Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಈ ಹೊತ್ತಿನ ಹೊತ್ತಿಗೆ
      • ಜನಚರಿತೆ
      • ವಿಡಂಬನೆ
      • ಜನ ಜನಿತ
      • ರಂಗ ಪ್ರಸಂಗ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಜನಮನ
      • ರಂಗದೊಳಗಿಂದ
      • ಶಂಬೂಕ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ದಕ್ಷಿಣ ಕೊರಿಯಾದ ಕಂಪನಿಗಳ ಜೊತೆ...

ದಕ್ಷಿಣ ಕೊರಿಯಾದ ಕಂಪನಿಗಳ ಜೊತೆ ಸೋಲ್‌ನಲ್ಲಿ ಕೈಗಾರಿಕಾ ಸಚಿವ ಎಂ.ಬಿ. ಪಾಟೀಲ್ ಸಮಾಲೋಚನೆ

ವಾಹನ ಬಿಡಿಭಾಗ ತಯಾರಿಕೆ ; ಬಂಡವಾಳ ಹೂಡಿಕೆಗೆ ಹೆಚ್ಚಿದ ಒಲವು

ವಾರ್ತಾಭಾರತಿವಾರ್ತಾಭಾರತಿ1 July 2024 10:36 PM IST
share
ದಕ್ಷಿಣ ಕೊರಿಯಾದ ಕಂಪನಿಗಳ ಜೊತೆ ಸೋಲ್‌ನಲ್ಲಿ ಕೈಗಾರಿಕಾ ಸಚಿವ ಎಂ.ಬಿ. ಪಾಟೀಲ್ ಸಮಾಲೋಚನೆ

ಬೆಂಗಳೂರು : ದಕ್ಷಿಣ ಕೊರಿಯಾಕ್ಕೆ ಭೇಟಿ ನೀಡಿರುವ ಭಾರಿ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ್‌ ನೇತೃತ್ವದಲ್ಲಿನ ರಾಜ್ಯದ ಉನ್ನತ ಮಟ್ಟದ ನಿಯೋಗವು ಸೋಮವಾರ ಸೋಲ್‌ನಲ್ಲಿ ಹೊಯ್ಸಂಗ್‌ ಅಡ್ವಾನ್ಸ್ಡ್‌ ಮಟೇರಿಯಲ್ಸ್‌, ಎಚ್‌ಎಲ್‌ ಮಾಂಡೊ ಕಾರ್ಪೊರೇಷನ್‌, ನಿಫ್ಕೊ, ಡಿಎನ್‌ ಸೊಲುಷನ್ಸ್‌ ಮತ್ತು ಹುಂಡೈ ಮೋಟರ್ಸ್‌ನ ಮುಖ್ಯಸ್ಥರನ್ನು ಭೇಟಿಯಾಗಿ ಸಮಾಲೋಚನೆ ನಡೆಸಿತು.

ಜಪಾನಿನ ಐದು ದಿನಗಳ ಯಶಸ್ವಿ ಭೇಟಿ ಪೂರ್ಣಗೊಳಿಸಿ, ದಕ್ಷಿಣ ಕೊರಿಯಾಕ್ಕೆ ತೆರಳಿರುವ ನಿಯೋಗವು ಈ ತಿಂಗಳ 5ರವರೆಗೆ ಅಲ್ಲಿನ ಬಹುರಾಷ್ಟ್ರೀಯ ಕಂಪನಿಗಳ ಜೊತೆ ಸಮಾಲೋಚನೆ ನಡೆಸಿ ಬಂಡವಾಳ ಹೂಡಿಕೆ ಆಕರ್ಷಿಸಲಿದೆ.

ರಾಜ್ಯದಲ್ಲಿ ವಾಹನ ಬಿಡಿಭಾಗ, ಜವಳಿ ಉತ್ಪನ್ನ, ನವೀಕರಿಸಬಹುದಾದ ಇಂಧನ, ಮಷಿನ್‌ಟೂಲ್ಸ್‌ ತಯಾರಿಕಾ ವಲಯಗಳಲ್ಲಿ ಬಂಡವಾಳ ಹೂಡಿಕೆ ಹೆಚ್ಚಿಸಲು, ವಹಿವಾಟು ವಿಸ್ತರಿಸಲು ದಕ್ಷಿಣ ಕೊರಿಯಾದ ಈ ಬಹುರಾಷ್ಟ್ರೀಯ ಕಂಪನಿಗಳು ತೀವ್ರ ಆಸಕ್ತಿ ವ್ಯಕ್ತಪಡಿಸಿವೆ.

