Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಈ ಹೊತ್ತಿನ ಹೊತ್ತಿಗೆ
      • ಜನಚರಿತೆ
      • ವಿಡಂಬನೆ
      • ಜನ ಜನಿತ
      • ರಂಗ ಪ್ರಸಂಗ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಜನಮನ
      • ರಂಗದೊಳಗಿಂದ
      • ಶಂಬೂಕ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ದೇಶದಲ್ಲಿ ಹೆಚ್ಚಿದ ನಿರುದ್ಯೋಗ, ಹಸಿವು,...

ದೇಶದಲ್ಲಿ ಹೆಚ್ಚಿದ ನಿರುದ್ಯೋಗ, ಹಸಿವು, ಸಾವಿನ ಭಯದಿಂದ ಸ್ವ-ಉದ್ಯೋಗ ಆಯ್ಕೆ: ವರದಿ

ವಾರ್ತಾಭಾರತಿವಾರ್ತಾಭಾರತಿ11 March 2024 10:23 PM IST
share
ದೇಶದಲ್ಲಿ ಹೆಚ್ಚಿದ ನಿರುದ್ಯೋಗ, ಹಸಿವು, ಸಾವಿನ ಭಯದಿಂದ ಸ್ವ-ಉದ್ಯೋಗ ಆಯ್ಕೆ: ವರದಿ

ಬೆಂಗಳೂರು: ದೇಶದಲ್ಲಿ ಪ್ರಸಕ್ತ 25 ವರ್ಷದೊಳಗಿನ ಶೇ.47ರಷ್ಟು ಪದವೀಧರರು ನಿರುದ್ಯೋಗಿಗಳಾಗಿದ್ದಾರೆ. ಹಸಿವು ಮತ್ತು ಸಾವಿನ ಭಯದಿಂದ ಸ್ವ-ಉದ್ಯೋಗವನ್ನು ಆಯ್ಕೆ ಮಾಡಿಕೊಳ್ಳುತ್ತಿದ್ದಾರೆ ಎಂದು ‘ಬಹುತ್ವ ಕರ್ನಾಟಕ ಸಂಘಟನೆ’ಯು ‘ಉದ್ಯೋಗ, ವೇತನ ಹಾಗೂ ಅಸಮತೆ’ ಎಂಬ ಶೀರ್ಷಿಕೆಯಡಿ ‘ಗ್ಯಾರೆಂಟಿ ಚೆಕ್’ ವರದಿಯನ್ನು ಪ್ರಕಟಿಸಿದೆ.

ಸೋಮವಾರ ಇಲ್ಲಿನ ಪ್ರೆಸ್‍ಕ್ಲಬ್ ಆವರಣದಲ್ಲಿ ಸಂಘಟನೆಯ ಸಂಚಾಲಕರಾದ ವಕೀಲ ವಿನಯ್ ಶ್ರೀನಿವಾಸ, ರಾಧಾ, ಭಾನುಪ್ರಿಯಾ, ಪ್ರೊ ರಾಜೇಂದ್ರನ್ ನಾರಾಯಣನ್, ಡಾ.ಬಸವರಾಜು ಬಿ.ಸಿ. ಮೈತ್ರೇಯಿ ಕೆ. ವರದಿಯನ್ನು ಪ್ರಕಟಿಸಿದ್ದಾರೆ.

ವರದಿಯಲ್ಲಿ ಪ್ರಸ್ತುತಪಡಿಸಲಾದ ಎಲ್ಲ ಅಂಕಿ ಅಂಶಗಳು ಮತ್ತು ವಿಶ್ಲೇಷಣೆಯು ಸಾರ್ವಜನಿಕವಾಗಿ ಲಭ್ಯವಿರುವ ಸರಕಾರಿ ದತ್ತಾಂಶವನ್ನು ಆಧರಿಸಿದೆ. ಪಿರಿಯಾಡಿಕ್ ಲೇಬರ್ ಫೋರ್ಸ್ ಸಮೀಕ್ಷೆ ಮತ್ತು ಈಗ ಸ್ಥಗಿತಗೊಂಡಿರುವ ಉದ್ಯೋಗ-ನಿರುದ್ಯೋಗ ಸಮೀಕ್ಷೆಯಿಂದ ದತ್ತಾಂಶವನ್ನು ಬಳಸಲಾಗಿದೆ. ವರದಿಯು 2022-23ನೇ ಸಾಲಿನಲ್ಲಿ ದೇಶದ 49 ಕೋಟಿ ಕಾರ್ಮಿಕರ ಸ್ಥಿತಿಗತಿ ಪ್ರತಿನಿಧಿಸುತ್ತದೆ ಬಹುತ್ವ ಕರ್ನಾಟಕ ಸಂಘಟನೆಯು ಸ್ಪಷ್ಟಪಡಿಸಿದೆ.

