LIVE | ಗ್ಯಾರಂಟಿ ಯೋಜನೆಗಳು ಸಾಮಾಜಿಕ ಕಳಕಳಿಯಲ್ಲಿನ ಹೂಡಿಕೆಗಳು : ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಸಿಎಂ ಸಿದ್ದರಾಮಯ್ಯ ಅವರು 16ನೇ ಬಾರಿಗೆ ಬಜೆಟ್ ಮಂಡಿಸಲಿದ್ದು, ಬೆಳಿಗ್ಗೆ 10.15ಕ್ಕೆ ಸಿಎಂ ಸಿದ್ದರಾಮಯ್ಯ ಅವರು ಬಜೆಟ್ ಮಂಡನೆಯನ್ನು ಪ್ರಾರಂಭಿಸಲಿದ್ದಾರೆ. ಆ ಮೂಲಕ ತಮ್ಮದೇ ದಾಖಲೆಯನ್ನು ಮುರಿಯಲಿದ್ದಾರೆ.
ಹಣಕಾಸು ಇಲಾಖೆ ಪ್ರಧಾನ ಕಾರ್ಯದರ್ಶಿ ರಿತೇಶ್ ಕುಮಾರ್ ಸಿಂಗ್, ಕಾರ್ಯದರ್ಶಿ ಪಿ.ಸಿ. ಜಾಫರ್ ಬಜೆಟ್ ಪ್ರತಿ ಇರುವ ಸೂಟ್ ಕೇಸ್ ಅನ್ನು ಸಿಎಂ ಗೆ ಹಸ್ತಾಂತರಿಸಿದರು. ಈ ವೇಳೆ ಮುಖ್ಯಮಂತ್ರಿ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಎಲ್ .ಕೆ. ಅತೀಕ್ , ಆರ್ಥಿಕ ಸಲಹೆಗಾರ ಬಸವರಾಜ ರಾಯರಡ್ಡಿ ಉಪಸ್ಥಿತರಿದ್ದರು.
ಕಳೆದ ಬಾರಿ ಸಿಎಂ 3.71 ಲಕ್ಷ ರೂ. ಕೋಟಿ ಗಾತ್ರದ ಬಜೆಟ್ ಮಂಡಿಸಿದ್ದರು. ಈ ಬಾರಿ ಬಜೆಟ್ ಗಾತ್ರ 4 ಲಕ್ಷ ಕೋಟಿ ರೂ. ಗೆ ಏರಿಕೆಯಾಗಲಿದೆ ಎನ್ನಲಾಗಿದೆ.
ಈ ಬಗ್ಗೆ ಸಾಮಾಜಿಕ ಜಾಲತಾಣ X ನಲ್ಲಿ ಪೋಸ್ಟ್ ಮಾಡಿರುವ ಅವರು, ನನ್ನ ರಾಜಕೀಯ ಜೀವನದ 16ನೇ ಬಜೆಟ್ ಮಂಡನೆಗೆ ಈ ದಿನ ಸಿದ್ಧನಾಗಿದ್ದೇನೆ. ಹದಿನಾರು ಬಾರಿ ಈ ರಾಜ್ಯದ ಬಜೆಟ್ ಮಂಡನೆ ಮಾಡಲು ಅವಕಾಶ ನೀಡಿರುವ ಕರ್ನಾಟಕದ ಸಮಸ್ತ ಜನತೆಗೆ ನಾನು ಕೃತಜ್ಞ.
ಬುದ್ಧ, ಬಸವ, ಗಾಂಧಿ, ಅಂಬೇಡ್ಕರರ ಆಶಯಗಳಲ್ಲಿ ನಂಬಿಕೆಯನ್ನಿಟ್ಟು, ಅದರಂತೆ ನಡೆಯುತ್ತಿರುವ ನಾವು ಈ ಬಜೆಟ್ ಮೂಲಕ ಸಮಸಮಾಜದ ಕನಸನ್ನು ನನಸಾಗಿಸುವತ್ತ ಮತ್ತಷ್ಟು ದೃಢಹೆಜ್ಜೆಯನ್ನಿಡುವ ಪ್ರಯತ್ನ ಮಾಡಿದ್ದೇವೆ. ಮುಂದಿನ ಒಂದು ವರ್ಷಗಳ ಕಾಲದ ರಾಜ್ಯದ ಸಮಗ್ರ ಅಭಿವೃದ್ಧಿಗೆ ಈ ಬಜೆಟ್ ದಾರಿದೀಪವಾಗಲಿದೆ ಎಂಬುದು ನಿಸ್ಸಂಶಯ ಎದು ಹೇಳಿದ್ದಾರೆ.
Live Updates
- 7 March 2025 12:25 PM IST
ಬಜೆಟ್ ಮಂಡನೆ ಸಂದರ್ಭದಲ್ಲಿ ವಿಧಾನಸಭೆ ವೀಕ್ಷಕರ ಗ್ಯಾಲರಿಯಲ್ಲಿ ಒಳಮೀಸಲಾತಿಗಾಗಿ ಇಬ್ಬರು ವೀಕ್ಷಕರು ಘೋಷಣೆ ಕೂಗಿದ ಪ್ರಸಂಗ ನಡೆಯಿತು. ಕೂಡಲೇ ವಿಧಾನಸಭೆ ಮಾರ್ಷಲ್ ಗಳು ಅವರನ್ನು ವಶಕ್ಕೆ ಪಡೆದುಕೊಂಡರು.
- 7 March 2025 12:21 PM IST
ಗೃಹ ಲಕ್ಷ್ಮೀ ಯಜಮಾನಿಯರನ್ನು ಸ್ವಸಹಾಯ ಗುಂಪುಗಳ ಸದಸ್ಯರುಗಳನ್ನಾಗಿಸಿ ರಾಜ್ಯ ಮಟ್ಟದ ಅಕ್ಕ ಕೋ ಆಪರೇಟಿವ್ ಸೊಸೈಟಿ ವ್ಯಾಪ್ತಿಗೆ ತರಲಾಗುವುದು
- 7 March 2025 12:21 PM IST
IAS IPS KAS ಪರೀಕ್ಷೆ ಗಳಿಗೆ ವಸತಿ ಸಹಿತ ತರಬೇತಿ ಗೆ ಬೆಂಗಳೂರು ನಗರದಲ್ಲಿ ಸುಸಜ್ಜಿತ ವಸತಿ ವ್ಯವಸ್ಥೆ
- 7 March 2025 12:20 PM IST
ನನ್ನ ವೃತ್ತಿ ನನ್ನ ಆಯ್ಕೆ ಸರ್ಕಾರಿ ಶಾಲಾ ಕಾಲೇಜುಗಳಲ್ಲಿನ 2.30 ಲಕ್ಷ ವಿದ್ಯಾರ್ಥಿಗಳಿಗೆ ವೃತ್ತಿ ಮಾರ್ಗದರ್ಶನ