Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಈ ಹೊತ್ತಿನ ಹೊತ್ತಿಗೆ
      • ಜನಚರಿತೆ
      • ವಿಡಂಬನೆ
      • ಜನ ಜನಿತ
      • ರಂಗ ಪ್ರಸಂಗ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಜನಮನ
      • ರಂಗದೊಳಗಿಂದ
      • ಶಂಬೂಕ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ವಾರ್ತಾಭಾರತಿ ವಿಶೇಷ
  3. ತಂತ್ರಜ್ಞಾನ
  4. ಗೂಗಲ್ ಕ್ರೋಮ್ ಬಳಕೆದಾರರು ಬ್ರೌಸರ್...

ಗೂಗಲ್ ಕ್ರೋಮ್ ಬಳಕೆದಾರರು ಬ್ರೌಸರ್ ಅಪ್‍ಡೇಟ್ ಮಾಡಿಕೊಳ್ಳಿ.. ಸರ್ಕಾರ ಎಚ್ಚರಿಕೆ ನೀಡಿರುವುದೇಕೆ?

ವಾರ್ತಾಭಾರತಿವಾರ್ತಾಭಾರತಿ11 Aug 2023 11:12 AM IST
share
ಗೂಗಲ್ ಕ್ರೋಮ್ ಬಳಕೆದಾರರು ಬ್ರೌಸರ್ ಅಪ್‍ಡೇಟ್ ಮಾಡಿಕೊಳ್ಳಿ.. ಸರ್ಕಾರ ಎಚ್ಚರಿಕೆ ನೀಡಿರುವುದೇಕೆ?

ಭಾರತ ಸರ್ಕಾರದ ಎಲೆಕ್ಟ್ರಾನಿಕ್ಸ್ ಮತ್ತು ಮಾಹಿತಿ ತಂತ್ರಜ್ಞಾನ ಸಚಿವಾಲಯದ ಅಧೀನದ ಭಾರತ ಸರ್ಕಾದ ಕಂಪ್ಯೂಟರ್ ಎಮರ್ಜೆನ್ಸಿ ರೆಸ್ಪಾನ್ಸ್ ತಂಡ (ಸಿಇಆರ್‍ಟಿ-ಐನ್) ಇತ್ತೀಚೆಗೆ ಗೂಗಲ್ ಕ್ರೋಮ್ ಬಳಕೆದಾರರಿಗೆ ತೀವ್ರ ಎಚ್ಚರಿಕೆಯ ಸಂದೇಶ ನೀಡಿತ್ತು. ಗೂಗಲ್ ಕ್ರೋಮ್‍ನ ಕೆಲ ನಿರ್ದಿಷ್ಟ ಅವತರಣಿಕೆಗಳು ದಾಳಿಗೆ ತುತ್ತಾಗುವ ಭದ್ರತಾ ಅಪಾಯ ಅತ್ಯಧಿಕ ಎಂಬ ಎಚ್ಚರಿಕೆ ನೀಡಿತ್ತು.

ಸಿಇಆರ್‍ಟಿ-ಇನ್ ಎಚ್ಚರಿಕೆಯ ಪ್ರಕಾರ, ಕ್ರೋಮ್ ಬಳಕೆದರರು, ತಮ್ಮ ಸೂಕ್ಷ್ಮ ಮಾಹಿತಿಗಳ ವಿಚಾರದಲ್ಲಿ ರಾಜಿ ಮಾಡಿಕೊಳ್ಳಬೇಕಾದ ಹಲವು ಭದ್ರತಾ ಸಮಸ್ಯೆಗಳನ್ನು ಎದುರಿಸುವ ಸಾಧ್ಯತೆ ಇದೆ. ಫಿಶಿಂಗ್ ದಾಳಿ, ಡಾಟಾ ಭೇದಿಸುವಿಕೆ ಹಾಗೂ ಮಾಲ್‍ವೇರ್ ಸೋಂಕುಗಳಂಥ ಅಪಾಯ ಸಾಧ್ಯತೆಯನ್ನು ಒತ್ತಿ ಹೇಳಿದೆ. ತಮ್ಮನ್ನು ರಕ್ಷಿಸಿಕೊಳ್ಳುವ ಸಲುವಾಗಿ ಬಳಕೆದಾರರು ಅಗತ್ಯ ಕ್ರಮಗಳನ್ನು ಕೈಗೊಳ್ಳುವಂತೆ ಸಲಹೆ ಮಾಡಿದೆ.

