Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಈ ಹೊತ್ತಿನ ಹೊತ್ತಿಗೆ
      • ಜನಚರಿತೆ
      • ವಿಡಂಬನೆ
      • ಜನ ಜನಿತ
      • ರಂಗ ಪ್ರಸಂಗ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಜನಮನ
      • ರಂಗದೊಳಗಿಂದ
      • ಶಂಬೂಕ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ಕರ್ನಾಟಕ ಬಂದ್ | ಬುರ್ಖಾ ಧರಿಸಿ, ಖಾಲಿ...

ಕರ್ನಾಟಕ ಬಂದ್ | ಬುರ್ಖಾ ಧರಿಸಿ, ಖಾಲಿ ನೀರಿನ ಬಿಂದಿಗೆ ತಲೆ ಮೇಲೆ ಇಟ್ಟು ವಾಟಾಳ್ ನಾಗರಾಜ್ ಪ್ರತಿಭಟನೆ

ವಾರ್ತಾಭಾರತಿವಾರ್ತಾಭಾರತಿ29 Sept 2023 11:45 AM IST
share
ಕರ್ನಾಟಕ ಬಂದ್ | ಬುರ್ಖಾ ಧರಿಸಿ, ಖಾಲಿ ನೀರಿನ ಬಿಂದಿಗೆ ತಲೆ ಮೇಲೆ ಇಟ್ಟು ವಾಟಾಳ್ ನಾಗರಾಜ್ ಪ್ರತಿಭಟನೆ

ಬೆಂಗಳೂರು, ಸೆ.29: ಕಾವೇರಿ ನೀರು ತಮಿಳುನಾಡಿಗೆ ಯಾವುದೇ ಕಾರಣಕ್ಕೂ ಬಿಡುಗಡೆ ಮಾಡದಂತೆ ಆಗ್ರಹಿಸಿ ಇಂದು ನಡೆಸುತ್ತೀರುವ ಅಖಂಡ ಕರ್ನಾಟಕ ಬಂದ್ ವೇಳೆಯೇ ಕನ್ನಡ ಹೋರಾಟಗಾರರನ್ನು ಬಂಧಿಸುವ ಮೂಲಕ ಕರ್ನಾಟಕ ಗೂಂಡಾ ಪೊಲೀಸರ ರಾಜ್ಯವಾಗಿದೆ ಎಂದು ಕನ್ನಡ ಒಕ್ಕೂಟದ ಅಧ್ಯಕ್ಷ ವಾಟಾಳ್ ನಾಗರಾಜ್ ವಾಗ್ದಾಳಿ ನಡೆಸಿದಲ್ಲದೆ, ಬುರ್ಖಾ ಧರಿಸಿ ಆಕ್ರೋಶ ಹೊರಹಾಕಿದ್ದಾರೆ.

ನಗರದಲ್ಲಿಂದು ಡಾಲರ್ಸ್ ಕಾಲೋನಿಯಲ್ಲಿರುವ ತಮ್ಮ ಮನೆಯಿಂದಲೇ ಬುರ್ಖಾ ಧರಿಸಿ, ಖಾಲಿ ನೀರಿನ ಬಿಂದಿಗೆ ತಲೆ ಮೇಲೆಯಿಟ್ಟು ಹೊರಬಂದ ವಾಟಾಳ್ ನಾಗರಾಜ್ ಅವರು ಖುದ್ದು, ರಾಜ್ಯ ಸರ್ಕಾರವೇ ಪ್ರತಿಭಟನಾ ಮೆರವಣಿಗೆ ಹತ್ತಿಕ್ಕುವ ಕೆಲಸ ಮಾಡುತ್ತಿದ್ದು, ಇಡೀ ವ್ಯವಸ್ಥೆಯನ್ನೇ ಪೊಲೀಸ್ ಮಯ ಮಾಡಲಾಗಿದೆ ಎಂದು ಕಿಡಿಕಾರಿದರು.

ಬಂದ್ ಭಾಗವಾಗಿ ಇಂದು ಬೆಂಗಳೂರಿನ ಟೌನ್ ಹಾಲ್ ನಿಂದ ಫ್ರೀಡಂ ಪಾರ್ಕ್ ಮೈದಾನದವರೆಗೆ ಶಾಂತಿಯುತ ಮೆರವಣಿಗೆ ಹಮ್ಮಿಕೊಳ್ಳಲಾಗಿತ್ತು. ಆದರೆ ಉದ್ದೇಶಪೂರಕವಾಗಿ 144 ಅಡಿಯಲ್ಲಿ ಜಾರಿಗೊಳಿಸಿ ಕನ್ನಡಪರ ಹೋರಾಟಗಾರರನ್ನು ಗುಂಪು, ಗುಂಪಾಗಿ ಬಂಧಿಲಾಗುತ್ತಿದೆ. ಇದು ಒಳ್ಳೆಯ ಬೆಳವಣಿಗೆಯಲ್ಲ ಎಂದು ಅವರು ಹೇಳಿದರು.

