Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಈ ಹೊತ್ತಿನ ಹೊತ್ತಿಗೆ
      • ಜನಚರಿತೆ
      • ವಿಡಂಬನೆ
      • ಜನ ಜನಿತ
      • ರಂಗ ಪ್ರಸಂಗ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಜನಮನ
      • ರಂಗದೊಳಗಿಂದ
      • ಶಂಬೂಕ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ಪಿಡಿಒಗಳು ಶಾಸಕರಿಗಿಂತ ಉನ್ನತ...

ಪಿಡಿಒಗಳು ಶಾಸಕರಿಗಿಂತ ಉನ್ನತ ದರ್ಜೆಯವರಂತೆ ವರ್ತಿಸುತ್ತಿದ್ದಾರೆ: ಸಚಿವ ಪ್ರಿಯಾಂಕ್ ಖರ್ಗೆ ಅಸಮಾಧಾನ

ವಾರ್ತಾಭಾರತಿವಾರ್ತಾಭಾರತಿ20 Aug 2023 8:32 PM IST
share
ಪಿಡಿಒಗಳು ಶಾಸಕರಿಗಿಂತ ಉನ್ನತ ದರ್ಜೆಯವರಂತೆ ವರ್ತಿಸುತ್ತಿದ್ದಾರೆ: ಸಚಿವ ಪ್ರಿಯಾಂಕ್ ಖರ್ಗೆ ಅಸಮಾಧಾನ

ಬೆಂಗಳೂರು, ಆ.20: ‘ರಾಜ್ಯದ ಗ್ರಾಮ ಪಂಚಾಯತಿಗಳಲ್ಲಿ ಕೆಲಸ ಮಾಡುತ್ತಿರುವ ಪಿಡಿಒಗಳು ಶಾಸಕರಿಗಿಂತ ಉನ್ನತ ದರ್ಜೆಯವರಂತೆ ವರ್ತನೆ ಮಾಡುತ್ತಿದ್ದಾರೆ. ವ್ಯವಸ್ಥೆ ತುಂಬಾ ಹದಗೆಟ್ಟಿದೆ’ ಎಂದು ಗ್ರಾಮೀಣಾಭಿವೃದ್ಧಿ ಸಚಿವ ಪ್ರಿಯಾಂಕ್ ಖರ್ಗೆ ಬೇಸರ ವ್ಯಕ್ತಪಡಿಸಿದ್ದಾರೆ.

ರವಿವಾರ ನಗರದ ಕೊಂಡಜ್ಜಿ ಬಸಪ್ಪ ಸಭಾಂಗಣದಲ್ಲಿ ಆಯೋಜಿಸಿದ್ದ ಚಿಂತನಾ ಸಮಾವೇಶದಲ್ಲಿ ಮಾತನಾಡಿದ ಅವರು, ರಾಜ್ಯದ ಗ್ರಾಮ ಪಂಚಾಯತ್‍ಗಳಲ್ಲಿ ಸಮರ್ಪಕವಾಗಿ ತೆರಿಗೆಯನ್ನು ಸಂಗ್ರಹಿಸುತ್ತಿಲ್ಲ. ಒಂದು ವೇಳೆ ಸಮರ್ಪಕವಾಗಿ ತೆರಿಗೆಯನ್ನು ಸಂಗ್ರಹಿಸಿದ್ದಲ್ಲಿ, 3ಸಾವಿರ ಕೋಟಿ ರೂ. ರಾಜ್ಯ ಸರಕಾರಕ್ಕೆ ಬರುತ್ತದೆ. ಪಂಚಾಯಿತಿಗಳಲ್ಲಿ ಭ್ರಷ್ಟಾಚಾರವನ್ನು ತಡೆಯುವ ಸಲುವಾಗಿ ಪಂಚತಂತ್ರ-2 ತಂತ್ರಾಂಶವನ್ನು ಬಿಡುಗಡೆ ಮಾಡಲಾಗುತ್ತಿದೆ ಎಂದರು.

ಪಂಚತಂತ್ರ-2ನಲ್ಲಿ ಸಭೆಯ ನಡಾವಳಿ, ಯೋಜನೆಗಳು, ಪಿಡಿಒಗಳ ವಿವರ ಸೇರಿ ಎಲ್ಲವನ್ನು ಸಾರ್ವಜನಿಕವಾಗಿ ಪ್ರಕಟಿಸಲಾಗುತ್ತದೆ. ಪಂಚಾಯಿತಿಗಳಲ್ಲಿನ ಭ್ರಷ್ಟಾಚಾರಕ್ಕೆ ಕಡಿವಾಣ ಹಾಕಬೇಕಾಗಿದೆ. ಅದಕ್ಕೆ ಸ್ವಲ್ಪ ಕಾಲಾವಕಾಶ ಬೇಕಾಗಿದೆ. ಬಾಪೂಜಿ ಕೇಂದ್ರಗಳಲ್ಲಿಯೂ ಪಾರದರ್ಶಕತೆಯನ್ನು ತರಲಾಗುತ್ತದೆ ಎಂದು ಅವರು ತಿಳಿಸಿದರು.