ಪ್ರಾಂಪ್ಟ್ ಗಳು, ವೆಬ್ ಪಾವತಿ ಎಪಿಐ, ಶಿಫ್ಟ್‍ಶ್ಯಾಡರ್, ವುಲ್ಕನ್, ವಿಡಿಯೊ ಹಾಗೂ ವೆಬ್‍ಆರ್‍ಟಿಸಿ ಸೇರಿದಂತೆ ನಿಮ್ಮ ಕಂಪ್ಯೂಟರ್ ನ ನಿಯಂತ್ರಣವನ್ನು ದಾಳಿಕೋರರು ಪಡೆಯಲು ಅವಕಾಶ ಮಾಡಿಕೊಡುವ ಹಲವು ದೌರ್ಬಲ್ಯಗಳನ್ನು ಗೂಗಲ್ ಕ್ರೋಮ್ ಹೊಂದಿದೆ. "ವಿ8ನಲ್ಲಿ ಟೈಪ್ ಗೊಂದಲದಿಂದಾಗಿ ಗೂಗಲ್ ಕ್ರೋಮ್‍ನಲ್ಲಿ ಹಲವು ದುರ್ಬಲ ಅಂಶಗಳಿವೆ. ದೃಶ್ಯಗಳಲ್ಲಿ ಹೀಪ್ ಬಫರ್ ಓವರ್‍ಫ್ಲೋ, ವೆಬ್‍ಜಿಎಲ್‍ನಲ್ಲಿ ಮಿತಿಮೀರಿದ ಓದು ಹಾಗೂ ಬರಹ, ಎಎನ್‍ಜಿಎಲ್‍ಇನಲ್ಲಿ ಮಿತಿಮೀರಿದ ಮೆಮೊರಿ ಲಭ್ಯತೆ, ಬ್ಲಿಂಕ್ ಟಾಸ್ಕ್ ಶೆಡ್ಯೂಲಿಂಗ್‍ನಲ್ಲಿ ಉಚಿತ ಬಳಕೆ, ಕ್ಯಾಸ್ಟ್ ಮತ್ತು ವೆಬ್‍ಆರ್‍ಟಿಸಿ, ವಿಸ್ತರಣೆಗಳಲ್ಲಿ ಅಸಮರ್ಪಕ ಡಾಟಾ ದೃಢೀಕರಣದಂಥ ಸಮಸ್ಯೆಗಳಿವೆ" ಎಂದು ಅಧಿಕೃತ ಪ್ರಕಟಣೆ ಎಚ್ಚರಿಸಿದೆ.

ಸಿವಿಇ-2023-4068 ರಿಂದ ಸಿಇವಿ-2023-4078ವರೆಗಿನ ದೌರ್ಬಲ್ಯಗಳ ಪಟ್ಟಿಯನ್ನು ಸಿಇಆರ್‍ಟಿ-ಇನ್ ಬಿಡುಗಡೆ ಮಾಡಿದೆ.

ಈ ಹಿನ್ನೆಲೆಯಲ್ಲಿ ನಿಮ್ಮ ಸಾಧನವನ್ನು ರಕ್ಷಿಸಿಕೊಳ್ಳಲು ತಕ್ಷಣ ಅಪ್‍ಡೇಟ್ ಮಾಡಿಕೊಳ್ಳುವಂತೆ ಸಲಹೆ ಮಾಡಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X