Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಈ ಹೊತ್ತಿನ ಹೊತ್ತಿಗೆ
      • ಜನಚರಿತೆ
      • ವಿಡಂಬನೆ
      • ಜನ ಜನಿತ
      • ರಂಗ ಪ್ರಸಂಗ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಜನಮನ
      • ರಂಗದೊಳಗಿಂದ
      • ಶಂಬೂಕ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ಬಿಜೆಪಿ ರಾಜ್ಯಾಧ್ಯಕ್ಷನಾಗಿ...

ಬಿಜೆಪಿ ರಾಜ್ಯಾಧ್ಯಕ್ಷನಾಗಿ ಬಿ.ವೈ.ವಿಜಯೇಂದ್ರನನ್ನು ನಾನು ಎಂದೂ ಒಪ್ಪುವುದಿಲ್ಲ: ರಮೇಶ್ ಜಾರಕಿಹೊಳಿ

ವಾರ್ತಾಭಾರತಿವಾರ್ತಾಭಾರತಿ16 Sept 2024 9:14 PM IST
share
ಬಿಜೆಪಿ ರಾಜ್ಯಾಧ್ಯಕ್ಷನಾಗಿ ಬಿ.ವೈ.ವಿಜಯೇಂದ್ರನನ್ನು ನಾನು ಎಂದೂ ಒಪ್ಪುವುದಿಲ್ಲ: ರಮೇಶ್ ಜಾರಕಿಹೊಳಿ

ಬೆಳಗಾವಿ: ಬಿಜೆಪಿ ರಾಜ್ಯಾಧ್ಯಕ್ಷನಾಗಿ ಬಿ.ವೈ.ವಿಜಯೇಂದ್ರ ಅವರನ್ನು ನಾನು ಎಂದೂ ಒಪ್ಪುವುದಿಲ್ಲ. ಮುಂದಿನ ಅಧ್ಯಕ್ಷ ಯಾರು ಎಂದು ಪಕ್ಷದ ವರಿಷ್ಠರು ಕೂಡಲೇ ನಿರ್ಧರಿಸಬೇಕು ಎಂದು ಗೋಕಾಕ್ ಕ್ಷೇತ್ರದ ಬಿಜೆಪಿಯ ಹಿರಿಯ ಶಾಸಕ ಹಾಗೂ ಮಾಜಿ ಸಚಿವ ರಮೇಶ್ ಜಾರಕಿಹೊಳಿ ಆಗ್ರಹಿಸಿದ್ದಾರೆ.

ಸೋಮವಾರ ಜಿಲ್ಲೆ ಅಥಣಿಯಲ್ಲಿ ಮಾಧ್ಯಮ ಪ್ರತಿನಿಧಿಗಳ ಜತೆ ಮಾತನಾಡಿದ ಅವರು, ‘ವಿಜಯೇಂದ್ರ ಪಕ್ಷದಲ್ಲಿ ಇನ್ನೂ ಜೂನಿಯರ್. ಅವನಿಗೆ ಏನೂ ಸಿದ್ಧಾಂತ ಇಲ್ಲ. ಭ್ರಷ್ಟ ಎಂಬ ಲೇಬಲ್ ಆತನ ಮೇಲಿದೆ. ಆತನ್ನು ರಾಜ್ಯಾಧ್ಯಕ್ಷನನ್ನಾಗಿ ಮಾಡಿದ್ದಕ್ಕೆ ನನಗೆ ವಿರೋಧವಿದೆ. ಹಾಗಂತ ನಾನೆಂದೂ ಯಡಿಯೂರಪ್ಪನವರಿಗೆ ವಿರೋಧಿ ಅಲ್ಲ. ಬಿಎಸ್‍ವೈ ನಮ್ಮ ಪಕ್ಷಕ್ಕೆ ಪ್ರಶ್ನಾತೀತ ನಾಯಕ’ ಎಂದು ನುಡಿದರು.

