Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಈ ಹೊತ್ತಿನ ಹೊತ್ತಿಗೆ
      • ಜನಚರಿತೆ
      • ವಿಡಂಬನೆ
      • ಜನ ಜನಿತ
      • ರಂಗ ಪ್ರಸಂಗ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಜನಮನ
      • ರಂಗದೊಳಗಿಂದ
      • ಶಂಬೂಕ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ‘ಮಂಗನ ಕಾಯಿಲೆ’ಗೆ ಶೀಘ್ರದಲ್ಲೆ ಲಸಿಕೆ :...

‘ಮಂಗನ ಕಾಯಿಲೆ’ಗೆ ಶೀಘ್ರದಲ್ಲೆ ಲಸಿಕೆ : ಆರೋಗ್ಯ ಸಚಿವ ದಿನೇಶ್ ಗುಂಡೂರಾವ್

ವಾರ್ತಾಭಾರತಿವಾರ್ತಾಭಾರತಿ6 March 2025 6:05 PM IST
share
‘ಮಂಗನ ಕಾಯಿಲೆ’ಗೆ ಶೀಘ್ರದಲ್ಲೆ ಲಸಿಕೆ : ಆರೋಗ್ಯ ಸಚಿವ ದಿನೇಶ್ ಗುಂಡೂರಾವ್

ಬೆಂಗಳೂರು : ಮಲೆನಾಡು ಪ್ರದೇಶದಲ್ಲಿ ಕಾಣಿಸಿಕೊಳ್ಳುತ್ತಿರುವ ಕ್ಯಾಸನೂರು ಫಾರೆಸ್ಟ್ ಡಿಸೀಸ್ (ಕೆಎಫ್‍ಡಿ) ‘ಮಂಗನ ಕಾಯಿಲೆ’ಗೆ ಲಸಿಕೆ ತಯಾರಿಸಲು ಹೈದರಾಬಾದ್‍ನ ಐಸಿಎಂಆರ್‌ನಲ್ಲಿ ಸಂಶೋಧನೆ ನಡೆಸಲಾಗುತ್ತಿದ್ದು, ಮುಂದಿನ ವರ್ಷದ ವೇಳೆಗೆ ಲಸಿಕೆ ಲಭ್ಯವಾಗಲಿದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂ ರಾವ್ ಭರವಸೆ ನೀಡಿದ್ದಾರೆ.

ಗುರುವಾರ ವಿಧಾನಸಭೆ ಪ್ರಶ್ನೋತ್ತರ ಅವಧಿಯಲ್ಲಿ ಬಿಜೆಪಿ ಸದಸ್ಯ ಆರಗ ಜ್ಞಾನೇಂದ್ರ ಕೇಳಿದ ಪ್ರಶ್ನೆಗೆ ಉತ್ತರ ನೀಡಿದ ಅವರು, ‘ಡೆಂಗ್’ ಮಳೆಗಾಲದಲ್ಲಿ ಕಾಡುತ್ತಿದೆ. ಮಂಗನ ಕಾಯಿಲೆ ಬೇಸಿಗೆ ಕಾಲದಲ್ಲಿ ಹೆಚ್ಚಾಗುತ್ತದೆ. ಸದ್ಯಕ್ಕೆ ಮಂಗನಕಾಯಿಲೆಗೆ ನಮ್ಮಲ್ಲಿ ಯಾವುದೇ ಔಷಧಿ ಲಭ್ಯವಿಲ್ಲ. ಹೀಗಾಗಿ ಆ ಕಾಯಿಲೆ ತಡೆಗಟ್ಟಲು ಸೂಕ್ತ ಮುನ್ನಚ್ಚರಿಕೆ ಅಗತ್ಯ. ಆ ಹಿನ್ನೆಲೆಯಲ್ಲಿ ಮಲೆನಾಡು ಹಾಗೂ ಕರಾವಳಿ ಭಾಗದ ಅಧಿಕಾರಿಗಳ ಜೊತೆ ಚರ್ಚೆ ನಡೆಸಲಾಗಿದೆ ಎಂದರು.

ಮಂಗನ ಕಾಯಿಲೆಯಿಂದ ಒಬ್ಬರು ಸಾವನ್ನಪ್ಪಿದ್ದು, ಅವರಿಗೆ ಮೂತ್ರಪಿಂಡ (ಕಿಡ್ನಿ) ಸೇರಿದಂತೆ ಬೇರೆ ಆರೋಗ್ಯ ಸಮಸ್ಯೆಗಳಿದ್ದವು. ಮಂಗನ ಕಾಯಿಲೆಗೆ ನಿರ್ದಿಷ್ಟ ಔಷಧಿ ಇಲ್ಲ. ಮುಂಜಾಗ್ರತೆ ಉತ್ತಮ ಪರಿಹಾರ. ಈ ಹಿಂದೆ ಪುಣೆಯ ವೈರಲಾಜಿ ಸಂಸ್ಥೆ 1989ರಲ್ಲಿ ಲಸಿಕೆ ಕಂಡು ಹಿಡಿದಿತ್ತು. ಈಗ ಔಷಧಿಯ ಪ್ರಭಾವ ಕಡಿಮೆಯಾಗಿದೆ.

ಹೊಸದಾಗಿ ಲಸಿಕೆ ಕಂಡು ಹಿಡಿಯಲು ಹೈದರಾಬಾದ್‍ನ ಐಸಿಎಂಆರ್ ಲಸಿಕೆ ಅಭಿವೃದ್ಧಿಪಡಿಸುತ್ತಿದೆ. ಮಂಗನ ಕಾಯಿಲೆ ಕರ್ನಾಟಕ ರಾಜ್ಯಕ್ಕೆ ಮಾತ್ರ ಸೀಮಿತವಾಗಿದೆ. ಹಾಗಾಗಿ ಲಸಿಕೆ ಅಭಿವೃದ್ಧಿಗೆ ರಾಜ್ಯ ಸರಕಾರ ಹಣಕಾಸಿನ ಸೌಲಭ್ಯ ಒದಗಿಸಲು ವಿಳಂಬವಾಯಿತು. ಅಲ್ಲದೆ, ಮೊಬೈಲ್ ಚಿಕಿತ್ಸಾ ಘಟಕ ಸ್ಥಾಪಿಸಲು ಸರಕಾರ ಕ್ರಮ ವಹಿಸಲಿದೆ ಎಂದು ಅವರು ಭರವಸೆ ನೀಡಿದರು.

ಶಿವಮೊಗ್ಗದಲ್ಲಿ 22, ಚಿಕ್ಕಮಗಳೂರಿನಲ್ಲಿ 29 ಹಾಗೂ ಉತ್ತರ ಕನ್ನಡದಲ್ಲಿ ಒಬ್ಬರು ಸೇರಿದಂತೆ ಒಟ್ಟು 52 ಮಂಗನ ಕಾಯಿಲೆ(ಕೆಎಫ್‍ಡಿ) ಪ್ರಕರಣಗಳು 2025ರ ಜನವರಿ 1ರಿಂದ 2025ರ ಫೆಬ್ರವರಿ 26ರ ವರೆಗೆ ವರದಿಯಾಗಿವೆ. ಅದೇ ರೀತಿಯಲ್ಲಿ ರಾಜ್ಯದಲ್ಲಿ 674 ಡೆಂಗ್ ಪ್ರಕರಣಗಳು ಖಚಿತವಾಗಿವೆ ಎಂದು ದಿನೇಶ್ ಗುಂಡೂರಾವ್ ಮಾಹಿತಿ ನೀಡಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X