Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಈ ಹೊತ್ತಿನ ಹೊತ್ತಿಗೆ
      • ಜನಚರಿತೆ
      • ವಿಡಂಬನೆ
      • ಜನ ಜನಿತ
      • ರಂಗ ಪ್ರಸಂಗ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಜನಮನ
      • ರಂಗದೊಳಗಿಂದ
      • ಶಂಬೂಕ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ಮೆಕ್ಕೆಜೋಳ ಸಂಸ್ಕರಣಾ ಘಟಕ ದುರಂತ; ಮೃತ...

ಮೆಕ್ಕೆಜೋಳ ಸಂಸ್ಕರಣಾ ಘಟಕ ದುರಂತ; ಮೃತ ಕಾರ್ಮಿಕರಿಗೆ ಎರಡು ಲಕ್ಷ ಪರಿಹಾರ: ಸಚಿವ ಎಂಬಿ ಪಾಟೀಲ್ ಘೋಷಣೆ

ವಾರ್ತಾಭಾರತಿವಾರ್ತಾಭಾರತಿ5 Dec 2023 2:35 PM IST
share
ಮೆಕ್ಕೆಜೋಳ ಸಂಸ್ಕರಣಾ ಘಟಕ ದುರಂತ; ಮೃತ ಕಾರ್ಮಿಕರಿಗೆ ಎರಡು ಲಕ್ಷ ಪರಿಹಾರ: ಸಚಿವ ಎಂಬಿ ಪಾಟೀಲ್  ಘೋಷಣೆ

ವಿಜಯಪುರ: ನಗರದ ಕೈಗಾರಿಕಾ ಪ್ರದೇಶದ 'ರಾಜ್ ಗುರು ಫುಡ್' ಗೋದಾಮಿನ ಮೆಕ್ಕೆಜೋಳ ಸಂಸ್ಕರಣಾ ಘಟಕದಲ್ಲಿ ನಡೆದ ದುರಂತದಲ್ಲಿ ಮೃತಪಟ್ಟ ಏಳು ಕಾರ್ಮಿಕರ ಕುಟುಂಬಕ್ಕೆ ಎರಡು ಲಕ್ಷ. ರೂ ಪರಿಹಾರ ನೀಡಲಾಗುವುದು ಎಂದು ಸಚಿವ ಎಂ.ಬಿ.ಪಾಟೀಲ್ ಘೋಷಣೆ ಮಾಡಿದರು.

ಈ ಬಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ವಿಜಯಪುರ ನಗರದ ಕೈಗಾರಿಕಾ ಪ್ರದೇಶದಲ್ಲಿರುವ ರಾಜ್ ಗುರು ಗೋದಾಮಿನಲ್ಲಿ ನಡೆದ ಅವಘಡದಲ್ಲಿ ಸುಮಾರು ಎಂಟು ಜನ ಕಾರ್ಮಿಕರು ಸಿಲುಕಿಕೊಂಡಿದ್ದರು ಅದರಲ್ಲಿ ಓರ್ವ ಮಾತ್ರ ಬದುಕುಳಿದಿದ್ದು ಏಳು ಜನ ಸಾವನ್ನಪ್ಪಿದ್ದಾರೆ ಎಂದರು.

"ಬಿಹಾರದಿಂದ ತಮ್ಮ ಜೀವನೋಪಾಯಕ್ಕಾಗಿ ಇಲ್ಲಿಗೆ ಬಂದು ಕೆಲಸ ಮಾಡುತ್ತಿದ್ದರು. ಅವರು ವಯಸ್ಸುಗಳನ್ನು ಗಮಿನಿಸಿದಾಗ ಮಧ್ಯ ವಯಸ್ಸಿನವರು ಮತ್ತು ಯುವಕರೇ ಇದ್ದಾರೆ. ಈಗಾಗಲೇ ಎಫ್.ಐ.ಆರ್ ದಾಖಲಿಸಲಾಗಿದೆ ತನಿಖೆ ನಡೆಸಿ ತಪ್ಪಿತಸ್ಥರಿಗೆ ಕಾನೂನಿನ ಮೂಲಕ ಶಿಕ್ಷೆಗೊಳಪಡಿಸಲಾಗುವುದು" ಎಂದರು.