ವಿಜಯೇಂದ್ರ ನಮ್ಮ ಪಕ್ಷದ ನಾಯಕನಲ್ಲ. ಆರೆಸೆಸ್ಸ್ ಪ್ರಮುಖ ನಾಯಕರ ಸಭೆಯಲ್ಲಿ ಏನು ಚರ್ಚೆಯಾಯಿತು ಎಂದು ಹೇಳುವುದಕ್ಕೆ ಆಗುವುದಿಲ್ಲ. ತಪ್ಪು ಮಾಡಿದವರನ್ನು ಸಭೆಯಲ್ಲಿ ಮುಖಂಡರು ಬೈದಿದ್ದಾರೆ ಅಷ್ಟೇ. 15 ರಿಂದ 20 ಜನರ ಸಾಮೂಹಿಕ ನಾಯಕತ್ವದಲ್ಲಿ ಮುನ್ನಡೆಸಲಿ ಎಂದು ಬಿಜೆಪಿ, ಆರೆಸೆಸ್ಸ್ ಪ್ರಮುಖರ ಸಭೆಯಲ್ಲಿ ಮನವಿ ಮಾಡಿದ್ದೇವೆ ಎಂದು ತಿಳಿಸಿದರು.

120ರಿಂದ 130 ಕ್ಷೇತ್ರಗಳನ್ನು ಗೆಲ್ಲಿಸಿಕೊಡುವ ಶಕ್ತಿ ನಮ್ಮಲ್ಲಿದೆ. ವರಿಷ್ಠರು ನೀಡಿದ ಟಾಸ್ಕ್ ಪೂರ್ಣಗೊಳಿಸುವಲ್ಲಿ ನಾನು ವಿಫಲನಾದರೆ ನನ್ನನ್ನು ಒದ್ದು ಹೊರಹಾಕಿ ಎಂದು ಸಂಘ ಪರಿವಾರದ ಪ್ರಮುಖರ ಸಭೆಯಲ್ಲಿ ಹೇಳಿದ್ದೇನೆ. ಹಿರಿಯ ಮುಖಂಡ ಅನಂತ್ ಕುಮಾರ್ ತೀರಿಕೊಂಡ ಮೇಲೆ ಬಿಜೆಪಿಯಲ್ಲಿ ಯಾರೂ ಪ್ರಬಲ ನಾಯಕನಾಗಿಲ್ಲ. ಬಿಜೆಪಿ ಎಂಬುದು ಒಬ್ಬರ ಕೈಯಲ್ಲಿ ಆಡಳಿತ ಕೊಡುವುದು ಬೇಡ. ಸಾಮೂಹಿಕ ನಾಯಕತ್ವಕ್ಕೆ ಒತ್ತು ಕೊಡುವಂತೆ ನಾವು ಆಗ್ರಹಿಸಿದ್ದೇವೆ ಎಂದರು.

ಬಿಎಸ್‍ವೈಗೆ ವಿಶ್ರಾಂತಿ ಅಗತ್ಯ: ಯಡಿಯೂರಪ್ಪರ ಬಗ್ಗೆ ನಮಗೆ ಗೌರವವಿದೆ. ಅವರಿಗೆ ವಯಸ್ಸಾಗಿದ್ದು, ವಿಶ್ರಾಂತಿಯ ಅಗತ್ಯವಿದೆ. ನಮಗೆ ಯಡಿಯೂರಪ್ಪನವರ ಸಲಹೆ ಬೇಕಾದರೆ ಅವರ ಮನೆಗೆ ಹೋಗುತ್ತೇವೆ. ಪಕ್ಷದಲ್ಲಿ 15ರಿಂದ 20 ಮಂದಿಗೆ ಸಾಮೂಹಿಕ ನಾಯಕತ್ವ ನೀಡಬೇಕು ಎಂದು ಅವರು ಕೋರಿದರು.

ಮುನಿರತ್ನ ಬಂಧನಕ್ಕೆ ವಿರೋಧ: ಶಾಸಕ ಮುನಿರತ್ನ ನಿಂದನೆ ಮಾಡಿದ್ದೂ ಇನ್ನೂ ಸಾಬೀತಾಗಿಲ್ಲ. ಎಫ್‍ಎಸ್‍ಎಲ್ ವರದಿ ಬರುವ ಮೊದಲೇ ಅವರನ್ನು ಬಂಧಿಸಿದ್ದು ಸರಿಯಲ್ಲ. ಮುನಿರತ್ನ ಅವರಿಗೆ ನೋಟಿಸ್ ನೀಡಿ ಪಕ್ಷ ತಪ್ಪು ಮಾಡಿದೆ. ಮುನಿರತ್ನ ಪ್ರಕರಣದಲ್ಲಿ ಡಿ.ಕೆ.ಶಿವಕುಮಾರ್ ಕೈವಾಡ ಇದೆ ಎಂದು ಅವರು ದೂರಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X