Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಈ ಹೊತ್ತಿನ ಹೊತ್ತಿಗೆ
      • ಜನಚರಿತೆ
      • ವಿಡಂಬನೆ
      • ಜನ ಜನಿತ
      • ರಂಗ ಪ್ರಸಂಗ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಜನಮನ
      • ರಂಗದೊಳಗಿಂದ
      • ಶಂಬೂಕ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ‘ನೈಸ್ ಯೋಜನೆ’ ರಾಜ್ಯ‌ ಸರಕಾರ...

‘ನೈಸ್ ಯೋಜನೆ’ ರಾಜ್ಯ‌ ಸರಕಾರ ಮುಟ್ಟುಗೋಲು ಹಾಕಿಕೊಳ್ಳಬೇಕು: ಕಾಂಗ್ರೆಸ್‌ ಶಾಸಕ ಟಿ.ಬಿ.ಜಯಚಂದ್ರ ಆಗ್ರಹ

ವಾರ್ತಾಭಾರತಿವಾರ್ತಾಭಾರತಿ21 Aug 2023 11:52 PM IST
share
‘ನೈಸ್ ಯೋಜನೆ’ ರಾಜ್ಯ‌ ಸರಕಾರ ಮುಟ್ಟುಗೋಲು ಹಾಕಿಕೊಳ್ಳಬೇಕು: ಕಾಂಗ್ರೆಸ್‌ ಶಾಸಕ ಟಿ.ಬಿ.ಜಯಚಂದ್ರ ಆಗ್ರಹ

ಬೆಂಗಳೂರು, ಆ.21: ‘ಬೆಂಗಳೂರು-ಮೈಸೂರು ಎಕ್ಸ್‌ ಪ್ರೆಸ್ ಹೆದ್ದಾರಿ ನಿರ್ಮಾಣವಾಗಿರುವ ಹಿನ್ನೆಲೆಯಲ್ಲಿ ‘ನೈಸ್’ ರಸ್ತೆಯ ಅವಶ್ಯಕತೆಯಿಲ್ಲ. ಆದುದರಿಂದ, ರಾಜ್ಯ ಸರಕಾರವು ನೈಸ್ ಯೋಜನೆಯನ್ನು ಮುಟ್ಟುಗೋಲು ಹಾಕಿಕೊಳ್ಳಬೇಕು’ ಎಂದು ರಾಜ್ಯ ಸರಕಾರದ ಹೊಸದಿಲ್ಲಿಯಲ್ಲಿನ ವಿಶೇಷ ಪ್ರತಿನಿಧಿ ಟಿ.ಬಿ. ಜಯಚಂದ್ರ ಆಗ್ರಹಿಸಿದರು.

ಸೋಮವಾರ ವಿಧಾನಸೌಧದಲ್ಲಿ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, ‘ನೈಸ್ ಯೋಜನೆಗೆ 2016ರ ಡಿಸೆಂಬರ್ ನಲ್ಲಿ ನಾನೆ ಸದನ ಸಮಿತಿಯ ಅಧ್ಯಕ್ಷನಾಗಿ ವರದಿ ಕೊಟ್ಟಿದ್ದೇನೆ. ಸಮಿತಿಯಲ್ಲಿ ಕಾಂಗ್ರೆಸ್, ಜೆಡಿಎಸ್ ಹಾಗೂ ಬಿಜೆಪಿ ಪಕ್ಷದ ಸದಸ್ಯರು ಇದ್ದರು. ಬೆಳಗಾವಿಯ ಅಧಿವೇಶನದಲ್ಲಿ ಈ ವರದಿ ಕುರಿತು ಚರ್ಚೆ ನಡೆದು, ಸರಕಾರ ಅದಕ್ಕೆ ಸಂಬಂಧಿಸಿದಂತೆ ಉತ್ತರವನ್ನು ಕೊಟ್ಟಿದೆ’ ಎಂದು ಹೇಳಿದರು.

ಸರಕಾರಕ್ಕೆ ವರದಿಯಲ್ಲಿ ನಮ್ಮ ಸಲಹೆಗಳು ಹಾಗೂ ಶಿಫಾರಸ್ಸುಗಳನ್ನು ಕೊಟ್ಟಿದ್ದೇವೆ. ಉನ್ನತ ಮಟ್ಟದ ತನಿಖೆಯಾಗಬೇಕು, ಯೋಜನೆಗೆ ಒಪ್ಪಂದಕ್ಕಿಂತ ಹೆಚ್ಚುವರಿಯಾಗಿ ನೀಡಿರುವ ವರದಿಯನ್ನು ಹಿಂಪಡೆದುಕೊಳ್ಳಬೇಕು ಎಂದು ಶಿಫಾರಸ್ಸು ಮಾಡಿದ್ದೇವೆ. ಸರಕಾರ ನಾವು ಕೊಟ್ಟಿರುವ ವರದಿ ಆಧಾರದಲ್ಲಿ ಕ್ರಮ ಜರುಗಿಸಿದರೆ ಸಾಕು ಎಂದು ಜಯಚಂದ್ರ ಹೇಳಿದರು.