‘2011-12 ಹಾಗೂ 2022-23ರ ನಡುವಿನ ಹತ್ತು ವರ್ಷಗಳ ಅವಧಿಯಲ್ಲಿ ಸ್ವ-ಉದ್ಯೋಗಿಗಳ ಪ್ರಮಾಣ ಹೆಚ್ಚಾಗಿದೆ. ಅರ್ಧಕ್ಕಿಂತಲೂ ಹೆಚ್ಚು ಪುರುಷರು ಮತ್ತು ಮೂರರಲ್ಲಿ ಎರಡು ಭಾಗಕ್ಕಿಂತ ಹೆಚ್ಚು ಮಹಿಳೆಯರು ಈಗ ‘ಸ್ವ-ಉದ್ಯೋಗʼದ ಮೊರೆ ಹೋಗಿದ್ದಾರೆ. ಆದಾಯ ಇಲ್ಲದೆ ಕುಟುಂಬದ ಕೆಲಸದಲ್ಲೇ ಸಹಾಯಕರಾಗಿ ತೊಡಗಿಸಿಕೊಂಡ ಮಹಿಳೆಯರ ಪ್ರಮಾಣ ಐದು ವರ್ಷಗಳ ಹಿಂದೆ ಪ್ರತಿ 4 ಮಹಿಳೆಯರಿಗೆ ಒಬ್ಬರಿದ್ದರೆ, ಈಗ ಪ್ರತಿ 3 ಮಹಿಳೆಯರಿಗೆ ಒಬ್ಬರಾಗಿದ್ದಾರೆʼ ಎಂದು ವರದಿ ತಿಳಿಸಿದೆ.

ಬಿಜೆಪಿ 2019ರ ಚುನಾವಣಾ ಪ್ರಣಾಳಿಕೆಯಲ್ಲಿ ರಾಷ್ಟ್ರೀಯ ಕನಿಷ್ಠ ವೇತನದಲ್ಲಿ ಶೇ.42 ಬೆಳವಣಿಗೆ ಕಂಡುಬಂದಿದ್ದು, ಕಾರ್ಮಿಕರ ಗೌರವಯುತ ಜೀವನವನ್ನು ಖಚಿತಪಡಿಸಿಕೊಳ್ಳಲು ಮುಂದಿನ ಐದು ವರ್ಷಗಳಲ್ಲಿ ಅದೇ ದಾರಿಯಲ್ಲಿ ಸಾಗುತ್ತೇವೆ ಎಂದು ಘೋಷಿಸಿತ್ತು. ಆದರೆ, ವಾಸ್ತವದಲ್ಲಿ ಕಾರ್ಮಿಕರ ವೇತನಗಳು ಸ್ಥಗಿತಗೊಂಡಿವೆ. ಕಾರ್ಮಿಕ ಹಾಗು ಉದ್ಯೋಗ ಸಚಿವಾಲಯವು ನೇಮಿಸಿದ ಅನೂಪ್ ಸತ್ಪತಿ ಸಮಿತಿಯು ಭಾರತದಲ್ಲಿ ಮೂಲ ವೇತನವು ದಿನಕ್ಕೆ ಕನಿಷ್ಠ 375 ರೂ. ಇರಬೇಕೆಂದು ಸೂಚಿಸಿತ್ತು. ಆದರೆ ಈಗಲೂ ಅದು 178 ರೂ. ಇದೆ. ಸುಮಾರು 30 ಕೋಟಿ ಜನರು ಮೂಲ ವೇತನಕ್ಕಿಂತಲೂ ಕಡಿಮೆ ಗಳಿಸುತ್ತಿದ್ದಾರೆ ಎಂದು ವರದಿ ಬಹಿರಂಗಗೊಳಿಸಿದೆ.

ʼಸಬ್ ಕಾ ಸಾಥ್ ಸಬ್ ಕಾ ವಿಕಾಸ್ʼ ಎಂದು ಕೇಂದ್ರ ಸರಕಾರ ಘೋಷಿಸಿದ್ದು, ಹಿಂದಿನ 10 ವರ್ಷಗಳಲ್ಲಿ ಜಿಡಿಪಿ ಹೆಚ್ಚಾದರೂ, ಅದರಿಂದ ಶ್ರೀಮಂತರು ಉದ್ದಾರವಾಗುತ್ತಿದ್ದಾರೆ ಹೊರತು ಬಡವರಲ್ಲ. 2022ರಲ್ಲಿ ಶೇ.10ರಷ್ಟಿರುವ ಅತಿ ಶ್ರೀಮಂತರು ದೇಶದ ಒಟ್ಟು ಸಂಪತ್ತಿನಲ್ಲಿ ಶೇ.64.5ರಷ್ಟನ್ನು ಹೊಂದಿದ್ದಾರೆ. ಸಾಮಾನ್ಯ ವರ್ಗಕ್ಕೆ ಸೇರಿದ ಶೇ.50ರಷ್ಟು ಜನರು ದೇಶದ ಒಟ್ಟು ಸಂಪತ್ತಿನಲ್ಲಿ ಶೇ.5.6ರಷ್ಟು ಭಾಗ ಹೊಂದಿದ್ದಾರೆ ಎಂದು ವರದಿಯಲ್ಲಿ ಉಲ್ಲೇಖಿಸಲಾಗಿದೆ.

ಕೇಂದ್ರ ಸರಕಾರದ ಈ ವರ್ಷದ ಬಜೆಟ್ ಹಂಚಿಕೆಗಳು ವಿರುದ್ಧ ದಿಕ್ಕಿನಲ್ಲಿ ಸಾಗುತ್ತಿವೆ. ಐದು ಸಾಮಾಜಿಕ ವಲಯದ ಯೋಜನೆಗಳ(ನರೇಗಾ, ಎನ್‍ಎಸ್‍ಎಪಿ, ಮಧ್ಯಾಹ್ನದ ಊಟ, ಐಸಿಡಿಎಸ್ ಮತ್ತು ಪಿಎಂಎಂವಿವೈ) ಬಜೆಟ್ ಹಂಚಿಕೆಯು ಜಿಡಿಪಿಯ ಶೇ.0.40ರಷ್ಟು ಮಾತ್ರ ಇದೆ ಎಂದು ವರದಿ ತಿಳಿಸಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X