ಸರ್ಕಾರದಿಂದ ಅಸಹಕಾರ ಹಾಗೂ ವಿರೋಧದ ನಡುವೆ ಪೊಲೀಸ ಒತ್ತಡ ಹಾಗೂ ದೌರ್ಜನ್ಯದಿಂದ ಇಡೀ ಕರ್ನಾಟಕ ಗೂಂಡಾ ಪೊಲೀಸ್ ರಾಜ್ಯವಾಗಿದೆ. ಬೆಂಗಳೂರು ಒಂದಕ್ಕೆ ಐವತ್ತು ಸಾವಿರ ಪೊಲೀಸರ ನಿಯೋಜನೆ ಮಾಡಿ ಇಡೀ ರಾಜ್ಯಕ್ಕೆ ಲಕ್ಷಾಂತರ ಪೊಲೀಸರನ್ನು ನೇಮಿಸಿ ನಮ್ಮ ಮೇಲೆ ಒತ್ತಡ ಹೇರುತ್ತಿದ್ದಾರೆ ಎಂದು ಕಿಡಿ ಕಾರಿದರು.

ಕಾವೇರಿ ಕುರಿತಾಗಿ ನಾವು ಹೋರಾಟ ಮಾಡಿ ಬಂದ್ ಮಾಡಿದರೆ ನಮ್ಮ ರಾಜ್ಯ ಸರ್ಕಾರ ನಮ್ಮನ್ನು ಬಂದ್ ಮಾಡಿ ಎರಡು ರೀತಿ ಬಂದ್ ಆಗಿದೆ. ಇಂದು ಅಖಂಡ ಕರ್ನಾಟಕ ಬಂದ್ ಭಾರಿ ಪ್ರಮಾಣದಲ್ಲಿ ಯಶಸ್ಸು ಕಂಡಿದೆ ಇದಕ್ಕೆ ನಾಡಿನ ಜನತೆಗೆ ಈ ಮೂಲಕ ಅಭಿನಂದನೆ ಸಲ್ಲಿಸುತ್ತೇನೆ. ಅಖಂಡ ಕರ್ನಾಟಕ ಬಂದ್ ಗೆ ಇಡೀ ರಾಜ್ಯದ ಜನತೆ ಸಹಕರಿಸಿದ್ದು ಕನ್ನಡ ಒಕ್ಕೂಟದ ಕರೆಗೆ ಗೌರವ ಕೊಟ್ಟು ಬೆಂಬಲ ಸೂಚಿಸಿದ್ದಾರೆ. ನಮ್ಮ ಸರ್ಕಾರ ನಿಜವಾಗಲೂ ಕಾವೇರಿ ವಿಷಯದಲ್ಲಿ ಅರ್ಥಮಾಡಿಕೊಳ್ಳಲಿಲ್ಲ. ಪ್ರತಿಭಟನಾ ಕಾರರನ್ನು ಎಲ್ಲೆಂದರಲ್ಲಿ ವಶಪಡಿಸಿಕೊಳ್ಳುತ್ತಿದ್ದಾರೆ ಎಂದರು.

ಇನ್ನೂ, ಗೃಹ ಸಚಿವ ಪರಮೇಶ್ವರ್ ಅವರು ಪ್ರತಿಭಟನೆ ಮೆರವಣಿಗೆಗೆ ಅವಕಾಶವೇ ಇಲ್ಲ ಎಂದು ಹೇಳುವುದರ ಮೂಲಕ ಕನ್ನಡ ವಿರೋಧಿ ನಡೆ, ಅನುಸರಿಸಿದ್ದಾರೆ.‌ ಅಲ್ಲದೆ, ಅವರು ಎಂದೂ ಸಹ ಯಾವುದೇ ಹೋರಾಟ ಮಾಡಿದ ಉದಾಹರಣೆ ಇಲ್ಲ. ಹೀಗಾಗಿ, ಅವರಿಗೆ ಹೋರಾಟಗಾರರ ಗೌರವ, ಅವರ ಕನ್ನಡಪರ ಸೇವೆ ಹೇಗೆ ಅರ್ಥವಾಗಲಿದೆ ಎಂದು ಅವರು ಪ್ರಶ್ನಿಸಿದರು.

ಮತ್ತೊಂದೆಡೆ ಜಲಸಂಪನ್ಮೂಲ ಸಚಿವ ಡಿಕೆ ಶಿವಕುಮಾರ್ ಅವರು ವ್ಯಂಗಭರಿತ ಮಾತುಗಳನ್ನಾಡಿದ್ದಾರೆ. ಆದರೆ ಕಾವೇರಿ ಹೋರಾಟ ಕುರಿತು ಗಂಭೀರವಾಗಿ ಅವರು ತೆಗೆದುಕೊಳ್ಳದಿದ್ದರೂ ನಾವು ಬಿಸಿಮುಟ್ಟಿಸುತ್ತೇವೆ ಎಂದರು.

ಕರ್ನಾಟಕ ಬಂದ್ ಮಾಡಿದರೆ ಇಲ್ಲಿನ ನೀರಿನ ಸಮಸ್ಯೆ ಕನ್ನಡಿಗರ ಆಕ್ರೋಶವು ಪ್ರಧಾನಿ ನರೇಂದ್ರ ಮೋದಿ ಹಾಗೂ ಇಡೀ ದೇಶಕ್ಕೆ ತಿಳಿಯಲಿದೆ. ಇದೇ ಉದ್ದೇಶಕ್ಕಾಗಿಯೇ ನಾವು ಹೋರಾಟ ನಡೆಸಲಾಗುತ್ತಿದ್ದು, ಇದರಲ್ಲಿ ಯಾವುದೇ ರಾಜಕೀಯ ಅಡಗಿಲ್ಲ ಎಂದು ಅವರು ಹೇಳಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X