ನೈಸ್ ಯೋಜನೆಗೆ ಸಂಬಂಧಿಸಿದಂತೆ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಹಾಗೂ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ನಡುವಿನ ಆರೋಪ ಪ್ರತ್ಯಾರೋಪಗಳ ಬಗ್ಗೆ ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ಈ ವಿಚಾರದ ಕುರಿತು ನೀವು(ಮಾಧ್ಯಮದವರು) ಅವರಿಬ್ಬರನ್ನೆ ಕೇಳಿ ಎಂದು ನುಡಿದರು.

ಕಾವೇರಿ ನದಿ ನೀರು ಹಂಚಿಕೆಗೆ ಸಂಬಂಧಿಸಿದಂತೆ ಬುಧವಾರ ರಾಜ್ಯ ಸರಕಾರ ಸರ್ವಪಕ್ಷ ಸಭೆ ಕರೆದಿದೆ. ಅಲ್ಲಿ ಈ ವಿಚಾರದ ಕುರಿತು ಚರ್ಚೆ ನಡೆಸಿ ಸೂಕ್ತ ತೀರ್ಮಾನ ಕೈಗೊಳ್ಳಲಾಗುತ್ತದೆ. ಭದ್ರಾ ಮೇಲ್ದಂಡೆ ಯೋಜನೆಯನ್ನು ‘ರಾಷ್ಟ್ರೀಯ ಯೋಜನೆ’ ಎಂದು ಕೇಂದ್ರ ಸರಕಾರ ಘೋಷಣೆ ಮಾಡಿದೆ. ಕೇಂದ್ರ ಸರಕಾರದ ಬಜೆಟ್ ನಲ್ಲಿ 5 ಸಾವಿರ ಕೋಟಿ ರೂ.ಗಳನ್ನು ಈ ಯೋಜನೆಗೆ ನೀಡುವುದಾಗಿ ಘೋಷಣೆ ಮಾಡಲಾಗಿದೆ. ಆದರೆ, ಈವರೆಗೆ ಹಣ ಬಿಡುಗಡೆ ಮಾಡಿಲ್ಲ ಎಂದು ಅವರು ಹೇಳಿದರು.

ಇದನ್ನು ಕೇಂದ್ರದ ಅಥವಾ ರಾಜ್ಯದ ಯೋಜನೆಯೆ ಆಗಲಿ ಕೇಂದ್ರ ಸರಕಾರ ಯಾವುದೇ ಮಾನದಂಡದಲ್ಲಿ ಗುರುತಿಸಲಿ ಕಗ್ಗಂಟಿಲ್ಲದೆ ಹಣ ಬಿಡುಗಡೆ ಮಾಡಲಿ. ಈ ಯೋಜನೆಗೆ ರಾಜ್ಯ ಸರಕಾರ 20 ಸಾವಿರ ಕೋಟಿ ರೂಪಾಯಿ ವೆಚ್ಚ ಮಾಡುತ್ತಿದೆ ಎಂದು ಜಯಚಂದ್ರ ಹೇಳಿದರು.

ಕೇಂದ್ರದಲ್ಲಿ ಬಿಜೆಪಿ ನೇತೃತ್ವದ ಸರಕಾರವಿದೆ. ರಾಜ್ಯದಲ್ಲಿ ಕಾಂಗ್ರೆಸ್ ಸರಕಾರವಿದೆ. ಕೇಂದ್ರ ಸರ್ಕಾರ ಬಜೆಟ್ ಮಂಡಿಸಿದ ಬಳಿಕ ರಾಜ್ಯ ಸರಕಾರ ಕೇಂದ್ರ ಸರಕಾರದ ಯೋಜನೆಗಳನ್ನು ಹಾಗೂ ಕಾರ್ಯಕ್ರಮಗಳನ್ನು ಬಜೆಟ್ ನಲ್ಲಿ ಅಳವಡಿಸಿಕೊಳ್ಳುವುದು ಸಂಪ್ರದಾಯವಾಗಿದೆ. ಈ ನಿಟ್ಟಿನಲ್ಲಿ ಕೇಂದ್ರ ಸರಕಾರ ಎಷ್ಟು ಹಣ ಬಿಡುಗಡೆ ಮಾಡಿದೆ. ರಾಜ್ಯ ಸರಕಾರ ಎಷ್ಟು ವೆಚ್ಚ ಮಾಡಿದೆ ಬಾಕಿ ಎಷ್ಟು ಬಿಡುಗಡೆ ಮಾಡಲಿದೆ ಎಂಬ ವಿವರಗಳನ್ನು ಮುಂದಿನ ದಿನಗಳಲ್ಲಿ ಮಾಹಿತಿ ಪಡೆದು ನೀಡುವುದಾಗಿ ಜಯಚಂದ್ರ ತಿಳಿಸಿದರು.

ಇದಕ್ಕೂ ಮುನ್ನ ಅಪರ ಮುಖ್ಯ ಕಾರ್ಯದರ್ಶಿ ಯೋಜನೆ ಕಾರ್ಯಕ್ರಮ ಸಂಯೋಜನೆ ಹಾಗೂ ಸಾಂಖ್ಯಿಕ ಇಲಾಖೆ ಮುಖ್ಯಸ್ಥೆ ಶಾಲಿನಿ ರಜನೀಶ್ ಜೊತೆ ಸಭೆ ಮಾಡಿ ಕೇಂದ್ರ ಸರಕಾರದ ಎದುರು ಬಾಕಿ ಇರುವ ರಾಜ್ಯದ ಯೋಜನೆಗಳ ಬಗ್ಗೆ ಅವರು ಚರ್ಚಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X