Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಈ ಹೊತ್ತಿನ ಹೊತ್ತಿಗೆ
      • ಜನಚರಿತೆ
      • ವಿಡಂಬನೆ
      • ಜನ ಜನಿತ
      • ರಂಗ ಪ್ರಸಂಗ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಜನಮನ
      • ರಂಗದೊಳಗಿಂದ
      • ಶಂಬೂಕ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ಎಟಿಎಂ ಸರಕಾರದ ಆಡಳಿತಾವಧಿಯಲ್ಲಿ...

ಎಟಿಎಂ ಸರಕಾರದ ಆಡಳಿತಾವಧಿಯಲ್ಲಿ ಗುತ್ತಿಗೆದಾರರಿಗೆ ಬಿಲ್ ಬಾಕಿ ನಿಶ್ಚಿತ, ಅವಮಾನ ಉಚಿತ: ಬಿಜೆಪಿ ಲೇವಡಿ

ವಾರ್ತಾಭಾರತಿವಾರ್ತಾಭಾರತಿ12 Aug 2023 9:36 PM IST
share
ಎಟಿಎಂ ಸರಕಾರದ ಆಡಳಿತಾವಧಿಯಲ್ಲಿ ಗುತ್ತಿಗೆದಾರರಿಗೆ ಬಿಲ್ ಬಾಕಿ ನಿಶ್ಚಿತ, ಅವಮಾನ ಉಚಿತ: ಬಿಜೆಪಿ ಲೇವಡಿ

ಬೆಂಗಳೂರು, ಆ. 12: ‘ಗುತ್ತಿಗೆದಾರರು ಕಾಂಗ್ರೆಸ್ಸರಕಾರದ ವಿರುದ್ಧ ಗಂಭೀರ ಭ್ರಷ್ಟಾಚಾರದ ಆರೋಪ ಮಾಡುತ್ತಿದ್ದಂತೆ ಏಕಾಏಕಿ ಬಿಬಿಎಂಪಿ ಕಚೇರಿಗೆ ಬೆಂಕಿ ಬಿದ್ದಿದೆ. ಅಂದ ಹಾಗೆ ಬಿಬಿಎಂಪಿ ಕಚೇರಿಗೆ ಬೆಂಕಿ ಸಂಬಂಧಿತ ಕಾಂಗ್ರೆಸ್ ಪಕ್ಷದ ಟ್ವೀಟ್ ಅನ್ನು ಡಿಲೀಟ್ ಮಾಡಲಾಗಿದ್ದು, ಪಕ್ಷದ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರೇ ಕಾಂಗ್ರೆಸ್ಸಿನ ಸುಳ್ಳುಗಳನ್ನು ಒಪ್ಪಲಾಗುತ್ತಿಲ್ಲ ಎಂದು ಆ ಮೂಲಕ ಹೇಳಿದ್ದಾರೆ. ಸುಳ್ಳೇ ಕಾಂಗ್ರೆಸ್ ಮನೇದೇವ್ರು’ ಎಂದು ಬಿಜೆಪಿ ಲೇವಡಿ ಮಾಡಿದೆ.

ಶನಿವಾರ ಸರಣಿ ಟ್ವೀಟ್ ಮಾಡಿರುವ ಕಾಂಗ್ರೆಸ್, ‘ರಾಜ್ಯದ ಗುತ್ತಿಗೆದಾರರಿಗೆ ಎಟಿಎಂ ಸರಕಾರದ ಆಡಳಿತಾವಧಿಯಲ್ಲಿ ಬಿಲ್ ಬಾಕಿ ‘ನಿಶ್ಚಿತ', ಅವಮಾನ ‘ಉಚಿತ', ಬೆದರಿಕೆ ‘ಖಚಿತ' ಎಂಬ ಪರಿಸ್ಥಿತಿ ನಿರ್ಮಾಣವಾಗಿದೆ. ಬಿಬಿಎಂಪಿ ಗುತ್ತಿಗೆದಾರರ ಬಳಿಕ ಈಗ ರಾಯಚೂರು ಗುತ್ತಿಗೆದಾರರು, ದಿವಾಳಿ ಸರಕಾರದ ದುರ್ಬಲ ಆಡಳಿತದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಆದರೆ, ಸರಕಾರ ಮಾತ್ರ ಗುತ್ತಿಗೆದಾರರನ್ನೇ ತಪ್ಪಿತಸ್ಥರನ್ನಾಗಿಸಿ, ತನಗೆ ತಾನೇ ಸಾಚಾತನದ ಸರ್ಟಿಫಿಕೇಟ್ ನೀಡಿಕೊಳ್ಳುತ್ತಿದೆ’ ಎಂದು ಟೀಕಿಸಿದೆ.

