Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಈ ಹೊತ್ತಿನ ಹೊತ್ತಿಗೆ
      • ಜನಚರಿತೆ
      • ವಿಡಂಬನೆ
      • ಜನ ಜನಿತ
      • ರಂಗ ಪ್ರಸಂಗ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಜನಮನ
      • ರಂಗದೊಳಗಿಂದ
      • ಶಂಬೂಕ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ಕರಾಟೆ ಚಾಂಪಿಯನ್ ಶಿಪ್ | ಚಿನ್ನದ ಪದಕ...

ಕರಾಟೆ ಚಾಂಪಿಯನ್ ಶಿಪ್ | ಚಿನ್ನದ ಪದಕ ಗೆದ್ದ ವಿದ್ಯಾರ್ಥಿಗೆ 50 ಸಾವಿರ ರೂ.ನಗದು ಬಹುಮಾನ ನೀಡಿದ ಸಚಿವ ಝಮೀರ್ ಅಹ್ಮದ್

ವಾರ್ತಾಭಾರತಿವಾರ್ತಾಭಾರತಿ29 Sept 2023 11:45 PM IST
share
ಕರಾಟೆ ಚಾಂಪಿಯನ್ ಶಿಪ್ | ಚಿನ್ನದ ಪದಕ ಗೆದ್ದ ವಿದ್ಯಾರ್ಥಿಗೆ 50 ಸಾವಿರ ರೂ.ನಗದು ಬಹುಮಾನ ನೀಡಿದ ಸಚಿವ ಝಮೀರ್ ಅಹ್ಮದ್

ಬೆಂಗಳೂರು, ಸೆ.29: ಇಂಡೋನೇಷ್ಯಾದ ಜಕಾರ್ತದಲ್ಲಿ ಕರಾಟೆ ಚಾಂಪಿಯನ್ ಶಿಪ್ ನಲ್ಲಿ ಚಿನ್ನದ ಪದಕ ಗಳಿಸಿದ ಮುಹಮ್ಮದ್ ತಾಹೀರ್ ಎಂಬ ವಿದ್ಯಾರ್ಥಿಗೆ ವಸತಿ ಹಾಗೂ ಅಲ್ಪಸಂಖ್ಯಾತರ ಕಲ್ಯಾಣ ಸಚಿವ ಬಿ.ಝೆಡ್.ಝಮೀರ್ ಅಹ್ಮದ್ ಖಾನ್ 50 ಸಾವಿರ ರೂ. ನಗದು ಬಹುಮಾನ ನೀಡಿ ಸನ್ಮಾನಿಸಿದರು.

ಶುಕ್ರವಾರ ನಗರದ ಕ್ವೀನ್ಸ್ ರಸ್ತೆಯಲ್ಲಿರುವ ಕೆಪಿಸಿಸಿ ಕಚೇರಿಯಲ್ಲಿ ಸಾರ್ವಜನಿಕರ ಅಹವಾಲು ಸ್ವೀಕಾರ ಸಂದರ್ಭದಲ್ಲಿ ತಮ್ಮ ಪೋಷಕರೊಂದಿಗೆ ಆಗಮಿಸಿದ್ದ ಮುಹಮ್ಮದ್ ತಾಹೀರ್‍ಗೆ ಅವರು ನಗದು ಬಹುಮಾನ ನೀಡಿ ಗೌರವಿಸಿದರು.

ಕಳೆದ ತಿಂಗಳು ಝಮೀರ್ ಅಹ್ಮದ್ ಕೆಪಿಸಿಸಿ ಕಚೇರಿಗೆ ಭೇಟಿ ನೀಡಿದ್ದ ಸಂದರ್ಭದಲ್ಲಿ ತಮ್ಮ ಪೆÇೀಷಕರೊಂದಿಗೆ ಬಂದಿದ್ದ ತಾಹೀರ್, ನಾನು ಅಂತರ್‍ರಾಷ್ಟ್ರೀಯ ಕರಾಟೆ ಸ್ಪರ್ಧೆಗೆ ಆಯ್ಕೆಯಾಗಿದ್ದು ಇಂಡೋನೇಷ್ಯಾಗೆ ತೆರಳಲು ಆರ್ಥಿಕ ಸಂಕಷ್ಟ ಎದುರಾಗಿದೆ. ನಮ್ಮ ತಂದೆ ಎಲೆಕ್ಟ್ರಿಶಿಯನ್ ಕೆಲಸ ಮಾಡುತ್ತಿದ್ದು ಅಷ್ಟು ಹಣ ಹೊಂದಿಸಲು ಆಗುತ್ತಿಲ್ಲ ಎಂದು ಹೇಳಿದ್ದ. ಆಗ ಈ ವಿದ್ಯಾರ್ಥಿಗೆ ಸಚಿವರು 65 ಸಾವಿರ ರೂ.ಗಳನ್ನು ವೆಚ್ಚ ಮಾಡಿ ವಿಮಾನಯಾನ ಟಿಕೆಟ್ ಮಾಡಿಸಿಕೊಟ್ಟಿದ್ದರು.

