Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಈ ಹೊತ್ತಿನ ಹೊತ್ತಿಗೆ
      • ಜನಚರಿತೆ
      • ವಿಡಂಬನೆ
      • ಜನ ಜನಿತ
      • ರಂಗ ಪ್ರಸಂಗ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಜನಮನ
      • ರಂಗದೊಳಗಿಂದ
      • ಶಂಬೂಕ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ಅಮೆರಿಕ ಕಂಪೆನಿಗಳಿಂದ ರಾಜ್ಯದಲ್ಲಿ...

ಅಮೆರಿಕ ಕಂಪೆನಿಗಳಿಂದ ರಾಜ್ಯದಲ್ಲಿ 25ಸಾವಿರ ಕೋಟಿ ರೂ.ಹೂಡಿಕೆಗೆ ಆಸಕ್ತಿ: ಸಚಿವ ಪ್ರಿಯಾಂಕ್ ಖರ್ಗೆ

ವಾರ್ತಾಭಾರತಿವಾರ್ತಾಭಾರತಿ12 Oct 2023 9:23 PM IST
share
ಅಮೆರಿಕ ಕಂಪೆನಿಗಳಿಂದ ರಾಜ್ಯದಲ್ಲಿ 25ಸಾವಿರ ಕೋಟಿ ರೂ.ಹೂಡಿಕೆಗೆ ಆಸಕ್ತಿ: ಸಚಿವ ಪ್ರಿಯಾಂಕ್ ಖರ್ಗೆ

ಬೆಂಗಳೂರು, ಅ. 12: ಅಮೆರಿಕ ಪ್ರವಾಸದ ವೇಳೆ ವಿವಿಧ ಕಂಪೆನಿಗಳ ಜೊತೆ ಮಾತುಕತೆ ನಡೆಸಿದ ಸಂದರ್ಭದಲ್ಲಿ ಅಲ್ಲಿನ ಕಂಪೆನಿಗಳಿಂದ ರಾಜ್ಯದಲ್ಲಿ ಸುಮಾರು 25ಸಾವಿರ ಕೋಟಿ ರೂ.(3 ಶತಕೋಟಿ ಡಾಲರ್) ಹೂಡಿಕೆ ಮಾಡುವ ಆಸಕ್ತಿ ಪ್ರಕಟವಾಗಿದೆ’ ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ್ ಮತ್ತು ಐಟಿ/ಬಿಟಿ ಸಚಿವ ಪ್ರಿಯಾಂಕ್ ಖರ್ಗೆ ತಿಳಿಸಿದ್ದಾರೆ.

ಅಮೆರಿಕಕ್ಕೆ 12 ದಿನಗಳ ವ್ಯಾಪಾರ ಉತ್ತೇಜನಾ ಪ್ರವಾಸ ತೆರಳಿದ್ದ ರಾಜ್ಯ ನಿಯೋಗದ ನೇತೃತ್ವ ವಹಿಸಿದ್ದ ಎಂ.ಬಿ.ಪಾಟೀಲ್ ಮತ್ತು ಪ್ರಿಯಾಂಕ್ ಖರ್ಗೆ ಗುರುವಾರ ವಿಕಾಸಸೌಧದಲ್ಲಿ ಜಂಟಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ‘ರಾಜ್ಯಕ್ಕೆ ಬಂಡವಾಳ ಆಕರ್ಷಿಸುವ ದೃಷ್ಟಿಯಿಂದ ಇದೊಂದು ಯಶಸ್ವಿ ಭೇಟಿಯಾಗಿದೆ’ ಎಂದರು.

ಬೃಹತ್ ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ್ ಮಾತನಾಡಿ, ‘ಅಮೆರಿಕಾದ ಕೆಲ ಕಂಪೆನಿಗಳು ಹೊಸದಾಗಿ ರಾಜ್ಯದಲ್ಲಿ ಕಾರ್ಯಾಚರಣೆ ಯೋಜನೆ ಹೊಂದಿವೆ. ಇನ್ನು ಕೆಲವು ಕಂಪೆನಿಗಳು ಈಗಾಗಲೇ ಇಲ್ಲಿ ಘಟಕಗಳನ್ನು ಹೊಂದಿದ್ದು, ತಮ್ಮ ಕಾರ್ಯಾಚರಣೆ ವಿಸ್ತರಿಸುವ ಪ್ರಸ್ತಾವ ಹೊಂದಿವೆ ಎಂದು ಮಾಹಿತಿ ನೀಡಿದರು.