ರಾಜ್ಯದಲ್ಲಿ ವಿದ್ಯುತ್‌ಚಾಲಿತ ವಾಹನಗಳ (ಇವಿ) ಮಾರುಕಟ್ಟೆಯು ವ್ಯಾಪಕವಾಗಿ ವಿಸ್ತರಣೆ ಆಗುತ್ತಿರುವುದು ಮತ್ತು ಭಾರತದಲ್ಲಿನ ತಯಾರಿಕಾ ಘಟಕಗಳಲ್ಲಿ ʼಇವಿʼಗಳನ್ನು ತಯಾರಿಸುವ ಬಗ್ಗೆ ಹುಂಡೈ ಮುಖ್ಯಸ್ಥರ ಜೊತೆಗಿನ ಸಭೆಯಲ್ಲಿ ಪ್ರಮುಖವಾಗಿ ಚರ್ಚಿಸಲಾಯಿತು.

ರಾಜ್ಯದಲ್ಲಿ ಕೈಗಾರಿಕಾ ಅಶಾಂತಿ (ಕಾರ್ಮಿಕರ ವಿವಾದಗಳು) ಕಡಿಮೆ ಪ್ರಮಾಣದಲ್ಲಿ ಇರುವುದು ಮತ್ತು ಪೂರೈಕೆ ಸರಪಣಿಯಲ್ಲಿ ಸ್ಥಿರತೆ ಇರುವುದನ್ನು ಸಚಿವರು ಹುಂಡೈ ಕಂಪನಿಯ ಪ್ರಮುಖರ ಗಮನಕ್ಕೆ ತಂದರು.

ಚಿಕ್ಕಬಳ್ಳಾಪುರ ಜಿಲ್ಲೆಯ ಗೌರಿಬಿದನೂರಿನಲ್ಲಿ ವಾಹನಗಳ ಪ್ಲಾಸ್ಟಿಕ್‌ ಬಿಡಿಭಾಗ ತಯಾರಿಸುವ ಘಟಕ ಸ್ಥಾಪಿಸಲಿರುವ ನಿಫ್ಕೊ ಕೊರಿಯಾ ಕಂಪನಿಗೆ ಅಗತ್ಯವಾದ ಭೂಮಿ ಸ್ವಾಧೀನ ಮತ್ತು ಇತರ ಅನುಮೋದನೆಗಳಿಗೆ ರಾಜ್ಯ ಸರ್ಕಾರ ತ್ವರಿತವಾಗಿ ಸ್ಪಂದಿಸಲಿದೆ. ಕಾರ್ಖಾನೆಗೆ ಸಂಸ್ಕರಿಸಿದ ನೀರನ್ನು ಪೂರೈಸಲಾಗುವುದು ಎಂದು ಸಚಿವ ಪಾಟೀಲ್ ಅವರು ಭರವಸೆ ನೀಡಿದರು.

ರಾಜ್ಯದಲ್ಲಿ ಫೈಬರ್‌ ಆಪ್ಟಿಕ್‌ ಅಳವಡಿಕೆ ಯೋಜನೆಗಳು ಮತ್ತು ವಿದ್ಯುತ್‌ಚಾಲಿತ ವಾಹನಗಳ (ಇವಿ) ಬಳಕೆ ಹೆಚ್ಚಿಸುವ ಕ್ಷೇತ್ರಗಳಲ್ಲಿ ವಹಿವಾಟು ನಡೆಸಲು ಹೊಯ್ಸಂಗ್‌ ಅಡ್ವಾನ್ಸ್ಡ್‌ ಮಟೇರಿಯಲ್ಸ್‌ ಇಂಗಿತ ವ್ಯಕ್ತಪಡಿಸಿದೆ.