ಸ್ಪರ್ಧೆಯಲ್ಲಿ ಭಾಗವಹಿಸಿದ ಹೆಬ್ಬಾಳದ ಕ್ರೆಸೆಂಟ್ ಶಾಲೆಯಲ್ಲಿ ವ್ಯಾಸಂಗ ಮಾಡುತ್ತಿರುವ ತಾಹೀರ್ ಚಿನ್ನದ ಪದಕ ಗೆದ್ದು ಬಂದಿದ್ದಾನೆ. ಇಂದು ಸಚಿವರ ಬಳಿ ಬಂದಿದ್ದ ತಾಹೀರ್ ಪೆÇೀಷಕರು, ನೀವು ಸಹಾಯ ಮಾಡಿದ್ದಕ್ಕೆ ನಮ್ಮ ಮಗ ಸ್ಪರ್ಧೆಯಲ್ಲಿ ಭಾಗಿಯಾಗಿ ಬಂಗಾರ ಪದಕ ಗೆಲ್ಲುವಂತಾಯಿತು ಎಂದು ಕೃತಜ್ಞತೆ ಸಲ್ಲಿಸಿದರು.

ಇದೇ ಸಂದರ್ಭದಲ್ಲಿ ವಿಶೇಷ ಚೇತನರ ಪರ ಕೆಲಸ ಮಾಡುವ 12:3 ಗ್ಲೋಬಲ್ ಆರ್ಗನೈಜೇಶನ್ ಸಂಸ್ಥೆಗೆ ಝಮೀರ್ ಅಹ್ಮದ್ ವೈಯಕ್ತಿಕವಾಗಿ ಎರಡು ಲಕ್ಷ ರೂ. ನೆರವು ನೀಡಿದರು. ನೂರಾರು ಮಂದಿ ಸಾರ್ವಜನಿಕರು ತಮ್ಮ ಅಹವಾಲುಗಳನ್ನು ಸಲ್ಲಿಸಿದರು. ವಸತಿ ಹಾಗೂ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಗೆ ಸಂಬಂಧಿಸಿದಂತೆ ಅರ್ಜಿಗಳನ್ನು ಅಧಿಕಾರಿಗಳಿಗೆ ನೀಡಿ ಸೂಕ್ತ ಕ್ರಮ ಕೈಗೊಳ್ಳುವಂತೆ ಅವರು ಸೂಚನೆ ನೀಡಿದರು.

ಆರೋಗ್ಯ ಮತ್ತು ಶಿಕ್ಷಣಕ್ಕೆ ಸಹಾಯ ಕೋರಿದವರಿಗೆ ವೈಯಕ್ತಿಕ ವಾಗಿ ಆರ್ಥಿಕ ನೆರವು ನೀಡಿದರು. ಈ ಸಂದರ್ಭದಲ್ಲಿ ಕೆಪಿಸಿಸಿ ಕಾರ್ಯಾಧ್ಯಕ್ಷ ಚಂದ್ರಪ್ಪ, ಮಾಜಿ ಮೇಯರ್ ರಾಮಚಂದ್ರಪ್ಪ, ವಿಧಾನಪರಿಷತ್ ಮಾಜಿ ಸದಸ್ಯ ರಮೇಶ್ ಬಾಬು, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಶೇಖರ್, ಮುಖಂಡರಾದ ಜಿ.ಎ.ಬಾವ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.

ಕೆಪಿಸಿಸಿ ಕಚೇರಿಯಲ್ಲಿ ನೂರಾರು ಸಾರ್ವಜನಿಕರು ಹಾಗೂ ಕಾಂಗ್ರೆಸ್ ಕಾರ್ಯಕರ್ತರಿಂದ ಸಚಿವ ಝಮೀರ್ ಅಹಮ್ಮದ್ ಖಾನ್ ಅವರು ವಸತಿ ಹಾಗೂ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಗೆ ಸಂಬಂಧಿಸಿದ ಅಹವಾಲುಗಳನ್ನು ಸ್ವೀಕರಿಸಿ ಅರ್ಜಿಗಳನ್ನು ಅಧಿಕಾರಿಗಳಿಗೆ ನೀಡಿ ಸೂಕ್ತ ಕ್ರಮ ಕೈಗೊಳ್ಳುವಂತೆ ಸೂಚನೆ ನೀಡಿದರು. ಇದೇ ವೇಳೆ ಆರೋಗ್ಯ ಮತ್ತು ಶಿಕ್ಷಣಕ್ಕೆ ಸಹಾಯ ಕೋರಿದವರಿಗೆ ವೈಯಕ್ತಿಕವಾಗಿ ಆರ್ಥಿಕ ನೆರವು ನೀಡಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X