ಜಾಗತಿಕ ಹೂಡಿಕೆದಾರರ ಸಮಾವೇಶವನ್ನು ಈಗ ಕರ್ನಾಟಕ ಸೇರಿದಂತೆ ದೇಶದ ಬಹುತೇಕ ರಾಜ್ಯಗಳು ನಡೆಸುತ್ತಿವೆ. ಇಂತಹ ಸಮಾವೇಶದ ಜೊತೆಗೆ ಹೊಸ ಉಪಕ್ರಮವೊಂದನ್ನು ಕೈಗೊಳ್ಳಬೇಕು ಎಂಬುದು ನಮ್ಮ ಆಲೋಚನೆಯಾಗಿತ್ತು. ಹೀಗಾಗಿ, ಉದ್ಯಮಿಗಳಿರುವ ಹಾಗೂ ಉದ್ಯಮ ಸಂಸ್ಥೆಗಳ ಜಾಗಕ್ಕೆ ನಾವೇ ಹೋಗಿ ನಮ್ಮಲ್ಲಿರುವ ಅನುಕೂಲತೆಗಳ ಬಗ್ಗೆ ಮನವರಿಕೆ ಮಾಡಿಕೊಡಬೇಕೆಂಬುದು ನಮ್ಮ ಉದ್ದೇಶವಾಗಿತ್ತು ಎಂದು ವಿವರಿಸಿದರು.

ಅಮೆರಿಕದ ಪೂರ್ವ ಕರಾವಳಿಯಿಂದ ಹಿಡಿದು ಪಶ್ಚಿಮ ಕರಾವಳಿ ವರೆಗೆ ಪ್ರಯಾಣಿಸಿ ಬೇರೆ ಬೇರೆ ಕಂಪೆನಿಗಳ ಉನ್ನತ ಪ್ರತಿನಿಧಿಗಳ ಜೊತೆ ಮಾತುಕತೆ ನಡೆಸಲಾಯಿತು. ಈ ವೇಳೆ 27 ಮುಖಾಮುಖಿ ಸಭೆಗಳು ಮತ್ತು 9 ಸಂವಾದ ಗೋಷ್ಠಿಗಳು ಸೇರಿ ಒಟ್ಟು 36 ಕಾರ್ಯಕ್ರಮಗಳಲ್ಲಿ ಪಾಲ್ಗೊಂಡಿದ್ದೆವು. ಜೊತೆಗೆ, ಅಲ್ಲಿನ ಕೆಲವು ಕೈಗಾರಿಕೆಗಳ ಕಾರ್ಯಾಚರಣೆಯನ್ನು ಖುದ್ದು ವೀಕ್ಷಿಸಿದೆವು ಎಂದು ಹೇಳಿದರು.

ಮುಖ್ಯವಾಗಿ, ಎಲೆಕ್ಟ್ರಾನಿಕ್ಸ್, ಸೆಮಿಕಂಡಕ್ಟರ್, ಏರೋಸ್ಪೇಸ್ ಆಂಡ್ ರಕ್ಷಣೆ, ಆಟೋ/ಇವಿ, ಉತ್ಪಾದನೆ ಮತ್ತು ಮೆಡ್‍ಟೆಕ್ ವಲಯಗಳಲ್ಲಿ ಹೂಡಿಕೆ ಅವಕಾಶಗಳನ್ನು ಅವಲೋಕಿಸಲಾಗಿದೆ. ಅಪ್ಲೈಡ್ ಮಟೀರಿಯಲ್ಸ್, ಎಎಂಡಿ, ಜುನಿಪರ್, ಗ್ಲೋಬಲ್ ಫೌಂಡ್ರೀಸ್, ಲ್ಯಾಮ್ ರಿಸರ್ಚ್, ಬೋಯಿಂಗ್, ಕ್ರಿಪ್ಪನ್, ಡೆಲ್, ಎಂಕೆಎಸ್ ಇನ್‍ಸ್ಟ್ರುಮೆಂಟ್ಸ್, ಟೆರಾಡೈನ್, ಜಿಇ ಹೆಲ್ತ್ ಕೇರ್, ಇಂಟೆಲ್‍ಸ್ಯಾಟ್, ಆರ್‍ಟಿಎಕ್ಸ್, ಟೆಕ್ಸಾಸ್ ಇನ್‍ಸ್ಟ್ಯುಮೆಂಟ್ಸ್, ಆಪಲ್ ಮತ್ತು ವಾಟರ್ಸ್ ಕಾರ್ಪ್ ನಂತಹ ಮುಂಚೂಣಿ ಕಂಪನಿಗಳೊಂದಿಗೆ ವಿಚಾರ ವಿನಿಮಯ ನಡೆಸಲಾಗಿದೆ ಎಂದು ಅವರು ತಿಳಿಸಿದರು.

ಜಂಟಿ ಕೌಶಲ್ಯಾಭಿವೃದ್ಧಿ ಉಪಕ್ರಮಗಳು, ಪೂರೈಕೆದಾರರ ನೆಲೆಯ ವಿಸ್ತರಣೆ, ಆರ್ ಆಂಡ್ ಡಿ ಪರಿಸರ ವ್ಯವಸ್ಥೆ ಬಲಪಡಿಸುವುದು ಮತ್ತು ರಾಜ್ಯ ಸರ್ಕಾರದ ಸಹಯೋಗದೊಂದಿಗೆ ಉತ್ಕøಷ್ಟತಾ ಕೇಂದ್ರಗಳನ್ನು ಸ್ಥಾಪಿಸುವ ಬಗೆಗೂ ಸಮಾಲೋಚನೆಗಳನ್ನು ನಡೆಸಲಾಗಿದೆ ಎಂದರು.