ಕಂಪನಿಯ ಉಪಾಧ್ಯಕ್ಷ ಹಾಂಗ್‌ ಸಂಗ್‌ ಅಹ್ನ್‌ ಅವರು ರಾಜ್ಯದ ನಿಯೋಗದ ಜೊತೆಗಿನ ಮಾತುಕತೆಯಲ್ಲಿ ಭಾಗಿಯಾಗಿದ್ದರು. ಟೈರ್‌ ಕೋರ್ಡ್ಸ್‌ ತಯಾರಿಕೆಗೆ ಭಾರತವನ್ನು ಪ್ರಮುಖ ನೆಲೆಯನ್ನಾಗಿ ಅಭಿವೃದ್ಧಿಪಡಿಸಲು ಕಂಪನಿಯ ಉದ್ದೇಶಿಸಿದೆ. ಭಾರತದಲ್ಲಿ ಪರಿಸರ ಸ್ನೇಹಿ ಸರಕುಗಳು ಹಾಗೂ ಸುಧಾರಿತ ಜವಳಿ ಉತ್ಪನ್ನಗಳನ್ನು ತಯಾರಿಸುವ ವಹಿವಾಟು ವಿಸ್ತರಿಸುವ ಅವಕಾಶಗಳನ್ನು ಕಂಪನಿಯು ಪರಿಶೀಲಿಸುತ್ತಿದೆ.

ರಾಜ್ಯದಲ್ಲಿನ ನವೀಕರಿಸಬಹುದಾದ ಇಂಧನ ವಲಯದಲ್ಲಿನ ಭವಿಷ್ಯದ ವಿಸ್ತರಣೆ ಬಗ್ಗೆ ಸೌರಕೋಶಗಳ ಸೆಮಿಕಂಡಕ್ಟರ್‌ ತಯಾರಿಸುವ ಒಸಿಐ ಹೋಲ್ಡಿಂಗ್ಸ್‌ ಕಂಪನಿ ಜೊತೆ ಸಚಿವರು ಮಾತುಕತೆ ನಡೆಸಿದರು.

ವಾಹನ ಬಿಡಿಭಾಗ ತಯಾರಿಸುವ ಎಚ್‌ಎಲ್‌ ಮಂಡೊ ಕಾರ್ಪೊರೇಷನ್ನಿನ ಸಿಎಫ್‌ಒ ಲೀ ಚುಲ್‌ ಮತ್ತು ನಿರ್ದೇಶಕ ಕಿಮ್‌ ಇವುನ್‌ ಸಂಗ್‌ ಅವರನ್ನು ರಾಜ್ಯದ ನಿಯೋಗವು ಭೇಟಿಯಾಗಿತ್ತು.

ಬೆಂಗಳೂರಿನಲ್ಲಿ ತಯಾರಿಕಾ ಘಟಕ ಹೊಂದಿರುವ ಕಂಪನಿಯು ರಾಜ್ಯದಲ್ಲಿ ಇನ್ನಷ್ಟು ಬಂಡವಾಳ ಹೂಡಿಕೆ ಮಾಡಲು ಉತ್ಸುಕತೆ ತೋರಿದೆ. ವಿದ್ಯುತ್‌ಚಾಲಿತ ಸೇರಿದಂತೆ ರಾಜ್ಯದಲ್ಲಿನ ಒಟ್ಟಾರೆ ವಾಹನ ಉದ್ಯಮ ಕ್ಷೇತ್ರದಲ್ಲಿನ ಅನುಕೂಲತೆಗಳನ್ನು ಸದ್ಬಳಕೆ ಮಾಡಿಕೊಳ್ಳಬೇಕು ಎಂದು ರಾಜ್ಯದ ನಿಯೋಗವು ಆಹ್ವಾನ ನೀಡಿದೆ.

ಮಷೀನ್‌ಟೂಲ್ಸ್‌ ತಯಾರಿಕಾ ಕಂಪನಿ ಡಿಎನ್‌ ಸೊಲುಷನ್ಸ್‌, ಬೆಂಗಳೂರು ಬಳಿ 25 ಎಕರೆ ಪ್ರದೇಶದಲ್ಲಿ ತನ್ನ ತಯಾರಿಕಾ ಘಟಕ ಆರಂಭಿಸಲಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X