Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಈ ಹೊತ್ತಿನ ಹೊತ್ತಿಗೆ
      • ಜನಚರಿತೆ
      • ವಿಡಂಬನೆ
      • ಜನ ಜನಿತ
      • ರಂಗ ಪ್ರಸಂಗ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಜನಮನ
      • ರಂಗದೊಳಗಿಂದ
      • ಶಂಬೂಕ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ಬಾನು ಮುಷ್ತಾಕ್ ಅವರ ಕೃತಿಯ ಅನುವಾದಕ್ಕೆ...

ಬಾನು ಮುಷ್ತಾಕ್ ಅವರ ಕೃತಿಯ ಅನುವಾದಕ್ಕೆ ಪ್ರತಿಷ್ಠಿತ 'ಇಂಗ್ಲಿಷ್ ಪೆನ್' ಪ್ರಶಸ್ತಿ

ವಾರ್ತಾಭಾರತಿವಾರ್ತಾಭಾರತಿ18 July 2024 6:30 PM IST
share
ಬಾನು ಮುಷ್ತಾಕ್ ಅವರ ಕೃತಿಯ ಅನುವಾದಕ್ಕೆ ಪ್ರತಿಷ್ಠಿತ ಇಂಗ್ಲಿಷ್ ಪೆನ್ ಪ್ರಶಸ್ತಿ

ಬೆಂಗಳೂರು : ಕನ್ನಡದ ಖ್ಯಾತ ಸಾಹಿತಿ ಬಾನು ಮುಷ್ತಾಕ್ ಅವರ 'ಹಸೀನಾ ಮತ್ತು ಇತರ ಕತೆಗಳು' ಕಥಾ ಸಂಕಲನದ ಆಂಗ್ಲ ಅನುವಾದಕ್ಕೆ ಪ್ರತಿಷ್ಠಿತ 'ಇಂಗ್ಲಿಷ್ ಪೆನ್' ಪ್ರಶಸ್ತಿ ಪ್ರಕಟವಾಗಿದೆ. ಪತ್ರಕರ್ತೆ, ಲೇಖಕಿ, ಅನುವಾದಕಿ ದೀಪಾ ಬಸ್ತಿ ಅವರು ಈ ಕಥಾ ಸಂಕಲನವನ್ನು 'ಹಸೀನಾ ಅಂಡ್ ಅದರ್ ಸ್ಟೋರೀಸ್ ' ಎಂದು ಇಂಗ್ಲಿಷ್ ಗೆ ಅನುವಾದಿಸಿದ್ದರು. ಹತ್ತು ಭಾಷೆಗಳಿಂದ ಇಂಗ್ಲಿಷ್ ಗೆ ಅನುವಾದಗೊಂಡ ಒಟ್ಟು 16 ಕೃತಿಗಳಿಗೆ ಈ ಸಾಲಿನ ಪೆನ್ ಪ್ರಶಸ್ತಿ ಗುರುವಾರ ಪ್ರಕಟವಾಗಿದೆ. ಇದೇ ಮೊದಲ ಬಾರಿ ಕನ್ನಡದಿಂದ ಇಂಗ್ಲಿಷ್ ಗೆ ಅನುವಾದವಾದ ಕೃತಿಯೊಂದಕ್ಕೆ ಈ ಪ್ರತಿಷ್ಠಿತ ಪ್ರಶಸ್ತಿ ಬಂದಿದೆ ಎಂದು 'ಇಂಗ್ಲಿಷ್ ಪೆನ್' ಪ್ರಕಟಣೆ ತಿಳಿಸಿದೆ.

'ಇಂಗ್ಲಿಷ್ ಪೆನ್' ಜಗತ್ತಿನ ಪ್ರಸಿದ್ಧ ಮಾನವ ಹಕ್ಕು ಸಂಘಟನೆಗಳಲ್ಲಿ ಒಂದಾಗಿದ್ದು, ಅಭಿವ್ಯಕ್ತಿ ಸ್ವಾತಂತ್ರ್ಯಕ್ಕಾಗಿ ಜಾಗತಿಕವಾಗಿ ಶ್ರಮಿಸುತ್ತಿದೆ. ಮುಕ್ತವಾಗಿ ಓದುವ ಹಾಗು ಬರೆಯುವ ಹಕ್ಕಿಗಾಗಿ ಈ ಸಂಘಟನೆ ದುಡಿಯುತ್ತಿದೆ. 90 ದೇಶಗಳಲ್ಲಿ 130 ಕೇಂದ್ರಗಳಿರುವ ಪೆನ್ ಇಂಟರ್ ನ್ಯಾಷನಲ್ ಎಂಬ ಜಾಗತಿಕ ಲೇಖಕರ ಸಂಘವನ್ನು ಇದೇ 'ಇಂಗ್ಲಿಷ್ ಪೆನ್' ಸ್ಥಾಪಿಸಿದೆ.

ಸಮಕಾಲೀನ ಮಹಿಳೆಯರು ಎದುರಿಸುವ ವಾಸ್ತವಗಳನ್ನು ಅಪರೂಪದ ಪ್ರತಿಭೆ ಹಾಗು ಕಲೆಯ ಮೂಲಕ ಬಾನು ಮುಷ್ತಾಕ್ ಅವರು ಅನಾವರಣಗೊಳಿಸಿದ್ದಾರೆ. ಅವರ ಕೃತಿಯಲ್ಲಿನ ಧ್ವನಿ, ಸಂದರ್ಭಗಳು ಹಾಗು ಅನುಭವವನ್ನು ದೀಪಾ ಬಸ್ತಿ ಅವರ ಅತ್ಯುತ್ತಮ ಅನುವಾದ ಭಾರತ ಹಾಗು ಜಾಗತಿಕ ಇಂಗ್ಲಿಷ್ ಓದುಗರಿಗೆ ತಲುಪಿಸಿದೆ ಎಂದು ಪೆನ್ ಪ್ರಶಸ್ತಿ ಸಮಿತಿ ಹೇಳಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X