‘ನೀನೇ ಸಾಕಿದ ಗಿಣಿ ಹದ್ದಾಗಿ ಕುಕ್ಕಿತಲ್ಲ’ ಎನ್ನುವಂತಹ ಸ್ಥಿತಿ ಕಾಂಗ್ರೆಸ್ ಶಾಸಕರದ್ದಾಗಿದೆ. ಒಂದು ಕಡೆ ಸಚಿವರು ಶಾಸಕರ ಎದುರು ಧಿಮಾಕು ದೌಲತ್ತು ತೋರಿಸುತ್ತಿದ್ದಾರೆ. ಇನ್ನೊಂದು ಕಡೆ ಡಿ.ಕೆ.ಶಿವಕುಮಾರ್ ಅವರ ದುರಹಂಕಾರಕ್ಕೆ ಬೆಂಗಳೂರಿನ ಶಾಸಕರು ತಲೆ ಚಚ್ಚಿಕೊಳ್ಳುವಂತಾಗಿದೆ. ಶಾಸಕರು ಸಿದ್ದರಾಮಯ್ಯ ಅವರಿಗೆ ಪತ್ರ ಬರೆದು ಅನುದಾನ ಬಿಡುಗಡೆಗೆ ಒತ್ತಾಯಿಸಿದ್ರೂ, ಡಿ.ಕೆ.ಶಿವಕುಮಾರ್ ಅವರು ಕ್ಯಾರೆ ಎನ್ನುತ್ತಿಲ್ಲ. ಸಿಎಂ, ಡಿಸಿಎಂ ಕಿತ್ತಾಟದಲ್ಲಿ ಕಾಂಗ್ರೆಸ್ ಶಾಸಕರು ಅಂತೂ ಅನಾಥರಾಗಿದ್ದಾರೆ. ಯಾವುದೇ ಕ್ಷೇತ್ರವಿರಲಿ ಎಟಿಎಂ ಸರಕಾರಕ್ಕೆ ಕಮಿಷನ್ ಗ್ಯಾರಂಟಿ ಆದ್ರೆ ಮಾತ್ರ ಅನುದಾನಕ್ಕೆ ಪರ್ಮಿಷನ್’ ಎಂದು ಬಿಜೆಪಿ ಆರೋಪಿಸಿದೆ.

‘ರಾಜ್ಯದಲ್ಲಿ ಕಾಂಗ್ರೆಸ್ ಸರಕಾರದ ಹೊಸ ಘೋಷಣೆ. ನೌಕರರ ಸಂಬಳಕ್ಕಿಲ್ಲ ಗ್ಯಾರಂಟಿ. ಇದು ಉಚಿತ, ಖಚಿತ, ನಿಶ್ಚಿತ. ಬಿಎಂಟಿಸಿ ನೌಕರರಿಗೆ ತಿಂಗಳು ಮುಗಿದು 2 ವಾರಗಳಾದರೂ ಸಂಬಳ ಕೈ ಸೇರಿಲ್ಲ, ಕೆಎಸ್ಸಾರ್ಟಿಸಿ ನೌಕರರು ಸಂಬಳವಿಲ್ಲದೆ ಡಿಪೋ ಬಿಟ್ಟು ಮನೆಗೆ ಹೋಗುತ್ತಿಲ್ಲ, 3ತಿಂಗಳು ಕಳೆದರೂ ಅತಿಥಿ ಉಪನ್ಯಾಸಕರು ಸಂಬಳವನ್ನೇ ಕಂಡಿಲ್ಲ. ಇಂದಿರಾ ಕ್ಯಾಂಟೀನ್ ಸಿಬ್ಬಂದಿಗಳಿಗೂ ಸಂಬಳ ಸಿಕ್ಕಿಲ್ಲ. ಸರಕಾರಿ ಶಾಲಾ ಶಿಕ್ಷಕರಿಗೂ ತಿಂಗಳಾದರೂ ಖಾತೆಗೆ ಜಮೆ ಆಗದ ಸಂಬಳ. ಗುತ್ತಿಗೆ ಆಧಾರದ ನೌಕರರಿಗೆ ತಲುಪಿಲ್ಲ ಸಂಬಳ. ಇನ್ನೂ ಹಲವು ಇಲಾಖೆಗಳ ಸರಕಾರಿ ನೌಕರರು ಸಂಬಳ ಸಿಗದೆ ಸರಕಾರಕ್ಕೆ ಶಾಪ ಹಾಕುತ್ತಿದ್ದಾರೆ. ರಾಜ್ಯದ ಜನರ ಕಿವಿ ಮೇಲೆ ಹೂ ಇಟ್ಟ ಸಿದ್ದರಾಮಯ್ಯ ಅವರ ಸರಕಾರ, ಗ್ಯಾರಂಟಿಯ ಹಣ ಕೊಡುವುದು ಹಾಗಿರಲಿ, ಮೊದಲು ನೌಕರರ ಸಂಬಳವನ್ನು ಜಾರಿಗೊಳಿಸಿ ಸ್ವಾಮಿ’ ಎಂದು ಬಿಜೆಪಿ ಆಗ್ರಹಿಸಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X