ಬೆಂಗಳೂರು ಹೊರತುಪಡಿಸಿ ಗ್ರಾಮೀಣ ಪ್ರದೇಶಗಳಲ್ಲಿಯೂ ನಾವು ಉತ್ತಮ ವಾತವರಣವನ್ನು ನಿರ್ಮಾಣ ಮಾಡಬೇಕಾಗಿದೆ. ನಮ್ಮ ರಾಜ್ಯವು ವಿಭಿನ್ನತೆಯಿಂದ ಕೂಡಿದ್ದು, ಎಲ್ಲ ಪ್ರದೇಶಗಳಲ್ಲಿ ಆಯಾ ಪರಿಸರಕ್ಕೆ ಅನುಗುಣವಾಗಿ ಅಭಿವೃದ್ಧಿಯನ್ನು ಮಾಡಬಹುದಾಗಿದೆ. ರಾಷ್ಟ್ರಕ್ಕೆ ಮಾದರಿಯಾಗುವ ಉಧ್ಯಮಶೀಲತೆಯನ್ನು ನಮ್ಮ ಸರಕಾರ ರಾಜ್ಯದಲ್ಲಿ ಅನುಷ್ಠಾನ ಮಾಡಲಿದೆ ಎಂದು ಅವರು ಹೇಳಿದರು.

ದುಡಿಯುವ ಮಹಿಳೆಯರಿಗೆ ಉಪಯುಕ್ತವಾಗಲೆಂದು ದುಡಿಯುವ ಸ್ಥಳದಲ್ಲಿಯೇ ಕೂಸಿನ ಮನೆಗಳನ್ನು ತೆರೆಯಲಾಗುತ್ತದೆ. ಇದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯಡಿಯಲ್ಲಿ ಜಾರಿ ಮಾಡಲಾಗುತ್ತದೆ ಎಂದು ಅವರು ಹೇಳಿದರು.

ಶಾಸಕ ದರ್ಶನ್ ಪುಟ್ಟಣ್ಣಯ್ಯ ಮಾತನಾಡಿ, ದೇಶದಲ್ಲಿ ಕನಿಷ್ಠ ಬೆಂಬಲ ಬೆಲೆ ಜಾರಿಯಾಗುವವರೆಗೂ ಹೋರಾಟವನ್ನು ಮಾಡುತ್ತೇವೆ ಎಂದು ಹೇಳಿದರು.

ರಾಜಕೀಯ ವಿಶ್ಲೇಷಕ ಡಾ.ಬಿ.ಸಿ.ಬಸವರಾಜು ಮಾತನಾಡಿ, ಮಾಧ್ಯಮಗಳು ಗ್ಯಾರೆಂಟಿ ಯೋಜನೆಗಳಿಂದ ರಾಜ್ಯ ದಿವಾಳಿಯಾಗುತ್ತದೆ ಎಂದು ಬಿಂಬಿಸುತ್ತಿವೆ. ದೇಶದ ಪ್ರಧಾನಿ ಮೋದಿ ಅವರು ಇದನ್ನೇ ಹೇಳಿದ್ದಾರೆ. ಆದರೆ ಕಾಂಗ್ರೆಸ್ ಸರಕಾರ ಕರ್ನಾಟಕದಲ್ಲಿ ಗ್ಯಾರೆಂಟಿ ಯೋಜನೆಗಳನ್ನು ಜಾರಿ ಮಾಡಿದ ಒಂದು ವಾರದಲ್ಲೇ ಬಿಜೆಪಿ ಆಡಳಿತ ಮಧ್ಯಪ್ರದೇಶದಲ್ಲಿ ಇಂತಹ ಕರ್ನಾಟಕ ಸರಕಾರದ ಗ್ಯಾರೆಂಟಿಯನ್ನು ಹೋಲುವ ಮತ್ತೊಂದು ಯೋಜನೆಗೆ ಚಾಲನೆ ನೀಡಿದ್ದಾರೆ ಎಂದು ಟೀಕಿಸಿದರು.