ಬದಲಾಗುತ್ತಿರುವ ಭೌಗೋಳಿಕ-ರಾಜಕೀಯ ಪರಿಸ್ಥಿತಿಯಲ್ಲಿ ಅಮೆರಿಕದ ಉದ್ಯಮಿಗಳು ಭಾರತದಲ್ಲಿ, ಅದರಲ್ಲೂ ಮುಖ್ಯವಾಗಿ ಕರ್ನಾಟಕದಲ್ಲಿ ಹೂಡಿಕೆ ಮಾಡುವ ಆಸಕ್ತಿ ಹೊಂದಿದ್ದಾರೆ. ಈ ಅವಕಾಶ ಬಳಸಿಕೊಳ್ಳುವ ದೃಷ್ಟಿಯಿಂದ ಇಲ್ಲಿನ ಕೈಗಾರಿಕಾ ಕಾರ್ಯಪರಿಸರ, ಉದ್ಯಮಸ್ನೇಹಿ ಕಾರ್ಯನೀತಿಗಳು, ಸರಕಾರದ ಪ್ರೋತ್ಸಾಹ ಕ್ರಮಗಳು, ಮತ್ತು ಮಾನವ ಸಂಪನ್ಮೂಲ ಲಭ್ಯತೆ ಬಗ್ಗೆ ಮನವರಿಕೆ ಮಾಡಿಕೊಟ್ಟಿದ್ದೇವೆ ಎಂದು ಮಾಹಿತಿ ನೀಡಿದರು.

ವಿಷನ್ ಗ್ರೂಪ್: ಕೈಗಾರಿಕಾ ಇಲಾಖೆಯು ಕ್ಷೇತ್ರವಾರು ಒಂಬತ್ತು ವಿಷನ್ ಗ್ರೂಪ್‍ಗಳನ್ನು ರಚಿಸಲಿದೆ ಅವರು ಹೇಳಿದರು.

ಐಟಿ-ಬಿಟಿ ಸಚಿವ ಪ್ರಿಯಾಂಕ್ ಖರ್ಗೆ ಮಾತನಾಡಿ, ಬಂಡವಾಳ ಆಕರ್ಷಿಸುವ ಸಲುವಾಗಿ ಹೊಸ ಹೊಸ ರೀತಿಯ ಪ್ರಯೋಗಗಳನ್ನು ಮಾಡುತ್ತಿದ್ದು ಅದರಲ್ಲಿ ಈ ಅಮೆರಿಕಾ ಭೇಟಿಯೂ ಸೇರಿದೆ. ಮಾನವ ಸಂಪನ್ಮೂಲದ ಬೇಡಿಕೆಗೆ ಅನುಗುಣವಾಗಿ ಎಂಜಿನಿಯರ್ ಗಳಿಗೆ ತರಬೇತಿ ನೀಡುವ ಸಂಬಂಧ ಎಎಂಡಿ ಸಂಸ್ಥೆ ಜತೆ ರಾಜ್ಯ ಸರಕಾರ ಒಪ್ಪಂದ ಮಾಡಿಕೊಳ್ಳಲಿದೆ. ಈ ಸಂಸ್ಥೆ 800 ಎಂಜಿನಿಯರ್‍ಗಳನ್ನು ಭಾರತದಲ್ಲಿ ನೇಮಕ ಮಾಡಿಕೊಳ್ಳಲಿದೆ ಎಂದು ಹೇಳಿದರು.

ಕೈಗಾರಿಕಾ ಇಲಾಖೆ ಪ್ರಧಾನ ಕಾರ್ಯದರ್ಶಿ ಎಸ್.ಸೆಲ್ವಕುಮಾರ್, ಐಟಿ-ಬಿಟಿ ಇಲಾಖೆ ಕಾರ್ಯದರ್ಶಿ ಏಕ್‍ರೂಪ್ ಕೌರ್, ಕೈಗಾರಿಕಾ ಇಲಾಖೆ ಆಯುಕ್ತೆ ಗುಂಜನ್ ಕೃಷ್ಣ ಮತ್ತಿತರರು ಇದ್ದರು.

‘2024ರ ಡಿಸೆಂಬರ್ ಅಥವಾ 2025ರ ಜನವರಿಯಲ್ಲಿ ಜಿಮ್: ‘ಕರ್ನಾಟಕ ರಾಜ್ಯ ಸರಕಾರದ ವತಿಯಿಂದ ಮುಂಬರುವ ಜಾಗತಿಕ ಹೂಡಿಕೆದಾರರ ಸಮಾವೇಶವನ್ನು(ಜಿಮ್) 2024ರ ಕೊನೆಯಲ್ಲಿ ಅಥವಾ 2025ರ ಆರಂಭದಲ್ಲಿ ಆಯೋಜಿಸಲಾಗುವುದು’

-ಎಂ.ಬಿ.ಪಾಟೀಲ್ ಬೃಹತ್ ಕೈಗಾರಿಕಾ ಸಚಿವ

share
ವಾರ್ತಾಭಾರತಿ
ವಾರ್ತಾಭಾರತಿ
Next Story
X