾಡಬೇಕು ಎನ್ನುವುದೆ ಅರ್ಥ ಆಗುತ್ತಿಲ್ಲ. ಅವರು ಅಧಿಕಾರ ಕಳೆದುಕೊಂಡು ನೂರು ದಿನ ಆಗಿದೆ. ಆದರೆ, ನಾವು ಜನರಿಗೆ ನೀಡಿದ ಭರವಸೆಯನ್ನು ಈಡೇರಿಸುತ್ತಿದ್ದೇವೆ ಎಂದು ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಸಚಿವ ಪ್ರಿಯಾಂಕ್ ಖರ್ಗೆ ತಿಳಿಸಿದ್ದಾರೆ.

ಮಂಗಳವಾರ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಚಂದ್ರಯಾನ ಚಂದ್ರನಿಗೆ ಮುಟ್ಟಿದೆ. ಆದರೆ, ವಿರೋಧ ಪಕ್ಷದ ನಾಯಕ ಯಾರು ಎಂದು ಅದು ಬಿಜೆಪಿಗರಿಗೆ ಗೊತ್ತಾಗುತ್ತಿಲ್ಲ. ಅವರ ಪಕ್ಷದಲ್ಲಿ ಏನು ಆಗುತ್ತಿದೆ ಎಂದು ಅವರಿಗೆ ತಿಳಿಯುತ್ತಿಲ್ಲ ಎಂದು ವ್ಯಂಗ್ಯವಾಡಿದರು.

ಒಳ್ಳೆಯ ಆಡಳಿತ ಕೊಡಬೇಕು ಎನ್ನುವ ಉದ್ದೇಶದಿಂದ ಪ್ರಾಮಾಣಿಕತೆಯಿಂದ ಕೆಲಸ ಮಾಡುತ್ತಿದ್ದೇವೆ. ನಮ್ಮ ಸರಕಾರವನ್ನು ಟೀಕಿಸುವ ನೈತಿಕತೆ ಬಿಜೆಪಿ ನಾಯಕರಿಗೆ ಇಲ್ಲ. ಬಿಜೆಪಿಯವರು ಹತಾಶರಾಗಿದ್ದಾರೆ. ಅಧಿಕಾರ ಇಲ್ಲದೆ ಇರುವುದಕ್ಕೆ ನೀರಿನಿಂದ ಹೊರಬಿದ್ದ ಮೀನಿನಂತೆ ಚಡಪಡಿಸುತ್ತಿದ್ದಾರೆ. ಮೊನ್ನೆ ಮೋದಿ ಬೆಂಗಳೂರಿಗೆ ಬಂದಾಗ ಬಿಜೆಪಿ ನಾಯಕರು ಬ್ಯಾರಿಕೇಡ್ ಹಿಂದೆ ಬಂಧಿ ಆಗಿ ಕನ್ನಡಿಗರ ಮಾರ್ಯಾದೆ ಬೀದಿಗೆ ತಂದಿದ್ದರು ಎಂದು ಅವರು ಟೀಕಿಸಿದರು.

ಬಸವರಾಜ ಬೊಮ್ಮಾಯಿ ಸಿಎಂ ಇದ್ದಾಗ ಏನೆ ಹೇಳಿದರು ದಾಖಲೆ ಕೊಡಿ ಎನ್ನುತ್ತಿದ್ದರು. ಈಗ ಬೊಮ್ಮಾಯಿ ಮಾಡುತ್ತಿರುವ ಆರೋಪಕ್ಕೆ ಯಾವ ದಾಖಲೆಗಳಿವೆ ? ಅವರು ಹತಾಶರಾಗಿ ಆರೋಪ ಮಾಡುತ್ತಿದ್ದಾರೆ. ಹಾಗೆ ಆರೋಪ ಮಾಡುವುದರಿಂದ ಅವರನ್ನು ವಿರೋಧ ಪಕ್ಷದ ನಾಯಕರನ್ನಾಗಿ ಮಾಡಬಹುದು ಎಂದು ಭಾವಿಸಿದಂತಿದೆ ಎಂದು ಪ್ರಿಯಾಂಕ್ ಖರ್ಗೆ ಕುಟುಕಿದರು.