ಮೋಹಾನ್ ದಾಸ್ ಪೈ ನಮ್ಮ ತೆರಿಗೆ ಹಣವು ದೇಶದ ಅಭಿವೃದ್ಧಿಗೆ ಇರುವುದು ಹೊರತಾಗಿ, ಗ್ಯಾರೆಂಟಿ ಯೋಜನೆಗಳ ಅನುಷ್ಟಾನಕ್ಕೆ ಅಲ್ಲ ಎಂದು ಟ್ವೀಟರ್ ಅಭಿಯಾನವನ್ನೂ ನಡೆಸಿದ್ದರು. ಇದೆಲ್ಲದರ ನಡುವೆಯೂ ಸರಕಾರ ಬಹುಸಂಖ್ಯಾತ ಬಡವರ ಕೈಗೆ ಹಣ ಬರುವ ಹಾಗೆ ಮಾಡಿದೆ. ಆ ಮೂಲಕ ಜನರ ಕೊಳ್ಳುವ ಶಕ್ತಿಯನ್ನು ಹೆಚ್ಚಿಸಿದೆ ಎಂದು ಅವರು ಹೇಳಿದರು.

ಈ ದೇಶದಲ್ಲಿ ಬಡವರ ಆದಾಯ ಕಡಿಮೆ ಆಗಿದೆ. ಗ್ರಾಮೀಣ ಪ್ರದೇಶದಲ್ಲಿಯೂ ಕಡಿಮೆ ಇದೆ. ಮಧ್ಯಮ ವರ್ಗದವರ ಸಂಪಾದನೆ ಕಡಿಮೆ ಆಗುತ್ತಿದೆ. ಶ್ರೀಮಂತ್ರರ ಆದಾಯ ಹೆಚ್ಚಾಗಿದೆ. ಆಗಾಗಿ ದುಬಾರಿ ಕಾರು, ಮೊಬೈಲ್‍ಗಳು ಹೆಚ್ಚಿನ ಪ್ರಮಾಣದಲ್ಲಿ ಮಾರಾಟವಾಗುತ್ತಿದೆ. ಮಧ್ಯಮ ವರ್ಗದವರು ಕೊಳ್ಳುವ ವಸ್ತುಗಳ ಮಾರಾಟ ಕುಸಿತವಾಗಿದೆ ಎಂದು ಅವರು ವಿವರಿಸಿದರು.

ನಮ್ಮ ಕೇಂದ್ರ ಸರಕಾರ ಹಾಗೂ ರಾಜ್ಯ ಸರಕಾರದ ಪಾಲಿಸಿಗಳು ಶ್ರೀಮಂತರ ಪರವಾಗಿದೆ. ಹಾಗಾಗಿ ಕೋವಿಡ್‍ನಿಂದ ದೇಶದ ಜಿಡಿಪಿ ಕುಸಿತವಾದರೂ, ಶ್ರೀಮಂತರ ಆದಾಯ ಹೆಚ್ಚಾಗಿದೆ. ನಿಜವಾದ ಬಿಟ್ಟಿ ಭಾಗ್ಯಗಳನ್ನು ಈ ದೇಶದ ಶ್ರೀಮಂತರು ಪಡೆದುಕೊಂಡಿದ್ದಾರೆ. ಕಾರ್ಪೊರೇಟ್ ಕಂಪನಿಗಳು ಸರಕಾರದಿಂದ ಹಣವನ್ನು ಪಡೆದುಕೊಂಡಿವೆ ಎಂದು ಡಾ. ಬಿ.ಸಿ. ಬಸವರಾಜು ಹೇಳಿದರು.

ಬಡವರ ಆದಾಯ ಕಡಿಮೆ ಇದ್ದಾಗ ಸರಕಾರವೇ ಹಣವನ್ನು ನೀಡಬೇಕಾಗುತ್ತದೆ. ಗ್ಯಾರೆಂಟಿ ಯೋಜನೆಯಿಂದ ಬರುವ ಹಣವನ್ನು ಜನರು ಕೂಡಿಡುವುದಿಲ್ಲ, ಖರ್ಚು ಮಾಡುತ್ತಾರೆ. ಹಾಗಾಗಿ ಅಭಿವೃದ್ಧಿ ಆಗುತ್ತದೆ. ಸರಕಾರ ಈ ಗ್ಯಾರೆಂಟಿಗಳನ್ನು ಅನುಷ್ಠಾನ ಮಾಡುವಾಗ ಜನರ ಮೇಲೆ ತೆರಿಗೆಯನ್ನು ಹಾಕಬಾರದು ಎಂದು ಅವರು ಹೇಳಿದರು.

ಕಾರ್ಯಕ್ರಮದಲ್ಲಿ ಸಂಸ್ಕೃತಿ ಚಿಂತಕ ಪ್ರೊ.ರೆಹಮತ್ ತೆರೀಕರೆ, ಕೆ.ಪಿ.ಲಕ್ಷ್ಮಣ್, ಡಾ.ಸಬೀಹಾ ಭೂಮಿಗೌಡ ಮತ್ತಿತರರು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X