ಎಲ್ಲ ಮೃತ ದೇಹಗಳನ್ನು ಏಕ ಕಾಲದಲ್ಲೇ ಮರಣೋತ್ತರ ಪರೀಕ್ಷೆ ನಡೆಸಿ ಅವರ ರಾಜ್ಯಕ್ಕೆ ಕಳುಹಿಸಬೇಕು ಎನ್ನುವ ಬೇಡಿಕೆ ಮೃತರ ಕುಟುಂಬದವರಿಂದ ಇತ್ತು. ಈ ಹಿನ್ನಲೆಯಲ್ಲಿ ಎಲ್ಲ ಮೃತ ದೇಹಗಳನ್ನು ಸರ್ಕಾರದಿಂದಲೇ ಏಕ ಕಾಲಕ್ಕೆ ವಿಜಯಪುರದ ಹತ್ತಿರ ಇರುವ ವಿಮಾನ ನಿಲ್ದಾಣದ ಮೂಲಕ ಬೀಹಾರ ರಾಜ್ಯದ ಪಟ್ನಾಗೆ ಕಳುಹಿಸಿ ಅಲ್ಲಿಂದ ಅವರವರ ಗ್ರಾಮಗಳಿಗೆ ತಲುಪಿಸುವ ವ್ಯವಸ್ಥೆಯನ್ನು ಸಹ ಮಾಡಲಾಗಿದೆ ಎಂದು ಹೇಳಿದರು.

ಇನ್ನು ಈ ದುರಂತದಲ್ಲಿ ಸಾವನ್ನಪ್ಪಿದ ಕುಟುಂಬಗಳಿಗೆ ರಾಜ್ ಗುರು ಇಂಡಸ್ಟ್ರೀಸ್ ನ ಮಾಲೀಕರಿಂದ ಪರಿಹಾರ ನೀಡಲು ಈಗಾಗಲೇ ಅವರೊಂದಿಗೆ ಚರ್ಚಿಸಿದ್ದೇವೆ, ಮೃತರ ಕುಟುಂಬಗಳಿಗೆ ಪರಿಹಾರ ನೀಡಲು ಒಪ್ಪಿಸಲಾಗಿದೆ, ಈ ಹಿನ್ನಲೆಯಲ್ಲಿ ಕಂಪನಿಯ ಮಾಲೀಕರಿಂದ ಮೃತರ ಕುಟುಂಬಗಳಿಗೆ ಐದು ಲಕ್ಷ ರೂ. ಪರಿಹಾರ ನೀಡಲಾಗುವುದು. ಇನ್ನೋರ್ವ ಗಾಯಾಳುವಿಗೆ ಎರಡು ಲಕ್ಷ ರೂ. ಪರಿಹಾರ ನೀಡಲಾಗುವುದು. ಹಾಗೂ ಸರಕಾರದ ವತಿಯಿಂದ ಮೃತರ ಕುಟುಂಬಗಳಿಗೆ ಎರಡು ಲಕ್ಷ ರೂ. ಹಾಗೂ ಗಾಯಾಳುವಿಗೆ 50 ಸಾವಿರ ರೂ. ಸರ್ಕಾರದಿಂದ ಪರಿಹಾರ ನೀಡಲಾಗುವುದು ಎಂದರು.

ಇನ್ನು ಕಾರ್ಖಾನೆಯಲ್ಲಿ ಸುರಕ್ಷತಾ ಕ್ರಮಗಳನ್ನು ಬಳಸದೆ ನಿಯಮ ಉಲ್ಲಂಘನೆ ಆಗಿದೆಯೋ ಇಲ್ಲವೋ ಮತ್ತು ಆ ಘಟನೆ ನಡೆಯಲು ಕಾರಣಗಳೇನು ಎನ್ನುವುದು ತನಿಖೆಯ ನಂತರ ಗೊತ್ತಾಗಲಿದೆ ಇದನ್ನೆ ಉದಾಹರಣೆಯಾಗಿಟ್ಟುಕೊಂಡು ರಾಜ್ಯದ ಎಲ್ಲಾ ಕಾರ್ಖಾನೆಗಳಿಗೆ ಸುರಕ್ಷತಾ ಕ್ರಮಗಳ ಬಳಕೆ ಕುರಿತಂತೆ ಸೂಚನೆ ನೀಡಲಾಗುವುದು ಎಂದರು.


share
ವಾರ್ತಾಭಾರತಿ
ವಾರ್ತಾಭಾರತಿ
Next Story
X