ಗುತ್ತಿಗೆದಾರರ ಸಂಘದ ಅಧ್ಯಕ್ಷರು ನಮ್ಮ ಸರಕಾರದ ಮೇಲೆ ಭ್ರಷ್ಟಾಚಾರದ ಆರೋಪ ಮಾಡಿಲ್ಲ. ಬಿಲ್ ಪಾವತಿಗೆ ವಿಳಂಬವಾಗುತ್ತಿದೆ ಎಂದಿದ್ದಾರೆ. ಥರ್ಡ್ ಪಾರ್ಟಿ ಪರಿಶೀಲನೆ ವರದಿ ನಂತರ ಬಾಕಿ ಇರುವ ಬಿಲ್ ಗಳನ್ನು ಪಾವತಿ ಮಾಡುತ್ತೇವೆ ಎಂದು ಪ್ರಿಯಾಂಕ್ ಖರ್ಗೆ ಹೇಳಿದರು.

ಶಾಸಕ ಎನ್.ರವಿಕುಮಾರ್ ಜೇವರ್ಗಿಯಲ್ಲಿ ತಮ್ಮ ಪಕ್ಷದ ಟಿಕೆಟ್ ಮಾರಿಕೊಂಡಿದ್ದಾರೆ ಎಂದು ಸ್ವತಃ ಅವರ ಪಕ್ಷದವರೆ ಹೇಳುತ್ತಿದ್ದರು. ಅದಾದ ಮೇಲೆ ಅವರು ಕಲಬುರಗಿಗೆ ಬಂದೆ ಇರಲಿಲ್ಲ. ಆದರೆ ನಿನ್ನೆ ಚಿತ್ತಾಪುರಕ್ಕೆ ಬಂದು ಪ್ರತಿಭಟನೆಯಲ್ಲಿ ಭಾಗಿಯಾಗಿದ್ದಾರೆ. ಅವರ ಶಿಷ್ಯನಿಗೆ ಗಡಿಪಾರು ಶಿಕ್ಷೆ ವಿಧಿಸಿದಾಗ ರವಿಕುಮಾರ್ ಯಾಕೆ ಬಂದು ಪ್ರತಿಭಟನೆ ಮಾಡಲಿಲ್ಲ? ಇದು ಬಿಜೆಪಿ ಸರಕಾರದ ಕಲಬುರಗಿ ಅಲ್ಲ, ಕಾಂಗ್ರೆಸ್ ಸರಕಾರದ ಕಲಬುರಗಿ. ನಿಮ್ಮ ಶಿಷ್ಯ ಅಷ್ಟೇ ಅಲ್ಲ, ನೀವು ತಪ್ಪು ಮಾಡಿದರೂ ನಿಮ್ಮ ಮೇಲೂ ಕಾನೂನು ಕ್ರಮ ಆಗುತ್ತದೆ ಎಂದು ಅವರು ಎಚ್ಚರಿಸಿದರು.

ಆಂದೋಲಾ ಸಿದ್ದಲಿಂಗ ಸ್ವಾಮಿ ವಿರುದ್ದ ಹರಿಹಾಯ್ದ ಪ್ರಿಯಾಂಕ್ ಖರ್ಗೆ, ನಿಮ್ಮದು ಎಂತಹ ತತ್ವ ? ಅಕ್ಕಿ ಕಳ್ಳರಿಗೆ, ಅಂಗನವಾಡಿ ಮಕ್ಕಳ ಹಾಲಿನ ಪೌಡರ್ ಕಳ್ಳತನ ಮಾಡುವವರ ರಕ್ಷಣೆ ಮಾಡಿ ಅಂತ ನಿಮ್ಮ ತತ್ವ ಹೇಳುತ್ತಾ ? ಎಂದು ಪ್ರಶ್ನಿಸಿದರು.

ಬಿಜೆಪಿ ಸರಕಾರ ಇದ್ದಾಗ ಅಕ್ಕಿ ಹಾಗೂ ಹಾಲಿನಪುಡಿ ಕಳ್ಳತನ ಮಾಡಿರುವ ಆರೋಪ ಹೊತ್ತಿರುವವರಿಗೆ ಟಿಕೇಟ್ ನೀಡಲಾಗಿತ್ತು. ಆದರೆ, ನಮ್ಮ ಸರಕಾರ ಬಂದ ಮೇಲೆ ಅಂತವರನ್ನ ಜೈಲಿಗೆ ಕಳುಹಿಸಲಾಗಿದೆ ಎಂದು ಪ್ರಿಯಾಂಕ್ ಖರ್ಗೆ ಹೇಳಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X